Shuru
Apke Nagar Ki App…
ಶಿಕಾರಿಪುರದಲ್ಲಿ ಹೋಳಿ ಹಬ್ಬದ ಸಂಭ್ರಮ ಕುಣಿದು ಕೊಪ್ಪಳಿಸಿದ ಹಿಂದೂ ಪರ ಸಂಘಟನೆಗಳು ವಿಶ್ವ ಹಿಂದೂ ಪರಿಷತ್ತು ಬಜರಂಗದಳ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳು ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿ ಶ್ರೀ ಕಾಶಿ ವಿಶ್ವೇಶ್ವರ ದೇವಸ್ಥಾನದಿಂದ ಪ್ರಮುಖ ಪಟ್ಟಣದ ಬೀದಿಗಳಲ್ಲಿ ಹೊರಟ ಹೋಳಿ ಹಬ್ಬದ ಸಂಭ್ರಮಾಚರಣೆ ಪುರುಷರು ಮಹಿಳೆಯರು ಮಕ್ಕಳು ಒಟ್ಟಾಗಿ ಬಣ್ಣದ ಓಕುಳಿಯಲ್ಲಿ ಕುಣಿದಾಡಿ ಹೊಯ್ಸಳ ಸರ್ಕಲ್ ನಿಂದ ತಾಲೂಕು ಆಫೀಸ್ ರೋಡ್ ಮಾಸೂರು ಸರ್ಕಲ್ ಬಸ್ ಸ್ಟಾಂಡ್ ನ ದಾರಿಯ ಉದ್ದಕ್ಕೂ ಡಿಜೆ ಹಾಗೂ ನೀರಿನ ಕಾರಂಜಿಯಲ್ಲಿ ಏಳು ಬಣ್ಣಗಳ ಕಲರವದೊಂದಿಗೆ ಎಲ್ಲರೂ ಒಂದಾಗಿ ಬಣ್ಣ ಹಚ್ಚುವುದರ ಮೂಲಕ ಸಂಭ್ರಮ ಪಟ್ಟರು.
Press Narashimha swamy SN
ಶಿಕಾರಿಪುರದಲ್ಲಿ ಹೋಳಿ ಹಬ್ಬದ ಸಂಭ್ರಮ ಕುಣಿದು ಕೊಪ್ಪಳಿಸಿದ ಹಿಂದೂ ಪರ ಸಂಘಟನೆಗಳು ವಿಶ್ವ ಹಿಂದೂ ಪರಿಷತ್ತು ಬಜರಂಗದಳ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳು ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿ ಶ್ರೀ ಕಾಶಿ ವಿಶ್ವೇಶ್ವರ ದೇವಸ್ಥಾನದಿಂದ ಪ್ರಮುಖ ಪಟ್ಟಣದ ಬೀದಿಗಳಲ್ಲಿ ಹೊರಟ ಹೋಳಿ ಹಬ್ಬದ ಸಂಭ್ರಮಾಚರಣೆ ಪುರುಷರು ಮಹಿಳೆಯರು ಮಕ್ಕಳು ಒಟ್ಟಾಗಿ ಬಣ್ಣದ ಓಕುಳಿಯಲ್ಲಿ ಕುಣಿದಾಡಿ ಹೊಯ್ಸಳ ಸರ್ಕಲ್ ನಿಂದ ತಾಲೂಕು ಆಫೀಸ್ ರೋಡ್ ಮಾಸೂರು ಸರ್ಕಲ್ ಬಸ್ ಸ್ಟಾಂಡ್ ನ ದಾರಿಯ ಉದ್ದಕ್ಕೂ ಡಿಜೆ ಹಾಗೂ ನೀರಿನ ಕಾರಂಜಿಯಲ್ಲಿ ಏಳು ಬಣ್ಣಗಳ ಕಲರವದೊಂದಿಗೆ ಎಲ್ಲರೂ ಒಂದಾಗಿ ಬಣ್ಣ ಹಚ್ಚುವುದರ ಮೂಲಕ ಸಂಭ್ರಮ ಪಟ್ಟರು.
More news from ಕರ್ನಾಟಕ and nearby areas
- ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಸೋಮವಾರ ಬೆಂಕಿ ಬಿದ್ದು ಮೇವು ಸಂಪೂರ್ಣವಾಗಿ ಸುಟ್ಟು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ ಜನಧ್ವನಿ ನ್ಯೂಸ್ ಪ್ರಕಟಿಸಿದ ವರದಿಗೆ ಉತ್ತಮ ಸ್ಪಂದನೆ ದೊರೆತಿದೆ. ವರದಿ ಬೆಳಕಿಗೆ ಬಂದ ಬೆನ್ನಲ್ಲೇ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಬುಧವಾರ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರಿಗೆ ಒಂದು ಲೋಡ್ ಭತ್ತದ ಮೇವನ್ನು ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ರೈತರು ಹಾಗೂ ಜಾನುವಾರುಗಳ ಪಾಲನೆ-ಪೋಷಣೆ ಮಾಡುವಲ್ಲಿ ಎದುರಿಸುವ ಕಷ್ಟಗಳನ್ನು ನಾನು ಚೆನ್ನಾಗಿ ಅರಿತಿದ್ದೇನೆ. ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಬೆಂಕಿ ಬಿದ್ದು ಉಂಟಾದ ನಷ್ಟದ ಕುರಿತು ಜನಧ್ವನಿ ನ್ಯೂಸ್ ವರದಿ ನೋಡಿ ಮನಸ್ಸಿಗೆ ಬೇಸರವಾಯಿತು. ಆದ್ದರಿಂದ ರೈತನ ಜಾನುವಾರುಗಳಿಗೆ ನೆರವಾಗುವ ಉದ್ದೇಶದಿಂದ ಮೇವು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮೇವು ನೆರವು ನೀಡಿದ ಶ್ರೀ ಜಪಾನಂದ ಸ್ವಾಮೀಜಿಗಳಿಗೆ ರೈತ ನಾಗರಾಜ್ ಕೃತಜ್ಞತೆ ಸಲ್ಲಿಸಿದರು.1
- 56,432 ಹುದ್ದೆಗಳ ನೇಮಕಾತಿಯ ಅಧಿಸೂಚನೆ ಕೂಡಲೇ ಹೊರಡಿಸಲು ಆಗ್ರಹಿಸಿ ವಿಜಯಪುರದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ1
- ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ನೇತೃತ್ವದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ರಂಝಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವು ಸಂತ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿ ಫಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ, ಖ್ಯಾತ ಸಾಹಿತಿ, ನಿವೃತ್ತ ಶಿಕ್ಷಕಿ ಬಿ.ಎಂ. ರೋಹಿಣಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬೆಥನಿ ಮುಖ್ಯಸ್ಥೆ ಸಿಸ್ಟರ್ ರೋಸ್ ಮೇರಿ, ಬಾವುಟಗುಡ್ಡ ಝೀನತ್ ಬಕ್ಷ್ ಜುಮಾ ಮಸ್ಜಿದ್ನ ಉಪಾಧ್ಯಕ್ಷ ಕೆ. ಅಶ್ರಫ್ ಮಾತನಾಡಿ ಸೌಹಾರ್ದತೆಯ ಅಗತ್ಯ ಮತ್ತು ಮಹತ್ವವನ್ನು ಸಾರಿದರು. ವೇದಿಕೆಯ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಸ್ವಾಗತಿಸಿ, ಪ್ರೀತಿಯನ್ನು ಹಂಚುವ ವೇದಿಕೆಯ ಉದ್ದೇಶಗಳನ್ನು ವಿವರಿಸಿದರು. ಸಾಮರಸ್ಯ ಮಂಗಳೂರು ಮುಖ್ಯಸ್ಥೆ ಮಂಜುಳಾ ನಾಯಕ್ ವೇದಿಕೆಯಲ್ಲಿದ್ದರು. ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಸರ್ವಧರ್ಮೀಯರು ಸೇರಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.1
- Post by Rahuldev singh1
- Post by Sunil Sunil1
- ಪವಿತ್ರ ರಂಜಾನ್ ಮಾಸದ ಅಂಗವಾಗಿ Rise of Humanity Trust ವತಿಯಿಂದ ಬಳ್ಳಾರಿ ನಗರದ Kaul Bazaar ಪ್ರದೇಶದ Babu Chowk ನಲ್ಲಿ ಇರುವ ಟ್ರಸ್ಟ್ ಕಚೇರಿಯಲ್ಲಿ ಭರ್ಜರಿ ಇಫ್ತಾರ್ ಕೂಟವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಉಪವಾಸ ಮುಗಿಸಿದ ನಂತರ ಪ್ರಾರ್ಥನೆ ಸಲ್ಲಿಸಿದರು. ಟ್ರಸ್ಟ್ ಅಧ್ಯಕ್ಷ N. M. D. Asif ಮಾತನಾಡಿ, ರಂಜಾನ್ ಮಾಸವು ಸಹನೆ, ತ್ಯಾಗ, ದಾನ ಧರ್ಮ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುವ ಪವಿತ್ರ ಸಮಯವಾಗಿದೆ ಎಂದು ಹೇಳಿದರು. ಇಫ್ತಾರ್ ಕೂಟದ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವವನ್ನು ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟ್ನ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.1
- "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸೂಲಗಿತ್ತಿ ತಿಮ್ಮಕ್ಕಗೆ ಸನ್ಮಾನ". ಚಳ್ಳಕೆರೆ:-ನಗರದ ವೀರಶೈವ ಮಹಿಳಾ ಸಂಘದ ವತಿಯಿಂದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ"ಯ ಪ್ರಯುಕ್ತ ಕಾಲುವೆಹಳ್ಳಿಯ ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕಗೆ ಸನ್ಮಾನಿಸಿ ಗೌರವಧನ ನೀಡಿ ಗೌರವಿಸಲಾಯಿತು. "ಸಂಸ್ಕೃತಿ ಮತ್ತು ಸಂಪ್ರಾದಯಗಳ ಉಳುವಿನಲ್ಲಿ ಮಹಿಳೆಯ ಪಾತ್ರ"ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ನಿರ್ದೇಶಕಿ ಶ್ರೀಮತಿ ಗೀತಾ ಪ್ರಕಾಶ್ ಅವರು ಭಾರತೀಯ ಸನಾತನ ಪರಂಪರೆಯ ಸಂಸ್ಕೃತಿ ಮತ್ತು ವಿಶಿಷ್ಟ ಸಂಪ್ರದಾಯಗಳನ್ನು ಮಹಿಳೆಯರು ಪ್ರತಿನಿತ್ಯ ತಮ್ಮ ದೈನಂದಿನ ಜೀವನದಲ್ಲಿ ಆಚರಣೆಗೆ ತರುವ ಮೂಲಕ ಅವುಗಳನ್ನು ಉಳಿಸಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು.ಇದರ ಭಾಗವಾಗಿ ಮಕ್ಕಳಲ್ಲಿ ಉತ್ತಮ ಸಾಂಸ್ಕೃತಿಕ ಮೌಲ್ಯಗಳನ್ನು ತುಂಬಿ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿ ಅವರನ್ನು ಸಾಂಸ್ಕೃತಿಕ ರಾಯಭಾರಿಗಳಾಗಿ ಮಾಡಬೇಕು ಕಿವಿಮಾತು ಹೇಳಿದರು. ಮಹಿಳಾ ದಿನಾಚರಣೆಯ ಪ್ರಯುಕ್ತ ವೀರಶೈವ ಮಹಿಳೆಯರಿಂದ ಭಾರತದ ವಿವಿಧ ರಾಜ್ಯಗಳ ಉಡುಗೆ-ತೊಡಿಗೆಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ವೀರಶೈವ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಪದ್ಮ ನಾಗರಾಜ್, ಕಾರ್ಯದರ್ಶಿ ಮಂಜುಳಾ ನಾಗರಾಜ್, ನಿರ್ದೇಶಕರಾದ ಗೀತಾ ಪ್ರಕಾಶ್, ಸುನೀತಾ,ಸುಮಾ, ಮಮತಾ,ವನಜಾ, ಸೌಮ್ಯಲತಾ, ಮಂಗಳಾ,ಕವಿತಾ, ಕಾಲುವೆಹಳ್ಳಿ ಪಾಲಕ್ಕ, ಕರೀಕೆರೆ ಮಂಜುಳಾ, ಪ್ರಮೀಳಾ, ತಳುಕಿನ ತೊಯಜಾಕ್ಷಿ, ಜಗದಂಬಾ, ಶಾಂತಮ್ಮ, ರತ್ನಮ್ಮ, ಪುಷ್ಪಲತಾ, ಅನಿತಾ,ಜಾನಕಿ, ಶೈಲಜಾ, ವಿಶಾಲಾಕ್ಷಿ, ಯಶೋಧಾ,ಶಾರದಾ, ತಿಪ್ಪಮ್ಮ,ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವೀರಶೈವ ಮಹಿಳಾ ಸಂಘದ ಸದಸ್ಯರು ಇದ್ದರು.1
- ಚಳ್ಳಕೆರೆ: ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಸರ್ಕಾರಿ ಸ್ಮಶಾನ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದವರ ವಿರುದ್ಧ ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ಚಳ್ಳಕೆರೆ ತಾಲೂಕಿನ ಚೌಳೂರು ಕಾವಲಿನ ಸರ್ವೆ ನಂ. 1ರಲ್ಲಿ ಸಾರ್ವಜನಿಕರಿಗಾಗಿ ಸುಮಾರು ಎರಡು ಎಕರೆ ಸ್ಮಶಾನ ಭೂಮಿ ಮೀಸಲಾಗಿದ್ದು, ಅದನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ರೇಹಾನ್ ಪಾಷ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜೆಸಿಬಿ ಯಂತ್ರದ ಸಹಾಯದಿಂದ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿದರು. ಸರ್ಕಾರಿ ಭೂಮಿ, ವಿಶೇಷವಾಗಿ ಸ್ಮಶಾನ ಹಾಗೂ ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಯಾರೂ ಅಕ್ರಮವಾಗಿ ಒತ್ತುವರಿ ಮಾಡಬಾರದು. ಇಂತಹ ಒತ್ತುವರಿ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಎಚ್ಚರಿಕೆ ನೀಡಿದ್ದಾರೆ.1
- ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ, ಗುಟ್ಕಾ ಉಗಿದರೆ 1000 ದಂಡ ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್ನಲ್ಲಿರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿದೆ. ಹೋಟೆಲ್, ಕ್ಯಾಂಟೀನ್ಗಳಿಂದ ಹೆಚ್ಚಾಗಿ ಕಾರ್ಮಿಕರು ಅಥವಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬಿಸಿ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್ ಗಳಲ್ಲಿ ಬಿಸಿ ಆಹಾರ ಪದಾರ್ಥಕ್ಕೆ ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್, ತಂಬಾಕು ಸೇವನೆ ನಿಷೇಧ, ಎಚ್ಚರಿಕೆಯ ಫಲಕ ಇಲ್ಲದೆ ಇರುವುದು, ಅಂಗಡಿ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರ್ ಲೈಟರ್, ಬೆಂಕಿ ಪೊಟ್ಟಣಗಳನ್ನು ಇಟ್ಟರೆ ಅವರಿಗೆ ದಂಡ ವಿಧಿಸಬೇಕು. ತಂಬಾಕು ಬ್ರಾಂಡ್ ಹೆಸರಿನೊಂದಿಗೆ ಜಾಹಿರಾತು ಫಲಕಗಳು ಅಥವಾ ಯಾವುದೇ ರೀತಿಯಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರ, 21 ವರ್ಷದೊಳಗಿನವರಿಗೆ ತಂಬಾಕು ಮಾರಾಟ ಮಾಡಿದರೆ, ಚಿಲ್ಲರೆ ಅಂಗಡಿಗಳಲ್ಲಿ ಸಿಗರೇಟ್, ತಂಬಾಕು ಉತ್ಪನ್ನಗಳ ಪ್ರದರ್ಶನ ಮಾಡಿದರೆ ದಂಡ ವಿಧಿಸಲು ಅಪರ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ಶಾಲಾ ಕಾಲೇಜುಗಳ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ಮಾಡುವವರ ಬಗ್ಗೆ ಶಾಲಾ-ಕಾಲೇಜುಗಳ ಮುಖ್ಯಸ್ಥರು ನಿಗಾವಹಿಸಬೇಕು. ಅಂತಹ ಅಂಗಡಿಗಳ ಪಟ್ಟಿಯನ್ನು ತಮ್ಮ ವ್ಯಾಪಿಯಲ್ಲಿರುವ ಸ್ಥಳಿಯಾಡಳಿತಕ್ಕೆ ಮತ್ತು ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಜಿಲ್ಲೆಯಲ್ಲಿ ತಂಬಾಕು ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಬಹುದು ಎಂದು ರಾಜು ಕೆ. ತಿಳಿಸಿದರು. ಶಾಲಾ ಕಾಲೇಜುಗಳಲ್ಲಿ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ನಿಷೇಧ ಬೋರ್ಡ್ ಕಡ್ಡಾಯವಾಗಿ ಹಾಕಬೇಕು ಮತ್ತು ತಂಬಾಕು ಉತ್ಪನ್ನಗಳನ್ನು ಬಳಸದಂತೆ ಸೂಕ್ತ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ತಂಬಾಕಿಗೆ ಸಂಬಂಧಿಸಿದಂತೆ ಜಾಹೀರಾತು ಫಲಕಗಳು ಕಂಡು ಬಂದಿದ್ದು, ತಂಬಾಕು ನಿಯಂತ್ರಣ ಕಾಯ್ದೆ ಪ್ರಕಾರ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ತಂಬಾಕಿನ ಅಪಾಯಕ್ಕೆ ಸಿಲುಕುವ ರಿಕ್ಷಾ ಚಾಲಕರು, ಕಟ್ಟಡ ಕಾರ್ಮಿಕರು, ಪೌರ ಕಾರ್ಮಿಕರು ಇರುವ ಸ್ಥಳಕ್ಕೆ ಹೋಗಿ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವಿಸಿದವರಿಗೆ ಮತ್ತು ಗುಟ್ಕಾ ಜಗಿದು ಉಗಿಯುವವರಿಗೆ 1000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಅಂಗಡಿಗಳಲ್ಲಿ ಚಿಲ್ಲರೆ ಸಿಗರೇಟ್ ಮಾರಾಟ ಮಾಡಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿದ ಅಂಗಡಿಗಳಿಗೂ ದಂಡ ವಿಧಿಸಲಾಗುವುದು. ಕೋಟ್ಪಾ ಕಾರ್ಯಾಚರಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 2,587 ಪ್ರಕರಣ ದಾಖಲಾಗಿದ್ದು, ರೂ 3.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ತಂಬಾಕಿಗೆ ಸಂಬಂಧಿಸಿದಂತೆ ಸುಮಾರು 52 ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ. ತಂಬಾಕು ಉತ್ಪನ್ನ ಪ್ಯಾಕ್ನಲ್ಲಿ ಆರೋಗ್ಯ ಎಚ್ಚರಿಕೆಯ ಚಿತ್ರಗಳು ಶೇ.85 ಕ್ಕಿಂತ ಕಡಿಮೆ ಅಳತೆಯಲ್ಲಿದ್ದರೆ ಮತ್ತು ಹಳೆಯದಾದ ಎಚ್ಚರಿಕೆಯ ಚಿತ್ರಗಳನ್ನು ಹಾಕಿದರೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನ್ಚಂದ್ರ ಕುಲಾಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು ಉಪಸ್ಥಿತರಿದ್ದರು.1