Shuru
Apke Nagar Ki App…
The in rinrd8hg idfcc
Dharmeshkumar
The in rinrd8hg idfcc
More news from Tumakuru and nearby areas
- The in rinrd8hg idfcc4
- ಇಂದು ರಾಜ್ಯದಲ್ಲಿ ಎಸೆಸೆಲ್ಸಿ ಫಲಿತಾಂಶ ಲಭ್ಯವಾಗಿದ್ದು.. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ : ಕಳೆದ ಬಾರಿಗಿಂತ ಶೇ.21.8 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಗೆ ಶೇ.92.25 ರಷ್ಟು ಫಲಿತಾಂಶ ಲಭಿಸಿದೆ. ಜಿಲ್ಲೆಯಲ್ಲಿ ಒಟ್ಟು 21,054 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು, ಈ ಪೈಕಿ 19,423 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.. ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ದಿನವೇ 16 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. ಅಯಾನ್ ಬೇಗ್ ಎಂಬ ವಿದ್ಯಾರ್ಥಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಎಂದು ಪೊಲೀಸರು ತಿಳಿಸಿದ್ದಾರೆ .ಘಟನೆಯ ಮುನ್ನ ತಂಗಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾನೆ ಎಂಬ ಮಾಹಿತಿ ಸಹ ಲಭ್ಯವಾಗಿದೆ. ಚಿತ್ರದುರ್ಗದ ಹೊರಪೇಟೆ ನಿವಾಸಿಯಾಗಿದ್ದ ಅಯಾನ್, ಕೆಲವು ದಿನಗಳ ಹಿಂದೆಯೇ ಸಾಮಾಜಿಕ ಜಾಲತಾಣವಾದ Instagram ನಲ್ಲಿ ಆತಂಕ ಹುಟ್ಟಿಸುವ ರೀತಿಯ ಸ್ಟೇಟಸ್ ಹಾಕಿದ್ದನು.. ಮೃತದೇಹವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಹೃದಯ ಕಲುಕುವಂತಿದೆ. ಪ್ರಾಥಮಿಕ ಮಾಹಿತಿಯಂತೆ, ವಿದ್ಯಾರ್ಥಿಗೆ ಸುಮಾರು 70% ಅಂಕಗಳು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ನಿಖರ ಕಾರಣಗಳ ಬಗ್ಗೆ ಕುಟುಂಬಸ್ಥರು ಅಥವಾ ಪೊಲೀಸರು ಇನ್ನೂ ಸ್ಪಷ್ಟಪಡಿಸಿಲ್ಲ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫಲಿತಾಂಶದ ಒತ್ತಡ, ವೈಯಕ್ತಿಕ ಸಮಸ್ಯೆಗಳು ಅಥವಾ ಇತರೆ ಕಾರಣಗಳು ಈ ಘಟನೆಗೆ ಕಾರಣವಾಗಿದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ತಜ್ಞರ ಅಭಿಪ್ರಾಯದಂತೆ, ಪರೀಕ್ಷಾ ಫಲಿತಾಂಶದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ ಮತ್ತು ಮಾರ್ಗದರ್ಶನ ಅತ್ಯಂತ ಅಗತ್ಯ. ಪೋಷಕರು ಮತ್ತು ಶಿಕ್ಷಕರು ಮಕ್ಕಳೊಂದಿಗೆ ನಿರಂತರವಾಗಿ ಮಾತನಾಡಿ, ಒತ್ತಡವನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು ಎಂಬ ಸಲಹೆ1
- ಚಳ್ಳಕೆರೆ: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವುದು ಗಮನಾರ್ಹವಾಗಿದೆ. ಆದರೆ ಸಮಗ್ರ ತಾಲೂಕುವಾರು ಫಲಿತಾಂಶದಲ್ಲಿ ಚಿತ್ರದುರ್ಗ ತಾಲೂಕು ಕೊನೆಯ ಸ್ಥಾನ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಾಲ್ಲೂಕಿನ ಮಟ್ಟದಲ್ಲಿ ಉತ್ತಮ ಸಾಧನೆ ಕಂಡುಬಂದಿದ್ದು, ವೇದಾ ಆಂಗ್ಲ ಮಾಧ್ಯಮ ಶಾಲೆ, ಕುವೆಂಪು ಆಂಗ್ಲ ಮಾಧ್ಯಮ ಶಾಲೆ, ಸರ್ವೋದಯ ಶಾಲೆ ಹಾಗೂ ವಾಸವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 620ರಲ್ಲಿ 618 ಅಂಕಗಳನ್ನು ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಮೂಲಕ ನಾಲ್ಕು ಶಾಲೆಗಳು ತಾಲ್ಲೂಕಿನ ಟಾಪರ್ ಪಟ್ಟದಲ್ಲಿ ಸ್ಥಾನ ಪಡೆದಿವೆ. ವಾಸವಿ ಶಾಲೆಯ ವಿದ್ಯಾರ್ಥಿನಿ ಶ್ರೀಜಾ ಹಾಗೂ ಕುವೆಂಪು ಶಾಲೆಯ ವಿದ್ಯಾರ್ಥಿ ಆದರ್ಶ ಅವರ ಸಾಧನೆಗೆ ಪೋಷಕರು ಮತ್ತು ಶಿಕ್ಷಕರು ಸಿಹಿ ತಿನಿಸಿ ಸಂಭ್ರಮಿಸಿದರು. ಶಾಲಾ ವಾತಾವರಣದಲ್ಲಿ ಹರ್ಷೋದ್ಗಾರ ವ್ಯಕ್ತವಾಯಿತು. ಸ್ಥಳೀಯ ಶಾಸಕ ಟಿ. ರಘುಮೂರ್ತಿ ಅವರು ಸಹ ಟಾಪರ್ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸಿಹಿ ತಿನಿಸಿ ಸಂತಸ ಹಂಚಿಕೊಂಡರು. ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.1
- ಸಿದ್ದಾಪುರ ಗ್ರಾಮದ ನೂತನ ಆಂಗ್ಲ ಮಾಧ್ಯಮಿಕ ಶಾಲೆಯು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ರಷ್ಟು ಫಲಿತಾಂಶ ಪಡೆದಿದೆ. ಚಿತ್ರದುರ್ಗದ ಸಿದ್ದಾಪುರ ಗ್ರಾಮದ ಶ್ರೀ ನೂನತ್ ಆಂಗ್ಲ ಮಾಧ್ಯಮ ವಸತಿ ಶಾಲೆಯು 2025-26 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದಿದೆ1
- ವಿಧ್ಯಾರ್ಥಿಗಳ ಸನಸ್ಯೆ ಗಳನ್ನು ಬಗೆಹರಿಸುವಂತೆ ವಿಶ್ವವಿದ್ಯಾಲಯದ ಗಮನಕ್ಕೆ ಸಕಾಷ್ಟುಬಾರಿ ತಂದರು ಸ್ಪಂದಿಸದೇ ವಿದ್ಯಾರ್ಥಿ ವಿರೋದಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಹೋರಾಟ ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸುತ್ತದೆ. ಕುಲಪತಿಗಳು ಅಧಿಕಾರ ಸ್ವೀಕರಿಸಿದಂದಿನಿಂದಲೂ ವಿಶ್ವವಿದ್ಯಾಲಯದಲ್ಲಿ ಅಧಿಕಾರಿ ವರ್ಗದವರ ಆಂತರಿಕ ಕಚ್ಚಾಟದಲ್ಲೇ ತೊಡಗಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಕಳೆದ ೫ ತಿಂಗಳ ಹಿAದೆ ಪರೀಕ್ಷೆ ಬರೆದಿದ್ದ 1.3ಮತ್ತು 5ನೇ ಸಿಮೆಸ್ಟರ್ ಗಳ ಫಲಿತಾಂಶ ಪ್ರಕಟಿಸಿಲ್ಲ. ಇತ್ತೀಚೆಗೆ ನಡೆದ ಪರೀಕ್ಷೆಗಳ ಮೌಲ್ಯಮಾಪನವನ್ನು ಉಪನ್ಯಾಸಕರಿಗೆ ಮೌಲ್ಯಮಾಪನದ ಗೌರವಧನ ನೀಡದೇ ಇರುವುದರಿಂದ ಉಪನ್ಯಾಸಕರು ಮೌಲ್ಯಮಾಪನವನ್ನು ಬಹಿಷ್ಕರಿಸಿದ್ದಾರೆ. ಅಲ್ಲದೇ 3 ವರ್ಷಗಳಿಂದ ಯಾವುದೇ ಪರೀಕ್ಷೆಗಳ ಅಂಕಪಟ್ಟಿಯನ್ನು ವಿತರಿಸದೇ ಅಂಕಪಟ್ಟಿಗಳನ್ನು ಮುದ್ರಿಸಲು ಟೆಂಡರ್ ಕರೆಯುವುದಾಗಿ ಹೇಳುತ್ತಲೇ ಬರಲಾಗುತ್ತಿದೆ. ಇದರಿಂದಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕೆ ಹೋಗಲು, ಉದ್ಯೋಗ ಕಂಡುಕೊಳ್ಳಲು ಆಗುತ್ತಿಲ್ಲ. ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪಾಸಿಂಗ್ ಸರ್ಟಿಫಿಕೇಟ್ ಅಥವಾ ಪದವಿ ಪ್ರಮಾಣ ಪತ್ರ ನೀಡುತ್ತಿಲ್ಲ. ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ನೀಡುವಂತೆ ಜಿನ್ಯುಯೆನ್ ಸರ್ಟಿಫಿಕೇಟ್ ಕೊಡದೇ ಇರುವುದರಿಂದಾಗಿ ಕುವೆಂಪು ವಿವಿಯಲ್ಲಿ ವ್ಯಾಸಂಗ ಮಾಡಿದವರಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಸಿಗುವುದು ಕಷ್ಟವಾಗುತ್ತಿದೆ. ವಿಶ್ವವಿದ್ಯಾಲಯದ ಆಂತರಿಕ ಕಚ್ಚಾಟದಿಂದಾಗಿ ಕಳೆದೆರಡು ವರ್ಷ ಗಳಿಂದ ಘಟಿಕೋತ್ಸವ ಸಮಾರಂಭವನ್ನು ಸಹ ಏರ್ಪಡಿಸದೇ ವಿವಿಯ ಮಾನ ಹರಾಜಿಗಿಡಲಾಗಿದೆ. ಕಳೆದ ಬಾರಿ ವಿವಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದ ಫಲಿತಾಂಶ ಸಾಕಷ್ಟು ಗೊಂದಲಕ್ಕೀಡು ಮಾಡಿತ್ತು. ನೂರಾರು ವಿದ್ಯಾರ್ಥಿಗಳ ಫಲಿತಾಂಶ ಒAದು ಬಾರಿ ಪಾಸ್ ಎಂದು ತೋರಿಸಿದ್ದರೆ ಮತ್ತೊಂದು ಬಾರಿ ಫೇಲ್ ಎಂದು ತೋರಿಸುತ್ತಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ಗೊಂದಲಕ್ಕೀಡಿ ಆತಂಕಕ್ಕೊಳಗಾಗಿದ್ದಾರೆ. ಕುವೆAಪು ವಿಶ್ವ ವಿದ್ಯಾಲಯದಲ್ಲಿ ಸಾಕಷ್ಟು ಬಡ ಮತ್ತು ಮದ್ಯಮ ವರ್ಗದ ವಿದ್ಯಾರ್ಥಿಗಳು ಓದುತಿದ್ದು ಶುಲ್ಕ ದ ಹೆಸರಿನಲ್ಲಿ ಏಕಾ ಏಕಿ ಸಾವಿರಾರು ರುಪಾಯಿ ಪರೀಕ್ಷಾ ಶುಲ್ಕ ಹಾಗು ಪ್ರವೇಶ ಶುಲ್ಕ ದ ಹೆಸರಿನಲ್ಲಿ ಬಡ ಮತ್ತು ಮದ್ಯಮ ವರ್ಗದ ವಿದ್ಯಾರ್ಥಿಗಳಿಂದ ಸುಲಿಗೆಗೆ ಇಳಿದಿರುವುದು ಖಂಡನೀಯ ಕೂಡಲೇ ರಾಜ್ಯಪಾಲರು ಆಂತರಿಕ ಕಚ್ಚಾಟದಲ್ಲಿ ತೊಡಗಿರುವ ಕುಲಪತಿಗಳಿಗೆ. ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಲು ಸೂಚನೆ ನೀಡಿ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಅವ್ಯವಸ್ಥೆ ಸರಿಪಡಿಸಿ, ಅಕ್ರಮಗಳನ್ನು ತಡೆಯುವ ಕೆಲಸವನ್ನು ಮಾಡುವಂತೆ ಎಚ್ಚರಿಕೆ ನೀಡಬೇಕು ಬೇಡಿಕೆಗಳು ➢ ಕಳೆದ 5ತಿಂಗಳ ಹಿಂದೆ ನಡೆದಿದ್ದ 1.3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು. ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ಜೆನ್ಯೂಯೆನ್ ಸರ್ಟಿಫಿಕೇಟ್ ವಿತರಣೆ ಮಾಡಬೇಕು ➢ ಏಕಾ ಏಕಿ ಏರಿಸಿರುವ ಸಾವಿರಾರು ರುಪಾಯಿ ಪರೀಕ್ಷಾ ಶುಲ್ಕ ಹಾಗು ಪ್ರವೇಶ ಶುಲ್ಕವನ್ನು ಇಳಿಸಬೇಕು ➢ ಡಿಜಿಟೆಲ್ ಮೌಲ್ಯಮಾಪನದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು ಕೂಡಲೇ ಡಿಜಿಟೆಲ್ ಮೌಲ್ಯಮಾಪನವನ್ನು ಕೈಬಿಡಬೇಕು ➢ ಭ್ರಷ್ಟಾಚಾರದ ಆರೋಪ ಹಾಗು ವಿಶ್ವ ವಿದ್ಯಾಲಯದಲ್ಲಿ ಕಳಂಕ ಹೊತ್ತಿರುವ ಎಲ್ಲಾ ಅಧಿಕಾರಿಗಳನ್ನೂ ತಕ್ಷಣ ವಜಾ ಮಾಡಬೇಕು ➢ ಯು.ಯು.ಸಿ.ಎಮ್.ಎಸ್ ನಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳಿಗೆ ಸೂಕ್ತ ಪರಿಹಾರ ವದಗೆಸಬೇಕು ➢ ವಿವಿ ಯಲ್ಲಿನ ತಾಂತ್ರಿಕ ತೊಂದರೆಗಳಿಗೆ ಸರ್ಕಾರವನ್ನು ದೂರದೆ ಸರಿಪಡಿಸುವ ವ್ಯವಸ್ಥೆ ಮಾಡಬೇಕು ➢ 2021-22ರ ದೂರಶಿಕ್ಷಣ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಅಂಕಪಟ್ಟಿ ಹಾಗು ಪಲಿತಾಂಶದ ಬಗ್ಗೆ ಕೂಡಲೆ ಗಮನಹರಿಸಬೇಕು ➢ ವಿವಿ ವ್ಯಾಪ್ತಿಗೊಳಪಡುವ ಎಲ್ಲಾ ಕಾಲೇಜುಗಳಲ್ಲಿ ಹಾಗು ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಬೇಕು. ➢ ವಿವಿಯ ಎಲ್ಲಾ ಕಾಲೇಜುಗಳಿಗೆ ಕಂಪ್ಯೂಟರ್ ಹಾಗೂ ಲ್ಯಾಬ್ ವ್ಯವಸ್ಥೆ ಮಾಡಬೇಕು. ➢ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಬೇಕು. ಎಂದು ಒತ್ತಾಯಿಸಲಾಯಿತು ಈ ಸಂದರ್ಭದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಎನ್ ಎಸ್ ಯು ಐ ಗೌರವ ಅಧ್ಯಕ್ಷರು ಭದ್ರಾವತಿ ತಾಲೂಕು ಬಗರು ಉಕುಂ ಸಮಿತಿಯ ಸದಸ್ಯರಾದ ಆರ್ ಮುರುಗೇಶ್ ರವರು N S U I ನ ಜಿಲ್ಲಾಧ್ಯಕ್ಷರಾದ ವಿಜಯ್ ಕಾರ್ಯಧ್ಯಕ್ಷರಾದ ರವಿ ಕಟಿಕೆರೆ ನಗರಾಧ್ಯಕ್ಷರಾದ ರವಿ ನಗರ ಉಪಾಧ್ಯಕ್ಷರಾದ ಆದಿತ್ಯ ಸುಭಾನ್ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರೋಜಿ ರಾವ್ ವರುಣ್ ಅಭಿ ಫರಾಜ್ ಸೃಜನ್ ಚೇತನ್, ಧನುಷ್, ಸೃಜನ್ ಲೋಹಿತ್, ಆಕಾಶ್, ಹಾಲಸ್ವಾಮಿ, ವಿಕಾಸ್ ಯೂಸುಫ್. ರಿಹಾನ್. ಸಾದ್ ಉಲ್ಲಾ. ಇಸ್ಮಾಯಿಲ್. ಅರ್ಮಾನ್. ರಯಾನ್. ಅಡೀಬ್. ರಿಜ್ವಾನ್. ಆಶಿಕ್. ವಾಸೀಮ್. ರಿಹಾನ್. ಅಜೀಂ. ಅರ್ಮಾನ್. ಸಲ್ಮಾನ್ ದೃಶ್ಯ , ಲೋಹಿತ್ , ಯಶಸ್ , ಉಮೇಶ್ , ಅಂತೋನಿ , ಹೇಮಂತ್ , ತರುಣ್ , ವಿವೇಕ್ , ಸಂದೇಶ್ , ಮಿಥುನ್ , ನವೀನ್ , ಅಶೋಕ್ , ನಿಖಿಲ್ , ಚಂದನ್ , ವಿನಯ್ , ಮನೀಶ್ ಶ್ರೀಕಾಂತ್ ಪ್ರಜ್ವಲ್,ಪಂಕಜ್ ಪ್ರಭು,ಪ್ರಮೋದ್, ಸುನಿಲ್,ಪ್ರೀತಮ್, ಕುಮಾರ್ ಹಾಗೂ ನೂರಾರು ವಿದ್ಯಾರ್ಥಿ ನಾಯಕರು ಪಾಲ್ಗೊಂಡಿದ್ದರು2
- ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ1
- ಬಸವಕಲ್ಯಾಣದ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಬುಧವಾರ ಭೀಕರ ದುರ್ಘಟನೆ ಸಂಭವಿಸಿದೆ. ಜನಸಮೂಹದ ನೂಕಾಟದಿಂದ ರಥ ನಿಯಂತ್ರಣ ತಪ್ಪಿ, ರಥದ ಗಾಲಿಗೆ ಸಿಲುಕಿದ ಪರಿಣಾಮ ಇಬ್ಬರ ಕಾಲಿಗೆ ಗಂಭೀರ ಗಾಯಗಳಾಗಿವೆ. ಧನರಾಜ್ ಎಂಬುವವರ ಎರಡು ಕಾಲುಗಳು ಕಟ್ ಆಗಿದ್ದು, ರೀಶಬ್ ಎಂಬ ಯುವಕನ ಕಾಲಿಗೂ ತೀವ್ರ ಗಾಯವಾಗಿದೆ. ಮತ್ತೊಬ್ಬರಾದ ಭೀಮಾಶಂಕರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ರವಾನಿಸಲಾಗಿದೆ. ಈ ಘಟನೆ ಜಾತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು.1
- Post by Dharmeshkumar1