ಗೂಳೂರು ಶಾಲೆಗೆ ಜಿಲ್ಲಾಧಿಕಾರಿ ಜಿ.ಪ್ರಭು ಭೇಟಿ:ಎಸ್.ಎಸ್.ಎಲ್.ಸಿ.ಮಕ್ಕಳೊಂದಿಗೆ ಸಂವಾದ ಬಾಗೇಪಲ್ಲಿ:-ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಗುರುವಾರ ಬಾಗೇಪಲ್ಲಿ ತಾಲ್ಲೂಕು ಗೂಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ 10ನೇ ತರಗತಿ ಮಕ್ಕಳು ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಯಾವ ರೀತಿಯಾಗಿ ವಾರ್ಷಿಕ ಪರೀಯ ಎದುರಿಸಬೇಕು ಎಂಬುವುದರ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿದರು. ಹತ್ತನೇ ತರಗತಿಯು ತಮ್ಮ ಜೀವನ ಒಂದು ಮಹತ್ವದ ಹಂತವಾಗಿದೆ. ಕೆಲ ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಅಂದ್ರೆ ಭಯ ಪಡುತ್ತಿದ್ದು, ವಿದ್ಯಾರ್ಥಿಗಳು ಭಯಪಡುವ ಅವಶ್ಯಕತೆ ಇಲ್ಲ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಅದೇ ರೀತಿ ಸಮಾಜ ವಿಜ್ಞಾನ ವಿಷಯದ ಬಗ್ಗೆ ಸ್ವತಃ ಜಿಲ್ಲಾಧಿಕಾರಿ ಜಿ.ಪ್ರಭು ಅವರು ವಿದ್ಯಾರ್ಥಿಗಳಿಗೆ ವಿವರಿಸಿ ಸುಲಭವಾಗಿ ಅಂಕಗಳನ್ನು ಗಳಿಸುವ ವಿಧಾನದ ಬಗ್ಗೆ ವಿವರಿಸಿದರು. ವಿಧ್ಯಾರ್ಥಿಗಳು ಮುಂದಿನ ಭವಿಷ್ಯದಲ್ಲಿ ಉನ್ನತ ಮಟ್ಟಕೆ ತಲುಪಲು ಒಂದು ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು ಹಾಗೂ ಬಿ ಆರ್ ಅಂಬೇಡ್ಕರ್,ಎ.ಪಿ.ಜೆ ಅಬ್ದುಲ್ ಕಲಾಂ ರೀತಿಯಲ್ಲಿ ಗಾಂಧೀಜಿ ರವರ, ಭಗತ್ ಸಿಂಗ್ ಕುವೆಂಪು ರವರ ಆದರ್ಶ ಗಳನ್ನು ಓದಿ ಅವರ ರೀತಿಯಲ್ಲಿ ಕಷ್ಟ ಪಟ್ಟು ಓದಿ ಉತ್ತಮ ಫಲಿತಾಂಶ ಪಡಿದರೆ ಮುಂದಿನ ಜೀವನ ಚನ್ನಾಗಿ ಇರುತ್ತದೆ ಮಾನ್ಯ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ವ್ಯಾಸಂಗ ಮಾಡಿದ ಶಾಲೆಯಾಗಿದ್ದು ಈ ಶಾಲೆಗೆ ಘನತೆ,ಗೌರವ ಇದೆ ಸಹ ಮಹನೀಯರ ಹಾಗೂ ಶಾಸಕರ ಆದರ್ಶವನ್ನು ಕಟ್ಟಿಕೊಂಡು ಪ್ರಸಕ್ತ ಸಾಲಿನಲ್ಲಿ ಉತ್ತಮ ಫಲಿತಾಂಶ ತರಲು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎನ್.ಬಾಸ್ಕರ್ ,ಉಪವಿಭಾಗ ಅಧಿಕಾರಿಗಳಾದ ಡಿ.ಹೆಚ್.ಅಶ್ವಿನ್, ತಹಶಿಲ್ದಾರ್ ಮನೀಷಾ ಎನ್ ಪತ್ರಿ,ಚೇಳೂರು ತಹಶಿಲ್ದಾರ್ ಶ್ವೇತ, ಬಿಇಓ ಎನ್ ವೆಂಕಟೇಶಪ್ಪ, ದೈಹಿಕ ಶಿಕ್ಷಣ ಪರವೀಕ್ಷಕ ಅಧಿಕಾರಿಗಳಾದ ರಂಗನಾಥ, ಮುಖ್ಯ ಶಿಕ್ಷಕ ವಿ.ವಿ.ವೆಂಕಟೇಶ್,ಸಾಕ್ಷರತೆ ಶಿವಪ್ಪ,ಗೂಳೂರು ಪಿಡಿಓ ಕೃಷ್ಣ ಮೂರ್ತಿ,ಹಾಗೂ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಮಕ್ಕಳು ಹಾಜರಿದ್ದರು.
ಗೂಳೂರು ಶಾಲೆಗೆ ಜಿಲ್ಲಾಧಿಕಾರಿ ಜಿ.ಪ್ರಭು ಭೇಟಿ:ಎಸ್.ಎಸ್.ಎಲ್.ಸಿ.ಮಕ್ಕಳೊಂದಿಗೆ ಸಂವಾದ ಬಾಗೇಪಲ್ಲಿ:-ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಗುರುವಾರ ಬಾಗೇಪಲ್ಲಿ ತಾಲ್ಲೂಕು ಗೂಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ 10ನೇ ತರಗತಿ ಮಕ್ಕಳು ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಯಾವ ರೀತಿಯಾಗಿ ವಾರ್ಷಿಕ ಪರೀಯ ಎದುರಿಸಬೇಕು ಎಂಬುವುದರ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿದರು. ಹತ್ತನೇ ತರಗತಿಯು ತಮ್ಮ ಜೀವನ ಒಂದು ಮಹತ್ವದ ಹಂತವಾಗಿದೆ. ಕೆಲ ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಅಂದ್ರೆ ಭಯ ಪಡುತ್ತಿದ್ದು, ವಿದ್ಯಾರ್ಥಿಗಳು ಭಯಪಡುವ ಅವಶ್ಯಕತೆ ಇಲ್ಲ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಅದೇ ರೀತಿ ಸಮಾಜ ವಿಜ್ಞಾನ
ವಿಷಯದ ಬಗ್ಗೆ ಸ್ವತಃ ಜಿಲ್ಲಾಧಿಕಾರಿ ಜಿ.ಪ್ರಭು ಅವರು ವಿದ್ಯಾರ್ಥಿಗಳಿಗೆ ವಿವರಿಸಿ ಸುಲಭವಾಗಿ ಅಂಕಗಳನ್ನು ಗಳಿಸುವ ವಿಧಾನದ ಬಗ್ಗೆ ವಿವರಿಸಿದರು. ವಿಧ್ಯಾರ್ಥಿಗಳು ಮುಂದಿನ ಭವಿಷ್ಯದಲ್ಲಿ ಉನ್ನತ ಮಟ್ಟಕೆ ತಲುಪಲು ಒಂದು ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು ಹಾಗೂ ಬಿ ಆರ್ ಅಂಬೇಡ್ಕರ್,ಎ.ಪಿ.ಜೆ ಅಬ್ದುಲ್ ಕಲಾಂ ರೀತಿಯಲ್ಲಿ ಗಾಂಧೀಜಿ ರವರ, ಭಗತ್ ಸಿಂಗ್ ಕುವೆಂಪು ರವರ ಆದರ್ಶ ಗಳನ್ನು ಓದಿ ಅವರ ರೀತಿಯಲ್ಲಿ ಕಷ್ಟ ಪಟ್ಟು ಓದಿ ಉತ್ತಮ ಫಲಿತಾಂಶ ಪಡಿದರೆ ಮುಂದಿನ ಜೀವನ ಚನ್ನಾಗಿ ಇರುತ್ತದೆ ಮಾನ್ಯ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ವ್ಯಾಸಂಗ
ಮಾಡಿದ ಶಾಲೆಯಾಗಿದ್ದು ಈ ಶಾಲೆಗೆ ಘನತೆ,ಗೌರವ ಇದೆ ಸಹ ಮಹನೀಯರ ಹಾಗೂ ಶಾಸಕರ ಆದರ್ಶವನ್ನು ಕಟ್ಟಿಕೊಂಡು ಪ್ರಸಕ್ತ ಸಾಲಿನಲ್ಲಿ ಉತ್ತಮ ಫಲಿತಾಂಶ ತರಲು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎನ್.ಬಾಸ್ಕರ್ ,ಉಪವಿಭಾಗ ಅಧಿಕಾರಿಗಳಾದ ಡಿ.ಹೆಚ್.ಅಶ್ವಿನ್, ತಹಶಿಲ್ದಾರ್ ಮನೀಷಾ ಎನ್ ಪತ್ರಿ,ಚೇಳೂರು ತಹಶಿಲ್ದಾರ್ ಶ್ವೇತ, ಬಿಇಓ ಎನ್ ವೆಂಕಟೇಶಪ್ಪ, ದೈಹಿಕ ಶಿಕ್ಷಣ ಪರವೀಕ್ಷಕ ಅಧಿಕಾರಿಗಳಾದ ರಂಗನಾಥ, ಮುಖ್ಯ ಶಿಕ್ಷಕ ವಿ.ವಿ.ವೆಂಕಟೇಶ್,ಸಾಕ್ಷರತೆ ಶಿವಪ್ಪ,ಗೂಳೂರು ಪಿಡಿಓ ಕೃಷ್ಣ ಮೂರ್ತಿ,ಹಾಗೂ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಮಕ್ಕಳು ಹಾಜರಿದ್ದರು.
- ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.1
- Post by Suresh Belagere1
- ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.1
- ಭೀಕರ ಬಸ್ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದ ಬಸ್, ಐವರು ಸ್ಥಳದಲ್ಲೇ ಸಾವು! #JB_News_Kannada1
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.1
- ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು. “ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.1
- ಬೆಂಗಳೂರಿನ ಡಿ.ಜೆ. ಹಳ್ಳಿಯ ಕನಕನಗರದಲ್ಲಿ ಯುವತಿ ಹಾಗೂ ಇಬ್ಬರು ಯುವಕರ ಮೇಲೆ ಸ್ಥಳೀಯರ ಗುಂಪು ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂಗಡಿ ಮುಂಭಾಗದಲ್ಲಿ ನಿಂತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿ, ಅದು ಕೆಲವೇ ಕ್ಷಣಗಳಲ್ಲಿ ಹೊಡೆದಾಟಕ್ಕೆ ತಿರುಗಿದೆ ಎಂದು ತಿಳಿದುಬಂದಿದೆ. ಏಳೆಂಟು ಮಂದಿಯ ತಂಡ ಮೂವರ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆಗೆ ಸಂಬಂಧಿಸಿದ ವಿಡಿಯೋ ಹರಿದಾಡುತ್ತಿದ್ದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.1
- ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಏಪ್ರಿಲ್ 18ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣಾ ಶಿಭಿರ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಏಪ್ರಿಲ್ 18ರಂದು ನಗರದ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ “ಉಚಿತ ಮೂತ್ರಕೋಶ ತಪಾಸಣಾ ಶಿಬಿರ” ನಡೆಯಲಿದೆ.1
- Post by Suresh Belagere1