logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದ್ವಿತೀಯ ಪಿಯುಸಿಯಲ್ಲಿ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ. ಡಾ‌ ಬಿ ಆರ್ ಅಂಬೇಡ್ಕರ್ ಜಯಂತಿಯಲ್ಲಿ ಸನ್ಮಾನ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ ಹಾಗೂ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಡಾ ಬಿ ಆರ್‌ ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಶಾಸಕರದಾ ಟಿ. ರಘುಮೂರ್ತಿಯವರು ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮುಂದಿನ ದಿನಗಳಲ್ಲಿ ನಿಮ್ಮ ಗುರಿ ಸಾಧನೆಯನ್ನು ಮಾಡಿ ತಾಲೂಕಿಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತನ್ನಿ ಎಂದರು.

6 hrs ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
6 hrs ago

ದ್ವಿತೀಯ ಪಿಯುಸಿಯಲ್ಲಿ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ. ಡಾ‌ ಬಿ ಆರ್ ಅಂಬೇಡ್ಕರ್ ಜಯಂತಿಯಲ್ಲಿ ಸನ್ಮಾನ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ ಹಾಗೂ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಡಾ ಬಿ ಆರ್‌ ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಶಾಸಕರದಾ ಟಿ. ರಘುಮೂರ್ತಿಯವರು ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮುಂದಿನ ದಿನಗಳಲ್ಲಿ ನಿಮ್ಮ ಗುರಿ ಸಾಧನೆಯನ್ನು ಮಾಡಿ ತಾಲೂಕಿಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತನ್ನಿ ಎಂದರು.

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.
    1
    ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಬಳ್ಳಾರಿ ನಗರದ ವಾರ್ಡ್ ನಂಬರ್ 10 ರಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು
    1
    ಬಳ್ಳಾರಿ ನಗರದ ವಾರ್ಡ್ ನಂಬರ್ 10 ರಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು
    user_Voice news Kannada
    Voice news Kannada
    ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    3 hrs ago
  • ಗದಗ ಏಪ್ರಿಲ್ 14: ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜಿ ಅವರ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಗದಗ-ಬೆಟಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಅಂಬೇಡ್ಕರ್ ಅವರು ಬಡವರ ಹಾಗೂ ಹಿಂದುಳಿದ ವರ್ಗಗಳ ಉನ್ನತಿಗಾಗಿ ತಮ್ಮ ಸಂಪೂರ್ಣ ಜೀವನವನ್ನು ಅರ್ಪಿಸಿದ್ದು, ಸಮಾನತೆ ಆಧಾರಿತ ಸಮಾಜ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಭಾರತೀಯ ಸಂವಿಧಾನವನ್ನು ರೂಪಿಸಿ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಿದ ಮಹತ್ವದ ವ್ಯಕ್ತಿತ್ವ ಅವರು ಎಂದು ಪ್ರಶಂಸಿಸಿದರು. ಅರ್ಥಶಾಸ್ತ್ರ, ಇತಿಹಾಸ ಹಾಗೂ ಮನಶಾಸ್ತ್ರ ಸೇರಿದಂತೆ ಹಲವು ವಿಷಯಗಳಲ್ಲಿ ಅಪಾರ ಜ್ಞಾನ ಹೊಂದಿದ್ದ ಡಾ. ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಸಮಿತಿಯ ಮುಖ್ಯಸ್ಥರಾಗಿ ನೇಮಿಸಲಾಗಿತ್ತು. ಜಾತಿ ಪದ್ಧತಿಯನ್ನು ನಿರ್ಮೂಲಗೊಳಿಸಿ ಸಮಾನತೆ ಸ್ಥಾಪನೆಗೆ ಅವರು ಕೈಗೊಂಡ ಪ್ರಯತ್ನಗಳು ಶ್ಲಾಘನೀಯ ಎಂದು ಹೇಳಿದರು. ಅಂಬೇಡ್ಕರ್ ಅವರ ಸೇವೆಯನ್ನು ಮನಗಂಡು ಅಂದಿನ ಪ್ರಧಾನಮಂತ್ರಿ ವಿ.ಪಿ. ಸಿಂಗ್ ಅವರು ಅವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ಇಂದಿನ ಪ್ರಧಾನಿ ನರೇಂದ್ರ ಮೊದಿ ಅವರ ಸರ್ಕಾರವೂ ಅವರ ಸ್ಮರಣಾರ್ಥ ಪಂಚತೀರ್ಥ ಕ್ಷೇತ್ರಗಳನ್ನು ಘೋಷಿಸಿ ಅಭಿವೃದ್ಧಿಪಡಿಸಿರುವುದನ್ನು ಅವರು ಉಲ್ಲೇಖಿಸಿದರು. ಸಂವಿಧಾನದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಅಳವಡಿಸಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸಿದ ಮಹಾನ್ ನಾಯಕ ಡಾ. ಅಂಬೇಡ್ಕರ್ ಎಂದು ಹೇಳಿದರು. ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಎಂಬ ಅವರ ಮೂರು ಸೂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಬಲ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಎಸ್ ವಿ ಸಂಕನೂರ ಕರೆ ನೀಡಿದರು. ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರು, ರಾಷ್ಟ್ರ ಪ್ರಶಸ್ತಿ ವಿಜೇತರು ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯರಾದ ಎಸ್.ಎನ್. ಬಳ್ಳಾರಿ ಅವರು ಉಪನ್ಯಾಸ ನೀಡುತ್ತಾ, ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಬಾಲ್ಯದಿಂದಲೇ ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು. ತಮ್ಮ ಬಾಲ್ಯದ ನೋವು ಮತ್ತು ಅನುಭವಗಳನ್ನು ಸಮಾಜದ ಇತರರು ಅನುಭವಿಸಬಾರದು ಎಂಬ ದೃಢ ಸಂಕಲ್ಪದಿಂದ ಅವರು ಸಮಾನತೆಗಾಗಿ ಜೀವನಪರ್ಯಂತ ಹಗಲಿರುಳು ಹೋರಾಡಿದರು ಎಂದು ವಿವರಿಸಿದರು. ಅಂಬೇಡ್ಕರ್ ಅವರ ತಂದೆಯ ಪ್ರೇರಣೆ ಅವರ ಜೀವನದಲ್ಲಿ ಮಹತ್ವದ ತಿರುವಾಗಿದ್ದು, ಬಾಲ್ಯದಲ್ಲೇ ದೃಢನಿಶ್ಚಯ ಬೆಳೆಸಲು ಕಾರಣವಾಯಿತು. ಕಷ್ಟಕರ ಪರಿಸ್ಥಿತಿಗಳ ನಡುವೆಯೂ ಶಿಕ್ಷಣದ ಮೂಲಕ ಅವರು ಎತ್ತರಕ್ಕೇರಿದ ರೀತಿಯನ್ನು ವಿವರಿಸಿ, ಅಸ್ಪೃಶ್ಯತೆ ವಿರುದ್ಧ ಅವರ ನಿರಂತರ ಹೋರಾಟವನ್ನು ಅವರು ಮನದಟ್ಟು ಮಾಡಿದರು. ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ಬಡವರು ಮತ್ತು ಅಸ್ಪೃಶ್ಯರು ಸಹ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಿದೆ. ಇಂತಹ ಅನೇಕ ಉದಾಹರಣೆಗಳನ್ನು ಇಂದಿನ ಸಮಾಜದಲ್ಲೇ ಕಾಣಬಹುದು ಎಂದು ಹೇಳಿದರು. ಎಚ್.ಸಿ.ಇ.ಎಸ್. ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಪ್ರೊ. ಡಿ.ಜಿ. ಜೋಗಣ್ಣನವರ ಅವರು ಡಾ. ಬಾಬು ಜಗಜೀವನ ರಾಮ್ ಅವರ ಕುರಿತು ಮಾತನಾಡಿ, ಅವರು ಮೃದು ಸ್ವಭಾವದವರಾಗಿದ್ದು, ಅಪ್ರತಿಮ ಹೋರಾಟಗಾರರಾಗಿದ್ದರು ಎಂದು ತಿಳಿಸಿದರು. ಅಂಬೇಡ್ಕರ್ ಹಾಗೂ ಬಾಬುಜಿ ಇಬ್ಬರೂ ಅಸ್ಪೃಶ್ಯತೆ ನಿವಾರಣೆಗೆ ನಮಗೆಲ್ಲ ಸ್ಪೂರ್ತಿದಾಯಕ ವ್ಯಕ್ತಿತ್ವಗಳಾಗಿದ್ದಾರೆ ಎಂದರು. ಡಾ. ಬಾಬುಜಿ ಅವರ ಬಾಲ್ಯ ಜೀವನ ಕಷ್ಟಕರವಾಗಿದ್ದು, ತಾಯಿಯನ್ನು ಕಳೆದುಕೊಂಡು ಸಂಕಷ್ಟಗಳಲ್ಲಿ ಬೆಳೆದ ಅವರು ಕಠಿಣ ಪರಿಶ್ರಮದಿಂದ ದೇಶದ ಉನ್ನತ ಸ್ಥಾನಗಳಿಗೆ ಏರಿದರು. ಅವರ ಜೀವನದ ವಿವಿಧ ಹಂತಗಳನ್ನು ವಿವರಿಸಿ, ಸಮಾಜದಲ್ಲಿ ಮಾನವೀಯತೆ ಬೆಳೆಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಇಂದಿನ ಸಮಾಜದಲ್ಲಿಯೂ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿದ್ದು, ಪ್ರತಿಯೊಬ್ಬರೂ ಮನುಷ್ಯರನ್ನು ಮನುಷ್ಯರಂತೆ ಕಾಣಬೇಕು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂಬುದನ್ನು ಡಾ. ಬಾಬು ಜಗಜೀವನ ರಾಮ್ ಅವರು ಒತ್ತಿ ಹೇಳಿದ್ದರು ಎಂದು ಉಲ್ಲೇಖಿಸಿದರು. ಕಾನೂನು ವಿದ್ಯಾರ್ಥಿ ಮಣಿಕಂಠ ಹಾದಿಮನಿ ಅವರು‌ ಸಹ ವಿಶೇಷ ಉಪನ್ಯಾಸ ನೀಡಿ, ಡಾ. ಬಿ ಅಂಬೇಡ್ಕರ್ ಅವರು ದಲಿತ ನಾಯಕಕನಲ್ಲ ಅವರೋಬ್ಬ ಅಪ್ರತಿಮ ವಿಶ್ವನಾಯಕ ಎಂದು ಬಣ್ಣಿಸಿದರು. ಡಾ. ಅಂಬೇಡ್ಕರ್ ಅವರ ಕುರಿತಾದ ಪ್ರಭಂದ ಸಂಕಲನವನ್ನು ವಿದಾನ ಪರಿಷತ್ ಶಾಸಕ ಎಸ್ ವಿ ಸಂಕನೂರ ಸೇರಿದಂತೆ ವೇದಿಕೆಯಲ್ಲಿರುವ ಅತಿಥಿಗಳು ಬಿಡುಗಡೆ ಮಾಡಿದರು. ನಂತರ ಉತ್ತಮ ಕಾರ್ಯನಿರ್ಹಣೆ ಮಾಡಿದ ಪೌರಕಾರ್ಮಿಕರಿಗೆ ಸನ್ಮಾನಿಸಿದರು. ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸಂವಿಧಾನ ಪ್ರಸ್ತಾವನೆ ಬೋಧಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರೊ.‌ಬಾಹುಬಲಿ ಜೈನರ ನಿರ್ವಹಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಪ್ರಮುಖರಾದ ಕೃಷ್ಣ ಗೌಡ ಪಾಟೀಲ, ಬಸವಾರಾಜ ಕಡೆಮನಿ, ಕೃಷ್ಣಾ ಪರಾಪೂರ, ಅಶೋಕ ಕುಡತಿನಿ, ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ರೋಹನ್ ಜಗದೀಶ್, ಜಿಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್, ಸಹಾಯಕ ಆಯುಕ್ತ ಗಂಗಪ್ಪ ಎಂ, ತಹಶಿಲ್ದಾರರ ಶ್ರೀನಿವಾಸ್ ಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಎಸ್ ಪವಾರ ಸೇರಿದಂತೆ ಇತರರು ಹಾಜರಿದ್ದರು. *ಮೆರವಣಿಗೆ* : ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜೀ ಅವರ ಭಾವಚಿತ್ರಗಳ ಮೆರವಣಿಗೆಯು ಗದಗ ನಗರಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವ ಮಾಲಾರ್ಪಣೆಯೊಂದಿಗೆ ಪ್ರಾರಂಭಗೊಂಡು ಮಹಾತ್ಮಾ ಗಾಂಧಿ ಸರ್ಕಲ್, ಮಹೇಂದ್ರಕರ್ ಸರ್ಕಲ್ , ಟಾಂಗಾ ಕೂಟ್ , ಬಸವೇಶ್ವರ ಸರ್ಕಲ್ , ಗುಜ್ಜರಬಸ್ತಿ , ಮುಳಗುಂದನಾಕಾ ಮಾರ್ಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಬಂದು ತಲುಪಿತು.
    1
    ಗದಗ ಏಪ್ರಿಲ್ 14: ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜಿ ಅವರ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಗದಗ-ಬೆಟಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಅಂಬೇಡ್ಕರ್ ಅವರು ಬಡವರ ಹಾಗೂ ಹಿಂದುಳಿದ ವರ್ಗಗಳ ಉನ್ನತಿಗಾಗಿ ತಮ್ಮ ಸಂಪೂರ್ಣ ಜೀವನವನ್ನು ಅರ್ಪಿಸಿದ್ದು, ಸಮಾನತೆ ಆಧಾರಿತ ಸಮಾಜ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಭಾರತೀಯ ಸಂವಿಧಾನವನ್ನು ರೂಪಿಸಿ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಿದ ಮಹತ್ವದ ವ್ಯಕ್ತಿತ್ವ ಅವರು ಎಂದು ಪ್ರಶಂಸಿಸಿದರು.
ಅರ್ಥಶಾಸ್ತ್ರ, ಇತಿಹಾಸ ಹಾಗೂ ಮನಶಾಸ್ತ್ರ ಸೇರಿದಂತೆ ಹಲವು ವಿಷಯಗಳಲ್ಲಿ ಅಪಾರ ಜ್ಞಾನ ಹೊಂದಿದ್ದ ಡಾ. ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಸಮಿತಿಯ ಮುಖ್ಯಸ್ಥರಾಗಿ ನೇಮಿಸಲಾಗಿತ್ತು. ಜಾತಿ ಪದ್ಧತಿಯನ್ನು ನಿರ್ಮೂಲಗೊಳಿಸಿ ಸಮಾನತೆ ಸ್ಥಾಪನೆಗೆ ಅವರು ಕೈಗೊಂಡ ಪ್ರಯತ್ನಗಳು ಶ್ಲಾಘನೀಯ ಎಂದು ಹೇಳಿದರು.
ಅಂಬೇಡ್ಕರ್ ಅವರ ಸೇವೆಯನ್ನು ಮನಗಂಡು ಅಂದಿನ ಪ್ರಧಾನಮಂತ್ರಿ ವಿ.ಪಿ. ಸಿಂಗ್ ಅವರು ಅವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ಇಂದಿನ ಪ್ರಧಾನಿ ನರೇಂದ್ರ ಮೊದಿ ಅವರ ಸರ್ಕಾರವೂ ಅವರ ಸ್ಮರಣಾರ್ಥ ಪಂಚತೀರ್ಥ ಕ್ಷೇತ್ರಗಳನ್ನು ಘೋಷಿಸಿ ಅಭಿವೃದ್ಧಿಪಡಿಸಿರುವುದನ್ನು ಅವರು ಉಲ್ಲೇಖಿಸಿದರು.
ಸಂವಿಧಾನದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಅಳವಡಿಸಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸಿದ ಮಹಾನ್ ನಾಯಕ ಡಾ. ಅಂಬೇಡ್ಕರ್ ಎಂದು ಹೇಳಿದರು. 
ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಎಂಬ ಅವರ ಮೂರು ಸೂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಬಲ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಎಸ್ ವಿ ಸಂಕನೂರ ಕರೆ ನೀಡಿದರು.
ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರು, ರಾಷ್ಟ್ರ ಪ್ರಶಸ್ತಿ ವಿಜೇತರು ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯರಾದ ಎಸ್.ಎನ್. ಬಳ್ಳಾರಿ ಅವರು ಉಪನ್ಯಾಸ ನೀಡುತ್ತಾ, ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಬಾಲ್ಯದಿಂದಲೇ ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು.
ತಮ್ಮ ಬಾಲ್ಯದ ನೋವು ಮತ್ತು ಅನುಭವಗಳನ್ನು ಸಮಾಜದ ಇತರರು ಅನುಭವಿಸಬಾರದು ಎಂಬ ದೃಢ ಸಂಕಲ್ಪದಿಂದ ಅವರು ಸಮಾನತೆಗಾಗಿ ಜೀವನಪರ್ಯಂತ ಹಗಲಿರುಳು ಹೋರಾಡಿದರು ಎಂದು ವಿವರಿಸಿದರು.
ಅಂಬೇಡ್ಕರ್ ಅವರ ತಂದೆಯ ಪ್ರೇರಣೆ ಅವರ ಜೀವನದಲ್ಲಿ ಮಹತ್ವದ ತಿರುವಾಗಿದ್ದು, ಬಾಲ್ಯದಲ್ಲೇ ದೃಢನಿಶ್ಚಯ ಬೆಳೆಸಲು ಕಾರಣವಾಯಿತು. ಕಷ್ಟಕರ ಪರಿಸ್ಥಿತಿಗಳ ನಡುವೆಯೂ ಶಿಕ್ಷಣದ ಮೂಲಕ ಅವರು ಎತ್ತರಕ್ಕೇರಿದ ರೀತಿಯನ್ನು ವಿವರಿಸಿ, ಅಸ್ಪೃಶ್ಯತೆ ವಿರುದ್ಧ ಅವರ ನಿರಂತರ ಹೋರಾಟವನ್ನು ಅವರು ಮನದಟ್ಟು ಮಾಡಿದರು.
ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ಬಡವರು ಮತ್ತು ಅಸ್ಪೃಶ್ಯರು ಸಹ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಿದೆ. ಇಂತಹ ಅನೇಕ ಉದಾಹರಣೆಗಳನ್ನು ಇಂದಿನ ಸಮಾಜದಲ್ಲೇ ಕಾಣಬಹುದು ಎಂದು ಹೇಳಿದರು.
ಎಚ್.ಸಿ.ಇ.ಎಸ್. ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಪ್ರೊ. ಡಿ.ಜಿ. ಜೋಗಣ್ಣನವರ ಅವರು ಡಾ. ಬಾಬು ಜಗಜೀವನ ರಾಮ್ ಅವರ ಕುರಿತು ಮಾತನಾಡಿ, ಅವರು ಮೃದು ಸ್ವಭಾವದವರಾಗಿದ್ದು, ಅಪ್ರತಿಮ ಹೋರಾಟಗಾರರಾಗಿದ್ದರು ಎಂದು ತಿಳಿಸಿದರು. 
ಅಂಬೇಡ್ಕರ್ ಹಾಗೂ ಬಾಬುಜಿ ಇಬ್ಬರೂ ಅಸ್ಪೃಶ್ಯತೆ ನಿವಾರಣೆಗೆ ನಮಗೆಲ್ಲ ಸ್ಪೂರ್ತಿದಾಯಕ ವ್ಯಕ್ತಿತ್ವಗಳಾಗಿದ್ದಾರೆ ಎಂದರು.
ಡಾ. ಬಾಬುಜಿ ಅವರ ಬಾಲ್ಯ ಜೀವನ ಕಷ್ಟಕರವಾಗಿದ್ದು, ತಾಯಿಯನ್ನು ಕಳೆದುಕೊಂಡು ಸಂಕಷ್ಟಗಳಲ್ಲಿ ಬೆಳೆದ ಅವರು ಕಠಿಣ ಪರಿಶ್ರಮದಿಂದ ದೇಶದ ಉನ್ನತ ಸ್ಥಾನಗಳಿಗೆ ಏರಿದರು. ಅವರ ಜೀವನದ ವಿವಿಧ ಹಂತಗಳನ್ನು ವಿವರಿಸಿ, ಸಮಾಜದಲ್ಲಿ ಮಾನವೀಯತೆ ಬೆಳೆಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.
ಇಂದಿನ ಸಮಾಜದಲ್ಲಿಯೂ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿದ್ದು, ಪ್ರತಿಯೊಬ್ಬರೂ ಮನುಷ್ಯರನ್ನು ಮನುಷ್ಯರಂತೆ ಕಾಣಬೇಕು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. 
ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂಬುದನ್ನು ಡಾ. ಬಾಬು ಜಗಜೀವನ ರಾಮ್ ಅವರು ಒತ್ತಿ ಹೇಳಿದ್ದರು ಎಂದು ಉಲ್ಲೇಖಿಸಿದರು.
ಕಾನೂನು ವಿದ್ಯಾರ್ಥಿ ಮಣಿಕಂಠ ಹಾದಿಮನಿ ಅವರು‌ ಸಹ ವಿಶೇಷ ಉಪನ್ಯಾಸ ನೀಡಿ, ಡಾ. ಬಿ ಅಂಬೇಡ್ಕರ್ ಅವರು ದಲಿತ ನಾಯಕಕನಲ್ಲ ಅವರೋಬ್ಬ ಅಪ್ರತಿಮ ವಿಶ್ವನಾಯಕ ಎಂದು ಬಣ್ಣಿಸಿದರು.
ಡಾ. ಅಂಬೇಡ್ಕರ್ ಅವರ ಕುರಿತಾದ ಪ್ರಭಂದ ಸಂಕಲನವನ್ನು ವಿದಾನ ಪರಿಷತ್ ಶಾಸಕ ಎಸ್ ವಿ ಸಂಕನೂರ ಸೇರಿದಂತೆ ವೇದಿಕೆಯಲ್ಲಿರುವ ಅತಿಥಿಗಳು ಬಿಡುಗಡೆ ಮಾಡಿದರು. ನಂತರ ಉತ್ತಮ ಕಾರ್ಯನಿರ್ಹಣೆ ಮಾಡಿದ ಪೌರಕಾರ್ಮಿಕರಿಗೆ ಸನ್ಮಾನಿಸಿದರು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸಂವಿಧಾನ ಪ್ರಸ್ತಾವನೆ ಬೋಧಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರೊ.‌ಬಾಹುಬಲಿ ಜೈನರ ನಿರ್ವಹಣೆ ಮಾಡಿದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಪ್ರಮುಖರಾದ ಕೃಷ್ಣ ಗೌಡ ಪಾಟೀಲ, ಬಸವಾರಾಜ ಕಡೆಮನಿ, ಕೃಷ್ಣಾ ಪರಾಪೂರ, ಅಶೋಕ ಕುಡತಿನಿ, ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ರೋಹನ್ ಜಗದೀಶ್, ಜಿಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್, ಸಹಾಯಕ ಆಯುಕ್ತ ಗಂಗಪ್ಪ ಎಂ, ತಹಶಿಲ್ದಾರರ ಶ್ರೀನಿವಾಸ್ ಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ,  ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಎಸ್ ಪವಾರ ಸೇರಿದಂತೆ ಇತರರು ಹಾಜರಿದ್ದರು.
*ಮೆರವಣಿಗೆ* : ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜೀ ಅವರ ಭಾವಚಿತ್ರಗಳ ಮೆರವಣಿಗೆಯು ಗದಗ ನಗರಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವ ಮಾಲಾರ್ಪಣೆಯೊಂದಿಗೆ ಪ್ರಾರಂಭಗೊಂಡು ಮಹಾತ್ಮಾ ಗಾಂಧಿ ಸರ್ಕಲ್, ಮಹೇಂದ್ರಕರ್ ಸರ್ಕಲ್ , ಟಾಂಗಾ ಕೂಟ್ , ಬಸವೇಶ್ವರ ಸರ್ಕಲ್ , ಗುಜ್ಜರಬಸ್ತಿ , ಮುಳಗುಂದನಾಕಾ ಮಾರ್ಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಬಂದು ತಲುಪಿತು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    17 min ago
  • ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ ಕಣ್ಣನ್ನು ತಂಪು ಗೊಳಿಸಿದೆ
    1
    ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ  ಕಣ್ಣನ್ನು ತಂಪು ಗೊಳಿಸಿದೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    2 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    13 hrs ago
  • ಹೊಸಕೋಟೆ ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ. ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ
    3
    ಹೊಸಕೋಟೆ
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. 
ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು.
ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ.
ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ
ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ.
ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    2 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.