logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸ್ವಾತಂತ್ರ್ಯದ 80ನೇ ವರ್ಷದ ಅಂಗವಾಗಿ ಸ್ವಚ್ಛತಾ ಅಭಿಯಾನ: ಡಾವೂದ್ ಖಾನ್ ರಸ್ತೆಯಲ್ಲಿ ಕಸ ತೆರವುಗೊಳಿಸಿದ ಪಾಲಿಕೆ ಆಯುಕ್ತೆ ಸವಿತಾ ಮೈಸೂರು: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ "Garbage Free India" ಅಭಿಯಾನದಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ. ಕೆ. ಸವಿತಾ ಅವರು ಶನಿವಾರ ಡಾವೂದ್ ಖಾನ್ ರಸ್ತೆ, ಫೈವ್ ಲೈಟ್ಸ್ ವೃತ್ತದ ಸಮೀಪದ ಕಸದ ಸಮಸ್ಯೆ ಹೆಚ್ಚಾಗಿದ್ದ ಪ್ರದೇಶವನ್ನು ಸ್ವತಃ ಸ್ವಚ್ಛಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಈ ವೇಳೆ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ನಗರವನ್ನು ಕಸಮುಕ್ತವಾಗಿಡಲು ಸಾರ್ವಜನಿಕರು ಸಹಕರಿಸಬೇಕು, ಎಲ್ಲೆಂದರಲ್ಲಿ ಕಸ ಎಸೆಯದೇ ಸ್ವಚ್ಛ ಪರಿಸರ ಕಾಪಾಡಬೇಕು ಎಂದು ಆಯುಕ್ತೆ ಮನವಿ ಮಾಡಿದರು. ಸ್ವಚ್ಛ ಮತ್ತು ಆರೋಗ್ಯಕರ ಮೈಸೂರು ನಿರ್ಮಾಣಕ್ಕೆ ಇಂತಹ ಅಭಿಯಾನಗಳು ನಿರಂತರವಾಗಿ ನಡೆಯಲಿವೆ ಎಂದು ತಿಳಿಸಿದರು.

2 hrs ago
user_ಹೊಂಗಿರಣ ನ್ಯೂಸ್
ಹೊಂಗಿರಣ ನ್ಯೂಸ್
Farmer Nanjangud, Mysuru•
2 hrs ago
be6c18f7-2d83-48ec-acb1-32c4916958e4
24161fba-e2c7-436b-894b-1e964d004fb0

ಸ್ವಾತಂತ್ರ್ಯದ 80ನೇ ವರ್ಷದ ಅಂಗವಾಗಿ ಸ್ವಚ್ಛತಾ ಅಭಿಯಾನ: ಡಾವೂದ್ ಖಾನ್ ರಸ್ತೆಯಲ್ಲಿ ಕಸ ತೆರವುಗೊಳಿಸಿದ ಪಾಲಿಕೆ ಆಯುಕ್ತೆ ಸವಿತಾ ಮೈಸೂರು: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ "Garbage Free India" ಅಭಿಯಾನದಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ. ಕೆ. ಸವಿತಾ ಅವರು ಶನಿವಾರ ಡಾವೂದ್ ಖಾನ್ ರಸ್ತೆ, ಫೈವ್ ಲೈಟ್ಸ್ ವೃತ್ತದ ಸಮೀಪದ ಕಸದ ಸಮಸ್ಯೆ ಹೆಚ್ಚಾಗಿದ್ದ ಪ್ರದೇಶವನ್ನು ಸ್ವತಃ ಸ್ವಚ್ಛಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಈ ವೇಳೆ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ನಗರವನ್ನು ಕಸಮುಕ್ತವಾಗಿಡಲು ಸಾರ್ವಜನಿಕರು ಸಹಕರಿಸಬೇಕು, ಎಲ್ಲೆಂದರಲ್ಲಿ ಕಸ ಎಸೆಯದೇ ಸ್ವಚ್ಛ ಪರಿಸರ ಕಾಪಾಡಬೇಕು ಎಂದು ಆಯುಕ್ತೆ ಮನವಿ ಮಾಡಿದರು. ಸ್ವಚ್ಛ ಮತ್ತು ಆರೋಗ್ಯಕರ ಮೈಸೂರು ನಿರ್ಮಾಣಕ್ಕೆ ಇಂತಹ ಅಭಿಯಾನಗಳು ನಿರಂತರವಾಗಿ ನಡೆಯಲಿವೆ ಎಂದು ತಿಳಿಸಿದರು.

More news from Mysuru and nearby areas
  • ಕಬಿನಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ನದಿ ದಂಡೆಯ ಜನರಿಗೆ ಎಚ್ಚರಿಕೆ ಮೈಸೂರು, ಆ.1: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಹಿನ್ನೆಲೆ ಕಬಿನಿ ಜಲಾಶಯಕ್ಕೆ 15,500 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕಬಿನಿ ನದಿಯ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ದಂಡೆಯ ನಿವಾಸಿಗಳು ಎಚ್ಚರಿಕೆಯಿಂದ ಇರಲು ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ. ನದಿಗೆ ಇಳಿಯುವುದು, ಮೀನುಗಾರಿಕೆ ಹಾಗೂ ಅನಗತ್ಯವಾಗಿ ನದಿ ದಾಟುವುದನ್ನು ತಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದು, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.
    1
    ಕಬಿನಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ನದಿ ದಂಡೆಯ ಜನರಿಗೆ ಎಚ್ಚರಿಕೆ
ಮೈಸೂರು, ಆ.1: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಹಿನ್ನೆಲೆ ಕಬಿನಿ ಜಲಾಶಯಕ್ಕೆ 15,500 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕಬಿನಿ ನದಿಯ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ದಂಡೆಯ ನಿವಾಸಿಗಳು ಎಚ್ಚರಿಕೆಯಿಂದ ಇರಲು ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ. ನದಿಗೆ ಇಳಿಯುವುದು, ಮೀನುಗಾರಿಕೆ ಹಾಗೂ ಅನಗತ್ಯವಾಗಿ ನದಿ ದಾಟುವುದನ್ನು ತಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದು, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    2 hrs ago
  • All About,Anyone when if question them for Transparency they will Anytime Speak Contridectary Statements and blaming the Residents *ಭಾರತ ನಲ್ಲಿ ವೈರಲ್*
    1
    All About,Anyone when if question them for Transparency they will Anytime Speak Contridectary Statements and blaming the Residents 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ
    1
    ಕನ್ನಡ ಸ್ಯಾಂಡಲ್ ವುಡ್ ಹೀರೋ  ರಾವಣ ಪಾತ್ರದಲ್ಲಿ  ಯಶ್ ಅವರು  ಕಂಡುಬಂದ ದೃಶ್ಯ  
ಕನ್ನಡ ಸ್ಯಾಂಡಲ್ ವುಡ್ ಹೀರೋ  ರಾವಣ ಪಾತ್ರದಲ್ಲಿ  ಯಶ್ ಅವರು  ಕಂಡುಬಂದ ದೃಶ್ಯ
    user_ವೇದಾ ರಣ್ಯಾ
    ವೇದಾ ರಣ್ಯಾ
    ಮೈಸೂರು, ಮೈಸೂರು, ಕರ್ನಾಟಕ•
    5 hrs ago
  • ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
    1
    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
    4
    ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    12 hrs ago
  • ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.
    1
    ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು.
ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    13 hrs ago
  • "ಬಿಜೆಪಿಯವರು ನನ್ನ ಪ್ಯಾಂಟ್-ಅಂಗಿ ಹರಿಯುತ್ತಿದ್ದಾರೆ" : ಡಿಕೆಶಿ ವ್ಯಂಗ್ಯ ರಾಜ್ಯದಲ್ಲಿ ನಿರಂತರ ಮಳೆಯ ಪರಿಣಾಮ ಜಲಾಶಯಗಳು ವೇಗವಾಗಿ ಭರ್ತಿಯಾಗುತ್ತಿದ್ದು, ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಹೋರಾಟಗಾರರು ಜಲಾಶಯಗಳ ಬಳಿ ತೆರಳಬಾರದು ಹಾಗೂ ನೀರು ಬಿಡುವುದಿಲ್ಲ ಎಂದು ನದಿಗಳಿಗೆ ಇಳಿದು ಪ್ರತಿಭಟನೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, “ಆ ರೀತಿ ನದಿಗೆ ಇಳಿದರೆ ಕೊಚ್ಚಿಕೊಂಡು ಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು. ಇದೇ ವೇಳೆ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ರದ್ದಾಗಿದೆ ಎಂದು ತಿಳಿಸಿದರು. “ಪ್ರಸ್ತುತ ಪರಿಸ್ಥಿತಿ ಸೂಕ್ತವಾಗಿಲ್ಲದ ಕಾರಣ ಅವರು ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆ ನಡೆದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ. ಪರಿಸ್ಥಿತಿ ಸಹಜವಾದ ಬಳಿಕ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ” ಎಂದರು. ಬಿಜೆಪಿ ಹೋರಾಟಗಳ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಹೋರಾಟದ ಹೆಸರಿನಲ್ಲಿ ನನ್ನ ಪ್ಯಾಂಟ್, ಅಂಗಿಯನ್ನೇ ಹರಿಯುತ್ತಿದ್ದಾರೆ. ಕರ್ನಾಟಕದ ಸಂಸದರು ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡ್ಯಾಂಗೆ ಬಾಗಿನ ಅರ್ಪಿಸುವ ಬಗ್ಗೆ ಹೇಗೆ ಮಾತನಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.
    1
    "ಬಿಜೆಪಿಯವರು ನನ್ನ ಪ್ಯಾಂಟ್-ಅಂಗಿ ಹರಿಯುತ್ತಿದ್ದಾರೆ" : ಡಿಕೆಶಿ ವ್ಯಂಗ್ಯ
ರಾಜ್ಯದಲ್ಲಿ ನಿರಂತರ ಮಳೆಯ ಪರಿಣಾಮ ಜಲಾಶಯಗಳು ವೇಗವಾಗಿ ಭರ್ತಿಯಾಗುತ್ತಿದ್ದು, ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಹೋರಾಟಗಾರರು ಜಲಾಶಯಗಳ ಬಳಿ ತೆರಳಬಾರದು ಹಾಗೂ ನೀರು ಬಿಡುವುದಿಲ್ಲ ಎಂದು ನದಿಗಳಿಗೆ ಇಳಿದು ಪ್ರತಿಭಟನೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, “ಆ ರೀತಿ ನದಿಗೆ ಇಳಿದರೆ ಕೊಚ್ಚಿಕೊಂಡು ಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು.
ಇದೇ ವೇಳೆ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ರದ್ದಾಗಿದೆ ಎಂದು ತಿಳಿಸಿದರು. “ಪ್ರಸ್ತುತ ಪರಿಸ್ಥಿತಿ ಸೂಕ್ತವಾಗಿಲ್ಲದ ಕಾರಣ ಅವರು ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆ ನಡೆದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ. ಪರಿಸ್ಥಿತಿ ಸಹಜವಾದ ಬಳಿಕ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ” ಎಂದರು.
ಬಿಜೆಪಿ ಹೋರಾಟಗಳ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಹೋರಾಟದ ಹೆಸರಿನಲ್ಲಿ ನನ್ನ ಪ್ಯಾಂಟ್, ಅಂಗಿಯನ್ನೇ ಹರಿಯುತ್ತಿದ್ದಾರೆ. ಕರ್ನಾಟಕದ ಸಂಸದರು ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡ್ಯಾಂಗೆ ಬಾಗಿನ ಅರ್ಪಿಸುವ ಬಗ್ಗೆ ಹೇಗೆ ಮಾತನಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು.  ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ, ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ ಗೌರವಾಧ್ಯಕ್ಷ ಇದ್ರಿಸ್ಪಾಷ, ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು ಉಪಾಧ್ಯಕ್ಷ ಯೋಗೇಶ್ , ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್ ಉಮೇಶ್ ಎಚ್ .ಎಮ್. ಹೊಸಪುರ ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್, ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್, ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.
    4
    ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು.  ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. 
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ  ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ,   ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ  ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ  ಗೌರವಾಧ್ಯಕ್ಷ  ಇದ್ರಿಸ್ಪಾಷ,  ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ  ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು
ಉಪಾಧ್ಯಕ್ಷ ಯೋಗೇಶ್ ,  ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್  ಉಮೇಶ್ ಎಚ್ .ಎಮ್. ಹೊಸಪುರ  ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್,  ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್,  ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.