logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾನವ ಬಂದುತ್ವ ವೇದಿಕೆ ಕಾರ್ಯಗಾರ ಬಗ್ಗೆ ಮಾಹಿತಿ ನೀಡಿದ ತಾಲೂಕ ಸಂಚಾಲಕರಾದ ನ್ಯಾಯವಾದಿ ಏಚ್ ಐ ಬೆಳಗಲಿ, ಹಾವೇರಿ ಜಿಲ್ಲೆ ಶಿಗ್ಗಾವ್ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಗಾರವನ್ನು ದಿನಾಂಕ. 15.03.2026ರ ರವಿವಾರ ರಂದು ಜರುಗಲಿದ್ದು ರಾಜ್ಯ ಸಂಚಾಲಕರಾದ ಪ್ರೊಫೆಸರ್ A B ರಾಮಚಂದ್ರಪ್ಪ ಪಾಲ್ಗೊಂಡು ಕಾರ್ಯಗಾರವನ್ನು ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ ಎಂದು ಶಿಗ್ಗಾವ್ ತಾಲೂಕ ಘಟಕದ ಸಂಚಾಲಕರಾದ ನ್ಯಾಯವಾದಿ H I ಬೆಳಗಲಿ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕಿನ ಗ್ರಾಮ ಘಟಕಗಳ ಪದಾಧಿಕಾರಿಗಳು ಈ ಕಾರ್ಯಗಾರದ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು,

17 hrs ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
17 hrs ago

ಮಾನವ ಬಂದುತ್ವ ವೇದಿಕೆ ಕಾರ್ಯಗಾರ ಬಗ್ಗೆ ಮಾಹಿತಿ ನೀಡಿದ ತಾಲೂಕ ಸಂಚಾಲಕರಾದ ನ್ಯಾಯವಾದಿ ಏಚ್ ಐ ಬೆಳಗಲಿ, ಹಾವೇರಿ ಜಿಲ್ಲೆ ಶಿಗ್ಗಾವ್ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಗಾರವನ್ನು ದಿನಾಂಕ. 15.03.2026ರ ರವಿವಾರ ರಂದು ಜರುಗಲಿದ್ದು ರಾಜ್ಯ ಸಂಚಾಲಕರಾದ ಪ್ರೊಫೆಸರ್ A B ರಾಮಚಂದ್ರಪ್ಪ ಪಾಲ್ಗೊಂಡು ಕಾರ್ಯಗಾರವನ್ನು ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ ಎಂದು ಶಿಗ್ಗಾವ್ ತಾಲೂಕ ಘಟಕದ ಸಂಚಾಲಕರಾದ ನ್ಯಾಯವಾದಿ H I ಬೆಳಗಲಿ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕಿನ ಗ್ರಾಮ ಘಟಕಗಳ ಪದಾಧಿಕಾರಿಗಳು ಈ ಕಾರ್ಯಗಾರದ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು,

More news from ಕರ್ನಾಟಕ and nearby areas
  • ಹಾವೇರಿ ಜಿಲ್ಲೆ ಶಿಗ್ಗಾವ್ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಗಾರವನ್ನು ದಿನಾಂಕ. 15.03.2026ರ ರವಿವಾರ ರಂದು ಜರುಗಲಿದ್ದು ರಾಜ್ಯ ಸಂಚಾಲಕರಾದ ಪ್ರೊಫೆಸರ್ A B ರಾಮಚಂದ್ರಪ್ಪ ಪಾಲ್ಗೊಂಡು ಕಾರ್ಯಗಾರವನ್ನು ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ ಎಂದು ಶಿಗ್ಗಾವ್ ತಾಲೂಕ ಘಟಕದ ಸಂಚಾಲಕರಾದ ನ್ಯಾಯವಾದಿ H I ಬೆಳಗಲಿ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕಿನ ಗ್ರಾಮ ಘಟಕಗಳ ಪದಾಧಿಕಾರಿಗಳು ಈ ಕಾರ್ಯಗಾರದ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು,
    1
    ಹಾವೇರಿ ಜಿಲ್ಲೆ ಶಿಗ್ಗಾವ್ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಗಾರವನ್ನು ದಿನಾಂಕ. 15.03.2026ರ ರವಿವಾರ ರಂದು ಜರುಗಲಿದ್ದು ರಾಜ್ಯ ಸಂಚಾಲಕರಾದ ಪ್ರೊಫೆಸರ್ A B ರಾಮಚಂದ್ರಪ್ಪ ಪಾಲ್ಗೊಂಡು ಕಾರ್ಯಗಾರವನ್ನು ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ ಎಂದು ಶಿಗ್ಗಾವ್ ತಾಲೂಕ ಘಟಕದ ಸಂಚಾಲಕರಾದ ನ್ಯಾಯವಾದಿ H I ಬೆಳಗಲಿ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕಿನ ಗ್ರಾಮ ಘಟಕಗಳ ಪದಾಧಿಕಾರಿಗಳು ಈ ಕಾರ್ಯಗಾರದ ಶಿಬಿರದಲ್ಲಿ  ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು,
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    17 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    22 hrs ago
  • ಮಾ.15: ಅರಸೀಕೆರೆ ತಾಲೂಕು, ಜಾವಗಲ್ ಹೋಬಳಿ ಗೇರುಮರ ಗ್ರಾಮದ ಶ್ರೀ ಚನ್ನಬಸವೇಶ್ವರ ಇಂಗ್ಲಿಷ್ ಹೈಯರ್ ಪ್ರೈಮರಿ ಸ್ಕೂಲ್ ಇಲ್ಲಿ ದಿನಾಂಕ 11.03.2026ರಂದು ಅದ್ದೂರಿಯಾಗಿ ತಂದೆ ತಾಯಿಯ ಪಾದಪೂಜೆಯೊಂದಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 250 ತಂದೆ ತಾಯಂದಿರಿಗೆ ಅವರ ಮಕ್ಕಳಿಂದ ಪಾದಪೂಜೆ ಮಾಡಿ, ಗುರುಗಳಿಗೆ ಹೂ ಪುಷ್ಪಗಳೊಂದಿಗೆ ವಂದನೆಯನ್ನು ಸಲ್ಲಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಕಾರ್ಯದರ್ಶಿಗಳಾದ ವಿನಯ್ ಪಾಟೀಲ್ ರವರು ವಹಿಸಿದ್ದರು. ಇಂದಿನ ದಿನಮಾನಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಎಲ್ಲವನ್ನು ಮರೆತು ಹೋಗುತ್ತಿದ್ದಾರೆಂದು ಹೇಳಿ ತಂದೆ ತಾಯಿಗಳಾದ ತಾವುಗಳು ಮಕ್ಕಳಿಗೆ ಮೊಬೈಲನ್ನು ಕೊಡದೆ ಕಥೆ ಕದಂಬರಿ, ಚಿತ್ರಕಲೆ ಇತರೆ ಚಟುವಟಿಕೆಗಳಲ್ಲಿ ತಮ್ಮ ಜೊತೆ ತೊಡಗಿಸಿಕೊಳ್ಳಬೇಕೆಂದು ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಅದರ ಜೊತೆ ಪಾಲಕ ಪೋಷಕರ ಜವಾಬ್ದಾರಿಗಳು ಅವರ ಪಾತ್ರಗಳು ಶಾಲೆ ಮತ್ತು ಮಗು, ಪಾಲಕ ಪೋಷಕರು ಇವರ ನಡುವಿನ ಅವಿನಾಭಾವ ಸಂಬಂಧಗಳ ಬಗ್ಗೆ ತಿಳಿಸಿಕೊಟ್ಟರು. ಪಾಲಕ ಪೋಷಕ ಸಲಹಾ ಸಮಿತಿಯ ಅಧ್ಯಕ್ಷರು ಕಾರ್ಯದರ್ಶಿಗಳು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿಸ್ಥಿತರಿದ್ದರು. ಈ ಶಾಲೆಯ ಮುಖ್ಯೋಪಾಧ್ಯಾಯನಿ ಸರೋಜಮ್ಮ, ಶಿಕ್ಷಕಿಯರಾದ ಶುಭ, ಶೋಭಾ, ಗಗನ,ಸುಧಾ, ಸುಪ್ರಿಯಾ ಪಾಟೀಲ್ ಶಿಕ್ಷಕಿಯ ತರ ಸಿಬ್ಬಂದಿಯವರು ರಾಜಣ್ಣ, ರಂಗಸ್ವಾಮಿ ಮತ್ತು ರತ್ನಮ್ಮ ಈ ಕಾರ್ಯಕ್ರಮ ಯಶಸ್ವಿಯಾಗಲಿಕ್ಕೆ ಸಹಕಾರ ನೀಡಿದರು. ಈ ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ಶಿಕ್ಷಕಿಯರಾದ ಸುಪ್ರಿಯಾ ರವರು ಮಾಡಿದರು. ಶಾಲೆಯ ಮಕ್ಕಳು ವಚನಗಳನ್ನು ಹೇಳುವುದರೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
    1
    ಮಾ.15: ಅರಸೀಕೆರೆ ತಾಲೂಕು, ಜಾವಗಲ್ ಹೋಬಳಿ ಗೇರುಮರ ಗ್ರಾಮದ ಶ್ರೀ ಚನ್ನಬಸವೇಶ್ವರ ಇಂಗ್ಲಿಷ್ ಹೈಯರ್ ಪ್ರೈಮರಿ ಸ್ಕೂಲ್ ಇಲ್ಲಿ ದಿನಾಂಕ 11.03.2026ರಂದು ಅದ್ದೂರಿಯಾಗಿ ತಂದೆ ತಾಯಿಯ ಪಾದಪೂಜೆಯೊಂದಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 250 ತಂದೆ ತಾಯಂದಿರಿಗೆ ಅವರ ಮಕ್ಕಳಿಂದ ಪಾದಪೂಜೆ ಮಾಡಿ, ಗುರುಗಳಿಗೆ ಹೂ ಪುಷ್ಪಗಳೊಂದಿಗೆ ವಂದನೆಯನ್ನು  ಸಲ್ಲಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಕಾರ್ಯದರ್ಶಿಗಳಾದ ವಿನಯ್ ಪಾಟೀಲ್ ರವರು ವಹಿಸಿದ್ದರು. ಇಂದಿನ ದಿನಮಾನಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಎಲ್ಲವನ್ನು ಮರೆತು ಹೋಗುತ್ತಿದ್ದಾರೆಂದು ಹೇಳಿ ತಂದೆ ತಾಯಿಗಳಾದ ತಾವುಗಳು ಮಕ್ಕಳಿಗೆ ಮೊಬೈಲನ್ನು ಕೊಡದೆ ಕಥೆ ಕದಂಬರಿ, ಚಿತ್ರಕಲೆ ಇತರೆ ಚಟುವಟಿಕೆಗಳಲ್ಲಿ ತಮ್ಮ ಜೊತೆ ತೊಡಗಿಸಿಕೊಳ್ಳಬೇಕೆಂದು ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಅದರ ಜೊತೆ ಪಾಲಕ ಪೋಷಕರ ಜವಾಬ್ದಾರಿಗಳು ಅವರ ಪಾತ್ರಗಳು ಶಾಲೆ ಮತ್ತು ಮಗು,  ಪಾಲಕ ಪೋಷಕರು ಇವರ ನಡುವಿನ ಅವಿನಾಭಾವ ಸಂಬಂಧಗಳ ಬಗ್ಗೆ ತಿಳಿಸಿಕೊಟ್ಟರು.  ಪಾಲಕ ಪೋಷಕ ಸಲಹಾ ಸಮಿತಿಯ ಅಧ್ಯಕ್ಷರು ಕಾರ್ಯದರ್ಶಿಗಳು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿಸ್ಥಿತರಿದ್ದರು. ಈ ಶಾಲೆಯ ಮುಖ್ಯೋಪಾಧ್ಯಾಯನಿ ಸರೋಜಮ್ಮ, ಶಿಕ್ಷಕಿಯರಾದ ಶುಭ, ಶೋಭಾ, ಗಗನ,ಸುಧಾ,  ಸುಪ್ರಿಯಾ ಪಾಟೀಲ್  ಶಿಕ್ಷಕಿಯ ತರ ಸಿಬ್ಬಂದಿಯವರು ರಾಜಣ್ಣ, ರಂಗಸ್ವಾಮಿ ಮತ್ತು ರತ್ನಮ್ಮ ಈ ಕಾರ್ಯಕ್ರಮ ಯಶಸ್ವಿಯಾಗಲಿಕ್ಕೆ ಸಹಕಾರ ನೀಡಿದರು.
ಈ ಕಾರ್ಯಕ್ರಮದ ನಿರೂಪಣೆಯನ್ನು  ಶಾಲೆಯ ಶಿಕ್ಷಕಿಯರಾದ ಸುಪ್ರಿಯಾ ರವರು ಮಾಡಿದರು. ಶಾಲೆಯ ಮಕ್ಕಳು ವಚನಗಳನ್ನು ಹೇಳುವುದರೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
    user_Top 1 Digital Marketing
    Top 1 Digital Marketing
    Graphic designer ಹಾಸನ, ಹಾಸನ, ಕರ್ನಾಟಕ•
    30 min ago
  • ತುಮಕೂರು ಡ್ರಸ್ ಎಂಬ ಮಾದಕ ಮಾಫಿಯಾದಲ್ಲಿ ಮುಸ್ಲಿಂ ಯುವಕರೇ ಅತಿ ಹೆಚ್ಚು ಯಾಕೆ?!
    1
    ತುಮಕೂರು ಡ್ರಸ್ ಎಂಬ ಮಾದಕ ಮಾಫಿಯಾದಲ್ಲಿ ಮುಸ್ಲಿಂ ಯುವಕರೇ ಅತಿ ಹೆಚ್ಚು ಯಾಕೆ?!
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    1 hr ago
  • ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ
    1
    ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    7 hrs ago
  • ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಶನಿವಾರ ಗದಗ ಜಿಲ್ಲೆಯ ರೋಣ ಪಟ್ಟಣದ ಶಾಸಕ ಜಿ ಎಸ್ ಪಾಟೀಲರ ನಿವಾಸದಲ್ಲಿ ರೋಣ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಪಾಟೀಲರ ಮುಖಾಂತರ ಶಾಸಕ ಜಿ ಎಸ್ ಪಾಟೀಲರಿಗೆ ಮನವಿ ಸಲ್ಲಿಸಿದರು, ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳಾಯಿತು ಸರ್ಕಾರ ಕೂಡ ICDS 50ರ ಕಾರ್ಯಕ್ರಮವನ್ನು ನಡೆಸಿದೆ,ಪಾಲನೆ-ಪೋಷಣೆ-ಶಿಕ್ಷಣ ಸಂವಿಧಾನ ಬದ್ಧ ಕರ್ತವ್ಯಗಳಿವೆ ಮತ್ತು 2013 ರ ಆಹಾರ ಭದ್ರತಾ ಕಾಯ್ದೆ 2009 ರ ಕಡ್ಡಾಯ ಶಿಕ್ಷಣ ಕಾಯ್ದೆಯ ಕರ್ತವ್ಯಗಳನ್ನು ಶಾಸನ ಬದ್ದವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ ಕೇಂದ್ರಗಳ ಮುಖಾಂತರ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರು ಜಾರಿ ಮಾಡುತ್ತಿದ್ದಾರೆ ಸುಪ್ರಿಂ ಕೋರ್ಟ್ ಮತ್ತು ಗುಜರಾತ್ ಹೈ ಕೋರ್ಟ್‌ಗಳು ಇವರನ್ನು 3 ಮತ್ತು 4ನೇ ಗ್ರೇಡ್ ನೌಕರರಾಗಿ ಪರಿಗಣಿಸಲು ಜಂಟಿ ನಿಯಮಗಳನ್ನು ಕೇಂದ್ರ ರಾಜ್ಯ ಸರ್ಕಾರಗಳು ರೂಪಿಸಬೇಕೆಂದೂ ತೀರ್ಪು ನೀಡಿದೆ, ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನ ಗೊಳಿಸಲು ಶಿಕ್ಷಣ ಇಲಾಖೆ 10000 ಶಾಲೆಗಳಲ್ಲಿ LKG UKG ಪ್ರಾರಂಬಿಸಲು 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ, ಮ.ಮ.ಅ. ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳಲ್ಲಿ LKG-UKG ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಾಗಿ ಪರಿವರ್ತಿಸಲು ತೀರ್ಮಾನಿಸಿದೆ ಇದೊಂದು ಐತಿಹಾಸಿಕ ತೀರ್ಮಾನ ಆದರೂ ಇದಕ್ಕೆ ಬೇಕಾಂದಂತಹ ಹಣಕಾಸು ಬಿಡುಗಡೆ ಇಲ್ಲದೆ ನಿಧಾನ ಗತಿಯಲ್ಲಿ ಇದೆ ಆದರೆ ಶಿಕ್ಷಣ ಇಲಾಖೆಯಲ್ಲಿ ಎಲ್ಲೆಡೆ LKG-UKG ತೆರೆಯಲು ಅಂಗನವಾಡಿ ಪಲಾನುಭವಿಗಳನ್ನು ಕಸಿಯಲು ಮುಂದಾಗಿ ಯೋಜನೆಯನ್ನು ದುರ್ಬಲ ಗೊಳಿಸಲಾಗುತ್ತಿದೆ,ಈ ಯೋಜನೆಯ ಕೆಲಸಗಳಲ್ಲದೆ ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಜಾರಿ ಮಾಡುವಲ್ಲಿ ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ ಯೋಜನೆಯನ್ನ ಜನತೆಗೆ ತಲಪಿಸುವ ಕೆಲಸದಲ್ಲಿ ಸಂಪೂರ್ಣವಾಗಿ ಸರ್ಕಾರಕ್ಕೆ ಬೆನ್ನಲುಬಾಗಿ ಕೆಲಸ ಮಾಡುತ್ತಿದ್ದಾರೆ,ಆದರೂ ರಾಜ್ಯದಲ್ಲಿ ಇರುವ ಕಾಂಗ್ರೆಸ್ ಪಕ್ಷ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ 15,000-10,000 ಇನ್ನ ಹೆಚ್ಚಳ ಮಾಡಲು ಮುಂದಾಗಲಿಲ್ಲ, ರಾಜ್ಯದಲ್ಲಿ ಈ ಬಾರಿ ಬಜೆಟ್‌ನಲ್ಲಿ ತಮ್ಮ ಸರ್ಕಾರ ನೀಡಿದ ಭರವಸೆಯನ್ನು ಪೂರ್ಣಗೊಳಿಸಲು ಸಾದ್ಯವಾಗಲಿಲ್ಲ,1948 ರ ಕನಿಷ್ಠ ವೇತನ ಕಾಯ್ದೆಯಡಿಯಲ್ಲಿ ತಿಳಿಸಿದಂತೆ 4 ಗಂಟೆಗಿಂತ ಹೆಚ್ಚು ಕೆಲಸ ಮಾಡುವವರಿಗೆ ಕನಿಷ್ಠ ವೇತನ ನೀಡಬೇಕು ಎಂದು ತಿಳಿಸಿದರೂ ಯಾವುದೇ ಸರ್ಕಾರಗಳು ಇದನ್ನು ಜಾರಿ ಮಾಡಲು ಮುಂದಾಗಿಲ್ಲ, ನಮ್ಮ ಬೇಡಿಕೆಗಳು 1. 6 ವರ್ಷದೊಳಗಿನ ಮಕ್ಕಳು ICDS ನಡಿಯಲ್ಲಿರುವುದನ್ನು ಖಾತ್ರಿ ಪಡಿಸಿ, ICDS ಯೋಜನೆ ಪ್ರಾರಂಭವಾಗಿರುವುದೇ 6 ವರ್ಷದೊಳಗಿನ ಮಕ್ಕಳಿಗಾಗಿ ಅಂಗನವಾಡಿ ಕೇಂದ್ರದ ಮುಖಾಂತರ ಆಹಾರ, ಆರೋಗ್ಯ ಮತ್ತು ಶಿಕ್ಷಣ ಕೊಡಲಾಗುತ್ತಿದೆ, ಇಂದಿನ ಸಾಮಾಜಿಕ ವ್ಯವಸ್ಥೆಗನುಗುಣವಾಗಿ ಅಂಗನವಾಡಿ ಕೇಂದ್ರಗಳು ಬಹಳಷ್ಟು ವೈಜ್ಞಾನಿಕವಾಗಿ ಮುಂದುವರೆದೂ ಕೆಲಸ ಮಾಡುತ್ತಿವೆ,ಈ ಕೇಂದ್ರಗಳಲ್ಲಿ ಇಂದು ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕೊಡಲಾಗುತ್ತಿದೆ,2025 ನವೆಂಬರ್ ನಲ್ಲಿ ರಾಜ್ಯದ ಮುಖ್ಯಮಂತ್ರಿಗಳು 5,000 ಅಂಗನವಾಡಿ ಕೇಂದ್ರಗಳಲ್ಲಿ LKG-UKG ಯನ್ನು ಪ್ರಾರಂಭಿಸಲು ಘೋಷಿಸಿ 12/1l/2025 ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶ ಮಾಡಿದೆ, ಶಿಕ್ಷಣ ಇಲಾಖೆ 2025 ರಲ್ಲಿ 5,000 ಸರ್ಕಾರಿ ಶಾಲೆಯಲ್ಲಿ LKG-UKG ಪ್ರಾರಂಭಿಸುವುದಾಗಿ ಹೇಳಿದ್ದಾರೆ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ-1105 ಶಾಲೆ, ಪಿ.ಎಮ್.ಶ್ರೀ-126, KKRDB-1,126, ಮ್ಯಾಗ್ನೆಟ್-1,699, ಸೇರಿದಂತೆ-4,056 ಶಾಲೆಗಳಲ್ಲಿ LKG-UKG ನಡೆಸಲು ಅನುಮತಿ ನೀಡಿದೆ, ಈ ಶಾಲೆಗಳಿಗೆ 4 ರಿಂದ 5 ವರ್ಷದ ಮಕ್ಕಳು ಒಂದು ಶಾಲೆಗೆ 20 ರಿಂದ 40 ಮಕ್ಕಳು ಮಧ್ಯಾಹ್ನದ ಊಟ 418 ಕ್ಯಾಲೋರಿ, 8.7 ಗ್ರಾಂ ಪ್ರೋಟಿನ್ ಇರುವ ಆಹಾರ, ಕೊಡಬೇಕು ಎಂಬ ನಿಯಮಗಳನ್ನು ರೂಪಿಸಿಕೊಂಡಿದ್ದಾರೆ, ಹಾಗೆಯೇ ಶಾಲಾ ಕಾಂಪೌಂಡ್‌ ನೊಳಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಇದನ್ನು ಪ್ರಾರಂಭಿಸಲಾಗುತ್ತಿದೆ ಎಂದು ನಡಾವಳಿಯಲ್ಲಿ ಹೇಳಿ 14/14/2025 ರಲ್ಲಿ ಹೇಳಿದ ಆದೇಶದಲ್ಲಿ ಹೇಳಲಿಲ್ಲ,ಆದ್ದರಿಂದ ಇಡೀ ರಾಜ್ಯದಲ್ಲಿ ಶಾಲಾ ಕಾಂಪೌಂಡ್ ಅಲ್ಲದೇ ಎಲ್ಲಡೆ ಪ್ರಾರಂಭಿಸಲಾಗುತ್ತಿದೆ, ಇದರಿಂದ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳ ಸಂಖ್ಯೆಯ ಮೇಲೆ ಪರಿಣಾಮ ಬೀರುತ್ತಿದೆ, ಆದ್ದರಿಂದ 14/11/2025 ಶಿಕ್ಷಣ ಇಲಾಖೆ ಮಾಡಿರುವ ಆದೇಶ ರದ್ದು ಮಾಡಬೇಕು, ಬಜೆಟ್‌ನಲ್ಲಿಘೋಷಿಸಿರುವಂತೆ 800 ಪಬ್ಲಿಕ್ ಶಾಲೆಗಳಲ್ಲಿ LKG-UKG ಪ್ರಾರಂಭಿಸುವಾಗ ಆ ಗ್ರಾಮಗಳಲ್ಲಿರುವ ಅಂಗನವಾಡಿ ಕೇಂದ್ರಗಳ ಪರಿಸ್ಥಿತಿಯನ್ನು ಅವಲೋಕಿಸಬೇಕು, ರಾಜ್ಯದಲ್ಲಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿಯೂ LKG-UKG ಪ್ರಾರಂಭಿಸಲು ಆದೇಶಿಸಿ ಅಗತ್ಯವಿರುವ ಬಜೆಟ್‌ನ್ನು ಮೀಸಲಿಡಬೇಕು ಎಂದು ವಿನಂತಿಸುತ್ತೇವೆ, 2,ಎಲ್ಲ ಅಂಗನವಾಡಿ ನೌಕರರನ್ನು ಕನಿಷ್ಠಕೂಲಿಯ ಕಾಯ್ದೆಯ ವ್ಯಾಪ್ತಿಗೆ ತಂದು ESI, PFನ್ನು ಕೊಡಬೇಕು, 3, ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಮಾಡುವ ಆಹಾರ ಪದಾರ್ಥಗಳು ಗುಣಮಟ್ಟ ಸರಿ ಇಲ್ಲದ ಕಾರಣ BS ಪರವಾನಿಗೆ ರದ್ದು ಮಾಡಿ ಸ್ಥಳೀಯವಾಗಿ ಸಿಗುವ ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯ ಆಹಾರ ಸರಬರಾಜು ಮಾಡಬೇಕು, 4,ಶಿಶು ಅಭಿವೃದ್ಧಿ ಯೋಜನೆಗಾಗಿ ದುಡಿದು ಬರಿಗೈಯಲ್ಲಿ 2011 ರಿಂದ 2023 ಮಾರ್ಚ್ ತನಕ ನಿವೃತ್ತರಾದ ಕಾರ್ಯಕರ್ತ ಸಹಾಯಕಿಯರಿಗೂ ಕೂಡಲೇ ಗ್ರಾಚ್ಯುಟಿ ಹಣ 183 ಕೋಟಿ ಕೂಡಲೇ ಬಿಡುಗಡೆ ಮಾಡಬೇಕು, 5,ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ತುಂಬಬೇಕು ಮತ್ತು ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕಿ, CDPO ಹುದ್ದೆ ತುಂಬಬೇಕು, 6. ಚುನಾವಣೆ ಕೆಲಸಗಳಿಂದ (BLO) ಅಂಗನವಾಡಿ ನೌಕರರನ್ನು ಬಿಡುಗಡೆ ಮಾಡಬೇಕು. ಈಗಾಗಲೇ ರಾಜ್ಯದಲ್ಲಿ BLO ಕಾರಣಗಳಿಂದ ವಜಾಗೊಳಿಸಿರುವ ಕಾರ್ಯಕರ್ತೆಯರ ವಜಾ ಅಮಾನತ್ತು ತೆರವು ಗೊಳಿಸಬೇಕು, 7,ನಗರ ಪ್ರದೇಶಗಳಲ್ಲಿ ಸಹಾಯಕಿ ಆಯ್ಕೆಗೆ ಇರುವ ಮಾನದಂಡ ಬದಲಾಯಿಸಬೇಕು ಮತ್ತು ನಗರ ಪ್ರದೇಶಗಳಲ್ಲಿ ಇರುವ ಖಾಲಿ ಹುದ್ದೆ ಬೇಗ ತುಂಬಬೇಕು, 8, ಮುಂಗಡವಾಗಿ ಮೊಟ್ಟೆ, ಬಾಡಿಗೆ, ಗ್ಯಾಸ್, ಕರೆಸ್ತಿ ಹಣ, ತರಕಾರಿ, ಆಡಳಿತ ವೆಚ್ಚ, ಸಾದಿಲ್ವಾರು ಹಾಕದೇ ಫಲಿತಾಂಶ ಕೇಳಬಾರದು, 9 ಮಾನ್ಯ ಇಲಾಖೆ ಸಚಿವರು ಒಪ್ಪಿಕೊಂಡಂತೆ ಸಾಮೂಹಿಕ ಆರೋಗ್ಯ ವಿಮೆ ಜಾರಿ ಮಾಡಬೇಕು, 10,ಅಂಗನವಾಡಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ಕೊಡಬೇಕು, 11, FRS ಕೈಬಿಡಬೇಕು ಅಂಗನವಾಡಿ ಕೇಂದ್ರಕ್ಕೆ ಗುಣಮಟ್ಟದ ಮೊಬೈಲ್‌ ನೀಡಬೇಕು ಮತ್ತು WI-FI ನೀಡಬೇಕು, 12, ರಾಜ್ಯ ಸರ್ಕಾರ ಮತ್ತು ಖಾಸಗೀ ವಲಯಗಳಲ್ಲಿ ದುಡಿಯುವ ಮಹಿಳೆಯರಿಗೆ ನೀಡಿರುವ ಮುಟ್ಟಿನ ರಜೆ ಅಂಗನವಾಡಿ ಕಾರ್ಯಕರ್ತ-ಸಹಾಯಕಿಗೂ ಜಾರಿ ಆಗಬೇಕು, 13, ಅಂಗನವಾಡಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಅನ್ವಯ ಮಾಡಿ ಜಾರಿ ಮಾಡಬೇಕು, 14,ನಿವೃತ್ತರಾದವರಿಗೆ ಇಡಿಗಂಟು ಹೆಚ್ಚಳ ಮಾಡಬೇಕು ಹಾಗೂ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು, 15, ICDS ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು, 16, ಮೊಟ್ಟೆ ನೀಡುವ ಬದಲಿಗೆ ನೇರ ನಗದು ಜಮಾವಣೆ ಡಿಬಿಟಿ ತರುತ್ತಿರುವುದನ್ನು ಕೈಬಿಡಬೇಕು, 17, ಬಜೆಟ್‌ನಲ್ಲಿ ಅಂಗನವಾಡಿ ನೌಕರರಿಗೆ ಗೌರವಧನ ಹೆಚ್ಚಳ ಮಾಡಿಲ್ಲ ಚುನಾವಣಾ ಸಂದರ್ಭದಲ್ಲಿಯ ಭರವಸೆ ನೀಡದಂತೆ ತಕ್ಷಣ ವೇತನ ಹೆಚ್ಚಳ ಮಾಡಬೇಕು, ಮೇಲ್ಕಂಡ ಬೇಡಿಕೆಗಳಿಗಾಗಿ 14-15-ಮಾರ್ಚ-2026 ರಂದು ರಾಜ್ಯದ ಎಲ್ಲಾ ಶಾಸಕರಿಗೆ ಮತ್ತು ಸಚಿವರಿಗೆ ಸಾಮೂಹಿಕವಾಗಿ ಮನವಿ ಪತ್ರ ಸಲ್ಲಿಸಲಾಗುತ್ತಿದೆ. ಮಾರ್ಚ 23 ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟವನ್ನು ನಡೆಸಲಾಗುತ್ತಿದೆ ಆದ್ದರಿಂದ ಸರ್ಕಾರ ಕೂಡಲೇ ಅಗತ್ಯ ತೆಗೆದುಕೊಳ್ಳಬೇಕೆಂದು ಎಂದರು, ಈ ಸಂದರ್ಭದಲ್ಲಿ ಜಿಲ್ಲಾ ಸಿ ಐ ಟಿ ಯು ಸಂಚಾಲಕರು ಮಹೇಶ್ ಹಿರೇಮಠ, ತಾಲೂಕು ಅಧ್ಯಕ್ಷರು ಗಂಗಮ್ಮ ದ್ಯಾವರೆಡ್ಡಿ, ಗೀತಾ ಪಾಟೀಲ, ಶಶಿಕಲಾ ಗಾಣಿಗೇರ, ಚಂದ್ರಕಲಾ ಕಬರಳ್ಳಿ,ಶ್ರೀದೇವಿ ಕಳಸಣ್ಣವರ,ಶೋಭಾ ಟಂಕಸಾಲಿ, ಸುಶೀಲ ಚಲವಾದಿ, ಸುಮಾ ಡಂಬಳ, ಶರಣಮ್ಮ ವಾಲಿ ಸೇರಿದಂತೆ ಅನೇಕರಿದ್ದರು
    1
    ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಶನಿವಾರ ಗದಗ ಜಿಲ್ಲೆಯ ರೋಣ ಪಟ್ಟಣದ ಶಾಸಕ ಜಿ ಎಸ್ ಪಾಟೀಲರ ನಿವಾಸದಲ್ಲಿ ರೋಣ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಪಾಟೀಲರ ಮುಖಾಂತರ ಶಾಸಕ ಜಿ ಎಸ್ ಪಾಟೀಲರಿಗೆ  ಮನವಿ ಸಲ್ಲಿಸಿದರು, 
ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳಾಯಿತು ಸರ್ಕಾರ ಕೂಡ ICDS 50ರ ಕಾರ್ಯಕ್ರಮವನ್ನು ನಡೆಸಿದೆ,ಪಾಲನೆ-ಪೋಷಣೆ-ಶಿಕ್ಷಣ ಸಂವಿಧಾನ ಬದ್ಧ ಕರ್ತವ್ಯಗಳಿವೆ ಮತ್ತು 2013 ರ ಆಹಾರ ಭದ್ರತಾ ಕಾಯ್ದೆ 2009 ರ ಕಡ್ಡಾಯ ಶಿಕ್ಷಣ ಕಾಯ್ದೆಯ ಕರ್ತವ್ಯಗಳನ್ನು ಶಾಸನ ಬದ್ದವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ
ಕೇಂದ್ರಗಳ ಮುಖಾಂತರ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರು ಜಾರಿ ಮಾಡುತ್ತಿದ್ದಾರೆ ಸುಪ್ರಿಂ ಕೋರ್ಟ್
ಮತ್ತು ಗುಜರಾತ್ ಹೈ ಕೋರ್ಟ್‌ಗಳು ಇವರನ್ನು 3 ಮತ್ತು 4ನೇ ಗ್ರೇಡ್ ನೌಕರರಾಗಿ ಪರಿಗಣಿಸಲು ಜಂಟಿ ನಿಯಮಗಳನ್ನು ಕೇಂದ್ರ ರಾಜ್ಯ ಸರ್ಕಾರಗಳು ರೂಪಿಸಬೇಕೆಂದೂ ತೀರ್ಪು ನೀಡಿದೆ,
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನ ಗೊಳಿಸಲು ಶಿಕ್ಷಣ ಇಲಾಖೆ 10000 ಶಾಲೆಗಳಲ್ಲಿ LKG UKG ಪ್ರಾರಂಬಿಸಲು 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ,
ಮ.ಮ.ಅ. ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳಲ್ಲಿ LKG-UKG ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಾಗಿ
ಪರಿವರ್ತಿಸಲು ತೀರ್ಮಾನಿಸಿದೆ ಇದೊಂದು ಐತಿಹಾಸಿಕ ತೀರ್ಮಾನ ಆದರೂ ಇದಕ್ಕೆ ಬೇಕಾಂದಂತಹ ಹಣಕಾಸು
ಬಿಡುಗಡೆ ಇಲ್ಲದೆ ನಿಧಾನ ಗತಿಯಲ್ಲಿ ಇದೆ ಆದರೆ ಶಿಕ್ಷಣ ಇಲಾಖೆಯಲ್ಲಿ ಎಲ್ಲೆಡೆ LKG-UKG ತೆರೆಯಲು ಅಂಗನವಾಡಿ
ಪಲಾನುಭವಿಗಳನ್ನು ಕಸಿಯಲು ಮುಂದಾಗಿ ಯೋಜನೆಯನ್ನು ದುರ್ಬಲ ಗೊಳಿಸಲಾಗುತ್ತಿದೆ,ಈ ಯೋಜನೆಯ ಕೆಲಸಗಳಲ್ಲದೆ ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಜಾರಿ ಮಾಡುವಲ್ಲಿ ಗೃಹಲಕ್ಷ್ಮಿ ಯೋಜನೆ,
ಗೃಹಜ್ಯೋತಿ ಯೋಜನೆಯನ್ನ ಜನತೆಗೆ ತಲಪಿಸುವ ಕೆಲಸದಲ್ಲಿ ಸಂಪೂರ್ಣವಾಗಿ ಸರ್ಕಾರಕ್ಕೆ ಬೆನ್ನಲುಬಾಗಿ ಕೆಲಸ
ಮಾಡುತ್ತಿದ್ದಾರೆ,ಆದರೂ ರಾಜ್ಯದಲ್ಲಿ ಇರುವ ಕಾಂಗ್ರೆಸ್ ಪಕ್ಷ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ
15,000-10,000 ಇನ್ನ ಹೆಚ್ಚಳ ಮಾಡಲು ಮುಂದಾಗಲಿಲ್ಲ,
ರಾಜ್ಯದಲ್ಲಿ ಈ ಬಾರಿ ಬಜೆಟ್‌ನಲ್ಲಿ ತಮ್ಮ ಸರ್ಕಾರ ನೀಡಿದ ಭರವಸೆಯನ್ನು ಪೂರ್ಣಗೊಳಿಸಲು ಸಾದ್ಯವಾಗಲಿಲ್ಲ,1948
ರ ಕನಿಷ್ಠ ವೇತನ ಕಾಯ್ದೆಯಡಿಯಲ್ಲಿ ತಿಳಿಸಿದಂತೆ 4 ಗಂಟೆಗಿಂತ ಹೆಚ್ಚು ಕೆಲಸ ಮಾಡುವವರಿಗೆ ಕನಿಷ್ಠ ವೇತನ
ನೀಡಬೇಕು ಎಂದು ತಿಳಿಸಿದರೂ ಯಾವುದೇ ಸರ್ಕಾರಗಳು ಇದನ್ನು ಜಾರಿ ಮಾಡಲು ಮುಂದಾಗಿಲ್ಲ,
ನಮ್ಮ ಬೇಡಿಕೆಗಳು
1. 6 ವರ್ಷದೊಳಗಿನ ಮಕ್ಕಳು ICDS ನಡಿಯಲ್ಲಿರುವುದನ್ನು ಖಾತ್ರಿ ಪಡಿಸಿ,
ICDS ಯೋಜನೆ ಪ್ರಾರಂಭವಾಗಿರುವುದೇ 6 ವರ್ಷದೊಳಗಿನ ಮಕ್ಕಳಿಗಾಗಿ ಅಂಗನವಾಡಿ ಕೇಂದ್ರದ ಮುಖಾಂತರ
ಆಹಾರ, ಆರೋಗ್ಯ ಮತ್ತು ಶಿಕ್ಷಣ ಕೊಡಲಾಗುತ್ತಿದೆ,
ಇಂದಿನ ಸಾಮಾಜಿಕ ವ್ಯವಸ್ಥೆಗನುಗುಣವಾಗಿ ಅಂಗನವಾಡಿ ಕೇಂದ್ರಗಳು ಬಹಳಷ್ಟು ವೈಜ್ಞಾನಿಕವಾಗಿ ಮುಂದುವರೆದೂ
ಕೆಲಸ ಮಾಡುತ್ತಿವೆ,ಈ ಕೇಂದ್ರಗಳಲ್ಲಿ ಇಂದು ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕೊಡಲಾಗುತ್ತಿದೆ,2025 ನವೆಂಬರ್
ನಲ್ಲಿ ರಾಜ್ಯದ ಮುಖ್ಯಮಂತ್ರಿಗಳು 5,000 ಅಂಗನವಾಡಿ ಕೇಂದ್ರಗಳಲ್ಲಿ LKG-UKG ಯನ್ನು ಪ್ರಾರಂಭಿಸಲು ಘೋಷಿಸಿ
12/1l/2025 ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶ ಮಾಡಿದೆ,
ಶಿಕ್ಷಣ ಇಲಾಖೆ 2025 ರಲ್ಲಿ 5,000 ಸರ್ಕಾರಿ ಶಾಲೆಯಲ್ಲಿ LKG-UKG ಪ್ರಾರಂಭಿಸುವುದಾಗಿ ಹೇಳಿದ್ದಾರೆ,
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ-1105 ಶಾಲೆ, ಪಿ.ಎಮ್.ಶ್ರೀ-126, KKRDB-1,126, ಮ್ಯಾಗ್ನೆಟ್-1,699,
ಸೇರಿದಂತೆ-4,056 ಶಾಲೆಗಳಲ್ಲಿ LKG-UKG ನಡೆಸಲು ಅನುಮತಿ ನೀಡಿದೆ,
ಈ ಶಾಲೆಗಳಿಗೆ 4 ರಿಂದ 5 ವರ್ಷದ ಮಕ್ಕಳು ಒಂದು ಶಾಲೆಗೆ 20 ರಿಂದ 40 ಮಕ್ಕಳು ಮಧ್ಯಾಹ್ನದ ಊಟ 418
ಕ್ಯಾಲೋರಿ, 8.7 ಗ್ರಾಂ ಪ್ರೋಟಿನ್ ಇರುವ ಆಹಾರ, ಕೊಡಬೇಕು ಎಂಬ ನಿಯಮಗಳನ್ನು ರೂಪಿಸಿಕೊಂಡಿದ್ದಾರೆ,
ಹಾಗೆಯೇ ಶಾಲಾ ಕಾಂಪೌಂಡ್‌ ನೊಳಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಇದನ್ನು ಪ್ರಾರಂಭಿಸಲಾಗುತ್ತಿದೆ ಎಂದು
ನಡಾವಳಿಯಲ್ಲಿ ಹೇಳಿ 14/14/2025 ರಲ್ಲಿ ಹೇಳಿದ ಆದೇಶದಲ್ಲಿ ಹೇಳಲಿಲ್ಲ,ಆದ್ದರಿಂದ ಇಡೀ ರಾಜ್ಯದಲ್ಲಿ ಶಾಲಾ
ಕಾಂಪೌಂಡ್ ಅಲ್ಲದೇ ಎಲ್ಲಡೆ ಪ್ರಾರಂಭಿಸಲಾಗುತ್ತಿದೆ, ಇದರಿಂದ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳ ಸಂಖ್ಯೆಯ ಮೇಲೆ
ಪರಿಣಾಮ ಬೀರುತ್ತಿದೆ,
ಆದ್ದರಿಂದ 14/11/2025 ಶಿಕ್ಷಣ ಇಲಾಖೆ ಮಾಡಿರುವ ಆದೇಶ ರದ್ದು ಮಾಡಬೇಕು, ಬಜೆಟ್‌ನಲ್ಲಿಘೋಷಿಸಿರುವಂತೆ 800 ಪಬ್ಲಿಕ್ ಶಾಲೆಗಳಲ್ಲಿ LKG-UKG ಪ್ರಾರಂಭಿಸುವಾಗ ಆ ಗ್ರಾಮಗಳಲ್ಲಿರುವ ಅಂಗನವಾಡಿ ಕೇಂದ್ರಗಳ ಪರಿಸ್ಥಿತಿಯನ್ನು ಅವಲೋಕಿಸಬೇಕು,
ರಾಜ್ಯದಲ್ಲಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿಯೂ LKG-UKG ಪ್ರಾರಂಭಿಸಲು ಆದೇಶಿಸಿ ಅಗತ್ಯವಿರುವ ಬಜೆಟ್‌ನ್ನು
ಮೀಸಲಿಡಬೇಕು ಎಂದು ವಿನಂತಿಸುತ್ತೇವೆ,
2,ಎಲ್ಲ ಅಂಗನವಾಡಿ ನೌಕರರನ್ನು ಕನಿಷ್ಠಕೂಲಿಯ ಕಾಯ್ದೆಯ ವ್ಯಾಪ್ತಿಗೆ ತಂದು ESI, PFನ್ನು ಕೊಡಬೇಕು,
3, ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಮಾಡುವ ಆಹಾರ ಪದಾರ್ಥಗಳು ಗುಣಮಟ್ಟ ಸರಿ ಇಲ್ಲದ ಕಾರಣ BS
ಪರವಾನಿಗೆ ರದ್ದು ಮಾಡಿ ಸ್ಥಳೀಯವಾಗಿ ಸಿಗುವ ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯ ಆಹಾರ
ಸರಬರಾಜು ಮಾಡಬೇಕು,
4,ಶಿಶು ಅಭಿವೃದ್ಧಿ ಯೋಜನೆಗಾಗಿ ದುಡಿದು ಬರಿಗೈಯಲ್ಲಿ 2011 ರಿಂದ 2023 ಮಾರ್ಚ್ ತನಕ ನಿವೃತ್ತರಾದ ಕಾರ್ಯಕರ್ತ ಸಹಾಯಕಿಯರಿಗೂ ಕೂಡಲೇ ಗ್ರಾಚ್ಯುಟಿ ಹಣ 183 ಕೋಟಿ ಕೂಡಲೇ ಬಿಡುಗಡೆ ಮಾಡಬೇಕು,
5,ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ತುಂಬಬೇಕು ಮತ್ತು ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕಿ, CDPO ಹುದ್ದೆ ತುಂಬಬೇಕು,
6. ಚುನಾವಣೆ ಕೆಲಸಗಳಿಂದ (BLO) ಅಂಗನವಾಡಿ ನೌಕರರನ್ನು ಬಿಡುಗಡೆ ಮಾಡಬೇಕು. ಈಗಾಗಲೇ ರಾಜ್ಯದಲ್ಲಿ
BLO ಕಾರಣಗಳಿಂದ ವಜಾಗೊಳಿಸಿರುವ ಕಾರ್ಯಕರ್ತೆಯರ ವಜಾ ಅಮಾನತ್ತು ತೆರವು ಗೊಳಿಸಬೇಕು,
7,ನಗರ ಪ್ರದೇಶಗಳಲ್ಲಿ ಸಹಾಯಕಿ ಆಯ್ಕೆಗೆ ಇರುವ ಮಾನದಂಡ ಬದಲಾಯಿಸಬೇಕು ಮತ್ತು ನಗರ ಪ್ರದೇಶಗಳಲ್ಲಿ
ಇರುವ ಖಾಲಿ ಹುದ್ದೆ ಬೇಗ ತುಂಬಬೇಕು,
8, ಮುಂಗಡವಾಗಿ ಮೊಟ್ಟೆ, ಬಾಡಿಗೆ, ಗ್ಯಾಸ್, ಕರೆಸ್ತಿ ಹಣ, ತರಕಾರಿ, ಆಡಳಿತ ವೆಚ್ಚ, ಸಾದಿಲ್ವಾರು ಹಾಕದೇ ಫಲಿತಾಂಶ ಕೇಳಬಾರದು,
9 ಮಾನ್ಯ ಇಲಾಖೆ ಸಚಿವರು ಒಪ್ಪಿಕೊಂಡಂತೆ ಸಾಮೂಹಿಕ ಆರೋಗ್ಯ ವಿಮೆ ಜಾರಿ ಮಾಡಬೇಕು,
10,ಅಂಗನವಾಡಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ಕೊಡಬೇಕು,
11, FRS ಕೈಬಿಡಬೇಕು ಅಂಗನವಾಡಿ ಕೇಂದ್ರಕ್ಕೆ ಗುಣಮಟ್ಟದ ಮೊಬೈಲ್‌ ನೀಡಬೇಕು ಮತ್ತು WI-FI ನೀಡಬೇಕು,
12, ರಾಜ್ಯ ಸರ್ಕಾರ ಮತ್ತು ಖಾಸಗೀ ವಲಯಗಳಲ್ಲಿ ದುಡಿಯುವ ಮಹಿಳೆಯರಿಗೆ ನೀಡಿರುವ ಮುಟ್ಟಿನ ರಜೆ
ಅಂಗನವಾಡಿ ಕಾರ್ಯಕರ್ತ-ಸಹಾಯಕಿಗೂ ಜಾರಿ ಆಗಬೇಕು,
13, ಅಂಗನವಾಡಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಅನ್ವಯ ಮಾಡಿ ಜಾರಿ ಮಾಡಬೇಕು,
14,ನಿವೃತ್ತರಾದವರಿಗೆ ಇಡಿಗಂಟು ಹೆಚ್ಚಳ ಮಾಡಬೇಕು ಹಾಗೂ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು,
15, ICDS ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು,
16, ಮೊಟ್ಟೆ ನೀಡುವ ಬದಲಿಗೆ ನೇರ ನಗದು ಜಮಾವಣೆ ಡಿಬಿಟಿ ತರುತ್ತಿರುವುದನ್ನು ಕೈಬಿಡಬೇಕು,
17, ಬಜೆಟ್‌ನಲ್ಲಿ ಅಂಗನವಾಡಿ ನೌಕರರಿಗೆ ಗೌರವಧನ ಹೆಚ್ಚಳ ಮಾಡಿಲ್ಲ ಚುನಾವಣಾ ಸಂದರ್ಭದಲ್ಲಿಯ ಭರವಸೆ
ನೀಡದಂತೆ ತಕ್ಷಣ ವೇತನ ಹೆಚ್ಚಳ ಮಾಡಬೇಕು,
ಮೇಲ್ಕಂಡ ಬೇಡಿಕೆಗಳಿಗಾಗಿ 14-15-ಮಾರ್ಚ-2026 ರಂದು ರಾಜ್ಯದ ಎಲ್ಲಾ ಶಾಸಕರಿಗೆ ಮತ್ತು ಸಚಿವರಿಗೆ
ಸಾಮೂಹಿಕವಾಗಿ ಮನವಿ ಪತ್ರ ಸಲ್ಲಿಸಲಾಗುತ್ತಿದೆ. ಮಾರ್ಚ 23 ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟವನ್ನು
ನಡೆಸಲಾಗುತ್ತಿದೆ ಆದ್ದರಿಂದ ಸರ್ಕಾರ ಕೂಡಲೇ ಅಗತ್ಯ ತೆಗೆದುಕೊಳ್ಳಬೇಕೆಂದು ಎಂದರು, ಈ ಸಂದರ್ಭದಲ್ಲಿ ಜಿಲ್ಲಾ ಸಿ ಐ ಟಿ ಯು ಸಂಚಾಲಕರು ಮಹೇಶ್ ಹಿರೇಮಠ, ತಾಲೂಕು ಅಧ್ಯಕ್ಷರು ಗಂಗಮ್ಮ ದ್ಯಾವರೆಡ್ಡಿ, ಗೀತಾ ಪಾಟೀಲ, ಶಶಿಕಲಾ ಗಾಣಿಗೇರ, ಚಂದ್ರಕಲಾ ಕಬರಳ್ಳಿ,ಶ್ರೀದೇವಿ ಕಳಸಣ್ಣವರ,ಶೋಭಾ ಟಂಕಸಾಲಿ, ಸುಶೀಲ ಚಲವಾದಿ, ಸುಮಾ ಡಂಬಳ, ಶರಣಮ್ಮ ವಾಲಿ ಸೇರಿದಂತೆ ಅನೇಕರಿದ್ದರು
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    22 hrs ago
  • *ಸಾಮಾಜಿಕ ಹೋರಾಟದ ದಾರಿಯಲ್ಲಿ ನಿಂತ ನಾಯಕ – ಎಸ್. ದುರುಗೆಶ್ ಅವರಿಗೆ ಜನ್ಮದಿನದ ಶುಭಾಶಯಗಳು 🎂* ವಿಜಯನಗರ ಜಿಲ್ಲೆಯ ಕೂಡ್ಲಿಗಿ ನಗರದ ಹೆಮ್ಮೆಯ ವ್ಯಕ್ತಿತ್ವವಾಗಿರುವ *ಎಸ್. ದುರುಗೆಶ್* ಅವರು ಸಮಾಜದ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಹೋರಾಟಗಾರರಾಗಿದ್ದಾರೆ. ದಲಿತ ಸಮುದಾಯದ ಹಕ್ಕುಗಳಿಗಾಗಿ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಅವರು ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಅವರು (DSS) ದಲಿತ ಸಂಘರ್ಷ ಸಮಿತಿಯ ವಿಜಯನಗರ ಜಿಲ್ಲೆಯ ಜಿಲ್ಲಾ ಸಂಚಾಲಕರಾಗಿ ನಾಲ್ಕನೇ ವರ್ಷವೂ ಯಶಸ್ವಿಯಾಗಿ ಸೇವೆ ಮುಂದುವರಿಸುತ್ತಿದ್ದಾರೆ. ತಮ್ಮ ಹೋರಾಟಮಯ ಜೀವನದಲ್ಲಿ ಅನೇಕ ಸವಾಲುಗಳು, ಏರು-ಇಳಿತಗಳು ಎದುರಾದರೂ, ಅವುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದ ನಂಬಿಕೆಯನ್ನು ಗಳಿಸಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಸಂಘಟನೆಯ ಬಲವರ್ಧನೆ, ದಲಿತ ಸಮುದಾಯದ ಹಕ್ಕುಗಳ ರಕ್ಷಣೆ, ಅನ್ಯಾಯ-ಅತ್ಯಾಚಾರಗಳ ವಿರುದ್ಧ ಧ್ವನಿ ಎತ್ತುವಲ್ಲಿ *ಎಸ್. ದುರುಗೆಶ್* ಅವರ ಪಾತ್ರ ಮಹತ್ತರವಾಗಿದೆ. ಗ್ರಾಮದಿಂದ ನಗರವರೆಗೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯಕ್ಕಾಗಿ ಹೋರಾಡುವ ನಾಯಕತ್ವವು ಅವರನ್ನು ಸಮಾಜದಲ್ಲಿ ವಿಶೇಷ ವ್ಯಕ್ತಿಯನ್ನಾಗಿ ಮಾಡಿದೆ. ಅವರ ಸರಳತೆ, ಸೇವಾಭಾವ ಮತ್ತು ಸಂಘಟನೆಗೆ ನೀಡುತ್ತಿರುವ ಶ್ರಮ ಅನೇಕ ಯುವಕರಿಗೆ ಪ್ರೇರಣೆಯಾಗಿದೆ. ಇಂದು (14-03-1976) ಅವರ ಜನ್ಮದಿನದ ಸಂಭ್ರಮದ ದಿನವಾಗಿದೆ. ಈ ವಿಶೇಷ ಸಂದರ್ಭದಲ್ಲಿ ಅವರ ಸಮಾಜಮುಖಿ ಸೇವೆ ಇನ್ನಷ್ಟು ವಿಸ್ತಾರವಾಗಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಇನ್ನಷ್ಟು ಶಕ್ತಿ ದೊರಕಲಿ ಎಂದು ಹಾರೈಸುತ್ತೇವೆ. ಶುಭಾಶಯ ಕೋರುವವರು: ದಲಿತ ಸಂಘರ್ಷ ಸಮಿತಿ (DSS) ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಗರಿಬೊಮ್ಮನಹಳ್ಳಿ ತಾಲ್ಲೂಕು ಘಟಕ 🌹 *ಎಸ್. ದುರುಗೆಶ್ ಅವರಿಗೆ ಹಾರ್ದಿಕ ಜನ್ಮದಿನದ ಶುಭಾಶಯಗಳು* . ಸಮಾಜ ಸೇವೆಯ ನಿಮ್ಮ ಪಯಣ ಇನ್ನಷ್ಟು ಉಜ್ವಲವಾಗಲಿ. ✨ *ನಾಗರಾಜ್ ಕಲ್ಲಹಳ್ಳಿ ✒️
    3
    *ಸಾಮಾಜಿಕ ಹೋರಾಟದ ದಾರಿಯಲ್ಲಿ ನಿಂತ ನಾಯಕ – ಎಸ್. ದುರುಗೆಶ್ ಅವರಿಗೆ ಜನ್ಮದಿನದ ಶುಭಾಶಯಗಳು 🎂* 
ವಿಜಯನಗರ ಜಿಲ್ಲೆಯ ಕೂಡ್ಲಿಗಿ ನಗರದ ಹೆಮ್ಮೆಯ ವ್ಯಕ್ತಿತ್ವವಾಗಿರುವ *ಎಸ್. ದುರುಗೆಶ್* ಅವರು ಸಮಾಜದ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಹೋರಾಟಗಾರರಾಗಿದ್ದಾರೆ. ದಲಿತ ಸಮುದಾಯದ ಹಕ್ಕುಗಳಿಗಾಗಿ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಅವರು ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಸ್ತುತ ಅವರು (DSS) ದಲಿತ ಸಂಘರ್ಷ ಸಮಿತಿಯ ವಿಜಯನಗರ ಜಿಲ್ಲೆಯ ಜಿಲ್ಲಾ ಸಂಚಾಲಕರಾಗಿ ನಾಲ್ಕನೇ ವರ್ಷವೂ ಯಶಸ್ವಿಯಾಗಿ ಸೇವೆ ಮುಂದುವರಿಸುತ್ತಿದ್ದಾರೆ. ತಮ್ಮ ಹೋರಾಟಮಯ ಜೀವನದಲ್ಲಿ ಅನೇಕ ಸವಾಲುಗಳು, ಏರು-ಇಳಿತಗಳು ಎದುರಾದರೂ, ಅವುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದ ನಂಬಿಕೆಯನ್ನು ಗಳಿಸಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.
ಸಂಘಟನೆಯ ಬಲವರ್ಧನೆ, ದಲಿತ ಸಮುದಾಯದ ಹಕ್ಕುಗಳ ರಕ್ಷಣೆ, ಅನ್ಯಾಯ-ಅತ್ಯಾಚಾರಗಳ ವಿರುದ್ಧ ಧ್ವನಿ ಎತ್ತುವಲ್ಲಿ *ಎಸ್. ದುರುಗೆಶ್* ಅವರ ಪಾತ್ರ ಮಹತ್ತರವಾಗಿದೆ. ಗ್ರಾಮದಿಂದ ನಗರವರೆಗೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯಕ್ಕಾಗಿ ಹೋರಾಡುವ ನಾಯಕತ್ವವು ಅವರನ್ನು ಸಮಾಜದಲ್ಲಿ ವಿಶೇಷ ವ್ಯಕ್ತಿಯನ್ನಾಗಿ ಮಾಡಿದೆ. ಅವರ ಸರಳತೆ, ಸೇವಾಭಾವ ಮತ್ತು ಸಂಘಟನೆಗೆ ನೀಡುತ್ತಿರುವ ಶ್ರಮ ಅನೇಕ ಯುವಕರಿಗೆ ಪ್ರೇರಣೆಯಾಗಿದೆ.
ಇಂದು (14-03-1976) ಅವರ ಜನ್ಮದಿನದ ಸಂಭ್ರಮದ ದಿನವಾಗಿದೆ. ಈ ವಿಶೇಷ ಸಂದರ್ಭದಲ್ಲಿ ಅವರ ಸಮಾಜಮುಖಿ ಸೇವೆ ಇನ್ನಷ್ಟು ವಿಸ್ತಾರವಾಗಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಇನ್ನಷ್ಟು ಶಕ್ತಿ ದೊರಕಲಿ ಎಂದು ಹಾರೈಸುತ್ತೇವೆ.
ಶುಭಾಶಯ ಕೋರುವವರು:
ದಲಿತ ಸಂಘರ್ಷ ಸಮಿತಿ (DSS)
ಅಧ್ಯಕ್ಷರು ಹಾಗೂ ಸರ್ವ ಸದಸ್ಯರು
ಹಗರಿಬೊಮ್ಮನಹಳ್ಳಿ ತಾಲ್ಲೂಕು ಘಟಕ
🌹 *ಎಸ್. ದುರುಗೆಶ್ ಅವರಿಗೆ ಹಾರ್ದಿಕ ಜನ್ಮದಿನದ ಶುಭಾಶಯಗಳು* .
ಸಮಾಜ ಸೇವೆಯ ನಿಮ್ಮ ಪಯಣ ಇನ್ನಷ್ಟು ಉಜ್ವಲವಾಗಲಿ. ✨    
*ನಾಗರಾಜ್ ಕಲ್ಲಹಳ್ಳಿ ✒️
    user_Nagaraja kallhalli
    Nagaraja kallhalli
    Content Creator (YouTuber) ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    23 hrs ago
  • ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದ ಭೂ ಒಡೆತನ ಯೋಜನೆಯಡಿಯಲ್ಲಿ 240 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದಲ್ಲಿ ಶಿಗ್ಗಾಂವ- ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ 240 ಫಲಾನುಭವಿಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು,
    1
    ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದ ಭೂ ಒಡೆತನ ಯೋಜನೆಯಡಿಯಲ್ಲಿ 240 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,
ಈ ಕಾರ್ಯಕ್ರಮದಲ್ಲಿ ಶಿಗ್ಗಾಂವ- ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು,
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ 240 ಫಲಾನುಭವಿಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು,
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.