ಬರಗಾಲದ ಹಣೆಪಟ್ಟಿ ಹೊತ್ತು, ಕೇವಲ ಮಳೆಯನ್ನೇ ನೆಚ್ಚಿಕೊಂಡಿರುವ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಈ ಬಾರಿಯೂ ಮತ್ತೆ ಬರಗಾಲ ಒಕ್ಕರಿಸಿಕೊಂಡಿದೆ. ಮುಂಗಾರು ಮಳೆಯ ವೈಫಲ್ಯದಿಂದಾಗಿ ಗ್ರಾಮೀಣ ಭಾಗದಲ್ಲಿ ಸೂರ್ಯಕಾಂತಿ ಹಾಗೂ ರಾಗಿ ಬೆಳೆಗಳು ಸಂಪೂರ್ಣವಾಗಿ ಒಣಗುತ್ತಿದ್ದು, ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ತಾಲೂಕಿನ ರೈತರು ತೀವ್ರ ಕಂಗಾಲಾಗಿದ್ದಾರೆ. ಮಳೆಯ ಕೊರತೆಯಿಂದಾಗಿ ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳು ತೀವ್ರ ಬಿಸಿಲಿಗೆ ಒಣಗಿ ಹೋಗುತ್ತಿವೆ. ತಾಲೂಕಿನ ಕಾನ ಹೊಸಳ್ಳಿ ಹೋಬಳಿಯಲ್ಲಿ ಅಲ್ಪಸ್ವಲ್ಪ ಬಿದ್ದ ಮಳೆಗೆ ಸೂರ್ಯಕಾಂತಿ ಮತ್ತು ಶೇಂಗಾ ಬಿತ್ತನೆ ಮಾಡಲಾಗಿದ್ದರೂ, ಬೆಳೆ ಉಳಿಸಿಕೊಳ್ಳಲು ರೈತರು ಪ್ರತಿದಿನ ಆಕಾಶದ ಕಡೆಗೆ ಮುಖ ಮಾಡಿ ಕಾಯುವಂತಾಗಿದೆ. ಇತ್ತ ಗುಡೇಕೋಟೆ ಹೊಸಳ್ಳಿ ಹೋಬಳಿಯ ಪ್ರಮುಖ ಬೆಳೆಯಾದ ಶೇಂಗಾವನ್ನು ಬಿತ್ತನೆ ಮಾಡಲಾಗದ ಸ್ಥಿತಿಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವರುಣನ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಕನಸುಗಳೆಲ್ಲ ನುಚ್ಚುನೂರಾಗಿದ್ದು, ರಾಜ್ಯ ಸರ್ಕಾರ ತಕ್ಷಣವೇ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.
ಬರಗಾಲದ ಹಣೆಪಟ್ಟಿ ಹೊತ್ತು, ಕೇವಲ ಮಳೆಯನ್ನೇ ನೆಚ್ಚಿಕೊಂಡಿರುವ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಈ ಬಾರಿಯೂ ಮತ್ತೆ ಬರಗಾಲ ಒಕ್ಕರಿಸಿಕೊಂಡಿದೆ. ಮುಂಗಾರು ಮಳೆಯ ವೈಫಲ್ಯದಿಂದಾಗಿ ಗ್ರಾಮೀಣ ಭಾಗದಲ್ಲಿ ಸೂರ್ಯಕಾಂತಿ ಹಾಗೂ ರಾಗಿ ಬೆಳೆಗಳು ಸಂಪೂರ್ಣವಾಗಿ ಒಣಗುತ್ತಿದ್ದು, ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ತಾಲೂಕಿನ ರೈತರು ತೀವ್ರ ಕಂಗಾಲಾಗಿದ್ದಾರೆ. ಮಳೆಯ ಕೊರತೆಯಿಂದಾಗಿ ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳು ತೀವ್ರ ಬಿಸಿಲಿಗೆ ಒಣಗಿ ಹೋಗುತ್ತಿವೆ. ತಾಲೂಕಿನ ಕಾನ ಹೊಸಳ್ಳಿ ಹೋಬಳಿಯಲ್ಲಿ ಅಲ್ಪಸ್ವಲ್ಪ ಬಿದ್ದ ಮಳೆಗೆ ಸೂರ್ಯಕಾಂತಿ ಮತ್ತು ಶೇಂಗಾ ಬಿತ್ತನೆ ಮಾಡಲಾಗಿದ್ದರೂ, ಬೆಳೆ ಉಳಿಸಿಕೊಳ್ಳಲು ರೈತರು ಪ್ರತಿದಿನ ಆಕಾಶದ ಕಡೆಗೆ ಮುಖ ಮಾಡಿ ಕಾಯುವಂತಾಗಿದೆ. ಇತ್ತ ಗುಡೇಕೋಟೆ ಹೊಸಳ್ಳಿ ಹೋಬಳಿಯ ಪ್ರಮುಖ ಬೆಳೆಯಾದ ಶೇಂಗಾವನ್ನು ಬಿತ್ತನೆ ಮಾಡಲಾಗದ ಸ್ಥಿತಿಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವರುಣನ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಕನಸುಗಳೆಲ್ಲ ನುಚ್ಚುನೂರಾಗಿದ್ದು, ರಾಜ್ಯ ಸರ್ಕಾರ ತಕ್ಷಣವೇ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.
- ಬರಗಾಲದ ಹಣೆಪಟ್ಟಿ ಹೊತ್ತು, ಕೇವಲ ಮಳೆಯನ್ನೇ ನೆಚ್ಚಿಕೊಂಡಿರುವ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಈ ಬಾರಿಯೂ ಮತ್ತೆ ಬರಗಾಲ ಒಕ್ಕರಿಸಿಕೊಂಡಿದೆ. ಮುಂಗಾರು ಮಳೆಯ ವೈಫಲ್ಯದಿಂದಾಗಿ ಗ್ರಾಮೀಣ ಭಾಗದಲ್ಲಿ ಸೂರ್ಯಕಾಂತಿ ಹಾಗೂ ರಾಗಿ ಬೆಳೆಗಳು ಸಂಪೂರ್ಣವಾಗಿ ಒಣಗುತ್ತಿದ್ದು, ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ತಾಲೂಕಿನ ರೈತರು ತೀವ್ರ ಕಂಗಾಲಾಗಿದ್ದಾರೆ. ಮಳೆಯ ಕೊರತೆಯಿಂದಾಗಿ ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳು ತೀವ್ರ ಬಿಸಿಲಿಗೆ ಒಣಗಿ ಹೋಗುತ್ತಿವೆ. ತಾಲೂಕಿನ ಕಾನ ಹೊಸಳ್ಳಿ ಹೋಬಳಿಯಲ್ಲಿ ಅಲ್ಪಸ್ವಲ್ಪ ಬಿದ್ದ ಮಳೆಗೆ ಸೂರ್ಯಕಾಂತಿ ಮತ್ತು ಶೇಂಗಾ ಬಿತ್ತನೆ ಮಾಡಲಾಗಿದ್ದರೂ, ಬೆಳೆ ಉಳಿಸಿಕೊಳ್ಳಲು ರೈತರು ಪ್ರತಿದಿನ ಆಕಾಶದ ಕಡೆಗೆ ಮುಖ ಮಾಡಿ ಕಾಯುವಂತಾಗಿದೆ. ಇತ್ತ ಗುಡೇಕೋಟೆ ಹೊಸಳ್ಳಿ ಹೋಬಳಿಯ ಪ್ರಮುಖ ಬೆಳೆಯಾದ ಶೇಂಗಾವನ್ನು ಬಿತ್ತನೆ ಮಾಡಲಾಗದ ಸ್ಥಿತಿಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವರುಣನ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಕನಸುಗಳೆಲ್ಲ ನುಚ್ಚುನೂರಾಗಿದ್ದು, ರಾಜ್ಯ ಸರ್ಕಾರ ತಕ್ಷಣವೇ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.1
- ಕೂಡ್ಲಿಗಿ ತಾಲೂಕಿನಲ್ಲಿ ಸೋಲಾರ್ ವಿಂಡೋ ಪವರ್ ಕಂಪನಿಗಳ ಹಾವಳಿ ಮಿತಿ ಮೀರಿದ್ದು, ಬಹುತೇಕ ಕಂಪನಿಗಳಿಂದ ಸರ್ಕಾರಕ್ಕೆ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ಹಣ ವಂಚನೆಯಾಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಜಿಲ್ಲಾಡಳಿತ, ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಇಲಾಖೆಗಳಿಂದ ಸೂಕ್ತ ತನಿಖೆಯಾಗಬೇಕೆಂದು ಪ್ರವಾಸಿಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹೋರಾಟಗಾರರು ಆಗ್ರಹಿಸಿದ್ದಾರೆ. ಈ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ನೂರಾರು ರೈತರಿಗೆ ಅನ್ಯಾಯ ಎಸಗಿವೆ. ಈ ಹಗರಣದಲ್ಲಿ ಅನೇಕ ಸ್ಥಳೀಯ ಆಡಳಿತದ ಅಧಿಕಾರಿಗಳು, ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಿನ್ನಬಾರದ ಹೇಸಿಗೆ ತಿಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕಾಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಆದ್ದರಿಂದ ಇಡಿ, ಲೋಕಾಯುಕ್ತ, ಸಿಬಿಐ, ಸಿಒಡಿ, ಎಸಿಬಿ ಮತ್ತು ಆದಾಯ ತೆರಿಗೆ ಇಲಾಖೆಗಳ ಉನ್ನತಾಧಿಕಾರಿಗಳು ಸ್ವಯಂ ದೂರು ದಾಖಲಿಸಿಕೊಂಡು, ಮೊದಲು ತಹಶೀಲ್ದಾರರು ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳ ಆದಾಯದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ. ಒಂದು ವೇಳೆ ತನಿಖೆ ನಡೆಸದಿದ್ದರೆ ಅಗತ್ಯ ಸಾಕ್ಷ್ಯಾಧಾರಗಳ ಸಮೇತ ಕಾನೂನಾತ್ಮಕ ಹೋರಾಟ ನಡೆಸುವುದರ ಜೊತೆಗೆ ಎಲ್ಲಾ ಮಾಧ್ಯಮಗಳ ಹಾಗೂ ಪತ್ರಿಕೆಗಳ ಕೇಂದ್ರ ಕಚೇರಿಗಳಿಗೆ ದೂರು ನೀಡಲಾಗುವುದು ಎಂದು ಎಚ್ಚರಿಸಲಾಗಿದೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ದಲಿತ ಮುಖಂಡ ಸಂತೋಷಕುಮಾರ, ವಕೀಲ ಹಾಗೂ ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ಹೋರಾಟಗಾರರು, ರೈತರು ಉಪಸ್ಥಿತರಿದ್ದರು.1
- ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಹೆಸರು ಅಜರಾಮರವಾಗಿದೆ. ಆದರೆ ಕುಕನೂರು ಪಟ್ಟಣದಲ್ಲಿರುವ ಅವರದೇ ಹೆಸರಿನ ಗಾಂಧಿನಗರಕ್ಕೆ ಇಂದಿಗೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಅಲ್ಲಿನ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ 12ನೇ ವಾರ್ಡ್ನ ಗಾಂಧಿನಗರದಲ್ಲಿ ಚರಂಡಿಗಳು ತುಂಬಿ ಹರಿಯುತ್ತಿದ್ದು, ಕಸಕಡ್ಡಿಗಳೆಲ್ಲ ಮನೆಗಳ ಬಾಗಿಲಿಗೆ ಬಂದು ನಿಲ್ಲುತ್ತಿವೆ. ಇದರಿಂದಾಗಿ ನಿವಾಸಿಗಳು ಮೂಗು ಮುಚ್ಚಿಕೊಂಡು ವಾಸಿಸುವಂತಾಗಿದ್ದು, ವಿವಿಧ ರೋಗರುಜಿನಗಳಿಗೆ ತುತ್ತಾಗುವ ಭೀತಿ ಎದುರಾಗಿದೆ. ಚರಂಡಿ ಮಾರ್ಗಗಳಲ್ಲಿ ಅನಧಿಕೃತವಾಗಿ ಅಕ್ರಮ ಕಟ್ಟಡಗಳು ನಿರ್ಮಾಣಗೊಂಡಿರುವುದೇ ಈ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಈ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಚರಂಡಿ ನೀರು ಸುಗಮವಾಗಿ ಹರಿದು ಹೋಗಲು ದಾರಿ ಕಲ್ಪಿಸಿಕೊಡುವಂತೆ 12ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಅಧಿಕಾರಿಗಳು ಗಾಂಧಿನಗರಕ್ಕೆ ಸ್ವಾತಂತ್ರ್ಯ ಸಿಗದ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ವತಿಯಿಂದ ಸ್ವಚ್ಛತೆ ಮತ್ತು ಸಾರ್ವಜನಿಕರ ಆರೋಗ್ಯಕ್ಕಾಗಿ ಸಾಕಷ್ಟು ಹಣ ಬಿಡುಗಡೆಯಾಗುತ್ತಿದ್ದರೂ, ತಾಲೂಕು ಕೇಂದ್ರವಾದ ಪಟ್ಟಣದಲ್ಲಿಯೇ ಇಂತಹ ದುಸ್ಥಿತಿ ಇದೆ ಎಂದರೆ ಇನ್ನು ಹಳ್ಳಿಗಳ ಪಾಡೇನು ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಸ್ವಚ್ಛತೆಯ ಕೊರತೆಯ ಜೊತೆಗೆ ಗಾಂಧಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದ್ದು, ಸರಿಯಾದ ಸಮಯಕ್ಕೆ ನೀರು ಬಾರದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೇವಲ ಮತ ಬ್ಯಾಂಕ್ಗಾಗಿ ಚುನಾವಣೆ ಸಮಯದಲ್ಲಿ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು, ತಮ್ಮ ಮತಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸ್ವಲ್ಪಮಟ್ಟಿಗಾದರೂ ತಿಳಿದುಕೊಂಡಿರಬೇಕು ಎಂದು ವಾರ್ಡಿನ ನಿವಾಸಿಯೊಬ್ಬರು ಆಕ್ರೋಶ ಹೊರಹಾಕಿದ್ದಾರೆ. ಈ ವರದಿಯನ್ನಾದರೂ ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಗಾಂಧಿನಗರಕ್ಕೆ ಸ್ವಚ್ಛತೆಯ ಸ್ವಾತಂತ್ರ್ಯವನ್ನು ಕಲ್ಪಿಸಿಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. (ವರದಿ: ಚನ್ನಯ್ಯ ಹಿರೇಮಠ, ಕುಕನೂರು)4
- ಬಳ್ಳಾರಿಯ ಮೂಲ ನಿವಾಸಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಅವರಿಗೆ ಮತದಾನದ ಹಕ್ಕು ನಿರಾಕರಿಸಲಾಗುತ್ತಿದೆ ಎಂದು ಕರ್ನಾಟಕ ಚರ್ಮೋದ್ಯಮ ಅಭಿವೃದ್ಧಿ ನಿಗಮ (ಲಿಡ್ಕರ್) ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ದಾಖಲೆಗಳನ್ನು ಪ್ರದರ್ಶಿಸಿದ ಅವರು, ಬಿಜೆಪಿ ಎಸ್ಐಆರ್ (SIR) ನೆಪದಲ್ಲಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುತ್ತಿದೆ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ. ಬಳ್ಳಾರಿಯ ಮೂಲ ನಿವಾಸಿಗಳಿಗೆ ತಕ್ಷಣವೇ ನ್ಯಾಯ ಒದಗಿಸಬೇಕು ಮತ್ತು ಅವರ ಮತದಾನದ ಹಕ್ಕನ್ನು ಖಾತರಿಪಡಿಸಬೇಕು ಎಂದು ಅವರು ಜಿಲ್ಲಾಡಳಿತ ಹಾಗೂ ಚುನಾವಣಾ ಅಧಿಕಾರಿಗಳಿಗೆ ಬಲವಾಗಿ ಆಗ್ರಹಿಸಿದ್ದಾರೆ.1
- ಕಾಂಕ್ರೀಟ್ ಜಂಗಲ್ನ ಯಾಂತ್ರಿಕ ಬದುಕಿನ ಮಧ್ಯೆ ಸಿಲುಕಿ ಧೂಳು, ವಾಹನಗಳ ಕರ್ಕಶ ಸದ್ದಿನಿಂದ ಬೇಸತ್ತಿರುವ ಚಿತ್ರದುರ್ಗದ ನಗರವಾಸಿಗಳಿಗೆ ಅಲ್ಲಿನ ನಗರ ಪ್ರಾಧಿಕಾರವು 'ಆರೋಗ್ಯ ಭಾಗ್ಯ' ಕಲ್ಪಿಸಿದೆ. ಜನರ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯನ್ನೇ ಪ್ರಧಾನ ಆಶಯವಾಗಿಟ್ಟುಕೊಂಡು ನಗರದ ಪ್ರಮುಖ ವಲಯಗಳಲ್ಲಿ ಅತ್ಯಾಧುನಿಕ ಉದ್ಯಾನವನಗಳನ್ನು (High-Tech Parks) ಯಶಸ್ವಿಯಾಗಿ ಅಭಿವೃದ್ಧಿಪಡಿಸಲಾಗಿದೆ. ಈ ಪಾರ್ಕ್ಗಳು ಕೇವಲ ಹಸಿರು ಗಿಡ-ಮರಗಳ ತಾಣವಾಗಿ ಉಳಿಯದೆ, ಸಾರ್ವಜನಿಕರಿಗೆ ಕೊಂಚ ನೆಮ್ಮದಿ ಮತ್ತು ಉಲ್ಲಾಸ ನೀಡುವ ನೆಚ್ಚಿನ ಆರೋಗ್ಯ ಕೇಂದ್ರಗಳಾಗಿ ಬದಲಾಗುತ್ತಿವೆ. ಪ್ರಾಧಿಕಾರವು ಜನರಿಲ್ಲದ ಯಾವುದೋ ಮೂಲೆಯಲ್ಲಿ ಪಾರ್ಕ್ ನಿರ್ಮಿಸುವ ಬದಲು, ನಿವಾಸಿಗಳಿಗೆ ತೀರಾ ಹತ್ತಿರವಾಗುವ ಹಾಗೂ ಸಂಜೆ ವೇಳೆ ಸುಲಭವಾಗಿ ಬಂದು ಹೋಗಬಹುದಾದ ಪ್ರಮುಖ ಬಡಾವಣೆಗಳ ಆಯಕಟ್ಟಿನ ಸ್ಥಳಗಳನ್ನು ಗುರುತಿಸಿ ಅಭಿವೃದ್ಧಿಪಡಿಸಿದೆ. ಇಲ್ಲಿ ಧೂಳು ಮತ್ತು ಕಿರಿಕಿರಿ ಮುಕ್ತ ಹೈಟೆಕ್ ವಾಕಿಂಗ್ ಪಾತ್, ಉಚಿತ ದೈಹಿಕ ಕಸರತ್ತಿಗೆ ಸುಸಜ್ಜಿತ 'ಓಪನ್ ಜಿಮ್', ಚಿಣ್ಣರ ಮನರಂಜನೆಗೆ ಬಣ್ಣ ಬಣ್ಣದ ಉಯ್ಯಾಲೆಗಳು ಹಾಗೂ ಹಿರಿಯ ನಾಗರಿಕರು ವಿಶ್ರಾಂತಿ ಪಡೆಯಲು ಆಕರ್ಷಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಜನನಿಬಿಡ ಪ್ರದೇಶಗಳ ಮಧ್ಯೆಯೇ ಇಂತಹ ಪ್ರಶಾಂತ ಹಸಿರು ದ್ವೀಪಗಳನ್ನು ನಿರ್ಮಿಸಿರುವುದು ನಗರವಾಸಿಗಳ ಸಂಜೆಯ ಹರಟೆ ಮತ್ತು ನಡಿಗೆಗೆ ಹೊಸ ಕಳೆಯನ್ನು ತಂದಿದೆ. ದುಬಾರಿ ಜಿಮ್ಗಳ ಶುಲ್ಕ ಭರಿಸಲು ಸಾಧ್ಯವಾಗದ ಮಧ್ಯಮ ವರ್ಗದ ಜನರಿಗೆ ಉದ್ಯಾನವನದಲ್ಲಿರುವ ಅತ್ಯಾಧುನಿಕ 'ಓಪನ್ ಜಿಮ್' ಉಪಕರಣಗಳು ವರದಾನವಾಗಿವೆ. ಬೆಳಿಗ್ಗೆ ಮತ್ತು ಸಂಜೆ ವೇಳೆ ಯುವಕ-ಯುವತಿಯರು ಹಾಗೂ ಹಿರಿಯ ನಾಗರಿಕರು ಪ್ರಕೃತಿಯ ಶುದ್ಧ ಗಾಳಿಯ ಮಧ್ಯೆ ಉಚಿತವಾಗಿ ವರ್ಕೌಟ್ ಮಾಡುತ್ತಿದ್ದಾರೆ. ಅಲ್ಲದೆ, ರಸ್ತೆ ಬದಿಯ ಧೂಳು ಮತ್ತು ವೇಗದ ವಾಹನಗಳ ಆತಂಕವಿಲ್ಲದೆ ಸುರಕ್ಷಿತವಾಗಿ ಹೆಜ್ಜೆ ಹಾಕಲು ಅನುಕೂಲಕರವಾದ ಪರಿಸರ ಸ್ನೇಹಿ ಹಾಗೂ ಉತ್ತಮ ಗ್ರಿಪ್ ಉಳ್ಳ 'ಹೈಟೆಕ್ ವಾಕಿಂಗ್ ಪಾತ್' ನಿರ್ಮಿಸಲಾಗಿದ್ದು, ಮಂಡಿ ನೋವಿನ ಸಮಸ್ಯೆ ಇರುವ ಹಿರಿಯರಿಗೂ ಸಹ ಇದು ನಿರಾಳತೆ ನೀಡಿದೆ.1
- ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡುಮುಣುಗು ಗ್ರಾಮದಲ್ಲಿ ನಿವೃತ್ತ ಶಿಕ್ಷಕ ದಿ. ಎಚ್. ಗವಿಯಪ್ಪ ಅವರ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ 'ಗುಂಡುಮುಣುಗು ಪ್ರೀಮಿಯರ್ ಲೀಗ್' ಕ್ರಿಕೆಟ್ ಪಂದ್ಯಾವಳಿಗೆ ಊರಿನ ಮುಖಂಡರ ನೇತೃತ್ವದಲ್ಲಿ ಅಧಿಕೃತ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯ ವೃದ್ಧಿಯಾಗಲಿದ್ದು, ಇಂತಹ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ತಿಳಿಸಿದರು. ಸೋಲು-ಗೆಲುವನ್ನು ಲೆಕ್ಕಿಸದೆ ಕ್ರೀಡಾಪಟುಗಳು ಆಟದಲ್ಲಿ ಸಕ್ರಿಯವಾಗಿ ಭಾಗಿಯಾಗಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸರ್ವ ಸದಸ್ಯರು, ವಿವಿಧ ಮುಖಂಡರು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.1
- ಸಾಮಾಜಿಕ ಮಾಧ್ಯಮಗಳಲ್ಲಿ ಆಘಾತಕಾರಿ ವೈರಲ್ ವಿಡಿಯೋವೊಂದು ಭಾರಿ ಸಂಚಲನ ಸೃಷ್ಟಿಸುತ್ತಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಚಲಿಸುತ್ತಿದ್ದ ಮೋಟರ್ಸೈಕಲ್ನಿಂದ ಪೋಷಕರು ಕೆಳಗೆ ಬಿದ್ದ ನಂತರವೂ, ಅದರ ಮೇಲಿದ್ದ ಸಣ್ಣ ಮಗು ಒಂಟಿಯಾಗಿಯೇ ಸುಮಾರು 500 ಮೀಟರ್ಗಳಷ್ಟು ದೂರ ಸಾಗಿದೆ ಎಂದು ವರದಿಯಾಗಿದೆ. ಈ ಆಘಾತಕಾರಿ ದೃಶ್ಯಗಳು ಲಕ್ಷಾಂತರ ಜನರನ್ನು ದಿಗ್ಭ್ರಮೆಗೊಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸದ್ಯ ಈ ವಿವರಣೆಯು ವೈರಲ್ ವಿಡಿಯೋ ಮತ್ತು ಪ್ರಾಥಮಿಕ ವರದಿಗಳನ್ನು ಆಧರಿಸಿದ್ದು, ವಿಡಿಯೋದಲ್ಲಿನ ದಾವೆಗಳನ್ನು ಅಧಿಕೃತವಾಗಿ ಅಥವಾ ಸ್ವತಂತ್ರವಾಗಿ ಪರಿಶೀಲಿಸಲಾಗಿಲ್ಲ.1