Shuru
Apke Nagar Ki App…
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ವಯಸ್ಸಿನ ಭೇದವಿಲ್ಲದೆ ಹೆಚ್ಚುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಇದಕ್ಕೆ ಮತ್ತೊಂದು ಆಘಾತಕಾರಿ ಉದಾಹರಣೆಯಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಕೇವಲ 4 ವರ್ಷದ ಪುಟ್ಟ ಬಾಲಕನೊಬ್ಬ ತೀವ್ರ ಎದೆನೋವಿನಿಂದ ಮೃತಪಟ್ಟಿರುವ ದುರದೃಷ್ಟಕರ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಅವರ ಪುತ್ರ ವೈಷ್ಣವ್ (4) ಮೃತಪಟ್ಟ ಬಾಲಕ. ಮಗು ಇದ್ದಕ್ಕಿದ್ದಂತೆ ತೀವ್ರವಾದ ಎದೆ ಉರಿಯಿಂದ ಬಳಲಲಾರಂಭಿಸಿದೆ. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಮಗು ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ. ಮಗುವಿನ ಸಾವಿಗೆ ನಿಖರವಾದ ಕಾರಣ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲವಾದರೂ, ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದು ಹೃದಯಾಘಾತದಿಂದಾಗಿರಬಹುದು ಎಂದು ಶಂಕಿಸಲಾಗಿದೆ.
Suresh Belagere
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ವಯಸ್ಸಿನ ಭೇದವಿಲ್ಲದೆ ಹೆಚ್ಚುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಇದಕ್ಕೆ ಮತ್ತೊಂದು ಆಘಾತಕಾರಿ ಉದಾಹರಣೆಯಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಕೇವಲ 4 ವರ್ಷದ ಪುಟ್ಟ ಬಾಲಕನೊಬ್ಬ ತೀವ್ರ ಎದೆನೋವಿನಿಂದ ಮೃತಪಟ್ಟಿರುವ ದುರದೃಷ್ಟಕರ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಅವರ ಪುತ್ರ ವೈಷ್ಣವ್ (4) ಮೃತಪಟ್ಟ ಬಾಲಕ. ಮಗು ಇದ್ದಕ್ಕಿದ್ದಂತೆ ತೀವ್ರವಾದ ಎದೆ ಉರಿಯಿಂದ ಬಳಲಲಾರಂಭಿಸಿದೆ. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಮಗು ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ. ಮಗುವಿನ ಸಾವಿಗೆ ನಿಖರವಾದ ಕಾರಣ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲವಾದರೂ, ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದು ಹೃದಯಾಘಾತದಿಂದಾಗಿರಬಹುದು ಎಂದು ಶಂಕಿಸಲಾಗಿದೆ.
More news from ಕರ್ನಾಟಕ and nearby areas
- ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ವಯಸ್ಸಿನ ಭೇದವಿಲ್ಲದೆ ಹೆಚ್ಚುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಇದಕ್ಕೆ ಮತ್ತೊಂದು ಆಘಾತಕಾರಿ ಉದಾಹರಣೆಯಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಕೇವಲ 4 ವರ್ಷದ ಪುಟ್ಟ ಬಾಲಕನೊಬ್ಬ ತೀವ್ರ ಎದೆನೋವಿನಿಂದ ಮೃತಪಟ್ಟಿರುವ ದುರದೃಷ್ಟಕರ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಅವರ ಪುತ್ರ ವೈಷ್ಣವ್ (4) ಮೃತಪಟ್ಟ ಬಾಲಕ. ಮಗು ಇದ್ದಕ್ಕಿದ್ದಂತೆ ತೀವ್ರವಾದ ಎದೆ ಉರಿಯಿಂದ ಬಳಲಲಾರಂಭಿಸಿದೆ. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಮಗು ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ. ಮಗುವಿನ ಸಾವಿಗೆ ನಿಖರವಾದ ಕಾರಣ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲವಾದರೂ, ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದು ಹೃದಯಾಘಾತದಿಂದಾಗಿರಬಹುದು ಎಂದು ಶಂಕಿಸಲಾಗಿದೆ.1
- ರಾಜ್ಯಾಧ್ಯಕ್ಷರಾದ ಹೆಚ್ ಎಂ ರೇವಣ್ಣ ಅವರು ಚಿತ್ರದುರ್ಗದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದೀಕಾರದ ಕಚೇರಿಗೆ ಭೇಟಿ ನೀಡಿದ್ದಾರೆ. ಬುಧವಾರ ಮಧ್ಯಾಹ್ನ 12.15 ಕ್ಕೆ ಕಚೇರಿಗೆ ಭೇಟಿ ನೀಡಿದ ಹೆಚ್ ಎಂ ರೇವಣ್ಣ ಅವರು ಪರಿಶೀಲನೆ ನಡೆಸಿದರು. ಇದೇ ವೇಳೆ, ಕಾಂಗ್ರೆಸ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದೀಕಾರದ ವತಿಯಿಂದ ಹೆಚ್ ಎಂ ರೇವಣ್ಣ ಅವರನ್ನು ಸನ್ಮಾನಿಸಿ ಶುಭಕೋರಲಾಯಿತು.1
- ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸಮಾಜ ಸೇವಕ ಹಾಗೂ ಕೂಡ್ಲಿಗಿ ಸ್ನೇಹಿತರ ಬಳಗದ ಅಧ್ಯಕ್ಷರಾದ ಡಾ. ಬಿ. ಅಬ್ದುಲ್ ರಹಮಾನ್ ನಾಗರಿಕರಿಗೆ ಸರ್ಕಾರಿ ಶಾಲೆಗಳತ್ತ ಒಲವು ತೋರಬೇಕೆಂದು ಕರೆ ನೀಡಿದರು. ಜೂನ್ 16ರಂದು ಪಟ್ಟಣದ ಶ್ರೀ ಬಂಡ್ರಿಲಕ್ಷ್ಮಿ ಚಿನ್ನಪ್ಪಶೆಟ್ಟಿ 7ನೇ ವಾರ್ಡ್ ಸರ್ಕಾರಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಮತ್ತು ನಾಡಿನ ಗಣ್ಯರೆಲ್ಲರೂ ಸರ್ಕಾರಿ ಶಾಲೆಗಳಲ್ಲಿ ಓದಿದವರೇ ಆಗಿದ್ದಾರೆ ಎಂದು ತಿಳಿಸಿದರು. ದೊಡ್ಡ ದೊಡ್ಡ ಸರ್ಕಾರಿ ಹುದ್ದೆಗಳಲ್ಲಿರುವ ಹೆಚ್ಚಿನ ಗಣ್ಯರು ಸರ್ಕಾರಿ ಶಾಲಾ ವಿದ್ಯಾರ್ಥಿಗಳಾಗಿದ್ದರು ಎಂದು ಅವರು ಹೇಳಿದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ, ಅದು ಸರ್ಕಾರಿ ಶಾಲೆಯಲ್ಲಿ ಮಾತ್ರ ಸಾಧ್ಯ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟ ಮತ್ತು ಉನ್ನತ ಪದವಿಗಳಲ್ಲಿ ಮಹತ್ತರ ಸಾಧನೆ ಮಾಡಿದವರು ಸರ್ಕಾರಿ ಶಾಲಾ ಶಿಕ್ಷಕರಾಗಿ ಸೇವೆಗೆ ನೇಮಕವಾಗಿರುತ್ತಾರೆ. ಆದರೆ ಖಾಸಗಿ ಶಾಲೆಗಳ ಕಟ್ಟಡಗಳು ಬೃಹದಾಕಾರವಾಗಿದ್ದರೂ, ಅಲ್ಲಿನ ಶಿಕ್ಷಕರು ಸರ್ಕಾರಿ ಶಿಕ್ಷಕರಂತೆ ವ್ಯಾಸಂಗದಲ್ಲಿ ಸಾಧನೆ ಮಾಡಿರುವ ಸಾಧ್ಯತೆ ಕಡಿಮೆ ಎಂದು ಡಾ. ಅಬ್ದುಲ್ ರಹಮಾನ್ ಅಭಿಪ್ರಾಯಪಟ್ಟರು. ನಾಗರಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ ಅವರು, ಮೌಲಾನ ಅಬೂ ಕಲಾಂ ಆಜಾದ್ ಅವರ “ಸರ್ಕಾರಿ ಶಾಲೆ ಕೊಟ್ಟಂತಹ ಗುಣಮಟ್ಟದ ಶಿಕ್ಷಣ ಸಮಾಜದಲ್ಲಿ ಕ್ರಾಂತಿಯನ್ನು ಉಂಟುಮಾಡುತ್ತದೆ” ಎಂಬ ಸಂದೇಶವನ್ನು ವಿವರಿಸಿದರು. ಅಲ್ಲದೆ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಆದರ್ಶಗಳು ಮತ್ತು ಜೀವನಗಾಥೆ ಕುರಿತು ಸಂಕ್ಷಿಪ್ತ ಪರಿಚಯ ನೀಡಿದ ಅವರು, “ವಿದ್ಯೆ ಎಂಬ ಹುಲಿಯ ಹಾಲನ್ನು ಕುಡಿದವರು, ಅನ್ಯಾಯದ ವಿರುದ್ಧ ಒಂದು ದಿನ ಹುಲಿಯಂತೆ ಘರ್ಜಿಸಲೇಬೇಕು” ಎಂಬ ನುಡಿಯ ಸಾರಾಂಶವನ್ನು ವಿವರಿಸಿದರು. ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳ ಏಳ್ಗೆಗೆ ಶ್ರಮಿಸಬೇಕೆಂದು ನಾಗರಿಕರಲ್ಲಿ ಕೋರಿದರು. ಮುಖ್ಯ ಶಿಕ್ಷಕರಾದ ಬಿ. ಮಾರೇಶ ಅವರು ಮಾತನಾಡಿ, ವಿದ್ಯಾಭ್ಯಾಸ ಕೇವಲ ಉದ್ಯೋಗಕ್ಕಾಗಿ ಅಥವಾ ಪ್ರಮಾಣಪತ್ರಗಳಿಗೆ ಮಾತ್ರ ಸೀಮಿತವಾಗಬಾರದು. ಸಮಾಜ ಸೇವೆ, ನಾಡು-ನುಡಿ ಸೇವೆಗಳಿಗೂ ಜೀವನದ ಅಮೂಲ್ಯ ವೇಳೆಯನ್ನು ವಿನಿಯೋಗಿಸಬೇಕು ಎಂದರು. ಇದಕ್ಕೆ ಸ್ನೇಹಿತರ ಬಳಗದ ಅಬ್ದುಲ್ ರಹಮಾನ್ ಅವರೇ ಸಾಕ್ಷಿಯಾಗಿದ್ದಾರೆ, ಅವರು ಉದ್ಯೋಗದಲ್ಲಿ ವ್ಯಾಪಾರೋದ್ಯಮಿಯಾಗಿದ್ದು, ತಮ್ಮ ಜೀವನದ ಉಳಿದರ್ಧ ಸಮಯವನ್ನು ಸಮಾಜ ಸೇವೆಗೆ ಮೀಸಲಿರಿಸಿದ್ದಾರೆ ಮತ್ತು ಸಮಾಜ ಸೇವಕರೆಂದು ಪ್ರಸಿದ್ಧರಾಗಿದ್ದಾರೆ ಎಂದು ತಿಳಿಸಿದರು. ಅವರು ಸ್ನೇಹಿತರ ಬಳಗ ಸಂಘಟನೆಯಡಿಯಲ್ಲಿ ಕಳೆದ 9 ವರ್ಷಗಳಿಂದ ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಪಠ್ಯ ಸಾಮಗ್ರಿಗಳು, ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸುವುದು, SSLC, PUC ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಲು ಉಚಿತ ತರಬೇತಿ ಶಿಬಿರಗಳ ಆಯೋಜನೆ, ಮತ್ತು ಮೋಟಿವೇಷನಲ್ ಸ್ಪೀಚ್ಗಳನ್ನು ನೀಡುತ್ತಿದ್ದಾರೆ ಎಂದು ವಿವರಿಸಿದರು. ಇದರ ಜೊತೆಗೆ, ಉಚಿತ ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರಗಳು ಮತ್ತು ಉಚಿತ ಸೀಳು ತುಟಿ, ಸೀಳು ಅಂಗುಳ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಸಹ ಹಮ್ಮಿಕೊಳ್ಳುತ್ತಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ನಾಡು, ನುಡಿ, ದೇಶ ಸೇವೆಗಳ ಹೋರಾಟಗಳಲ್ಲಿ ಭಾಗವಹಿಸಿ, ಸತತ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆಂದು ವಿದ್ಯಾರ್ಥಿಗಳಿಗೆ ಮಾರೇಶ ತಿಳಿಸಿದರು. ಈ ಕಾರ್ಯಕ್ರಮದಲ್ಲಿ SDMC ಅಧ್ಯಕ್ಷರಾದ ಸಿರಬಿ ರಾಘವೇಂದ್ರ, ಶಾಲಾ ಶಿಕ್ಷಕರಾದ ಶ್ರೀಮತಿ ಲಕ್ಷ್ಮೀದೇವಿ, ಮಲ್ಲಮ್ಮ, ಅರುಣ, ನೇತ್ರಾವತಿ, ಹನುಮಂತಪ್ಪ ಉಪಸ್ಥಿತರಿದ್ದರು. ನೂರಾರು ವಿದ್ಯಾರ್ಥಿಗಳು ಸಹ ಭಾಗವಹಿಸಿದ್ದರು.4
- ಚಿಕ್ಕಮಗಳೂರು ಜಿಲ್ಲೆಯ ಕುಂಟಿನಮಡು ಸರ್ಕಾರಿ ಪ್ರೌಢಶಾಲೆಗೆ ದಿನೇಶ್ ಕೆ.ಪಿ. ಅವರು ನೂತನ ಮುಖ್ಯಶಿಕ್ಷಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಶಾಲಾ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಅವರಿಗೆ ಎಸ್ಡಿಎಂಸಿ ಅಧ್ಯಕ್ಷ ಜಗದೀಶ್, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಮತ್ತು ಅವರ ಸದಸ್ಯರು, ಗ್ರಾಮಸ್ಥರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.1
- ನ್ಯೂ ತೈಪೆ ಸಿಟಿ ಅಥ್ಲೆಟಿಕ್ಸ್ ಓಪನ್ 2026ರಲ್ಲಿ ಭಾರತದ ಅಥ್ಲೀಟ್ ಶೈಲಿ ಸಿಂಗ್ ಅವರು 6.24 ಮೀಟರ್ ದೂರ ಜಿಗಿದು ಚಿನ್ನದ ಪದಕ ಗೆಲ್ಲುವ ಮೂಲಕ ದೇಶಕ್ಕೆ ಹೆಮ್ಮೆಯ ಕ್ಷಣವನ್ನು ತಂದಿದ್ದಾರೆ. ಈ ಸಾಧನೆಯು ಕಠಿಣ ಪರಿಶ್ರಮ, ನಿರಂತರ ಅಭ್ಯಾಸ ಮತ್ತು ಅಚಲ ಆತ್ಮವಿಶ್ವಾಸದ ಫಲಿತಾಂಶವಾಗಿದೆ. ಅಂತರರಾಷ್ಟ್ರೀಯ ಕ್ರೀಡಾ ವೇದಿಕೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಮತ್ತೊಮ್ಮೆ ಹಾರಿಸುವ ಮೂಲಕ ಶೈಲಿ ಸಿಂಗ್ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅವರ ಈ ಮಹತ್ವದ ಸಾಧನೆಯು ದೇಶದ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದ್ದು, ಕನಸುಗಳನ್ನು ನನಸಾಗಿಸಲು ಶ್ರಮ ಮತ್ತು ಸಮರ್ಪಣೆ ಎಷ್ಟು ಮುಖ್ಯ ಎಂಬುದನ್ನು ಸಾಬೀತುಪಡಿಸಿದೆ. ಮರಳಿನ ಅಂಗಳದಲ್ಲಿ ಮೂಡಿದ ಈ ಚಿನ್ನದ ಹೆಜ್ಜೆಗುರುತು ಭಾರತದ ಕ್ರೀಡಾ ಇತಿಹಾಸದಲ್ಲಿ ಸುವರ್ಣ ಅಧ್ಯಾಯವಾಗಿ ದಾಖಲಾಗಿದೆ, ಮತ್ತು ಅವರ ಸಾಧನೆಗೆ ದೇಶಾದ್ಯಂತ ಅಭಿನಂದನೆಗಳು ವ್ಯಕ್ತವಾಗಿವೆ.1
- ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮತ್ತು ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರು ಬಸವಣ್ಣನನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ಕರೆ ನೀಡಿದರು. ನಗರಂಗೆರೆ ಗ್ರಾಮ ಪಂಚಾಯತಿ ಹಿತರಕ್ಷಣಾ ವೇದಿಕೆ ಮತ್ತು ಮೂರ್ತಿ ಡೆವಲಪರ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಿಪ್ಪೇಸ್ವಾಮಿ ಅವರು, ಯುದ್ಧ ನಿಲ್ಲಿಸದೆ ಹಠಕ್ಕೆ ಬಿದ್ದಿರುವ ದೇಶಗಳಿಗೆ ಬುದ್ಧನ 'ವೈರಿಯಿಂದ ವೈರಿ ನಾಶವಾಗುವುದಿಲ್ಲ. ಆ ವೈರಿಯಿಂದ ವೈರಿ ನಾಶವಾಗುತ್ತದೆ' ಎಂಬ ಸತ್ಯ ಸಂದೇಶವನ್ನು ತಲುಪಿಸಬೇಕು ಎಂದು ಹೇಳಿದರು. ಅಲ್ಲದೆ, ಲೋಕ ಬದುಕಿನ ಧರ್ಮವನ್ನು ಸಾರುವ ಶಿವಶರಣರ ವಚನಗಳನ್ನು ವಿಶ್ವ ಮಟ್ಟದಲ್ಲಿ ಪ್ರಚಾರ ಮಾಡಬೇಕು ಎಂದೂ ಪ್ರತಿಪಾದಿಸಿದರು. ಅಂಬೇಡ್ಕರ್ ಜಯಂತಿಯು ವರ್ಣರಂಜಿತ ಮತ್ತು ಡಿಜೆ ಸಂಭ್ರಮದಲ್ಲಿ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಪ್ರತಿದಿನದ ವ್ಯವಹಾರಿಕ ಕ್ಷೇತ್ರ ಸೇರಿ ಆಡಳಿತ ಮತ್ತು ವಿದೇಶಾಂಗ ವ್ಯವಹಾರದಲ್ಲಿ ಉಲ್ಲೇಖಿತರಾಗುವ ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ನಿತ್ಯವೂ ಜಯಂತಿ ಇದ್ದಂತೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ತಾಪಂ ಮಾಜಿ ಸದಸ್ಯ ಯಲ್ಲಪ್ಪ, ನ್ಯಾಯ ಬೆಲೆ ಅಂಗಡಿ ಮಾಲೀಕ ಎಚ್. ಚನ್ನಿಗರಾಮಯ್ಯ, ಸಾಮಾಜಿಕ ಹೋರಾಟಗಾರ ಎಸ್.ಎಸ್. ಸೈಯದ್, ನಿವೃತ್ತ ಶಿಕ್ಷಕ ಕೃಷ್ಣಮೂರ್ತಿ ಸೇರಿದಂತೆ ಹಲವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಪ್ರಗತಿಪರ ರೈತರಿಗೆ ಸನ್ಮಾನ ಮಾಡಲಾಯಿತು. ಗ್ರಾಪಂ ಮಾಜಿ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ, ಬಿ.ಸಿ. ವೆಂಕಟೇಶ್ ಮೂರ್ತಿ, ಬಿ.ಸಿ. ಸತೀಶ್ ಕುಮಾರ್, ಕಾರ್ತಿಕ್, ಅಜ್ಮತ್ ವುಲ್ಲಾ, ಪಿ. ಚಿದಾನಂಯ್ಯ, ಎಂ. ಶೇಖರಪ್ಪ, ಕೆ. ರುದ್ರಮುನಿ, ಲಕ್ಷ್ಮಿಪುರ ರಾಜಶೇಖರಪ್ಪ, ದ್ಯಾಮಣ್ಣ, ನಾಗರಾಜ್, ಲೋಹಿತ್, ಎಂ.ಎನ್. ಮೃತ್ಯುಂಜಯ, ವಿಷ್ಣುಮೂರ್ತಿ ರಾವ್, ಗುತ್ತಿಗೆದಾರ ಜಗದೀಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.1
- ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ ಹಾಗೂ ಗೃಹ ಇಲಾಖೆಯ ಸಹಯೋಗದೊಂದಿಗೆ, ಶಿರಾ ನಗರ ಪೊಲೀಸ್ ಠಾಣೆಯು ಇಂದು ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ 'ಮನೆ ಮನೆ ಪೊಲೀಸ್' ಎಂಬ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮವನ್ನು 'ಮನೆ ಮನೆ ಪೊಲೀಸ್ - ನಮ್ಮ ನಡೆ ಜಾಗೃತಿ ಕಡೆ' ಎಂಬ ಘೋಷವಾಕ್ಯದೊಂದಿಗೆ ಆರಂಭಿಸಲಾಗಿದೆ.1