Shuru
Apke Nagar Ki App…
ಶಿವಮೊಗ್ಗ-ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷಿ ಪಾಟೀಲ್ ನಾಮಪತ್ರ ಶಿವಮೊಗ್ಗ: ಮಹಿಳಾ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷೆ ವಿಜಯಲಕ್ಷಿ ಪಾಟೀಲ್ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ರವರಿಗೆ ಮೂಲಕ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸುವರ್ಣ ನಾಗರಾಜ್, ಭಾರತಿ, ಕವಿತಾ ರಾಘವೇಂದ್ರ, ಸುಶೀಲಾ, ಜಯಲಕ್ಷಿ, ಭಾಗ್ಯ, ನಾಗರತ್ನಾ, ಸೌಭಾಗ್ಯ ಮತ್ತಿತರರಿದ್ದರು.
ಆರ್.ವಿ.ಕೃಷ್ಣ
ಶಿವಮೊಗ್ಗ-ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷಿ ಪಾಟೀಲ್ ನಾಮಪತ್ರ ಶಿವಮೊಗ್ಗ: ಮಹಿಳಾ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷೆ ವಿಜಯಲಕ್ಷಿ ಪಾಟೀಲ್ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ರವರಿಗೆ ಮೂಲಕ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸುವರ್ಣ ನಾಗರಾಜ್, ಭಾರತಿ, ಕವಿತಾ ರಾಘವೇಂದ್ರ, ಸುಶೀಲಾ, ಜಯಲಕ್ಷಿ, ಭಾಗ್ಯ, ನಾಗರತ್ನಾ, ಸೌಭಾಗ್ಯ ಮತ್ತಿತರರಿದ್ದರು.
More news from ಕರ್ನಾಟಕ and nearby areas
- ಶಿವಮೊಗ್ಗ-ಕೆಂಪುಕಲ್ಲು ಕ್ವಾರಿಗೆ ದಿಢೀರ್ ದಾಳಿ:ಲಾರಿ ವಶಕ್ಕೆ ಪಡೆದ ತಹಶೀಲ್ದಾರ್ ಡಾ.ಪ್ರತಿಭಾ. ಸಾಗರ: ತಾಲೂಕಿನಲ್ಲಿ ಯಾವುದೇ ಎಗ್ಗಿಲ್ಲದೆ ರಾಜಾ ರೋಷವಾಗಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮತ್ತು ಜಂಬಿಟ್ಟಿಗೆ ಸಾಗಾಟಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಬ್ರೇಕ್ ಹಾಕಿದ್ದಾರೆ. ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಅಕ್ರಮಗಳ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್, ದಿಢೀರ್ ಕಾರ್ಯಾಚರಣೆ ನಡೆಸಿ ಅಕ್ರಮ ಜಂಬಿಟ್ಟಿಗೆ ತುಂಬಿದ್ದ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಕ್ರಮ ಕೋರರಿಗೆ ನಡುಕ ಹುಟ್ಟಿಸಿದ್ದಾರೆ. ಬೊಮ್ಮತ್ತಿ ಬಳಿಯ ಮಳ್ಳ ಬಳಿ ಮಿಂಚಿನ ಕಾರ್ಯಾಚರಣೆ..! ತ್ಯಾಗರ್ತಿ ಭಾಗದ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಮಳ್ಳ ಬಳಿ ಸರ್ವೇ ನಂಬರ್ 107ರಲ್ಲಿ ಬಹಳ ದಿನಗಳಿಂದ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಸಾಗಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಈ ದೂರಿನ ಆಧಾರದ ಮೇಲೆ ಕಂದಾಯ ಪರಿವೀಕ್ಷಕ ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿ ಕಾರಿ ನಂದೀಶ್ ಅವರೊಂದಿಗೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಡಾ. ಪ್ರತಿಭಾ, ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದು ಜಪ್ತಿ ಮಾಡಿದ್ದಾರೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಎಫ್ಐಆರ್ (FIR) ಹಾಕಿಸಿದ್ದಾರೆ. ಯಾವುದೇ ಕಾರಣಕ್ಕೂ ಅಕ್ರಮ ಸಹಿಸಲ್ಲ" - ತಹಶೀಲ್ದಾರ್ ಆರ್ ಪ್ರತಿಭಾ ಎಚ್ಚರಿಕೆ.. ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು ಸಾಗರ ತಾಲೂಕಿನಲ್ಲಿ ಅವ್ಯಾಹತ ವಾಗಿ ನಡೆಯುತ್ತಿರುವ ಅಕ್ರಮ ಜಂಬಿಟ್ಟಿಗೆ ಹಾಗೂ ಮರಳು ಸಾಗಾಟವನ್ನು ಖಂಡಿತ ವಾಗಿಯೂ ಸಹಿಸುವುದಿಲ್ಲ. ಇಂದಿನ ಈ ದಾಳಿ ಪ್ರತಿಯೊಬ್ಬ ಅಕ್ರಮಕೋರನಿಗೂ ಎಚ್ಚರಿಕೆಯ ಗಂಟೆಯಾಗ ಬೇಕು. ತಾಲೂಕಿನಲ್ಲಿ ಇನ್ಮುಂದೆ ಎಲ್ಲಿಯೇ ಅಕ್ರಮ ಗಣಿಗಾರಿಕೆ ಕಂಡುಬಂದರೂ ನಿರ್ದಾಕ್ಷಿಣ್ಯ ವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಾಗರದ ಜನತೆಯಿಂದ ಹ್ಯಾಟ್ಸಾಫ್: ಹಿಂದಿನ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ಇರುತ್ತಿದ್ದ ಜಾಗದಲ್ಲಿ, ಅಧಿಕಾರ ಸ್ವೀಕರಿಸಿದಾಗಿ ನಿಂದಲೂ ಸಾಗರದ ನೆಲ, ಜಲ ಹಾಗೂ ಪರಿಸರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಡಾ. ಪ್ರತಿಭಾ ಅವರ ದಿಟ್ಟತನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ."ಇದ್ದರೆ ಇರಬೇಕು ಇಂತಹ ಅಧಿಕಾರಿ" ಎಂದು ಕೊಂಡಾಡಿರುವ ಸಾಗರದ ಜನತೆ, ಅಕ್ರಮ ಒತ್ತುವರಿ ಹಾಗೂ ಗಣಿಗಾರಿಕೆ ವಿರುದ್ಧ ಸಿಂಹಸ್ವಪ್ನ ವಾಗಿರುವ ತಹಶೀಲ್ದಾರ್ ಅವರನ್ನು 'ಲೇಡಿ ಸಿಂಗಂ' ಎಂದು ಬಣ್ಣಿಸಿ ಹ್ಯಾಟ್ಸಾಫ್ ಹೇಳಿದ್ದಾರೆ.1
- ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ2
- We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 5811101
- ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.1
- ವಿದ್ಯಾರ್ಥಿ ನಿಲಯಗಳ ಮುಂದೆ ಇರುವ ಪೆಟ್ಟಿಗೆ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಸಿಗುತ್ತೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನ ಗಳು, ಇದು ವಿದ್ಯಾರ್ಥಿಗಳಿಗೆ ಬೇಕಾ?. ಇಲ್ಲಿ ಮಾರಾಟ ಮಾಡುವುದು ಸರಿನಾ. ಶಾಲೆ–ವಸತಿ ನಿಲಯಗಳ ಸುತ್ತ ತಂಬಾಕು ದಂಧೆ: ಅಧಿಕಾರಿಗಳ ಕಣ್ಣೆದುರೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ! ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ, ಆದರ್ಶ ಶಾಲೆ, ಮೊರಾರ್ಜಿ ವಸತಿ ಶಾಲೆ, ಸರ್ಕಾರಿ ಐಟಿಐ ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ಸುತ್ತಮುತ್ತ ಅಕ್ರಮ ಪೆಟ್ಟಿಗೆ ಅಂಗಡಿಗಳ ಹಾವಳಿ ಮಿತಿ ಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನಗಳನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ತಂಬಾಕು ವ್ಯಸನದತ್ತ ಆಕರ್ಷಿತರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುವಂತೆ, ಆದರ್ಶ ಶಾಲೆಯ ವಿದ್ಯಾರ್ಥಿಯೊಬ್ಬನ ತಂದೆ ಪೊಲೀಸ್ ಇಲಾಖೆಗೆ ದೂರು ನೀಡಿದ ಬಳಿಕ ತಮ್ಮ ಮಗನನ್ನು ಶಾಲೆಯಿಂದ ಬಿಡಿಸಿ ಬೇರೆ ಶಾಲೆಗೆ ಸೇರಿಸಿರುವ ಘಟನೆ ಕೂಡ ಬೆಳಕಿಗೆ ಬಂದಿದೆ. ಈ ಹಿಂದೆ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿದ್ದರೂ, ಕೆಲವೇ ದಿನಗಳಲ್ಲಿ ಮತ್ತೆ ತಂಬಾಕು ಉತ್ಪನ್ನಗಳ ಮಾರಾಟ ಆರಂಭವಾಗಿದೆ ಎನ್ನಲಾಗಿದೆ. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳ ಸಮೀಪ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದ್ದರೂ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗುತ್ತಿದೆ ಎಂಬ ಆರೋಪಗಳಿವೆ. ಇದನ್ನು ಕಂಡೂ ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಅಕ್ರಮ ಅಂಗಡಿಗಳನ್ನು ಶಾಶ್ವತವಾಗಿ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು1
- ಕೃತಯುಗ, ತ್ರೇತಾಯುಗ,ದ್ವಾಪರಯುಗದಿಂದ ಗುರುಶಿಷ್ಯರ ಪರಂಪರೆ ಕಾಯುತ್ತೇವೆ. ಚಳ್ಳಕೆರೆ:ಪರಿಶುದ್ಧ ಮನಸ್ಸಿನಿಂದ ಗುರು ಸ್ಮರಣೆ ಮಾಡುವವರು ಬದುಕಿನ ಯಶಸ್ವಿ ಕಂಡುಕೊಳ್ಳುತ್ತಾರೆ ಎಂದು ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಹೇಳಿದರು. ಚಳ್ಳಕೆರೆ ನಗರದ ಬಳ್ಳಾರಿ ರಸ್ತೆ ಮಾರ್ಗದಲ್ಲಿ ಇರುವ ಎಸ್ಆರ್ ಎಸ್ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಗುರುಪೂರ್ಣಿಮೆ ಅಂಗವಾಗಿ ನೂರಾರು ವಿದ್ಯಾರ್ಥಿಗಳಿಂದ ಹೆತ್ತವರಿಗೆ ಹಮ್ಮಿಕೊಂಡಿದ್ದ ಪಾದಪೂಜೆ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿದರು. ತಂದೆ,ತಾಯಿ ಮತ್ತು ವಿದ್ಯೆ ಕಲಿಸುವ ಗುರುವಿನಲ್ಲಿ ದೈವ ಸ್ವರೂಪ ಕಂಡುಕೊಳ್ಳುವ ಸ್ಮರಣೆ ನಮ್ಮದಾಗಬೇಕು. ಕೃತಯುಗ, ತ್ರೇತಾಯುಗ,ದ್ವಾಪರಯುಗದಿಂದ ಗುರುಶಿಷ್ಯರ ಪರಂಪರೆ ಕಾಯುತ್ತೇವೆ.ಗುರು ಗೋವಿಂದಭಟ್ಟರ ಶಿಷ್ಯ ಸಮನ್ವಯತೆಯ ಕವಿ ಸಂತ ಶಶಿನಾಳ ಶರೀಫರು ಎನ್ನುವ ಸಂಬಂಧದಲ್ಲಿ ಜಾತಿ,ಧರ್ಮ ಮೀರಿದ ಗುರುಶಿಷ್ಯರ ಸಂಬಂಧ ಸಮಾಜಕ್ಕೆ ಶ್ರೇಷ್ಠವಾಗಿದೆ. ಮಲೆನಾಡಿನ ಕವಿ ಕುವೆಂಪು ತಮ್ಮ ರಾಮಾಯಣ ದರ್ಶನಂ ಕೃತಿಯನ್ನು ವಿದ್ಯಾ ಗುರುಗಳಾದ ತಳುಕಿನ ಟಿ.ಎಸ್. ವೆಂಕಣ್ಣಯ್ಯ ಅವರಿಗೆ ಅರ್ಪಿಸಿ ದಾಖಲೆಯಾಗಿ ಉಳಿಸಿದ್ದಾರೆ. ಆದರೆ,ಹಿರಿಯರಿಗೆ ಗೌರವ ತೋರದೆ ಗುರು ಎನ್ನುವ ಭಕ್ತಿ ಭಾವನೆ ಇಲ್ಲದ ಪ್ರಸ್ತುತ ಕಲಿಯುಗದಲ್ಲಿ ಸಮಾಜದ ತಲ್ಲಣಗಳನ್ನು ಕಾಣುತ್ತೇವೆ. ಮಕ್ಕಳು ಹೆಚ್ಚು ಅಂಕಪಡೆದು ಉದ್ಯೋಗಸ್ಥರಾಗಬೇಕು ಎನ್ನುವ ಆಸೆಯ ಜತೆಗೆ,ಒಳ್ಳೆಯ ಸಂಸ್ಕಾರ ಮತ್ತು ಸದ್ಗುಣಗಳು ಕಲಿಸುವ ಜವಾಬ್ದಾರಿ ಪಾಲಕರು ಮನೆಯಲ್ಲಿ ಒಂದು ಭಾಗವಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾ ಸಂಸ್ಥೆ ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ ಮಾತನಾಡಿ, ಬುದ್ದ ತನ್ನ ಲೋಕದ ಜ್ಞಾನವನ್ನು ಐದು ಜನ ಶಿಷ್ಯರಿಗೆ ಹಂಚಿಕೊಂಡ ದಿನವನ್ನು ಗುರುಪೂರ್ಣಿಮೆ ದಿನವಾಗಿ ಆಚರಿಸುತ್ತೇವೆ. ವಿದ್ಯೆ ಜತೆಗೆ ಸಂಸ್ಕಾರ, ವಿನಯತೆ ಇದ್ದಾಗ ಮಾತ್ರ ಬದುಕಿನ ಸಾರ್ಥಕತೆ ಆಗುತ್ತದೆ. ಹೆತ್ತವರ ಪರಿಶ್ರಮ ಮಕ್ಕಳಿಗೆ ಅರ್ಥವಾಗಬೇಕು. ಹೆತ್ತವರ ಪಾದ ಪೂಜೆಯಿಂದ ಕುಟುಂಬ ಸಂಬಂಧ ತಿಳಿಯಬೇಕು. ಹಿರಿಯರು ಮತ್ತು ಗುರುಗಳ ಆರೈಕೆ ಪಡೆಯು ಭಾವನೆ ರೂಢಿಸಿಕೊಳ್ಳಬೇಕು. ಶಾಲಾ ಹಂತದಲ್ಲಿ ಪಾದ ಪೂಜೆ ಕಾರ್ಯಕ್ಕೆ ಪಾಲಕರಿಂದ ಒಳ್ಳೆಯ ಸ್ಪಂದನೆ ಇದೆ ಎಂದು ಸ್ಮರಿಸಿದರು. ಪ್ರಾಚಾರ್ಯ ಬಿ.ಎಸ್. ವಿಜಯ್ ಸೇರಿ ನೂರಾರು ಪಾಲಕರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.1
- ಕುಂದಾಪುರ ಶೂಟೌಟ್ ಪ್ರಕರಣ | ಉಡುಪಿ ಎಸ್ ಪಿ ಹೇಳಿದ್ದೇನು..? ಕುಂದಾಪುರ : ಶೂಟೌಟ್ ಪ್ರಕರಣ ಅರೋಪಿ ಡೆರಿಕ್ ಪತ್ತೆಗೆ ವಿಶೇಷ ತಂಡ ಎಸ್ ಪಿ ಹರಿರಾಮ್ ಶಂಕರ್1