ಬೆಟ್ಟದಹಳ್ಳಿ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ತರೀಕೆರೆ: ಶ್ರೀ ಜಯಪ್ರಕಾಶ್ ನಾರಾಯಣ ಪ್ರೌಢಶಾಲೆ ಬೆಟ್ಟದಹಳ್ಳಿ ಇಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರು ಹಾಗೂ ಇಎಲ್ಸಿ (ELC) ಕ್ಲಬ್ನ ಸಂಚಾಲಕರಾದ ರಾಧಾಕೃಷ್ಣ ಟಿ. ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಹತ್ವ, ಪ್ರಜಾಪ್ರಭುತ್ವದ ಮೌಲ್ಯಗಳು, ನಾಗರಿಕರ ಜವಾಬ್ದಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಪ್ರಜಾಪ್ರಭುತ್ವದ ಮಹತ್ವವನ್ನು ವಿದ್ಯಾರ್ಥಿಗಳು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಬಸವರಾಜಪ್ಪ ಕೆ.ಪಿ., ಶಿಕ್ಷಕರಾದ ಶಿವಕುಮಾರ್ ವಿ.ಆರ್., ಸತೀಶ್ ಕುಮಾರ್ ಕೆ.ಎಂ., ಹಾಲೇಶಿ ಎಸ್., ಕವಿತಾ ಟಿ.ಎನ್., ಶೇಖರಪ್ಪ ಜಿ.ಜಿ. ಸೇರಿದಂತೆ ಶಿಕ್ಷಕ ವೃಂದದವರು ಪ್ರತಿಜ್ಞಾವಿಧಿ ಸ್ವೀಕರಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
ಬೆಟ್ಟದಹಳ್ಳಿ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ತರೀಕೆರೆ: ಶ್ರೀ ಜಯಪ್ರಕಾಶ್ ನಾರಾಯಣ ಪ್ರೌಢಶಾಲೆ ಬೆಟ್ಟದಹಳ್ಳಿ ಇಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರು ಹಾಗೂ ಇಎಲ್ಸಿ (ELC) ಕ್ಲಬ್ನ
ಸಂಚಾಲಕರಾದ ರಾಧಾಕೃಷ್ಣ ಟಿ. ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಹತ್ವ, ಪ್ರಜಾಪ್ರಭುತ್ವದ ಮೌಲ್ಯಗಳು, ನಾಗರಿಕರ ಜವಾಬ್ದಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು
ಮೂಡಿಸಿದರು. ಪ್ರಜಾಪ್ರಭುತ್ವದ ಮಹತ್ವವನ್ನು ವಿದ್ಯಾರ್ಥಿಗಳು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಬಸವರಾಜಪ್ಪ ಕೆ.ಪಿ., ಶಿಕ್ಷಕರಾದ
ಶಿವಕುಮಾರ್ ವಿ.ಆರ್., ಸತೀಶ್ ಕುಮಾರ್ ಕೆ.ಎಂ., ಹಾಲೇಶಿ ಎಸ್., ಕವಿತಾ ಟಿ.ಎನ್., ಶೇಖರಪ್ಪ ಜಿ.ಜಿ. ಸೇರಿದಂತೆ ಶಿಕ್ಷಕ ವೃಂದದವರು ಪ್ರತಿಜ್ಞಾವಿಧಿ ಸ್ವೀಕರಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
- ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.1
- ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.1
- ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ. ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.1
- ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..2
- ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩 #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್ #ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ #ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ #ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ #ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ #BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle1
- ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು1
- ನಟ ಅರವಿಂದ್ ಬೋಳಾರ್ಗೆ ಧರ್ಮ ಸಂಕಟ ; ಮುಸ್ಲಿಮರನ್ನು ಹೊಗ್ಗಳಿದ್ದಕ್ಕೆ ಆಕ್ರೋಶ1
- ಶಿವಮೊಗ್ಗ-ವಂದೇ ಮಾತರಂ ಗೀತೆ ಎರಡೇ ಚರಣ: ಕಾರ್ಯಕ್ರಮ ದಿಂದ ಹೊರನಡೆದ ಶಾಸಕ ಶಿವಮೊಗ್ಗ: ವಂದೇ ಮಾತರಂ ಗೀತೆಯಲ್ಲಿ ಕೇವಲ ಎರಡು ಚರಣವನ್ನು ಹಾಡಿದ್ದಕ್ಕೆ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯ ಕ್ರಮದಿಂದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೊರ ನಡೆದಿರುವ ಘಟನೆ ನಡೆದಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳ ವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಬಸಪ್ಪ ಕಾರ್ಯಕ್ರಮ ದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಹಾಡಿದ್ದಕ್ಕೆ ವೇದಿಕೆಯಲ್ಲಿಯೇ ಅಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಅವರು ಇದ್ದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣ ಹಾಡಿ ಅಪಮಾನ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಕಾರ್ಯಕ್ರಮದಲ್ಲಿ ಎರಡು ಚರಣ ಹಾಡಬೇಕೆಂದು ಎಲ್ಲಿ ಇದೆ, ಆದೇಶ ತೋರಿಸಿ ಎಂದು ಆಗ್ರಹಿಸಿದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲೇಶಪ್ಪ ರಾಜ್ಯ ಸರ್ಕಾರದ ಆದೇಶವನ್ನು ತೋರಿಸಿದರು. ಇದಕ್ಕೆ ಗರಂ ಆದ ಶಾಸಕರು ಹಾಗಾದ್ರೆ ಕೇಂದ್ರ ಸರ್ಕಾರದ ಆದೇಶವನ್ನು ಮೊಟಕುಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ವೇದಿಕೆಯಲ್ಲಿ ನಾನು ಇರಲ್ಲ ಎಂದು ಭವನದಿಂದ ಹೊರ ನಡೆದರು. ನಂತರ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಸೇರಿ ಒಂದು ಕಾನೂನು ಮಾಡುತ್ತದೆ. ಆದರೆ ರಾಜ್ಯ ಸರ್ಕಾರವು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇರುವ ಕಾರ್ಯಕ್ರಮ ದಲ್ಲಿ ಮಾತ್ರ ಪೂರ್ಣ ಗೀತೆ ಹಾಡಬೇಕು, ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣ ಹಾಡಬೇಕೆಂದು ಆದೇಶ ಮಾಡಿದೆ. ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯ ವನ್ನು ತೆಗೆದುಕೊಂಡು ವಂದೇ ಮಾತರಂ ಗೀತೆಗೆ 150 ವರ್ಷವಾದ ಕಾರಣ ಗೀತೆಯನ್ನು ಗಾಯನ ಮಾಡಬೇಕೆಂದು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಆದರೆ ಇದನ್ನು ರಾಜ್ಯ ಸರ್ಕಾರ ತನ್ನ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಂದೇ ಮಾತರಂನ ಎರಡು ಚರಣ ಮಾತ್ರ ಹಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇಂದು ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯಂದು ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣವನ್ನು ಹಾಡಲಾಯಿತು. ಇದನ್ನು ಪ್ರಶ್ನಿಸಿದರೆ, ರಾಜ್ಯ ಸರ್ಕಾರದ ಆದೇಶ ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದ್ದಾರೆ. ಇದರಿಂದ ನಾನು ಕಾರ್ಯಕ್ರಮದಿಂದ ಹೊರಗೆ ಬಂದಿದ್ದೇನೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು. ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು ಇರುವ ಕಾರ್ಯಕ್ರಮ ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಿನ ಎರಡು ಚರಣ ಮಾತ್ರ ಹಾಡಬೇಕೆಂದು ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಮಾಡಿದೆ. ಹಾಗಾದ್ರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪಿಎಂ ಅವರಿಗೆ ಒಂದು ಕಾನೂನು, ಸಾಮಾನ್ಯ ಜನರಿಗೆ ಒಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು. ಕಾನೂನು ಅನ್ನು ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಿರಾ, ನೀವು ಈ ದೇಶದ ಪ್ರಜೆಗಳು ಅಲ್ವಾ ಎಂದು ಅವರು ಪ್ರಶ್ನಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೇರೆ ಬೇರೆ ಕಾನೂನು ಇದೆಯೇ ಎಂದರು. ಜನಗಣಮನ ಗೀತೆಯಲ್ಲಿ ಎಲ್ಲ ರಾಜ್ಯಗಳ ಹೆಸರು ಇದೆಯೇ ಎಂದು ಪ್ರಶ್ನಿಸಿದರು. ಇದು ಅಕ್ಷಮ್ಯ ಅಪರಾಧವಾಗಿದೆ. ನ್ಯಾಯಾಧೀಶರ ಮುಂದೆ ಇಟ್ಟುಕೊಂಡು ನ್ಯಾಯಾಂಗಕ್ಕೆ ಕೊಡಲಿ ಪೆಟ್ಟು ಕೊಡುವ ಕೆಲಸ ಮಾಡಲಾ ಗುತ್ತಿದೆ. ಸಂವಿಧಾನಕ್ಕೆ ಅಪಪ್ರಚಾರ ಮಾಡಲು ಶಾಸಕ ಚನ್ನಿ ಬಿಡಲ್ಲ ಎಂದು ಹೇಳಿದರು. ಸರ್ಕಾರಿ ಕಾರ್ಯಕ್ರಮದಲ್ಲೂ ಗೀತೆಯನ್ನು ಪೂರ್ಣ ಹಾಡಬೇಕಿತ್ತು. ನೀವು ನಿರ್ಣಯ ಮಾಡಿದಂತೆ ನಡೆಯಲ್ಲ. ಕಾಂಗ್ರೆಸ್ ಪಕ್ಷ ವನ್ನು ಅಲ್ಪಸಂಖ್ಯಾಂತರಿಗೆ ಅಡ ಇಡಲಾಗಿದೆ ಎಂದು ಶಾಸಕ ಚನ್ನಬಸಪ್ಪ ಕಿಡಿಕಾರಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಹೋಗಬೇಕಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. 136 ಜನ ಇದ್ದೇವೆಂದು ಕಾಂಗ್ರೆಸ್ ಏನು ಮಾಡಿದ್ರು ನಡೆಯುತ್ತದೆ ಎಂದು ತಿಳಿದುಕೊಂಡರೆ ತಪ್ಪು. ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ. ಬಂಕಿಮಚಂದ್ರ ಚಟರ್ಜಿ ಆರಾಧ್ಯ ದೈವ ಎಂದರು. ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಬೇಕಿತ್ತು. ಆದರೆ ಈಗ ಬೇಡವೇ ಎಂದು ಪ್ರಶ್ನಿಸಿದರು. ಸಂವಿಧಾನಕ್ಕೆ ಬಿಕ್ಕಟ್ಟಿನ ಸಂದರ್ಭ ಬಂದಿದೆ. ಇದನ್ನು ರಾಜ್ಯ ಸರ್ಕಾರ ಹುಟ್ಟುಹಾಕಿದೆ. ನಮ್ಮಲ್ಲಿ ಭಾರತೀಯ ನೀತಿ ಸಂಹಿತೆ ಇದೆಯೇ ಹೊರತು ಕರ್ನಾಟಕ ನೀತಿ ಸಂಹಿತೆ ಅಂತ ಇಲ್ಲ. ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಇದನ್ನು ಪ್ರಶ್ನೆ ಮಾಡಲಾಗುವುದು ಎಂದರು.1