Shuru
Apke Nagar Ki App…
ಬೆಳ್ತಂಗಡಿಯಲ್ಲಿ ಪಿಯುಸಿ ಮರುಮೌಲ್ಯಮಾಪನದಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593 ಅಂಕಗಳನ್ನು ಪಡೆದಿದ್ದರು. ಇಂಗ್ಲಿಷ್ ವಿಷಯದಲ್ಲಿ 3 ಹೆಚ್ಚುವರಿ ಅಂಕಗಳಿಸಿದ್ದು ಅವರು 596ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ. ನಿಜ ಕುಲಾಲ್ ಮೇಲಂತಬೆಟ್ಟು ಗ್ರಾಮದ ನಿವಾಸಿ ನಿಲೇಶ್ ಹೆಚ್ ಪೆರಿಂಜೆ ಮತ್ತು ಸುಶ್ರೂಷಕಿ ಜಯಲಕ್ಷ್ಮಿ ದಂಪತಿಗಳ ಮಗಳು.
Shamsheer Budoli
ಬೆಳ್ತಂಗಡಿಯಲ್ಲಿ ಪಿಯುಸಿ ಮರುಮೌಲ್ಯಮಾಪನದಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593 ಅಂಕಗಳನ್ನು ಪಡೆದಿದ್ದರು. ಇಂಗ್ಲಿಷ್ ವಿಷಯದಲ್ಲಿ 3 ಹೆಚ್ಚುವರಿ ಅಂಕಗಳಿಸಿದ್ದು ಅವರು 596ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ. ನಿಜ ಕುಲಾಲ್ ಮೇಲಂತಬೆಟ್ಟು ಗ್ರಾಮದ ನಿವಾಸಿ ನಿಲೇಶ್ ಹೆಚ್ ಪೆರಿಂಜೆ ಮತ್ತು ಸುಶ್ರೂಷಕಿ ಜಯಲಕ್ಷ್ಮಿ ದಂಪತಿಗಳ ಮಗಳು.
More news from ಕರ್ನಾಟಕ and nearby areas
- ಮಂಗಳೂರಿನಲ್ಲಿ ಸದ್ಯ ಅತಿಯಾದ ಬಿಸಿಲು ಮತ್ತು ಹೆಚ್ಚಿನ ಆರ್ದ್ರತೆಯಿಂದ (Humidity) ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದ್ದು, ಮೈ ಸುಡುವ ಬಿಸಿಲು ಇರಲಿದೆ. ಮೇ 6-7ರ ಸುಮಾರಿಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.1
- ಕಡೂರು : ತಾಲ್ಲೂಕಿನಲ್ಲಿ ಸಮೃದ್ದಿ ಮಳೆಯಾಗಲೆಂದು ಪ್ರಾರ್ಥಿಸಿ ಮಳೆ ದೇವರೇಂದೆ ಖ್ಯಾತಿ ಪಡೆದಿರುವ ಶೃಂಗೇರಿ ತಾಲ್ಲೂಕಿನ ಕಿಗ್ಗಾದ ಋಷ್ಯಶೃಂಗೇಶ್ವರನಿಗೆ ತಾಲ್ಲೂಕಿನ ಚಿಕ್ಕಪಟ್ಟಣಗೆರೆ ಗ್ರಾಮಸ್ಥರು ಶನಿವಾರ ಶತಾರುದ್ರಾಭಿಷೇಕ ಪೂಜೆ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಈಗಾಗಲೇ ಸುಡುಬಿಸಿಲಿನಿಂದ ತತ್ತರಿಸುತ್ತಿರುವ ಜನತೆಗೆ ಮಳೆಗಾಗಿ ಕಾಯುತ್ತಿದ್ದು, ಕೆರೆಕಟ್ಟೆಗಳಲ್ಲಿನ ಅಂತರ್ಜಲ ಮಟ್ಟ ಕುಸಿಯುತ್ತಿದೆ. ರೈತಾಪಿ ವರ್ಗಕ್ಕೆ ಉತ್ತಮ ಮಳೆ-ಬೆಳೆ ಕರುಣಿಸುವಂತೆ ಪ್ರಾರ್ಥಿಸಲಾಗಿದೆ ಎಂದು ಗ್ರಾಮದ ಮುಖಂಡ ಚಿಕ್ಕಪಟ್ಟಣಗೆರೆ ನಾಗರಾಜ್ ತಿಳಿಸಿದರು. ಈ ಸಂದರ್ಭದಲ್ಲಿ ಶಿವಮೂರ್ತಿ,ಸಿ.ಎಸ್. ರಮೇಶ್, ಶ್ರೀಧರ್, ವಿಜಯ್ಕುಮಾರ್, ಜಗದೀಶ್ ಇದ್ದರು.1
- ನಂಜನಗೂಡು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತೋತ್ಸವ ಹಾಗೂ ದಿ.ಆರ್ ಧ್ರುವನಾರಾಯಣ್ ರವರ 65ನೇ ಹುಟ್ಟು ಹಬ್ಬದ ಪ್ರಯುಕ್ತ ಶಂಕರಪುರ ಹತ್ತು ಜನಗಳ ಗರಡಿ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ನಾಡ ಕುಸ್ತಿ ಪಂದ್ಯಾವಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ನೀಡಿದರು. ದಿ.ಆರ್ ಧ್ರುವನಾರಾಯಣ್ ರವರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಿರುವುದು ಸಂತಸ ತಂದಿದೆ. ನಂಜನಗೂಡು ತಾಲ್ಲೂಕಿನಲ್ಲಿ ಅತಿ ಹೆಚ್ಚು ಕ್ರೀಡಾ ಚಟುವಟಿಕೆಗಳು ನಡೆಯುತ್ತಿದೆ. ನಂಜನಗೂಡು ಸಾಕಷ್ಟು ಯುವಕರಿಗೆ ಅವಕಾಶ ಮಾಡಿಕೊಡುತ್ತಿದೆ. ನಮ್ಮ ತಂದೆಯವರು ಕೂಡ ಕ್ರೀಡಾ ಪಟುವಾಗಿದ್ದರು. ಅವರು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ. ಇನ್ನೂ ಹಲವು ಕ್ರೀಡೆಗಳನ್ನು ಆಯೋಜಿಸುವ ಮೂಲಕ ಯುವ ಸಮುದಾಯಕ್ಕೆ ಪ್ರೋತ್ಸಾಹಿಸಿ ಅವರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ವಕೀಲರಾದ ಉಮೇಶ್, ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಚಂದನ್ ಗೌಡ, ಕಾಂಗ್ರೆಸ್ ಮುಖಂಡ ಮಂಜುನಾಥ್, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕರಳಾಪುರ ವಿಜಯಕುಮಾರ್, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೇಬೂರು ಅಶೋಕ್, ವಾಯುಪುತ್ರ ಡೆವಲಪರ್ಸ್ ಚೆಲುವರಾಜು, ಮಾಜಿ ಗ್ರಾಪಂ ಅಧ್ಯಕ್ಷ ಗಿರೀಶ್, ಹಲ್ಲರೆ ಮಹದೇವ್, ಕಳಲೆ ರಾಜೇಶ್, ರಘು, ಆಯೋಜಕರಾದ ಜಿಮ್ ರಘು, ಪೈಲ್ವಾನ್ ಚೇತನ್, ಪೈಲ್ವಾನ್ ನಟೇಶ್, ಪೈಲ್ವಾನ್ ಶಿವಕುಮಾರ್, ಮಹದೇವ್ ಭರ್ಜರಿ ಸೇರಿದಂತೆ ಕುಸ್ತಿಪಟುಗಳು ಭಾಗವಹಿಸಿದ್ದರು.1
- *ಭಾರತ ನಲ್ಲಿ ವೈರಲ್*1
- Post by Karibasava Balal1
- Post by ALTAF,❤️🙏1
- Post by Suresh Belagere1
- ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593 ಅಂಕಗಳನ್ನು ಪಡೆದಿದ್ದರು. ಇಂಗ್ಲಿಷ್ ವಿಷಯದಲ್ಲಿ 3 ಹೆಚ್ಚುವರಿ ಅಂಕಗಳಿಸಿದ್ದು ಅವರು 596ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ. ನಿಜ ಕುಲಾಲ್ ಮೇಲಂತಬೆಟ್ಟು ಗ್ರಾಮದ ನಿವಾಸಿ ನಿಲೇಶ್ ಹೆಚ್ ಪೆರಿಂಜೆ ಮತ್ತು ಸುಶ್ರೂಷಕಿ ಜಯಲಕ್ಷ್ಮಿ ದಂಪತಿಗಳ ಮಗಳು.1