ಚಿಕ್ಕನಾಯಕನಹಳ್ಳಿ : ಕಂದಿಕೆರೆಯಲ್ಲಿ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಒಕ್ಕಲಿಗರ ಸಂಘದ ಉದ್ಘಾಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆ ಗ್ರಾಮದಲ್ಲಿ ನಡೆದ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಒಕ್ಕಲಿಗರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಗುಬ್ಬಿ ಶಾಸಕರು, KSRTC ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀ ಎಸ್.ಆರ್. ಶ್ರೀನಿವಾಸ್ ಅವರೊಂದಿಗೆ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ತಾಲ್ಲೂಕಿನ ಪ್ರತಿಯೊಂದು ಸಮಾಜವೂ ಸಂಘಟಿತರಾಗಿ, ಗ್ರಾಮ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಂಘಗಳನ್ನು ಬಲಪಡಿಸಿಕೊಳ್ಳಬೇಕು. ಸಮುದಾಯ ಭವನಗಳ ನಿರ್ಮಾಣದ ಜೊತೆಗೆ ಬಡ ಹಾಗೂ ಪ್ರತಿಭಾವಂತ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿ ಹಲವು ಸಮಾಜಗಳಿಗೆ ಜಮೀನು ಒದಗಿಸುವ ಉದ್ದೇಶದಿಂದ ಸೂಕ್ತ ಜಾಗ ಗುರುತಿಸುವಂತೆ ತಾಲ್ಲೂಕು ದಂಡಾಧಿಕಾರಿಗಳಿಗೆ ಈಗಾಗಲೇ ಆದೇಶ ನೀಡಲಾಗಿದೆ. ಅದೇ ರೀತಿ, ನಮ್ಮ ರೈತರ ಬಹುದಿನಗಳ ಬೇಡಿಕೆಯಾಗಿರುವ ಹೇಮಾವತಿ ನೀರನ್ನು ಕಂದಿಕೆರೆ ಭಾಗಕ್ಕೆ ಕೆಲವೇ ತಿಂಗಳುಗಳಲ್ಲಿ ಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿ. ಪ್ರತಿಯೊಂದು ಸಮಾಜವೂ ಗ್ರಾಮದ ಮಟ್ಟದಲ್ಲಿ ಸಂಘಟಿತರಾಗಿ, ಶಿಕ್ಷಣ, ಸಾಮಾಜಿಕ ಅಭಿವೃದ್ಧಿ ಹಾಗೂ ರೈತರ ಪ್ರಗತಿಗೆ ಕೈಜೋಡಿಸಬೇಕು ಎಂದು ತಿಳಿಸಲಾಯಿತು ಈ ಸಂದರ್ಭದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಂದಿಕೆರೆ ಸಂಘದ ಪದಾಧಿಕಾರಿಗಳು, ಗಣ್ಯರು, ಜನಪ್ರತಿನಿಧಿಗಳು, ಸಮಾಜದ ಬಂಧುಗಳು, ಉಪಸ್ಥಿತರಿದ್ದರು. ಸಮಾಜದ ಸಂಘಟನೆ – ಶಿಕ್ಷಣಕ್ಕೆ ಪ್ರೋತ್ಸಾಹ – ರೈತರ ಅಭಿವೃದ್ಧಿ – ಸರ್ವ ಸಮಾಜದ ಸಮಾನಮುಖಂಡರು ಹಾಗೂ ಆತ್ಮೀಯರು ಪ್ರಗತಿ ನಮ್ಮ ಸಂಕಲ್ಪ
ಚಿಕ್ಕನಾಯಕನಹಳ್ಳಿ : ಕಂದಿಕೆರೆಯಲ್ಲಿ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಒಕ್ಕಲಿಗರ ಸಂಘದ ಉದ್ಘಾಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆ ಗ್ರಾಮದಲ್ಲಿ ನಡೆದ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಒಕ್ಕಲಿಗರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಗುಬ್ಬಿ ಶಾಸಕರು, KSRTC ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀ ಎಸ್.ಆರ್.
ಶ್ರೀನಿವಾಸ್ ಅವರೊಂದಿಗೆ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ತಾಲ್ಲೂಕಿನ ಪ್ರತಿಯೊಂದು ಸಮಾಜವೂ ಸಂಘಟಿತರಾಗಿ, ಗ್ರಾಮ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಂಘಗಳನ್ನು ಬಲಪಡಿಸಿಕೊಳ್ಳಬೇಕು. ಸಮುದಾಯ ಭವನಗಳ ನಿರ್ಮಾಣದ ಜೊತೆಗೆ ಬಡ ಹಾಗೂ ಪ್ರತಿಭಾವಂತ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿ ಹಲವು ಸಮಾಜಗಳಿಗೆ ಜಮೀನು ಒದಗಿಸುವ ಉದ್ದೇಶದಿಂದ
ಸೂಕ್ತ ಜಾಗ ಗುರುತಿಸುವಂತೆ ತಾಲ್ಲೂಕು ದಂಡಾಧಿಕಾರಿಗಳಿಗೆ ಈಗಾಗಲೇ ಆದೇಶ ನೀಡಲಾಗಿದೆ. ಅದೇ ರೀತಿ, ನಮ್ಮ ರೈತರ ಬಹುದಿನಗಳ ಬೇಡಿಕೆಯಾಗಿರುವ ಹೇಮಾವತಿ ನೀರನ್ನು ಕಂದಿಕೆರೆ ಭಾಗಕ್ಕೆ ಕೆಲವೇ ತಿಂಗಳುಗಳಲ್ಲಿ ಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿ. ಪ್ರತಿಯೊಂದು ಸಮಾಜವೂ ಗ್ರಾಮದ ಮಟ್ಟದಲ್ಲಿ ಸಂಘಟಿತರಾಗಿ, ಶಿಕ್ಷಣ, ಸಾಮಾಜಿಕ ಅಭಿವೃದ್ಧಿ ಹಾಗೂ ರೈತರ ಪ್ರಗತಿಗೆ ಕೈಜೋಡಿಸಬೇಕು
ಎಂದು ತಿಳಿಸಲಾಯಿತು ಈ ಸಂದರ್ಭದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಂದಿಕೆರೆ ಸಂಘದ ಪದಾಧಿಕಾರಿಗಳು, ಗಣ್ಯರು, ಜನಪ್ರತಿನಿಧಿಗಳು, ಸಮಾಜದ ಬಂಧುಗಳು, ಉಪಸ್ಥಿತರಿದ್ದರು. ಸಮಾಜದ ಸಂಘಟನೆ – ಶಿಕ್ಷಣಕ್ಕೆ ಪ್ರೋತ್ಸಾಹ – ರೈತರ ಅಭಿವೃದ್ಧಿ – ಸರ್ವ ಸಮಾಜದ ಸಮಾನಮುಖಂಡರು ಹಾಗೂ ಆತ್ಮೀಯರು ಪ್ರಗತಿ ನಮ್ಮ ಸಂಕಲ್ಪ
- ತವರು-ಕೊಟ್ಟ ಮನೆಗಳ ಬೆಸುಗೆಯ ಗೌರಿ ಹಬ್ಬ: ಹೆಣ್ಣುಮಕ್ಕಳ ಮೊಗದಲ್ಲಿ ಹರಸುವ ಸಂಭ್ರಮ ತವರು-ಕೊಟ್ಟ ಮನೆಗಳ ಬೆಸುಗೆಯ ಗೌರಿ ಹಬ್ಬ: ಹೆಣ್ಣುಮಕ್ಕಳ ಮೊಗದಲ್ಲಿ ಹರಸುವ ಸಂಭ್ರಮ --------------------- ಹುಳಿಯಾರು ಪೇಪರ್ ಕಿರಣ್ ನ್ಯೂಸ್: ಗೌರಿ ಹಬ್ಬವೆಂದರೆ ಸಾಕು ಭಾರತೀಯ ಪರಂಪರೆಯಲ್ಲಿ ಹೆಣ್ಣು ಮಕ್ಕಳಿಗೆ ಎಲ್ಲಿಲ್ಲದ ಸಂಭ್ರಮ-ಸಂತೋಷ. ಅದರಲ್ಲೂ ಮದುವೆಯಾಗಿ ಹೊಸ ಮನೆಗೆ ತೆರಳಿರುವ ಹೆಣ್ಣು ಮಕ್ಕಳಿಗೆ ಈ ಹಬ್ಬದ ತವರಿನ ನೆನಪುಗಳು ದುಪ್ಪಟ್ಟು ಖುಷಿ ನೀಡುತ್ತವೆ. ವರ್ಷಕ್ಕೊಮ್ಮೆ ತವರು ಮನೆಯಿಂದ ತಂದೆ-ತಾಯಿ, ಅಣ್ಣ-ತಮ್ಮಂದಿರು ಪ್ರೀತಿಯಿಂದ ಬಂದು ಬಾಗಿನ ನೀಡುವುದು, ಅಥವಾ ಹೆಣ್ಣು ಮಗಳನ್ನು ತವರಿಗೆ ಕರೆತಂದು ಉಪಚರಿಸುವುದು ಯುಗಯುಗಗಳಿಂದ ಬೆಳೆದುಬಂದ ಭಾವನಾತ್ಮಕ ಪರಂಪರೆಯಾಗಿದೆ. ಬಡತನವಿರಲಿ, ಸಿರಿತನವಿರಲಿ; ಪ್ರತಿಯೊಂದು ಕುಟುಂಬವೂ ತಮ್ಮ ಶಕ್ತಿಸಾರವಾಗಿ ಗೌರಿ ಹಬ್ಬವನ್ನು ಆಚರಿಸಿ ಮಗಳ ಸಂತೋಷಕ್ಕಾಗಿ ಶ್ರಮಿಸುತ್ತದೆ. ಈ ಹಬ್ಬವು ಹುಟ್ಟಿದ ಮನೆ ಹಾಗೂ ಕೊಟ್ಟ ಮನೆಗಳ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಕೊಂಡಿಯಾಗಿದೆ. ಬಾಗಿನದ ಮಹತ್ವ ಮತ್ತು ಶ್ರೀಮಂತ ಸಂಸ್ಕೃತಿ ಗೌರಿ ಹಬ್ಬದಲ್ಲಿ ನೀಡುವ 'ಬಾಗಿನ' ಕೇವಲ ವಸ್ತುಗಳ ಮೂಟೆಯಲ್ಲ, ಅದು ತವರಿನ ಅಕ್ಷಯ ಪ್ರೀತಿ ಮತ್ತು ಆಶೀರ್ವಾದದ ಸಂಕೇತ. ಬಾಗಿನದ ಸಾಮಗ್ರಿಗಳು: ಮೊರದಲ್ಲಿ ಅರಿಶಿನ, ಕುಂಕುಮ, ಬಳೆ, ಕನ್ನಡಿ, ಬಾಚಣಿಕೆ, ಕಪ್ಪು ದಾರ, ಅಕ್ಕಿ, ಬೇಳೆ ಧಾನ್ಯಗಳು, ಬೆಲ್ಲ, ತೆಂಗಿನಕಾಯಿ ಹಾಗೂ ಮಂಗಳ ದ್ರವ್ಯಗಳನ್ನು ಜೋಡಿಸಿ ಪೂಜಿಸಲಾಗುತ್ತದೆ. ಮಂಗಳ ಗೌರಿ ಪೂಜೆ: ಸುಮಂಗಲಿಯರು ತಮ್ಮ ಮುತ್ತೈದೆತನ, ಕುಟುಂಬದ ಕ್ಷೇಮ ಹಾಗೂ ಐಶ್ವರ್ಯಕ್ಕಾಗಿ ಸ್ವರ್ಣ ಗೌರಿಯನ್ನು ನಿಷ್ಠೆಯಿಂದ ಪೂಜಿಸಿ, ಹಿರಿಯ ಮುತ್ತೈದೆಯರಿಗೆ ಹಾಗೂ ತಾಯಿಗೆ ಬಾಗಿನ ನೀಡಿ ಆಶೀರ್ವಾದ ಪಡೆಯುತ್ತಾರೆ. ಭಾವನಾತ್ಮಕ ಬೆಸುಗೆ: ಮದುವೆಯಾಗಿ ಬೇರೆ ಮನೆಗೆ ಹೋದ ಮಗಳು ಕ್ಷೇಮವಾಗಿರಲಿ, ಆಕೆಯ ಸಂಸಾರದಲ್ಲಿ ಧಾನ್ಯ-ಧನ ಸಂಪತ್ತು ಸದಾ ಸಮೃದ್ಧವಾಗಿರಲಿ ಎಂಬ ಹಾರೈಕೆ ಈ ಬಾಗಿನದ ಹಿಂದಿರುವ ಮುಖ್ಯ ಉದ್ದೇಶ. ಸಂಪ್ರದಾಯದ ಉಳಿವಿಗೆ ಗ್ರಾಮೀಣ ಜನರ ಶ್ರಮ ಬದಲಾಗುತ್ತಿರುವ ಆಧುನಿಕ ಯುಗದಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ನಗರಗಳಲ್ಲಿ ಗೌರಿ ಹಬ್ಬದ ಕಳೆ ಕುಂದಿಲ್ಲ. ಹಬ್ಬದ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆ, ಆಭರಣ ಹಾಗೂ ತವರಿನ ತಿನಿಸುಗಳನ್ನು ನೀಡಿ ಸತ್ಕರಿಸುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವೆಂದೇ ಭಾವಿಸಲಾಗಿದೆ. ಸಾಮಾಜಿಕವಾಗಿ ಎಷ್ಟೇ ಆಧುನಿಕತೆ ಬಂದರೂ, ತವರು ಮನೆಯಿಂದ ಬರುವ ಬಾಗಿನಕ್ಕಾಗಿ ಕಾಯುವ ಹೆಣ್ಣು ಮಗಳ ಕಣ್ಣಿನ ಕಾತುರ ಮತ್ತು ಅದನ್ನು ನೀಡುವಾಗ ಹೆತ್ತವರ ಮೊಗದಲ್ಲಿ ಮೂಡುವ ತೃಪ್ತಿ ನಮ್ಮ ಸಂಸ್ಕೃತಿಯ ಸಜೀವ ಸಾಕ್ಷಿಯಾಗಿದೆ. ಬಾಂಧವ್ಯದ ಬೆಸುಗೆಯಾಗಿರುವ ಈ ಗೌರಿ ಹಬ್ಬವು ನಾಡಿನಾದ್ಯಂತ ಸೌಹಾರ್ದತೆ ಮತ್ತು ಪ್ರೀತಿಯನ್ನು ಪಸರಿಸುತ್ತಿದೆ.1
- ಚಿಕ್ಕನಾಯಕನಹಳ್ಳಿ: ಅಗಸರಹಳ್ಳಿಯಲ್ಲಿ ಕಿರಾತಕ ಕಿಡಿಗೇಡಿಗಳಿಂದ ಅಡಿಕೆ ಸಸಿಗಳ ಸರ್ವ ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಅಗಸರಹಳ್ಳಿ ಗ್ರಾಮದಲ್ಲಿ ರೈತರೊಬ್ಬರ ಜಮೀನಿನಲ್ಲಿದ್ದ ನೂರಾರು ಅಡಿಕೆ ಸಸಿಗಳನ್ನು ಯಾರೋ ದುಷ್ಕರ್ಮಿಗಳು ಕಡಿದು ಹಾಕಿ ವಿಕೃತಿ ಮೆರೆದಿರುವ ಘಟನೆ ಬುಧವಾರ ನಡೆದಿದೆ. ಗ್ರಾಮದ ಪುಟ್ಟಬಸವಯ್ಯ ಅವರ ಮಗ ಚಂದ್ರಣ್ಣ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಕೃತ್ಯ ನಡೆದಿದೆ. ಚಂದ್ರಣ್ಣ ಅವರು ತಮ್ಮ ಜಮೀನಿನಲ್ಲಿ ಅತ್ಯಂತ ಮುತುವರ್ಜಿಯಿಂದ ಅಡಿಕೆ ಸಸಿಗಳನ್ನು ನೆಟ್ಟು ಪೋಷಿಸುತ್ತಿದ್ದರು. ಆದರೆ, ಇಂದು ಬೆಳಿಗ್ಗೆ ತೋಟಕ್ಕೆ ತೆರಳಿದಾಗ ಸಸಿಗಳನ್ನು ಕಡಿದು ಹಾಕಿರುವುದು ಬೆಳಕಿಗೆ ಬಂದಿದೆ. ಕಷ್ಟಪಟ್ಟು ಬೆಳೆಸಿದ್ದ ಸಸಿಗಳು ನಾಶವಾಗಿರುವುದನ್ನು ಕಂಡು ರೈತ ಚಂದ್ರಣ್ಣ ಕಣ್ಣೀರು ಹಾಕಿದ್ದು, ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. "ಯಾರೊಂದಿಗೂ ಹಗೆತನವಿರಲಿಲ್ಲ, ಈ ರೀತಿ ಬೆಳೆ ನಾಶ ಮಾಡಿ ಹೊಟ್ಟೆಗೆ ಹೊಡೆದಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ನನಗೆ ಪರಿಹಾರ ಕೊಡಿಸಬೇಕು" ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಸ್ಥರು ರೈತನಿಗೆ ಬೆಂಬಲವಾಗಿ ನಿಂತು, ಈ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.1
- ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗ ಸಂಘ ಉದ್ಘಾಟನಾ ಕಾರ್ಯಕ್ರಮ ತುಮಕೂರು ಜಿಲ್ಲಾ ಒಕ್ಕಲಿಗರ ಸಂಘದಲ್ಲಿ ನಡೆಯುತ್ತಿರುವ ವಿವಿಧ ಪ್ರಗತಿಪರ ಕಾರ್ಯಕ್ರಮಗಳ ಕುರಿತಂತೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು ಇದೆ ಸಂದರ್ಭದಲ್ಲಿ ಶಾಸಕ ಸಿ ಬಿ ಸುರೇಶ್ ಬಾಬು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.1
- ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ 9 ವರ್ಷಗಳ ಕಾಲ ಗ್ರಾಮಸ್ಥರು ಕಂಡಿದ್ದ ಕನಸು ಇದೀಗ ನನಸಾಗಿದೆ. ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ನೂತನ ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮಠಾಧೀಶರು, ಗಣ್ಯರು ಹಾಗೂ ಸಹಸ್ರಾರು ಭಕ್ತರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಾಯ್ಸ್ ಓವರ್: ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ಗ್ರಾಮಸ್ಥರ ಸುಮಾರು 9 ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿರುವ ನೂತನ ದೇವಸ್ಥಾನವು ಗ್ರಾಮಸ್ಥರ ಭಕ್ತಿ ಮತ್ತು ಒಗ್ಗಟ್ಟಿಗೆ ಸಾಕ್ಷಿಯಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ಎಲೆರಾಂಪುರ ಮಠದ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಹಾಗೂ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಿ ಕುಬೇರ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ದೇವಸ್ಥಾನವನ್ನು ಉದ್ಘಾಟಿಸಿದರು. ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ: ಪ್ರತಿಯೊಂದು ಹಳ್ಳಿಯಲ್ಲೂ ಸಿರಿವಂತರು ಹಾಗೂ ಅನುಕೂಲಸ್ಥರು ತಮ್ಮ ಒಳ್ಳೆಯ ಮನಸ್ಸಿನಿಂದ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ದೇವಸ್ಥಾನಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿದ್ದು, ಇದೇ ರೀತಿ ಪ್ರತಿಯೊಂದು ಗ್ರಾಮದಲ್ಲೂ ಉತ್ತಮ ಶಾಲೆಗಳಿರಬೇಕು. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಆಚಾರ-ವಿಚಾರಗಳ ಅರಿವು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಸಮಾಜದ ಮೇಲಿದೆ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸುಸ್ಥಿರ ಬದಲಾವಣೆ ಸಾಧ್ಯ ಎಂದರು. ಉದ್ಯಮಿ ನೀಲೇಶ್ ಮಾತನಾಡಿ: ನಾವು ಎಲ್ಲೇ ಇದ್ದರೂ, ಹೇಗೆ ಇದ್ದರೂ, ನಾವು ಹುಟ್ಟಿದ ಗ್ರಾಮವನ್ನು ಮರೆಯಬಾರದು. ನಮ್ಮ ಗ್ರಾಮಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮಗಳ ಅಭಿವೃದ್ಧಿಗೆ ಆರ್ಥಿಕ ಸಹಾಯದ ಜೊತೆಗೆ ಸಮಯ, ಶ್ರಮ ಹಾಗೂ ಮಾರ್ಗದರ್ಶನ ನೀಡುವ ಮೂಲಕವೂ ಸೇವೆ ಸಲ್ಲಿಸಬಹುದು. ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಡಾ. ಹನುಮಂತನಾಥ ಸ್ವಾಮೀಜಿ ಆಶೀರ್ವಚನ ನೀಡಿ: 48 ದಿನಗಳ ಕಾಲ ನಿಷ್ಠೆ, ಭಕ್ತಿ ಮತ್ತು ಶ್ರದ್ಧೆಯಿಂದ ಗಣೇಶನ ಪೂಜೆ ಮಾಡಿದರೆ ಭಗವಂತನ ಅನುಗ್ರಹ ದೊರೆಯುತ್ತದೆ. ಆದರೆ ದೇವರ ಅನುಗ್ರಹ ಪಡೆಯುವ ಜೊತೆಗೆ ತಂದೆ-ತಾಯಿಯ ಸೇವೆ ಮಾಡುವುದು ಅತ್ಯಂತ ಮುಖ್ಯ. ಹಿರಿಯರನ್ನು ಗೌರವಿಸಿ, ಸತ್ಯ, ಧರ್ಮ ಹಾಗೂ ನೀತಿಯ ಮಾರ್ಗದಲ್ಲಿ ಜೀವನ ನಡೆಸಬೇಕು. ಭಕ್ತಿ ನಮ್ಮ ಬದುಕಿಗೆ ದಾರಿ ತೋರಿಸುವ ಶಕ್ತಿಯಾಗಬೇಕು ಎಂದು ತಿಳಿಸಿದರು. ಶ್ರೀ ವೀರ ಬಸವಲಿಂಗ ಸ್ವಾಮೀಜಿ ಮಾತನಾಡಿ: ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲ, ಸಂಸ್ಕಾರವಂತರನ್ನಾಗಿಯೂ ಬೆಳೆಸಬೇಕು. ಮೊಬೈಲ್ ಮತ್ತು ಟಿವಿಯ ಬಳಕೆಯನ್ನು ಕಡಿಮೆ ಮಾಡಿ, ಮಕ್ಕಳಿಗೆ ಕುಟುಂಬದ ಮೌಲ್ಯಗಳನ್ನು ಕಲಿಸಬೇಕು. ‘ಎ’ ಎಂದರೆ ಅಪ್ಪ-ಅಮ್ಮ, ‘ಬಿ’ ಎಂದರೆ ಬಂಧು-ಬಳಗ ಎಂಬಂತೆ ಸಂಬಂಧಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ತಂದೆ-ತಾಯಿ, ಗುರುಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಬೆಳೆಸಬೇಕು ಎಂದು ಕರೆ ನೀಡಿದರು. ಉದ್ಯಮಿ ಶ್ರೀನಾಗ್ ಮಾತನಾಡಿ: ಸಂಕೇನಹಳ್ಳಿ ಗ್ರಾಮದಲ್ಲಿ ‘ಕುಬೇರ ಗಣಪತಿ’ ಎಂಬ ಹೆಸರು ಬರಲು ಪ್ರಮುಖ ಕಾರಣ ಗ್ರಾಮಸ್ಥರ ಭಕ್ತಿ, ಒಗ್ಗಟ್ಟು ಮತ್ತು ಸಂಕಲ್ಪ. ಗ್ರಾಮಸ್ಥರೆಲ್ಲರೂ ಒಂದಾಗಿ ನಿಂತು ದೇವಸ್ಥಾನದ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಇದು ಕೇವಲ ದೇವಸ್ಥಾನವಲ್ಲ, ಗ್ರಾಮದ ಜನರ ಒಗ್ಗಟ್ಟಿನ ಪ್ರತೀಕವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗೆ ಶ್ರಮಿಸೋಣ ಎಂದರು. ವಾಯ್ಸ್ ಓವರ್: ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಕೇನಹಳ್ಳಿ, ಗೋಕುಲ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕುಬೇರ ಗಣಪತಿಯ ದರ್ಶನ ಪಡೆದು ಪುನೀತರಾದರು. ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರಿಂದ ಇಡೀ ಸಂಕೇನಹಳ್ಳಿ ಗ್ರಾಮವು ಹಬ್ಬದ ವಾತಾವರಣದಲ್ಲಿ ಕಂಗೊಳಿಸಿತು. ಆಂಕರ್ ಔಟ್ರೋ: ಒಂಬತ್ತು ವರ್ಷಗಳ ಗ್ರಾಮಸ್ಥರ ಕನಸು ನನಸಾಗಿದ್ದು, ನೂತನ ಕುಬೇರ ಗಣಪತಿ ದೇವಸ್ಥಾನ ಇದೀಗ ಭಕ್ತರ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಿದೆ. ಗ್ರಾಮಸ್ಥರ ಒಗ್ಗಟ್ಟು ಮತ್ತು ಭಕ್ತಿಗೆ ಈ ದೇವಸ್ಥಾನ ಸಾಕ್ಷಿಯಾಗಿದೆ.3
- ಸಿಂಪಲ್ ಮ್ಯಾಚ್..1
- ರಸ್ತೆಗೆ ಚಾಚಿದ ಕಳ್ಳೆ ಬೈಕ್ ಸವಾರರು ಸ್ವಲ್ಪ ಯಾಮಾರಿದರೆ ಕಳ್ಳೆಯೋಳಗೆ ಬೈಕ್.1
- ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥 ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು! #SeeratUnNabi #ಸೀರತ್_ಅಭಿಯಾನ #ಕ್ರಾಂತಿಯಜ್ಯೋತಿ #ಪ್ರವಾದಿಮುಹಮ್ಮದ್ﷺ #Muhammadﷺ #ProphetMuhammad #SeeratCampaign #JamaatEIslamiHind #ಚಿತ್ರದುರ್ಗ #Chitradurga #ChitradurgaNews #KarnatakaNews #KannadaNews #BreakingNews #ViralNews #LocalNews #CTownNews #CtownNews #NewsUpdate #ಸುದ್ದಿ #ಸುದ್ದಿವಾಹಿನಿ1
- ಚಿಕ್ಕನಾಯಕನಹಳ್ಳಿ: ಬಿ-ಪಾಳ್ಯದಲ್ಲಿ ಈದ್ ಮಿಲಾದ್ ಆಚರಣೆ: ಹಿಂದೂ-ಮುಸ್ಲಿಂ ಭಾವೈಕ್ಯತೆ ಮೆರೆದ ಸಂಘಟನೆಗಳು ಚಿಕ್ಕನಾಯಕನಹಳ್ಳಿ: ಬಿ-ಪಾಳ್ಯದಲ್ಲಿ ಈದ್ ಮಿಲಾದ್ ಆಚರಣೆ: ಹಿಂದೂ-ಮುಸ್ಲಿಂ ಭಾವೈಕ್ಯತೆ ಮೆರೆದ ಸಂಘಟನೆಗಳು -------------------- ಚಿಕ್ಕನಾಯಕನಹಳ್ಳಿ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ತಾಲೂಕಿನ ಬಿ-ಪಾಳ್ಯದಲ್ಲಿರುವ ಶ್ರೀ ಗುರು ಸಿದ್ದರಾಮೇಶ್ವರ ಶ್ರವಣದೋಷ ಹಾಗೂ ಮಾತು ಬಾರದ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಅಖಿಲ ಕರ್ನಾಟಕ ಆಂಬುಲೆನ್ಸ್ ರೋಡ್ ಸೇಫ್ಟಿ ಸಂಘ (ರಿ) ಮತ್ತು ರೂಪಾಂತರ ಮಹಿಳಾ ಸಶಕ್ತೀಕರಣ ಹಾಗೂ ಸಮುದಾಯ ಅಭಿವೃದ್ಧಿ ಸಂಸ್ಥೆ (ರಿ) ವತಿಯಿಂದ ವಿಶೇಷ ಚೇತನ ಮಕ್ಕಳೊಂದಿಗೆ ಈದ್ ಮಿಲಾದ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಹಿಂದೂ-ಮುಸ್ಲಿಂ ಬಾಂಧವ್ಯ ಹಾಗೂ ಭಾವೈಕ್ಯತೆ ಮೆರೆಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೂಪಾಂತರ ಸಂಸ್ಥೆಯ ಸಂಸ್ಥಾಪಕಿ ರೂಪಶ್ರೀ, "ಚಿಕ್ಕನಾಯಕನಹಳ್ಳಿ ತಾಲೂಕು ‘ಹಿಂದೂ-ಮುಸ್ಲಿಂ ನಾವೆಲ್ಲಾ ಒಂದೇ’ ಎಂಬ ಸಾಮರಸ್ಯದ ಸಂದೇಶದೊಂದಿಗೆ ಇಡೀ ದೇಶಕ್ಕೆ ಮಾದರಿಯಾಗಿದೆ. ಭಾರತ ಮಾತೆಯ ಮಕ್ಕಳಾದ ನಾವೆಲ್ಲರೂ ಜಾತಿ ವೈಮನಸ್ಸು ಹಾಗೂ ಭೇದ-ಭಾವಗಳನ್ನು ಮರೆತು ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕಿದೆ. ಇಂದಿನ ಯುವಪಡೆ ಜಾತೀಯತೆಯನ್ನು ತೊರೆದು ದೇಶದ ಉಜ್ವಲ ಭವಿಷ್ಯ ಹಾಗೂ ಸಮಾಜದ ಪ್ರಗತಿಗೆ ಜಾಗೃತರಾಗಿ ಶ್ರಮಿಸಬೇಕು," ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ರೂಪಾಂತರ ಸಂಸ್ಥೆಯ ಸಂಸ್ಥಾಪಕಿ ರೂಪಶ್ರೀ ಹಾಗೂ AKARS ಸಂಘದ ಅಧ್ಯಕ್ಷ ಎಂ.ಡಿ. ಅಫ್ಸರ್, ಪ್ರಮುಖರಾದ ಪ್ರೀತಮ್, ತೋವಿದ್, ಮನು, ಶೇಖ್, ಅಕ್ಬರ್ ಮತ್ತು ಅಫ್ರಿದ್ ಉಪಸ್ಥಿತರಿದ್ದರು.2