ಅಧಿಕಾರಿಗಳಿಗೆ ಅವಹೇಳನ: ಕಾನೂನು ಕ್ರಮಕ್ಕೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ ಮೊಳಕಾಲ್ಮೂರು: ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆಗಸ್ಟ್ 29ರಂದು ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದು, ಅವರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಘಟನೆಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗುತ್ತದೆ. ಕೂಡಲೇ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿ, ಅಧಿಕಾರಿಗಳ ಗೌರವ ಹಾಗೂ ಕರ್ತವ್ಯ ನಿರ್ವಹಣೆಗೆ ಅಗತ್ಯ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಬಿ. ರಾಮಚಂದ್ರಪ್ಪ, ಉಪಾಧ್ಯಕ್ಷ ಮಹೇಶ್, ವಿಜಯಾಂಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಅಧಿಕಾರಿಗಳಿಗೆ ಅವಹೇಳನ: ಕಾನೂನು ಕ್ರಮಕ್ಕೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ ಮೊಳಕಾಲ್ಮೂರು: ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆಗಸ್ಟ್ 29ರಂದು ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದು, ಅವರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಘಟನೆಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗುತ್ತದೆ. ಕೂಡಲೇ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿ, ಅಧಿಕಾರಿಗಳ ಗೌರವ ಹಾಗೂ ಕರ್ತವ್ಯ ನಿರ್ವಹಣೆಗೆ ಅಗತ್ಯ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಬಿ. ರಾಮಚಂದ್ರಪ್ಪ, ಉಪಾಧ್ಯಕ್ಷ ಮಹೇಶ್, ವಿಜಯಾಂಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
- ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಡಿಕೆಶಿಗೆ ಬಿ.ವೈ.ವಿಜಯೇಂದ್ರ ಸವಾಲು ದಲಿತರು, ಹಿಂದುಳಿದವರು ಹಾಗೂ ರೈತರಿಗೆ ನ್ಯಾಯ ಕೊಡಲು ಸಾಧ್ಯವಾಗದಿದ್ದರೆ ಜನರ ತೀರ್ಪಿಗೆ ಹೋಗಿ: ಬಿಜೆಪಿ ರಾಜ್ಯಾಧ್ಯಕ್ಷ ಮಸ್ಕಿ (ರಾಯಚೂರು), ಸೆ. 2: ದಲಿತರು, ಹಿಂದುಳಿದ ವರ್ಗಗಳು ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಹೋಗಿ ಚುನಾವಣೆ ಎದುರಿಸಲಿ. ಆಗ ರಾಜ್ಯದ ಜನರೇ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು. ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಂದರ್ಭದಲ್ಲಿ ಮಸ್ಕಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರು ಮತ್ತು ಹಿಂದುಳಿದ ವರ್ಗಗಳ ಪರವಾಗಿ ಮಾತನಾಡಿಕೊಂಡೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ವರ್ಷಗಳಿಂದ ಇದೇ ಸಮುದಾಯಗಳಿಗೆ ಅನ್ಯಾಯ ಮಾಡುತ್ತಾ ಬಂದಿದೆ ಎಂದು ಆರೋಪಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ವಿಜಯೇಂದ್ರ, ನಿಗಮದ ಹಣದ ದುರ್ಬಳಕೆಯ ವಿಚಾರದಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮೀಸಲಾತಿ ವಿಚಾರದಲ್ಲಿಯೂ ಸರ್ಕಾರ ಸ್ಪಷ್ಟತೆ ತೋರಿಲ್ಲ. ಮೀಸಲಾತಿ ನೆಪದಲ್ಲಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ವಿಫಲವಾಗಿದೆ. ದಲಿತರು ಮಾತ್ರವಲ್ಲದೆ ರಾಜ್ಯದ ಎಲ್ಲ ಸಮುದಾಯಗಳನ್ನೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದೆ ಎಂದು ದೂರಿದರು. ಡಿಕೆಶಿ ಸರ್ಕಾರದ ಇನ್ನೂ ಎರಡು-ಮೂರು ವಿಕೆಟ್ಗಳು ಬೀಳಲಿವೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟ ವಿಜಯೇಂದ್ರ, ಸರ್ಕಾರದ ಇನ್ನೂ ಎರಡು-ಮೂರು ವಿಕೆಟ್ಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಿದರು. ಭ್ರಷ್ಟಾಚಾರವೇ ಈ ಸರ್ಕಾರಕ್ಕೆ ಉರುಳಾಗಲಿದೆ. ಅಧಿಕಾರವೇ ಶಾಶ್ವತ ಎಂಬ ಮನೋಭಾವದಿಂದ ವರ್ತಿಸುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಆರಂಭಿಸಿದೆ. ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ರೈತರು ಸೇರಿದಂತೆ ವಿವಿಧ ವರ್ಗಗಳ ಜನರು ಬೆಂಬಲ ನೀಡುತ್ತಿದ್ದಾರೆ ಎಂದರು. ರೈತರ ಸಮಸ್ಯೆಗಳನ್ನು ಆಲಿಸುವ ಕನಿಷ್ಠ ಸೌಜನ್ಯವನ್ನೂ ಮುಖ್ಯಮಂತ್ರಿ ತೋರಿಸುತ್ತಿಲ್ಲ ಎಂದು ಟೀಕಿಸಿದ ಅವರು, ಅನ್ನದಾತರ ಸಂಕಷ್ಟದ ಬಗ್ಗೆ ಸರ್ಕಾರ ಇನ್ನಾದರೂ ಗಂಭೀರವಾಗಿ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಹೋರಾಟದ ಬಳಿಕವೇ ಬರ ವೀಕ್ಷಣೆ ಆರಂಭ ರಾಜ್ಯದಲ್ಲಿ ಬರ ಪರಿಸ್ಥಿತಿಯ ಕುರಿತು ಬಿಜೆಪಿ ಈಗಾಗಲೇ ವಿವಿಧ ಜಿಲ್ಲೆಗಳಿಗೆ ತೆರಳಿ ವಾಸ್ತವಾಂಶಗಳನ್ನು ಪರಿಶೀಲಿಸಿದೆ. ಆದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈವರೆಗೆ ಬರಪೀಡಿತ ಪ್ರದೇಶಗಳಿಗೆ ಸಮರ್ಪಕವಾಗಿ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿರಲಿಲ್ಲ. ಇದೀಗ ಬಿಜೆಪಿ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಅನಿವಾರ್ಯವಾಗಿ ಬರ ವೀಕ್ಷಣೆಗೆ ಮುಂದಾಗಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು. ಇಷ್ಟು ದಿನ ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತಿದ್ದವರು ಇದೀಗ ರೈತರ ಜಮೀನುಗಳಿಗೆ ಭೇಟಿ ನೀಡುವ ಪರಿಸ್ಥಿತಿ ಬಂದಿದೆ. ಬಿಜೆಪಿ ನಡೆಸುತ್ತಿರುವ ಹೋರಾಟದ ಪರಿಣಾಮವಾಗಿಯೇ ಸರ್ಕಾರ ರೈತರ ಸಮಸ್ಯೆಗಳತ್ತ ಗಮನ ಹರಿಸಲು ಮುಂದಾಗಿದೆ ಎಂದು ಅವರು ಹೇಳಿದರು. ‘ಮೂರು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದಿರಿ?’ ರಾಯಚೂರು ಭಾಗದ ಶಾಸಕರ ಸಭೆಯನ್ನು ಮುಖ್ಯಮಂತ್ರಿ ಕರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ರೈತರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಸಭೆ ಕರೆಯಲಾಗಿದೆಯೇ ಅಥವಾ ಹಿಂದಿನ ಸರ್ಕಾರದ ವಿರುದ್ಧ ಆರೋಪ ಹುಡುಕಲು ಸಭೆ ನಡೆಸಲಾಗುತ್ತಿದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಹೇಳಿದರು. ಮೂರು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಈಗ ಹಿಂದಿನ ಸರ್ಕಾರದ ಹಗರಣಗಳನ್ನು ಹುಡುಕುವುದಾಗಿ ಹೇಳುತ್ತಿದೆ. ಇಷ್ಟು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದಿರಿ? ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲು ರಾಜಕೀಯ ದ್ವೇಷ ಸಾಧಿಸುವುದರಲ್ಲೇ ಕಾಲ ಕಳೆದಿದ್ದೀರಾ ಎಂದು ಪ್ರಶ್ನಿಸಿದರು. ಸರ್ಕಾರದ ಯಾವುದೇ ರೀತಿಯ ಬೆದರಿಕೆ, ಒತ್ತಡ ಅಥವಾ ಧಮ್ಕಿಗೆ ಬಿಜೆಪಿ ಹೆದರುವುದಿಲ್ಲ. ಜನರ ಪರವಾಗಿ ಬಿಜೆಪಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೋರ್ವೆಲ್ಗಳನ್ನು ನೂರಾರು, ಸಾವಿರಾರು ಅಡಿ ಆಳಕ್ಕೆ ಕೊರೆದರೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೆ ಮೇವು ದೊರೆಯುತ್ತಿಲ್ಲ. ಹಲವು ಕಡೆಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿ ಕೊರತೆ ಇದೆ ಎಂದು ಅವರು ಹೇಳಿದರು. ರಾಜ್ಯದ ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಹರಿಸುವ ಬದಲು ಮುಖ್ಯಮಂತ್ರಿ ಬೆಂಗಳೂರಿನಲ್ಲೇ ಕುಳಿತು ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪವನ್ನು ವಿಜಯೇಂದ್ರ ಮಾಡಿದರು. ಬೆಂಗಳೂರಿನ ಅಭಿವೃದ್ಧಿಯಷ್ಟೇ ರಾಜ್ಯದ ಅಭಿವೃದ್ಧಿಯಲ್ಲ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಭಾಗಗಳ ಅಭಿವೃದ್ಧಿಯತ್ತ ಸರ್ಕಾರ ಸಮಾನ ಗಮನ ಹರಿಸಬೇಕು. ಇಲ್ಲವಾದರೆ ಜನರು ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು. ‘ಎಲ್ಲ ಕೆಲಸಕ್ಕೂ ಲಂಚ ನೀಡಬೇಕಾದ ಪರಿಸ್ಥಿತಿ’ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಸಾಮಾನ್ಯ ಜನರು ಯಾವುದೇ ಕೆಲಸ ಮಾಡಿಸಿಕೊಳ್ಳಬೇಕಾದರೂ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಗಂಭೀರ ಆರೋಪ ಮಾಡಿದರು. ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಲಂಚ ನೀಡದೆ ಯಾವುದೇ ಕೆಲಸ ನಡೆಯುವುದಿಲ್ಲ ಎಂಬ ಭಾವನೆ ಜನರಲ್ಲಿ ಮೂಡಿದೆ. ಇದು ಆಡಳಿತ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನೇ ಕುಗ್ಗಿಸುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ಕೇವಲ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ವಾಸ್ತವವಾಗಿ ಇನ್ನೂ ಅನೇಕ ತಾಲೂಕುಗಳು ಬರದ ಸಂಕಷ್ಟಕ್ಕೆ ಸಿಲುಕಿವೆ. ಅವುಗಳನ್ನೂ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಪರಿಹಾರ ಕಲ್ಪಿಸಬೇಕು. ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿಕೊಳ್ಳಲು ಕೂಡ ರೈತರು ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಕೆ ರೈತರ ಸಂಕಷ್ಟ, ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಕೊರತೆ, ನಿರುದ್ಯೋಗ ಸೇರಿದಂತೆ ರಾಜ್ಯದ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ನಡೆಸುತ್ತಿದೆ. ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ದಲಿತರು, ಹಿಂದುಳಿದವರು, ರೈತರು ಹಾಗೂ ಯುವಕರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಹೋಗಲಿ. ಜನರ ತೀರ್ಪನ್ನು ಸ್ವೀಕರಿಸಲು ಕಾಂಗ್ರೆಸ್ ಸಿದ್ಧವಾಗಿದೆಯೇ ಎಂದು ವಿಜಯೇಂದ್ರ ಪ್ರಶ್ನಿಸಿದರು.1
- ಕರ್ನಾಟಕದಲ್ಲಿ ‘ಪ್ರಜಾಸೇವಾ ಇಲಾಖೆ’ ಆರಂಭ! ಸೆ.5ರಿಂದ ಸಚಿವರು ತಾಲೂಕುಗಳಿಗೆ ಭೇಟಿ — ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ? ಕರ್ನಾಟಕ ಸರ್ಕಾರವು ಜನಸಾಮಾನ್ಯರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಕಾನೂನು ಚೌಕಟ್ಟಿನಲ್ಲಿ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾಸೇವಾ ಇಲಾಖೆ’ ಆರಂಭಿಸಲು ಮುಂದಾಗಿದೆ. ಸೆಪ್ಟೆಂಬರ್ 5, 2026ರಿಂದ ಪ್ರತಿ ಜಿಲ್ಲೆಯಲ್ಲಿ ಆಯ್ದ ತಾಲೂಕುಗಳಿಗೆ ಸಚಿವರು ಭೇಟಿ ನೀಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಶಾಸಕರು ತಮ್ಮ ವ್ಯಾಪ್ತಿಯ ಪಂಚಾಯಿತಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆಯೂ ಇರಲಿದೆ. ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರ ಸಚಿವರು ತಾಲೂಕುಗಳಿಗೆ ಭೇಟಿ ನೀಡುವ ವ್ಯವಸ್ಥೆ ಇರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 📌 ನಿಮ್ಮ ತಾಲೂಕಿನಲ್ಲೂ ಸಚಿವರ ಭೇಟಿ ಯಾವಾಗ? ಸುದ್ದಿ ನಿಮಗೆ ಉಪಯುಕ್ತವೆನಿಸಿದರೆ ಶೇರ್ ಮಾಡಿ. #PrajaSeva #PrajaSevaDepartment #Karnataka #KarnatakaGovernment #DKShivakumar #KarnatakaNews #BreakingNews #PublicGrievance #GovernmentNews #KannadaNews #IndiaNews #ಕರ್ನಾಟಕ #ಪ್ರಜಾಸೇವಾ #ಜನಸೇವೆ #ಸಾರ್ವಜನಿಕಸಮಸ್ಯೆ1
- ಇನ್ನರ್ವಿಲ್ ಕ್ಲಬ್ ವತಿಯಿಂದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪಕ್ಷಿಗಳಿಗೆ ಕಾಳು ನೀರಿನ ವ್ಯವಸ್ಥೆ.. ಇನ್ನರ್ವಿಲ್ ಕ್ಲಬ್ ವತಿಯಿಂದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪಕ್ಷಿಗಳಿಗೆ ಕಾಳು ನೀರಿನ ವ್ಯವಸ್ಥೆ.. ಚಳ್ಳಕೆರೆ:ಈ ವರ್ಷ ಬರ, ಬೇಸಿಗೆ ಧಗೆಯ ಮಧ್ಯೆ ಪ್ರಾಣಿ ಹಾಗೂ ಪಕ್ಷಿಗಳು ಎದುರಿಸುತ್ತಿರುವ ಸಮಸ್ಯೆ ಅರಿತು ಸಾರ್ವಜನಿಕರು ಪಕ್ಷಿ, ಪ್ರಾಣಿ ಪ್ರೀಯರು ಅಲ್ಲಲ್ಲಿ ನೀರು, ಕಾಳಿನ ವ್ಯವಸ್ಥೆ ಕಲ್ಪಿಸಿ ಪಕ್ಷಿ ಸಂಕುಲವನ್ನು ಉಳಿಸುವಂತೆ ಇನ್ನರ್ವಿಲ್ ಕ್ಲಬ್ ನ ಅಧ್ಯಕ್ಷ ಅಪರ್ಣ ದೇವೆಂದ್ರಪ್ಪ ಮನವಿ ಮಾಡಿದ್ದಾರೆ ನಗರದ ಚಿತ್ರದುರ್ಗ ರಸ್ತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಇಂದು ಇನ್ನರ್ವಿಲ್ ಕ್ಲಬ್ ವತಿಯಿಂದ ಪಕ್ಷಿಗಳಿಗೆ ಕಾಳು ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಿ ನಂತರ ಉದ್ಯಾನವನದಲ್ಲಿ ಬಿದ್ದಿದ್ದ ಕಸವನ್ನು ಸ್ವಚ್ಛಗೊಳಿಸಿ ನಂತರ ಅವರು ಮಾತನಾಡಿದರು.. ಈಗಾಗಲೆ ಮಳೆಗಾಲ ವಾದರೂ ಮಳೆ ಬಾರದೆ ನೀರಿನ ತಾಣಗಳಾದ ಕೆರೆ .ಕಟ್ಟೆ. ಗೋಕಟ್ಟೆ ಸೇರಿದಂತೆ ಎಲ್ಲೂ ನೀರು ಸಿಗುತ್ತಿಲ್ಲಾ ಇಂದರಿಂದ ಪ್ರಾಣಿ ಪಕ್ಷಿಗಳ ಸಾವನ್ನಪ್ಪುತ್ತಿದ್ದು ಇದರಿಂದ ಪಕ್ಷೀಯ ಸಂಕುಲ ಕ್ಷೆಣಿಸುತ್ತಿದೆ.. ಮಾನವರಾದ ನಾವು ಇದನ್ನು ಅರಿತು. ಮನೆಯ ಮೇಲೆ ಕಾಂಪೌಂಡ್ ಮೇಲೆ ಮನೆಯ ಮುಂದೆ ಪಕ್ಷಿಗಳು ಇರುವಂತಹ ಗಿಡ ಗಳನ್ನು ಗುರುತಿಸಿ ಇಂತಹ ಸ್ಥಳಗಳಲ್ಲಿ ನೀರು ಕಾಳುಗಳನ್ನು ಇಡುವ ಮೂಲಕ ಅಳಿದುಳಿದ ಪಕ್ಷಗಳ ಸಂಕುಲವನ್ನು ಉಳಿಸಬೇಕಿದೆ. ನಾವು ಎಲ್ಲ ಕಡೆನೂ ನೀರು ಇಡಲಾಗದು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರು ಅವಕಾಶ ಸಿಗು ಕಡೆ ನೀರು ಕಾಳು ವ್ಯವಸ್ಥೆ ಮಾಡಿದರೆ ಪಕ್ಷಿಗಳಿಗೆ ಅನುಕೂಲವಾಗುತ್ತದೆ. ಪ್ರಮುಖ್ಯವಾಗಿ ಈಗ ಈ ನಗರದಲ್ಲಿ ಇರುವುದು ಒಂದೇ ಉದ್ಯಾನವನ ವೃಕ್ಷ ಮಾತೇ ಸಾಲುಮರದ ತಿಮ್ಮಕ್ಕ ಉದ್ಯಾನವನ ಉದ್ಯಾನವನಕ್ಕೆ ಬರುವಂತಹ ಸಾರ್ವಜನಿಕರು ಪ್ಲಾಸ್ಟಿಕ್ ಬಾಟಲಿ,ಪ್ಲಾಸ್ಟಿಕ್ ಕವರ್ ಕಸದ ತ್ಯಾಜ್ಯವನ್ನ ಎಲ್ಲಂದರೆ ಹಾಕ ಇಲ್ಲಿನ ಸುಂದರ ಪರಿಸರವನ್ನ ಹಾಳು ಮಾಡದಿರಿ.. ಕಸದ ತ್ಯಾಜ್ಯವನ್ನು ಹಾಕಲು ಕೆಲವು ಕಡೆ ಕಸದ ಬುಟ್ಟಿಗಳನ್ನು ಇಡಲಾಗಿದೆ.ನೀವು ತಂದಂತಹ ಪ್ಲಾಸ್ಟಿಕ್ ಬಾಟಲಿ ಕವರ್ ಎಲ್ಲವನ್ನ ಕಸದ ತೊಟ್ಟಿ ಒಳಗೆ ಹಾಕಿ ಪರಿಸರವನ್ನ ಸ್ವಚ್ಛವಾಗಿ ಇಡಲು ಪ್ರಯತ್ನ ಮಾಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇನ್ನರ್ವಿಲ್ ಕ್ಲಬ್ ನ ಖಜಾಂಚಿ ಡಾ. ಕವಿತಾ ನಾಗೇಶ್ ಮಾತನಾಡಿ, ಮಾನವನ ಆಹಾರ ಸರಪಳಿಯಲ್ಲಿ ಪ್ರಾಣಿ-ಪಕ್ಷಿಗಳ ಪ್ರಮುಖ ಪಾತ್ರವಿದೆ. ಇಂತಹ ಪ್ರಾಣಿ ಪಕ್ಷಿ ಉಳಿವಿಗಾಗಿ ನೀರು ಕಾಳು ಆಹಾರಗಳನ್ನು ಇಡುವ ಮೂಲಕ. ಪ್ರಾಣಿ ಪಕ್ಷಿಗಳ ಸಂಕುಲನ ಉಳಿಸಬೇಕಿದೆ.. ಈಗ ನಗರದಲ್ಲಿ ಸಾಕಷ್ಟು ಕೋತಿಗಳು ಆಹಾರಕ್ಕಾಗಿ ಮನೆ ಒಳಗೆ ನುಗ್ಗುತ್ತಿವೆ. ಮನೆಯ ಮೇಲೆ ಅವುಳಿಗಾಗಿನೇ ನೀರು ಆಹಾರ ಹಣ್ಣುಗಳ ಇಟ್ಟರೆ ಅವುಗಳನ್ನು ತಿಂದು ಜೀವ ಉಳಿಸಿಕೊಳ್ಳುತ್ತವೆ ಎಂದರು.. ಶುಭಸೋಮುಶೇಖರ್ ಮಾತನಾಡಿ. ಕಳೆದ ವರ್ಷವೂ ಸಹ ಇದೇ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪಕ್ಷಿಗಳಿಗೆ ಕಾಳು ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು ಒಂದು ತಿಂಗಳ ವರೆಗೂ ನಾವು ಬಂದು ನೀರು ಕಾಳಿಗಳನ್ನು ಹಾಕುತ್ತಿದ್ದೆವು. ಇಂದು ಸಹ ಇದೇ ರೀತಿಯಾಗಿ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪಕ್ಷಿಗಳಿಗೆ ನೀರು ಕಾಳಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.. ಈ ಕಾರ್ಯಕ್ರಮದಲ್ಲಿ ಇನ್ನರ್ವಿಲ್ ಕ್ಲಬ್ ನ ಕಾರ್ಯದರ್ಶಿ ಡಾ. ವಿದ್ಯಾಐತಾಳ್ ಸದಸ್ಯರಾದ ನೀನಾ ವಿನಯ ಕುಮಾರ್. ಮೀರಾ ರಮೇಶ್ ನಳಿನ ಬಾಬು ಯತೀಶ್ ಸೇರಿದಂತೆ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಇದ್ದರು..1
- ಸಮಗ್ರ ನೀರಾವರಿಗೆ ಆಗ್ರಹಿಸಿ ವಿವಿ ಪುರದಲ್ಲಿಂದು ಬೃಹತ್ ಪ್ರತಿಭಟನೆಗೆ ಚಾಲನೆ ಸಮಗ್ರ ನೀರಾವರಿಗೆ ಆಗ್ರಹಿಸಿ ವಿವಿ ಪುರದಲ್ಲಿಂದು ಬೃಹತ್ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಇನ್ನೂ ಬಯಲು ಸೀಮೆ ನೀರಾವರಿ ಹೋರಾಟ ಸಮಿತಿ ವತಿಯಿಂದ ವಿ ವಿ ಸಾಗರ ಜಲಾಶಯ ಉಳಿಸಿ ಎಂಬ ಘೋಷ ವಾಕ್ಯದ ಅಡಿಯಲ್ಲಿ ಕಪ್ಪು ಪಟ್ಟಿ ದರಿಸಿ ವಿ ವಿ ಪುರ ಗ್ರಾಮದಿಂದ ವಾಣಿ ವಿಲಾಸ ಸಾಗರ ಜಲಾಶಯದ ವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಮಧ್ಯ ಕರ್ನಾಟಕ ಬಯಲುಸೀಮೆ ಪ್ರದೇಶವಾದ ಚಿತ್ರದುರ್ಗ ಜಿಲ್ಲೆಗೆ ಸಮಗ್ರ ನೀರಾವರಿಗೆ ಆಗ್ರಹಿಸಿದ್ದಾರೆ. ಇನ್ನೂ ಸಮಿತಿಯ ಪ್ರಧಾನ ಸಂಚಾಲಕ ಲಕ್ಷ್ಮಣ್ ಹೂಗಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಹಿರಿಯ ರೈತ ಮುಖಂಡ ಈಚಘಟ್ಟದ ಸಿದ್ದವೀರಪ್ಪ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು ಈ ಒಂದು ಪಾದಯಾತ್ರೆಯು ವಾಣಿ ವಿಲಾಸ ಸಾಗರ ಜಲಾಶಯದ ಬಳಿ ತಲುಪಿ ನಂತರ ಜಲಾಶಯದ ಮುಂಬಾಗ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ಸಹ ನಡೆಸಲಿದ್ದು ನೂರಾರು ರೈತ ಮುಖಂಡರು, ವಿವಿಧ ಪ್ರಗತಿಪರ ಸಂಘಟನೆಯ ಸದಸ್ಯರು, ಸಾರ್ವಜನಿಕರು ಹಾಗೂ ವಿಧ್ಯಾರ್ಥಿಗಳು ಮತ್ತು ನೀರಾವರಿ ಹೋರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ.1
- ಅಶೋಕ್ಗೆ ವಿಪಕ್ಷ ನಾಯಕ ಆಗ್ತೀಯಾ ಎಂದು ಹೇಳಿದ್ದೇ ನಾನು ಎಂದ ರಾಯರೆಡ್ಡಿ ಅಶೋಕ್ ಅವರೇ, ನೀವು ವಿಪಕ್ಷ ನಾಯಕರಾಗುತ್ತೀರಾ ಎಂದು ಹೇಳಿದ್ದೇ ನಾನು’ ಎಂದು ಸಚಿವ ಶಿವರಾಜ ತಂಗಡಗಿ ಅವರ ಸಮ್ಮುಖದಲ್ಲಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಯರೆಡ್ಡಿ ಅವರ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಯಲಬುರ್ಗಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಶೋಕ್ ಅವರೊಂದಿಗೆ ನಡೆದ ಹಿಂದಿನ ಮಾತುಕತೆಯನ್ನು ಪ್ರಸ್ತಾಪಿಸಿ ಈ ಹೇಳಿಕೆ ನೀಡಿದರು. ವಿಪಕ್ಷ ನಾಯಕ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆಗಳ ನಡುವೆಯೇ ರಾಯರೆಡ್ಡಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.1
- ಸೋಮಲಾಪುರದ ಬಸವೇಶ್ವರ ಜಾತ್ರೆಯಲ್ಲಿ ; 2026 ನೇ ಸಾಲಿನ ಬಸವಸಿರಿ ಪ್ರಶಸ್ತಿ ಪ್ರಧಾನ ಪಾರ್ಶ್ವವಾಯು (ಲಕ್ವ) ರೋಗನಿವಾರಣಿಯ ಧನ್ವಂತರಿ ಸುಕ್ಷೇತ್ರ ಸೋಮಲಾಪುರ ಬಸವೇಶ್ವರ ಜಾತ್ರೆಯಲ್ಲಿ ಶ್ರೀ ಬಸವರಾಜ ಉಮಾರಾಣಿ ರವರಿಗೆ ಶ್ರೀ ಡಾ ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಸೋಮಲಾಪುರದ ಶ್ರೀ ಬಸವೇಶ್ವರ ಜಾತ್ರಾ ಸಮಿತಿಯ ವತಿಯಿಂದ ಬಸವ ಸಿರಿ ಪ್ರಶಸ್ತಿ ನೀಡಿ ಗೌರವಿಸಿದರು.2
- ಅಧಿಕಾರಿಗಳಿಗೆ ಅವಹೇಳನ: ಕಾನೂನು ಕ್ರಮಕ್ಕೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ ಮೊಳಕಾಲ್ಮೂರು: ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆಗಸ್ಟ್ 29ರಂದು ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದು, ಅವರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಘಟನೆಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗುತ್ತದೆ. ಕೂಡಲೇ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿ, ಅಧಿಕಾರಿಗಳ ಗೌರವ ಹಾಗೂ ಕರ್ತವ್ಯ ನಿರ್ವಹಣೆಗೆ ಅಗತ್ಯ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಬಿ. ರಾಮಚಂದ್ರಪ್ಪ, ಉಪಾಧ್ಯಕ್ಷ ಮಹೇಶ್, ವಿಜಯಾಂಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.1
- ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್. ಅನ್ಯ ಉದ್ದೇಶಕ್ಕೆ ಲಾಲ್ ಬಾಗ್ ಜಾಗ ನೀಡಿಕೆ ಬಗ್ಗೆಯೂ ಪರಾಮರ್ಶೆ. ವಿಧಾನಸಭೆಯಲ್ಲಿ ಮತ್ತೊಮ್ಮೆ ಚರ್ಚೆಗೂ ಅವಕಾಶ. ಬರ ಘೋಷಣೆಯಲ್ಲಿ ತಾಂತ್ರಿಕ ಲೋಪಕ್ಕೆ ಅವಕಾಶವಿಲ್ಲ. ಈಗಾಗಲೇ 102 ತಾಲುಕು ಘೋಷಣೆ; ಇನ್ನಷ್ಟು ತಾಲುಕುಗಳ ಪರಿಶೀಲನೆ ಮುಂದುವರಿಕೆ. ಕೇಂದ್ರ ತಂಡದ ಮುಂದೆ ಸಮರ್ಥನೆಗೆ ಸಿದ್ಧತೆ.1
- ತುಂಗಭದ್ರಾ ನೀರು ಕಡಿತದ ಆತಂಕ! 🚨 ರೈತರು ಕಂಗಾಲು — ನವೆಂಬರ್ 22ರವರೆಗೆ ನೀರು ಸಿಗುತ್ತಾ? ತುಂಗಭದ್ರಾ ಜಲಾಶಯದಿಂದ ಎಲ್ಎಲ್ಸಿ (LLC) ಕಾಲುವೆಗೆ ನೀರು ಕಡಿತಗೊಳಿಸಲಾಗುತ್ತದೆ ಎಂಬ ಆತಂಕ ರೈತರಲ್ಲಿ ಮನೆಮಾಡಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶದ ರೈತರು ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ತುಂಗಭದ್ರಾ ರೈತ ಸಂಘದ ಪುರುಷೋತ್ತಮ ಗೌಡ ಅವರು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕರ್ನಾಟಕದ ರೈತರಿಗೆ ನವೆಂಬರ್ 22ರವರೆಗೆ ಯಾವುದೇ ವ್ಯತ್ಯಯವಿಲ್ಲದೆ ನೀರು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. #TungabhadraDam #Tungabhadra #TungabhadraWater #Farmers #KarnatakaFarmers #AndhraPradesh #LLCCanal #Irrigation #WaterCrisis #FarmersIssue #KarnatakaNews #Vijayanagara #Hoovinahadagali #Raitharu #BreakingNews #KannadaNews #ಕರ್ನಾಟಕ #ರೈತರು #ತುಂಗಭದ್ರಾ #ನೀರಿನಬಿಕ್ಕಟ್ಟು1