Shuru
Apke Nagar Ki App…
ಮಿನಿ ಲಾರಿಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು ಕೊಪ್ಪಳ : ನಿಂತಿದ್ದ ಮಿನಿ ಲಾರಿಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಗದಗ - ಕೊಪ್ಪಳ ಹೆದ್ದಾರಿಯಲ್ಲಿರುವ ಬನ್ನಿಕೊಪ್ಪ ಬಳಿ ನಡೆದಿದೆ. ಮೃತರನ್ನು ನರಗುಂದದ ಮಾಬುಸಾಬ್ ಬುಡನ್ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಬಸಾಪುರದ ಶಾನುಸಾಬ್ (15) ಎಂದು ಗುರುತಿಸಲಾಗಿದೆ. ಮೃತರು ನರಗುಂದದಿಂದ ಕೊಪ್ಪಳದಲ್ಲಿ ನಡೆಯುತ್ತಿದ್ದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದರು ಎನ್ನಲಾಗಿದೆ.
ಶ್ರೀಕಾಂತ ಸರಗಣಾಚಾರಿ ಸಂಯುಕ್ತ ಕರ್
ಮಿನಿ ಲಾರಿಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು ಕೊಪ್ಪಳ : ನಿಂತಿದ್ದ ಮಿನಿ ಲಾರಿಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಗದಗ - ಕೊಪ್ಪಳ ಹೆದ್ದಾರಿಯಲ್ಲಿರುವ ಬನ್ನಿಕೊಪ್ಪ ಬಳಿ ನಡೆದಿದೆ. ಮೃತರನ್ನು ನರಗುಂದದ ಮಾಬುಸಾಬ್ ಬುಡನ್ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಬಸಾಪುರದ ಶಾನುಸಾಬ್ (15) ಎಂದು ಗುರುತಿಸಲಾಗಿದೆ. ಮೃತರು ನರಗುಂದದಿಂದ ಕೊಪ್ಪಳದಲ್ಲಿ ನಡೆಯುತ್ತಿದ್ದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದರು ಎನ್ನಲಾಗಿದೆ.
More news from ಕರ್ನಾಟಕ and nearby areas
- ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ ಕಾಶಪ್ಪನವರ ಅಭಿಮಾನಿಗಳು ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ ಕಾಶಪ್ಪನವರ ಅಭಿಮಾನಿಗಳು ಇಳಕಲ್: ವಿಜಯಾನಂದ ಕಾಶಪ್ಪನವರ ಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ, ಈ ಹಿಂದೆ ಹೊತ್ತಿದ್ದ ಹರಕೆ ತೀರಿಸಲು ಅವರ ಅಭಿಮಾನಿಗಳು ಇಳಕಲ್ ದಿಂದ ಬನಶಂಕರಿ ದೇವಿಗೆ ಪಾದಯಾತ್ರೆ ಹೊರಟರು.4
- ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…1
- ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ಗುಳೇದಗುಡ್ಡ: ಪಟ್ಟಣದಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ನಿಮಿತ್ತವಾಗಿ ಬುಧವಾರ ಪವಿತ್ರ ಈದ್ ಮಿಲಾದ್ ಹಬ್ಬದ ಅದ್ದೂರಿ ಮೆರವಣಿಗೆ ನಡೆಯಿತು. ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಪಟ್ಟಣದ ಭಾಗವಾನ್ ಪೇಟೆಯಿಂದ ಆರಂಭವಾಗಿ ಪವಾರ್ ಕ್ರಾಸ್, ಪುರಸಭೆ, ಸರಾಫಬಜಾರ್, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ ಮೂಲಕ ಹಾಯ್ದು ಭಾಗವಾನ್ ಪೇಟೆಗೆ ತಲುಪಿತು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಹಾಗೂ ಸಮಾಜದ ಮುಖಂಡರಾದ ಮುಬಾರಕ್ ಮಂಗಳೂರು, ಅಂಜುಮನ್ ಕಮೀಟಿ ಅಧ್ಯಕ್ಷ ರಜಾಕ್ ಕುದರಿ, ಸಾಧನಿ ಭಾಷಾ, ಮಶಾಕ್ ನಲವತ್ತವಾಡ, ಜಾವಿದ್ ಮೊಮಿನ್, ಜಿಲಾನಿ ಮುಜಾಹಿದ್, ರಫಿಕ್ ಕಲ್ಬುರ್ಗಿ, ದೇವರಾಜ ಕಟ್ಟಿಮನಿ, ಗೋವಿಂದ ರಾಠೋಡ, ರಫಿಕ್ ಮಕನದಾರ, ಮೋದಿನಸಾಬ್ ಸದರಿ, ರೀಯಾಜ್ ಚೊಳಚಗುಡ್ಡ, ಗುಲಾಮ್ ಹುಸೇನ್ ಇಲ್ಲಕಲ್, ಅಲ್ಲಾಸಾಬ ದೋಟೆಗಾರ ಸೇರಿದಂತೆ ಸಮಾಜದ ಮುಖಂಡರು ಇದ್ದರು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಮುಖ್ಯಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಅವರಿಗೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಬಾರಕ್ ಮಂಗಳೂರ ಅವರು ಸನ್ಮಾನಿಸಿದರು.2
- ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು ಪ್ಯಾಲೆಸ್ಟಿನ ಧ್ವಜ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು ಅಟ್ಟಹಾಸ ಮಿತಿ ಮೀರುತ್ತದೆ ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ1
- ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ1
- ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು1
- ಇಳಕಲ್ ನಗರದಲ್ಲಿ ಟಾಕ್ಸಿಕ್ ಸಿನಿಮಾ ಭರ್ಜರಿ ಓಪನಿಂಗ್ ; ಅಭಿಮಾನಿಗಳಿಂದ ಉತ್ತಮ ಪ್ರಶಂಸೆ. ಇಳಕಲ್ ನಗರದಲ್ಲಿ ಟಾಕ್ಸಿಕ್ ಸಿನಿಮಾ ಭರ್ಜರಿ ಓಪನಿಂಗ್ ಪಡೆದಿದೆ. ನಗರದ ಶ್ರೀನಿವಾಸ್ ಚಿತ್ರಮಂದಿರದಲ್ಲಿ ಮೊದಲನೇ ಶೋ ದಿಂದ ಸಂಜೆಯ ಶೋ ವರೆಗೂ ಹೌಸ್ ಫುಲ್ ಪ್ರದರ್ಶನ ಕಂಡಿತು. ಟಿಕೆಟ್ ಸಿಗದೇ ಕೆಲವು ಅಭಿಮಾನಿಗಳು, ಮಂತರದ ನೋಡಿದರಾಯ್ತು ಎಂದು ವಾಪಸಾದ ಘಟನೆಗಳು ನಡೆದವು.1