Shuru
Apke Nagar Ki App…
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಚಿಲುಗೋಡು ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ದಲ್ಲಿ ನಿಧಿ ಕಳ್ಳತನ ಆಗಿದೆ ದಿನಾಂಕ 4.8.2026 ರಂದು ರಾತ್ರಿ ಈ ಘಟನೆ ನಡೆದಿದೆ ಈ ಕೂಡಲೇ ತಂಬ್ರಳ್ಳಿಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ತಿಳಿಸಿದ್ದೇವೆ ಪೊಲೀಸ್ ಅವರು ತನಿಖೆ ನಡೆಸುತ್ತಾ ಇದ್ದಾರೆ
K Santosha Ks
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಚಿಲುಗೋಡು ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ದಲ್ಲಿ ನಿಧಿ ಕಳ್ಳತನ ಆಗಿದೆ ದಿನಾಂಕ 4.8.2026 ರಂದು ರಾತ್ರಿ ಈ ಘಟನೆ ನಡೆದಿದೆ ಈ ಕೂಡಲೇ ತಂಬ್ರಳ್ಳಿಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ತಿಳಿಸಿದ್ದೇವೆ ಪೊಲೀಸ್ ಅವರು ತನಿಖೆ ನಡೆಸುತ್ತಾ ಇದ್ದಾರೆ
More news from ಕರ್ನಾಟಕ and nearby areas
- ಕೂಡ್ಲಿಗಿ : ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ತಾಯಿ ಮಕ್ಕಳ ಆಸ್ಪತ್ರೆ , ಅನಿರ್ಯ ಹಾಗೂ ತುರ್ತಾಗಿ ನಿರ್ಮಾಣವಾಗಬೇಕಿದೆ _ ಸಾರ್ವಜನಿಕರ ಹೋರಾಟಗಾರರ ಅಭಿಮತ *ಕೂಡ್ಲಿಗಿ : ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ತಾಯಿ ಮಕ್ಕಳ ಆಸ್ಪತ್ರೆ , ಅನಿರ್ಯ ಹಾಗೂ ತುರ್ತಾಗಿ ನಿರ್ಮಾಣವಾಗಬೇಕಿದೆ _ ಸಾರ್ವಜನಿಕರ ಹೋರಾಟಗಾರರ ಅಭಿಮತ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದಲ್ಲಿನ 100ಹಾಸಿಗೆ ಆಸ್ಪತ್ರೆಯನ್ನು , 150 ಹಾಸಿಗೆ ಆಸ್ಪತ್ರೆಯಾಗಿ ಉನ್ನತೀಕರಿಸಿ. ತಾಯಿ ಮಕ್ಕಳ ಆಸ್ಪತ್ರೆಯನ್ನು , ಹಾಲಿ ಇರುವ ಆಸ್ಪತ್ರೆಗೆ ಹೊಂದಿಕೊಂಡಂತೆ ನಿರ್ಮಿಸಿ. ಆಸ್ಪತ್ರೆಯನ್ನು ವಿಭಾಗಿಯ ಆಸ್ಪತ್ರೆಯನ್ನಾಗಿಸುವ ನಿಟ್ಟಿನಲ್ಲಿ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರ ಅಭಿವೃದ್ಧಿಯ ದಿಟ್ಟ ಹೆಜ್ಜೆಗೆ. ಸಾರ್ವಜನಿಕ ವಲಯದಲ್ಲಿ ಕೂಡ ಉತ್ತಮ ಪ್ರತಿಕ್ರಿಯೆ ದೊರಕಿದೆ , ಸಾರ್ವಜನಿಕರು ಕೂಡ ಶಾಸಕರಿಗೆ ನಡೆಗೆ ಪೂರಕ ಅಭಿಮತ ನೀಡೊ ಮೂಲಕ ಸಾಥ್ ನೀಡಿದ್ದಾರೆ. ಸಂಬಂಧಿಸಿದಂತೆ ಸಾರ್ವಜನಿಕ ವಲಯದ ಅಭಿಪ್ರಾಯ ಸಂಗ್ರಹಿಸಿದಾಗ , ಬಹುತೇಕ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ತುರ್ತುಸೇವಾ ಸಿಬ್ಬಂದಿಯವರು , ಮುಖಂಡರು , ಸಾರ್ವಜನಿಕರು ಶಾಸಕರ ಈ ನಡೆಯನ್ನು ಶ್ಲಾಘಿಸಿದ್ದಾರೆ. ತಾಯಿ ಮಕ್ಕಳ ಮರಣ ಪ್ರಮಾಣ ತಗ್ಗಿಸಲು , ತಾಯಿ ಮಕ್ಕಳಿಗೆ ಅಗತ್ಯ ತುರ್ತು ಚಿಕಿತ್ಸೆ ಒದಗಿಸಲು. ತಾಯಿ ಮಕ್ಕಳ ಆಸ್ಪತ್ರೆಯು , ಹಾಲಿ ಇರುವ ಆಸ್ಪತ್ರೆಗೆ ಹೊಂದಿಕೊಂಡಿರುವುದು. ಎಲ್ಲಾ ರೀತಿಯಿಂದ ತುಂಬಾ ಅನುಕೂಲವಾಗಲಿದ್ದು , ಅದು ಅತ್ಯಅಗತ್ಯವಿದೆ ಎಂದು ಸ್ತ್ರೀರೋಗ ತಜ್ಞ ವೈದ್ಯರಾದ ನಾಗರಾಜರವರು ತಿಳಿಸಿದ್ದಾರೆ. ಸಂಘಟನೆಗಳ ಮುಖಂಡರು ಮಾತನಾಡಿ , ತಾಯಿ ಮಕ್ಕಳ ಆಸ್ಪತ್ರೆ ಕೂಡ್ಲಿಗಿ ಗೆ ಮಾತ್ರ ಸೀಮಿತವಾಗಲ್ಲ. ನೆರೆ ಹೊರೆ ತಾಲೂಕುಗಳಿಗೂ ಸಹಕಾರಿಯಾಗಲಿದೆ , ಸಹೃದಯವಂತ ಶಾಸಕರನ್ನು ಜನಾನುರಾಗಿ ಶಾಸಕರನ್ನು ಪಡೆದಿರುವುದು ನಮ್ಮ ಭಾಗ್ಯ ಎಂದಿದ್ದಾರೆ. ಆಶಕಾರ್ಯಕರ್ತರು ಮಾತನಾಡಿ , ಕೆಲ ಅನಿವಾರ್ಯ ಕಾರಣಗಳಿಗೆ ಹೆರಿಗೆ ಪ್ರಕಣಗಳನ್ನು. ಕೂಡ್ಲಗಿಯಿಂದ ಹೊಸಪೇಟೆ , ಬಳ್ಳಾರಿ , ಕೊಪ್ಪಳ , ದಾವಣಗೆರೆ ಆಸ್ಪತ್ರೆಗೆ ಶಿಪಾರಸ್ಸು ಮಾಡೋದು ಸಹಜವಾಗಿದೆ. ಅದರಿಂದಾಗಿ ಎಲ್ಲಾ ರೀತಿಯ ನಷ್ಟಗಳನ್ನು ಸಂಕಷ್ಟಗಳನ್ನು ಅನುಭವಿಸುವಂತಾಗಿತ್ತು , ಅದೆಲ್ಲಾ ತಪ್ಪಲಿದೆ ಹಾಗೂ ತಾಯಿ ಮಕ್ಕಳು ಸುರಕ್ಷಿತವಾಗಿರಲು ಆಸ್ಪತ್ರೆ ಹತ್ತಿರದಲ್ಲಿಯೇ ಆಗಬೇಕಿದೆ ಎಂದಿದ್ದಾರೆ. ದಲಿತ ಮುಖಂಡರು ಹೋರಾಟಗಾರರು ಮಾತನಾಡಿ , ಮಾಜಿ ಶಾಸಕರಾದ ದಿವಂತ ಎನ್ ಟಿ ಬೊಮ್ಮಣ್ಣರವರು. ಅಂದರೆ ಶಾಸಕರ ತಂದೆಯವರು ಶಾಸಕರಾದಾಗ , 100ಹಾಸಿಗೆ ಆಸ್ಪತ್ರೆ ನಿರ್ಮಿಸಿ ದಾಖಲು ಮಾಡಿದ್ದಾರೆ. ಅಂತೆಯೆ ಅವರ ಪುತ್ರರಾದ ಶಾಸಕರಾದ , ಡಾ ॥ ಎನ್ ಟಿ ಶ್ರೀನಿವಾಸ್ ರವರು 150 ಹಾಸಿಗೆ ಆಸ್ಪತ್ರೆಯಾಗಿ ಉನ್ನತೀಕರಿಸಿದ್ದಾರೆ. ಅದು ವಿಭಾಗ ಮಟ್ಟದ ಸುಸಜ್ಜಿತ ತಾಯಿ ಮಕ್ಕಳ ಆಸ್ಪತ್ರೆಯಾಗಿ , ಉನ್ನತೀಕರಿಸಿ ಅಭಿವೃದ್ಧಿ ಪಡಿಸುತ್ತಿರುವುದು ಶ್ಲಾಘನೀಯವಾದದ್ದು. ಈ ಮೂಲಕ ಅಸಂಖ್ಯಾತ ತಾಯಿ ಮಕ್ಕಳ , ಆರೈಕೆಗೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ವಾತಾವರಣ ನಿರ್ಮಿಸುತ್ತಿದ್ದಾರೆ. ತಾಯಿ ಮಕ್ಕಳ ಆಸ್ಪತ್ರೆ ಪಟ್ಟಣ ತಾಲೂಕು ಮಾತ್ರವಲ್ಲ , ವಿಜಯನಗರ ಜಿಲ್ಲೆಗೆ ಮಾದರಿ ಆಸ್ಪತ್ರೆಯಾಗಲಿದೆ. ಅದು ವಿಜಯನಗರ ಜಿಲ್ಲೆಯ ನವಜಾತ ಶಿಶು ಹಾಗೂ ತಾಯಿಯರಿಗೆ ಸಂಜೀವಿನಯಾಗಲಿದೆಎಂದು ಹಿರಿಯ ನಾಗರೀಕರು ಬಣ್ಣಿಸಿದ್ದಾರೆ. ಅದುದರಿಂದಾಗಿ ಈ ಆಸ್ಪತ್ರೆಯು , ಹಾಲಿ ನಿಗದಿಪಡಿಸಿರುವ ಸಾರ್ವಜನಿಕ ಆಸ್ಪತ್ರೆಗೆ ಹೊಂದಿಕೊಂಡ ಜಾಗದಲ್ಲಿಯೇ ನಿರ್ಮಾಣವಾಗಬೇಕಿದೆ ಎಂದು ಅಭಿಮತ ವ್ಯೆಕ್ತಪಡಿಸಿದ್ದಾರೆ. ಪಟ್ಟಣ ತಾಲೂಕು ನೆರೆ ಹೊರೆ ತಾಲೂಕುಗಳಿಂದ ತಿಂಗಳೊಂದಕ್ಕೆ 50 - 75 ಹೆರಿಗೆ ಪ್ರಕರಣಗಳು , ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಅರಸಿ ಬರಲಿದ್ದು. ಇದು ಎಲ್ಲರಿಗೂ ತುಂಬಾ ಅನುಕೂಲವಾಗಲಿದೆ , ಶಾಸಕರ ದೂರ ದೃಷ್ಟಿ ಹಾಗೂ ಜನಪರ ಕಾಳಜಿಯನ್ನು ಸಾಬೀತುಪಡಿಸಿದೆ ಎಂದಿದ್ದಾರೆ. ಶಾಸಕರ ಜನಪರ ಕಾಳಜಿ ಮಕ್ಕಳ ಮಹಿಳೆಯರ ಪರ ಇರುವ ನಿಲುವಿಗೆ ನಿದರ್ಶನವಾಗಿದ್ದು , ಈ ಮೂಲಕ ಅವರು ತಾಯಿಯ ಮಮತೆಯ ಸಹೃದಯವಂತಿಕೆ ತೋರಿದ್ದಾರೆ. ತಾಯಿ ಮಕ್ಕಳ ಆಸ್ಪತ್ರೆ ಹಾಲಿ ಇರುವ ಆಸ್ಪತ್ರೆಗೆ ಹೊಂದಿಕೊಂಡಿದ್ದಲ್ಲಿ , ಎಲ್ಲರಿಗೂ ಎಲ್ಲಾ ರೀತಿಯಲ್ಲಿ ಸಾಕಷ್ಟು ಅನುಕೂಕವಾಗಲಿದೆ. ಶಾಸಕರ ಕಾಳಜಿ ಹಾಗೂ ಅಂತಃಕರಣ ಪೂರ್ವಕ ಹೃದಯ ಶ್ರೀಮಂತಿಕೆಗೆ , ತಾಯಿ ಮಕ್ಕಳ ಆಸ್ಪತ್ರೆಯೇ ಸಾಕ್ಷಿಯಾಗಿದೆ. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರ , ಈ ಮಹಾ ಕಾರ್ಯಕ್ಕೆ ಅವರೊಂದಿಗೆ ತಾವು ಸದಾ ಇರುತ್ತೇವೆಂದು. ಕೂಡ್ಲಿಗಿ ಪಟ್ಟಣದ ನಾಗರೀಕರು , ಸಾರ್ವಜನಿಕರು , ಹೋರಾಟಗಾರರು , ವಿವಿದ ಸಂಘಟನೆಗಳ ಪದಾಧಿಕಾರಿಗಳು. ಮಹಿಳಾ ಸಂಘ ,ರೈತ ಸಂಘ , ಕಾರ್ಮಿಕರ ಸಂಘ , ಕನ್ನಡ ಪರ ಸಂಘಟನೆಗಳು , ದಲಿತಪರ ಸಂಘಟನೆಗಳು , ತಾಲೂಕಿನ ಬಹುತೇಕ ಸಂಘಟನೆಗಳ ಪದಾಧಿಕಾರಿಗಳು ಅಭಿಮತ ವ್ಯಕ್ತಪಡಿಸಿದ್ದಾರೆ.✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಕಾಲೇಜಿನ ಕೊನೆಯ ದಿನ ಸೆಕ್ಯೂರಿಟಿ ಗಾರ್ಡ್ನ ಆಶೀರ್ವಾದ ಪಡೆದ ವಿದ್ಯಾರ್ಥಿ ಕಾಲೇಜಿನ ಕೊನೆಯ ದಿನ ಸೆಕ್ಯೂರಿಟಿ ಗಾರ್ಡ್ನ ಆಶೀರ್ವಾದ ಪಡೆದ ವಿದ್ಯಾರ್ಥಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ದೃಶ್ಯಗಳು ಮನಸ್ಸಿಗೆ ಹತ್ತಿರವಾಗುತ್ತವೆ. ಇದೀಗ ವಿದ್ಯಾರ್ಥಿಯೊಬ್ಬ ಕಾಲೇಜಿನ ಕೊನೆಯ ದಿನದಂದು ಪ್ರತಿದಿನ ಗೇಟ್ ಮುಂದೆ ನಿಂತು ತನ್ನನ್ನು ನಗುತ್ತಾ ಸ್ವಾಗತಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ನ ಆಶೀರ್ವಾದ ಪಡೆದುಕೊಂಡಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ. ಕಾಲೇಜ್ ಲೈಫ್ (College life) ಇಸ್ ಗೋಲ್ಡನ್ ಲೈಫ್ ಅಂತಾರೆ. ಕಾಲೇಜಿನ ಕೊನೆಯ ದಿನದಂದು ಪ್ರತಿಯೊಬ್ಬ ವಿದ್ಯಾರ್ಥಿಯೂ ಜತೆಯಾಗಿ ಕಳೆದ ಸುಂದರ ಕ್ಷಣಗಳನ್ನು ಮೆಲುಕು ಹಾಕುವುದು ಸಹಜ. ಇನ್ನ ತನ್ನ ಪ್ರೀತಿಯ ಶಿಕ್ಷಕರಿಗೆ, ಸ್ನೇಹಿತರೊಂದಿಗೆ ಫೋಟೋ ಕ್ಲಿಕಿಸಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಪದವಿ ವಿದ್ಯಾರ್ಥಿ ಸೆಕ್ಯೂರಿಟಿ ಗಾರ್ಡ್ಗೆ ಕೃತಜ್ಞತೆ ಸಲ್ಲಿಸಿದ್ದಾನೆ. ಹೌದು, ಕಾಲೇಜ್ ಗೇಟ್ ಹತ್ತಿರ ಬರುತ್ತಿದ್ದಂತೆ ನಗುತ್ತಾ ಸ್ವಾಗತಿಸುತ್ತಿದ್ದ ಮಹಿಳಾ ಭದ್ರತಾ ಸಿಬ್ಬಂದಿಯ ಆಶೀರ್ವಾದ ಪಡೆದ ಕ್ಷಣದ ವಿಡಿಯೋ ವೈರಲ್ ಆಗಿದೆ. ಈ ಹೃದಯ ಸ್ಪರ್ಶಿ ದೃಶ್ಯ ಈ ವಿದ್ಯಾರ್ಥಿಯ ಸಂಸ್ಕಾರಯುತ ನಡವಳಿಕೆಯನ್ನು ಎತ್ತಿ ತೋರಿಸಿದೆ.ರೋಸಿ (Rosy) ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಕಾಲೇಜಿನ ಕೊನೆಯ ದಿನದಂದು ಮಹಿಳಾ ಭದ್ರತಾ ಸಿಬ್ಬಂದಿ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಳ್ಳುತ್ತಿರುವುದನ್ನು ನೋಡಬಹುದು. ಈ ವಿದ್ಯಾರ್ಥಿ ಕಾಲು ಮುಟ್ಟುತ್ತಿದ್ದಂತೆ ಸಿಬ್ಬಂದಿ ಭಾವುಕರಾಗಿದ್ದಾಳೆ. ಕೊನೆಗೆ ಈ ವಿದ್ಯಾರ್ಥಿ ತಬ್ಬಿಕೊಂಡು ಸೆಕ್ಯೂರಿಟಿ ಗಾರ್ಡ್ನನ್ನು ಸಮಾಧಾನ ಪಡಿಸುತ್ತಿರುವುದನ್ನು ನೀವು ಇಲ್ಲಿ ನೋಡಬಹುದು.ಆಗಸ್ಟ್ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಇದುವರೆಗೆ ಆರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಭಾರತೀಯ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಿಜವಾದ ಜೆನ್ ಝೆಡ್ ಎಂದಿದ್ದಾರೆ. ಮತ್ತೊಬ್ಬರು, ಈ ವಿದ್ಯಾರ್ಥಿಯ ಗುಣ ನಡತೆ ಹೃದಯ ಹತ್ತಿರವಾಯ್ತು ಎಂದು ಕಾಮೆಂಟ್ ಮಾಡಿದ್ದಾರೆ.1
- ಗದಗ ಜಿಲ್ಲೆಯ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕು ಮತ್ತು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಗದಗ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಎಚ್.ಕೆ. ಪಾಟೀಲ್ ಅವರ ಕೊಡುಗೆ ಅನನ್ಯವಾದದ್ದು. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇರುವುದು ಕಾರ್ಯಕರ್ತರ ತೀವ್ರ ನಿರಾಶೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು1
- ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur1
- ಚಿತ್ರದುರ್ಗದ ಮುರುಘಾ ಮಠದಲ್ಲಿ 36 ನೇ ವರ್ಷದ ಎಂಟನೇ ತಿಂಗಳ ಸಾಮೋಹಿಕ ಕಲ್ಯಾಣ ಮಹೋತ್ಸವ ಚಿತ್ರದುರ್ಗದ ಮುರುಘಾ ಮಠದಲ್ಲಿ ಸಾಮೋಹಿಕ ಕಲ್ಯಾಣ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಮುರುಘಾ ಮಠದಲ್ಲಿ 36ನೇ ವರ್ಷದ ಎಂಟನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 03 ಜೋಡಿಗಳ ವಿವಾಹ ನೆರವೇರಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಅವರು ಮಾತನಾಡಿದ್ದು ಮನುಷ್ಯ ಶ್ವಾಸ ಇರುವವರೆಗೂ ವಿಶ್ವಾಸ ಬಿಡಬಾರದು, ಸತಿ-ಪತಿಗಳು ಗುರು-ಶಿಷ್ಯರು ಸ್ನೇಹಿತರು ಸಂಬಂಧದಲ್ಲಿ ವಿಶ್ವಾಸವಿಟ್ಟುಕೊಂಡರೆ ಜಗತ್ತೇ ಆನಂದವಾಗಿರುತ್ತದೆ ಎಂದು ಶ್ರೀ ಜಗದ್ಗುರು ಹೇಳಿದರು. ಲಿಂ. ಮಲ್ಲಿಕಾರ್ಜುನ ಶ್ರೀಗಳು ಶ್ರೀಮಠದಲ್ಲಿ ಸಾಮೂಹಿಕ ಕಲ್ಯಾಣ ನಡೆಯಲು ಕಾರಣೀಭೂತರು. ಜಾತಕ, ಗಳಿಗೆ, ರಾಶಿ ನೋಡದೇ ಇಂದು ಮದುವೆಯಾದ ವಧು ವರರು ಹಾಗೂ ಅವರ ಕುಟುಂಬವರ್ಗದವರು ಬಸವಾದಿ ಪ್ರಮಥರ ಕರುಣೆಗೆ ಪಾತ್ರರಾಗಿದ್ದಾರೆ ಅವರೆಲ್ಲ ಅಭಿನಂದನಾರ್ಹರು. ಶ್ರೀಮಠವು ಮಹಾಲಯ ಅಮಾವಾಸ್ಯೆ ದಿನ 180 ಜೋಡಿ ಮದುವೆ ಮಾಡಿದ ಉದಾಹರಣೆಯಿದೆ ಎಂದು ತಿಳಿಸಿದರು.1
- ರಾಷ್ಟ್ರ ಹಿತ ರಕ್ಷಣಾ ವೇದಿಕೆ ಹಾವೇರಿ ಜಿಲ್ಲೆ ವತಿಯಿಂದ ಜಿ ಎಚ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ನಿವೃತ್ತ ತಹಸಿಲ್ದಾರರಾದ ಗವಿಸಿದಪ್ಪ ದ್ಯಾಮಣ್ಣವರ, ನಿರಾಮಯ ಫೌಂಡೇಶನ್ ಸಂಸ್ಥಾಪಕರು ಹಾಗೂ ವೈದ್ಯರಾದ ಡಾ.ಮಲ್ಲಿಕಾರ್ಜುನ್ ಬಾಳಿಕಾಯಿ ಜಿ ಎಚ್ ಕಾಲೇಜಿನ ಪಿ ಯು ವಿಭಾಗದ ಪ್ರಾಚಾರ್ಯರಾದ ಡಾ"ಜ್ಯೋತಿಬಾ ಸಿಂದೆ, ಜಿ ಎಚ್ ಕಾಲೇಜಿನ ಡಿಗ್ರಿ ವಿಭಾಗದ ಪ್ರಾಚಾರ್ಯರಾದ ಪ್ರೋ.ಎಂ ಎಂ ಹೊಳ್ಳಿಯವರ, ಯುವ ಮುಖಂಡರು ಮತ್ತು ಬ್ಯಾಂಕ್ ಉದ್ಯಮಿದಾರರಾದ ಶ್ರೀ ಕಿರಣಕುಮಾರ ಚ ಕೋಣನವರ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರೂ.1
- ಬಂಗಾರಕ್ಕನಹಳ್ಳಿ ಗಡಿ ದಾಟುವ 'ಹೋಳಿಗೆ ಅಮ್ಮ', ಆಷಾಢದಲ್ಲಿ ಆಚರಿಸಲಾಗುತ್ತೆ ಈ ವಿಶಿಷ್ಟ ಹಬ್ಬ..! ಚಿತ್ರದುರ್ಗ: ಆಷಾಢ ಮಾಸ ಬಂದರೆ ಮಧ್ಯ ಕರ್ನಾಟಕದ ಗ್ರಾಮೀಣ ಭಾಗದಲ್ಲಿ 'ಹೋಳಿಗೆ ಅಮ್ಮ' ಹಬ್ಬ ಆಚರಿಸುವ ಸಂಭ್ರಮ ಮನೆಮಾಡುತ್ತದೆ. ಜೇಷ್ಠ ಹಾಗೂ ಆಷಾಢ ಮಾಸ ರೈತಾಪಿ ಜನರಿಗೆ ಬಿತ್ತುವ ಕಾಲ. ಈ ಮಾಸದ ಮಂಗಳವಾರ ಅಥವಾ ಶುಕ್ರವಾರ ಅನುಕೂಲವಾದ ಯಾವುದಾದರೂ ಒಂದು ದಿನ ಮೀಸಲಿಟ್ಟು ಭಯ ಭಕ್ತಿಯಿಂದ 'ಹೋಳಿಗೆ ಅಮ್ಮ'ನ ಹಬ್ಬ ಆಚರಿಸುವುದು ವಾಡಿಕೆ. ಚಿತ್ರದುರ್ಗ ತಾಲೂಕಿನ ಬಂಗಾರಕ್ಕನಹಳ್ಳಿ ಹಾಗೂ ಇತರ ಗ್ರಾಮಗಳ ಜನ ತಮ್ಮದೇ ಆದ ಬೇಡಿಕೆಗಳನ್ನು ಸಲ್ಲಿಸುವ ಮೂಲಕ ಈ ಹಬ್ಬ ಆಚರಿಸುತ್ತಾರೆ. ಆಯಾ ಊರ ಮುಂದಿನ ಗಡಿ (ಎಲ್ಲೆ) ಇರುವ ಒಂದು ಬೇವಿನ ಮರದ ಕೆಳಗೆ ಹೋಳಿಗೆ ಎಡೆಯನ್ನು ಇಟ್ಟು ಅಮ್ಮನನ್ನು ಕಳಿಸಿ, ಕೈ ಮುಗಿದು ಹಿಂದಿರುಗಿ ನೋಡದಂತೆ ಬರುವುದು ಸಂಪ್ರದಾಯ. ಹಬ್ಬದ ಆಚರಣೆ ಗೊತ್ತಾದ ದಿನ ಬೆಳಗ್ಗಿನಿಂದಲೇ ಮನೆಯ ಮಹಿಳೆಯರು ಹೋಳಿಗೆ ಮಾಡಿ ಹಬ್ಬದ ಸಿದ್ಧತೆಯಲ್ಲಿ ತೊಡಗುತ್ತಾರೆ. ಪುರುಷರು ಸ್ನಾನ ಮಾಡಿ ಪೂಜೆಗೆ ಸಜ್ಜಾಗುತ್ತಾರೆ. ಒಂದು ಪುಟ್ಟ ಮೊರದಲ್ಲಿ ಹೋಳಿಗೆ, ಕೊಬ್ಬರಿ ಬಟ್ಟಲು, ಬೇವಿನ ಸೊಪ್ಪು, ಬಾಳೆಹಣ್ಣು, ಅರಿಷಿಣ, ಕುಂಕುಮ, ಹಸಿರು ಗಾಜಿನ ಬಳೆ ಇರಿಸುತ್ತಾರೆ. ಇದನ್ನೇ 'ಹೋಳಿಗೆ ಅಮ್ಮ' ಎಂಬ ಹೆಸರಲ್ಲಿ ಪೂಜೆ ಮಾಡುತ್ತಾರೆ. ಜನರನ್ನು, ಹಾಗೂ ಜಾನುವಾರುಗಳನ್ನು ಯಾವುದೇ ಕಾಯಿಲೆ ಬರದಂತೆ ಕಾಪಾಡಮ್ಮ ಎಂದು ಬೇಡಿಕೊಂಡು ಎಲ್ಲರೂ ಆ ಮೊರಕ್ಕೆ ನಮಿಸುತ್ತಾರೆ.1
- ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಚಿಲುಗೋಡು ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ದಲ್ಲಿ ನಿಧಿ ಕಳ್ಳತನ ಆಗಿದೆ ದಿನಾಂಕ 4.8.2026 ರಂದು ರಾತ್ರಿ ಈ ಘಟನೆ ನಡೆದಿದೆ ಈ ಕೂಡಲೇ ತಂಬ್ರಳ್ಳಿಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ತಿಳಿಸಿದ್ದೇವೆ ಪೊಲೀಸ್ ಅವರು ತನಿಖೆ ನಡೆಸುತ್ತಾ ಇದ್ದಾರೆ1