Shuru
Apke Nagar Ki App…
ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾಗುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಮರಳಿ ಪಕ್ಷಕ್ಕೆ ಬರುವುದು ಅಥವಾ ಬಿಡುವುದು ಮುಂದಿನ ವಿಷಯ ಎಂದ ಅವರು, ತಾವು ಮೊನ್ನೆ ಬಿಜೆಪಿಗೆ ಮತ ಹಾಕಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ತಾವು ಯಾವ ಪಕ್ಷದ ಶಾಸಕರಾಗಿದ್ದಾರೋ ಅದೇ ಪಕ್ಷಕ್ಕೆ ಮತ ಹಾಕಿರುವುದಾಗಿ ಅವರು ತಿಳಿಸಿದ್ದಾರೆ. ತಮ್ಮ ಈ ನಡೆಯಿಂದಾಗಿ ಒಂದಿಷ್ಟು ಜನರ ಎದೆ ಒಡೆದು ಕೊಂಡಿದೆ ಎಂದು ಲೇವಡಿ ಮಾಡಿರುವ ಯತ್ನಾಳ್, ಕಾಂಗ್ರೆಸ್ನವರು ಏಳೆಂಟು ಕೋಟಿ ರೂಪಾಯಿ ಹಾಗೂ ಅಭಿವೃದ್ಧಿಗೆ 50 ಕೋಟಿ ರೂಪಾಯಿ ನೀಡುತ್ತಾರೆ ಎಂದು ಕೆಲವರು ತಿಳಿದುಕೊಂಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ, ಕೆಲವು ಬಿಜೆಪಿಗರು ಮತ ಹಾಕಿದ್ದಾರೆ, ಆದರೆ ತಮಗೆ ಬಂದಿರುವ ಮಾಹಿತಿ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರೇ ಹೀಗೆ ಮತ ಹಾಕಿಸಿರಬಹುದು ಎಂದು ಸುದ್ದಿ ಇದೆ ಎಂದು ಆರೋಪಿಸುವ ಮೂಲಕ ಶಾಸಕ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ತೀವ್ರವಾಗಿ ಗುಡುಗಿದ್ದಾರೆ.
Suresh Chinagundi
ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾಗುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಮರಳಿ ಪಕ್ಷಕ್ಕೆ ಬರುವುದು ಅಥವಾ ಬಿಡುವುದು ಮುಂದಿನ ವಿಷಯ ಎಂದ ಅವರು, ತಾವು ಮೊನ್ನೆ ಬಿಜೆಪಿಗೆ ಮತ ಹಾಕಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ತಾವು ಯಾವ ಪಕ್ಷದ ಶಾಸಕರಾಗಿದ್ದಾರೋ ಅದೇ ಪಕ್ಷಕ್ಕೆ ಮತ ಹಾಕಿರುವುದಾಗಿ ಅವರು ತಿಳಿಸಿದ್ದಾರೆ. ತಮ್ಮ ಈ ನಡೆಯಿಂದಾಗಿ ಒಂದಿಷ್ಟು ಜನರ ಎದೆ ಒಡೆದು ಕೊಂಡಿದೆ ಎಂದು ಲೇವಡಿ ಮಾಡಿರುವ ಯತ್ನಾಳ್, ಕಾಂಗ್ರೆಸ್ನವರು ಏಳೆಂಟು ಕೋಟಿ ರೂಪಾಯಿ ಹಾಗೂ ಅಭಿವೃದ್ಧಿಗೆ 50 ಕೋಟಿ ರೂಪಾಯಿ ನೀಡುತ್ತಾರೆ ಎಂದು ಕೆಲವರು ತಿಳಿದುಕೊಂಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ, ಕೆಲವು ಬಿಜೆಪಿಗರು ಮತ ಹಾಕಿದ್ದಾರೆ, ಆದರೆ ತಮಗೆ ಬಂದಿರುವ ಮಾಹಿತಿ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರೇ ಹೀಗೆ ಮತ ಹಾಕಿಸಿರಬಹುದು ಎಂದು ಸುದ್ದಿ ಇದೆ ಎಂದು ಆರೋಪಿಸುವ ಮೂಲಕ ಶಾಸಕ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ತೀವ್ರವಾಗಿ ಗುಡುಗಿದ್ದಾರೆ.
More news from ಕರ್ನಾಟಕ and nearby areas
- ವಿಜಯಪುರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸುವಂತಹ ವಿದ್ಯಮಾನವೊಂದು ನಡೆದಿದ್ದು, ಯತ್ನಾಳ್ ಅವರು "ನಾಳೆಯಿಂದ ನಾನೇ ಸಂಚಾರ ಮಾಡ್ತೇನೆ" ಎಂದು ಘೋಷಿಸಿದ್ದಾರೆ. ಯತ್ನಾಳ್ ಅವರ ಈ ನೇರ ಹೇಳಿಕೆಯು ವಿಜಯಪುರದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಹಾಗೂ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.1
- ವಿಜಯಪುರದ ಜೆಡಿಎಸ್ ಕಚೇರಿಯಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ನಂಡಿಗೇರಿ ಅವರು ಅಧಿಕಾರ ವಹಿಸಿಕೊಂಡಿದ್ದು, ಅವರಿಗೆ ಪಕ್ಷದ ಧ್ವಜವನ್ನು ನೀಡಿ ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲೆಯ ಜೆಡಿಎಸ್ನ ಏಕೈಕ ಶಾಸಕರಾದ ರಾಜುಗೌಡ ಪಾಟೀಲ್ ಅವರು, ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇವರಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ್ ಅವರು ಪಕ್ಷದ ಕಾರ್ಯಕರ್ತರಿಗೆ ಅತ್ಯುತ್ತಮ ಸಲಹೆಗಳನ್ನು ನೀಡಿದರು. ಎಸ್ಐಆರ್ (SIR) ಪ್ರಕ್ರಿಯೆಯಲ್ಲಿ ಕಾರ್ಯಕರ್ತರು ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು, ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಪಕ್ಷಕ್ಕೆ ಒಳ್ಳೆಯ ಹೆಸರು ತರುವಂತಹ ಕೆಲಸವನ್ನು ಮಾಡಬೇಕು ಎಂದು ಅವರು ಕರೆ ನೀಡಿದರು. ಈ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ನಂಡಿಗೇರಿ ಅವರೊಂದಿಗೆ ಬಿಲ್ವರ್ ಕಾಜಿ, ಜಿಲ್ಲಾ ಉಪಾಧ್ಯಕ್ಷ ಚೌದರಿ, ಮುದ್ದೇಬಿಹಾಳ ತಾಲೂಕು ಕಾರ್ಯಕರ್ತರಾದ ಪ್ರಭುಗೌಡ ಪಾಟೀಲ್, ಮುತ್ತು ಮಾದಿನಾಳ, ಅರವಿಂದ್ ಕಾಶಿನ ಕುಂಟಿ, ಈರಣ್ಣ ತಾರನಾಳ, ಶ್ರೀಮತಿ ಮಾದೇವಿ ಪಾಟೀಲ್ ಸೇರಿದಂತೆ ಎಲ್ಲಾ ತಾಲೂಕು ಕಾರ್ಯಕರ್ತರು ಭಾಗವಹಿಸಿದ್ದರು. ಇವರೊಂದಿಗೆ ಹಿರಿಯರು ಹಾಗೂ ಬಸವನಬಾಗೇವಾಡಿ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿ ಅಪ್ಪುಗೌಡ ಬಿ. ಪಾಟೀಲ್ ಮತ್ತು ಸಾವಿರಾರು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.1
- ಬೆಳಗಾವಿ ಜಿಲ್ಲೆಯ ಅಥಣಿಯ ಹಿಪ್ಪರಗಿ ಡ್ಯಾಮ್ ಗೇಟ್ ಅನುದಾನ ಬಿಡುಗಡೆಯಲ್ಲಿನ ಕ್ರೇಡಿಟ್ ವಾರ್ ಬಿಟ್ಟು, ಅಭಿವೃದ್ದಿ ಕೆಲಸ ಮಾಡಿ ಎಂದು ಸೋಮಯ್ಯ ಮಠಪತಿ ಅವರು ಅಭಿಮತ ತಿಳಿಸಿದ್ದಾರೆ. ಈ ಅನುದಾನ ಬಿಡುಗಡೆಯ ಕ್ರೆಡಿಟ್ ಪಡೆಯುವ ಜಟಾಪಟಿಯನ್ನು ಬಿಟ್ಟು, ಕೇವಲ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಬೇಕೆಂದು ಸೋಮಯ್ಯ ಅವರು ಆಗ್ರಹಿಸಿದ್ದಾರೆ.1
- ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸುಣಧೋಳ ಗ್ರಾಮದಲ್ಲಿರುವ ಸರ್ಕಾರಿ ಪಶು ಆಸ್ಪತ್ರೆ ಮುಂಭಾಗದಲ್ಲಿ ಸಾರ್ವಜನಿಕರು ಬಹಿರಂಗ ಶೌಚ ಮಾಡುತ್ತಿದ್ದು, ಇದರಿಂದ ಆಸ್ಪತ್ರೆಯ ಸಿಬ್ಬಂದಿ, ಪಶು ವೈದ್ಯಾಧಿಕಾರಿಗಳು ಹಾಗೂ ಜಾನುವಾರುಗಳನ್ನು ಕರೆತರುವ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯ ಮುಂಭಾಗವು ತೀವ್ರ ದುರ್ವಾಸನೆಯಿಂದ ಕೂಡಿದ್ದು, ಚಿಕಿತ್ಸೆಗಾಗಿ ಬರುವ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಒಳಗೆ ಪ್ರವೇಶಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರಿಗೆ ಹಲವು ಬಾರಿ ಮನವಿ ಮಾಡಿದರೂ ಇದುವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪಶು ವೈದ್ಯಾಧಿಕಾರಿಗಳ ಪ್ರಕಾರ, ಆಸ್ಪತ್ರೆಯ ಸುತ್ತ ಕಾಂಪೌಂಡ್ ಗೋಡೆ ನಿರ್ಮಿಸಿ, ಮುಂಭಾಗದಲ್ಲಿ ಗೇಟ್ ಅಳವಡಿಸಿದರೆ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದಾಗಿದೆ. ಪ್ರಸ್ತುತ ನೈರ್ಮಲ್ಯದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಆರೋಗ್ಯಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಆದ್ದರಿಂದ, ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ, ಆಸ್ಪತ್ರೆಯ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲು ಮತ್ತು ಸ್ವಚ್ಛತೆಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿ ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.1
- ಬಾಗಲಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ರಾಜಕೀಯ ನಿಲುವುಗಳನ್ನು ಟೀಕಿಸಿದರು. ರಾಹುಲ್ ಗಾಂಧಿಯವರು ಹಲವು ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯದ ಮುಂದೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ರಾಜಕೀಯ ನಡೆಸಬೇಕು ಎಂದು ಆಗ್ರಹಿಸಿದರು. ಚಂದ್ರಯಾನ ಯೋಜನೆ ಎರಡನೇ ಪ್ರಯತ್ನದಲ್ಲೇ ಯಶಸ್ಸು ಸಾಧಿಸಿ ದೇಶದ ಕೀರ್ತಿಯನ್ನು ಹೆಚ್ಚಿಸಿತು ಎಂದು ನೆನಪಿಸಿದ ಸಚಿವರು, ಆದರೆ ಕಾಂಗ್ರೆಸ್ ಮಾತ್ರ ಚುನಾವಣೆಗಳಲ್ಲಿ ಪದೇಪದೇ ಸೋಲುತ್ತಿದ್ದು, ಜನರು ಅವರ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ಗೆ ಜನರ ಬೆಂಬಲ ಕಡಿಮೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಸರಿಯಾದ ಮಾರ್ಗದಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಾಗದೆ ಆ ಪಕ್ಷವು ಶಾಶ್ವತವಾಗಿ ವಿರೋಧ ಪಕ್ಷದಲ್ಲೇ ಉಳಿಯುವ ಪರಿಸ್ಥಿತಿ ಎದುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.1
- Post by Iranna Tarnal1
- ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದಲ್ಲಿನ ಎಲ್ಲಾ ಕಾಲುವೆಗಳನ್ನು ಸ್ವಚ್ಛಗೊಳಿಸಿ ನೀರು ಬಿಡಬೇಕೆಂದು ಶಾಸಕ ಲಕ್ಷ್ಮಣ ಸವದಿ ಅವರಿಗೆ ಸೋಮಯ್ಯಾ ಮಠಪತಿ ಆಗ್ರಹಿಸಿದ್ದಾರೆ. ಕ್ಷೇತ್ರದಲ್ಲಿರುವ ಕಾಲುವೆಗಳನ್ನು ಸ್ವಚ್ಛಗೊಳಿಸಿ ನೀರು ಹರಿಸುವ ಕೆಲಸವನ್ನು ಶಾಸಕರೇ ಮಾಡಬೇಕಿತ್ತು ಎಂದು ಸೋಮಯ್ಯಾ ಮಠಪತಿ ಅವರು ಒತ್ತಾಯಿಸಿದ್ದಾರೆ.1
- ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಕೆಲವರು ಉದ್ದೇಶಪೂರ್ವಕವಾಗಿ ಆರ್ಎಸ್ಎಸ್ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಮಾಧ್ಯಮಗಳಲ್ಲಿ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಆರ್ಎಸ್ಎಸ್ ಬಗ್ಗೆ ಈಗಾಗಲೇ ಸಂಘದ ಪ್ರಮುಖರು ಸ್ಪಷ್ಟನೆ ನೀಡಿರುವುದರಿಂದ ಮತ್ತೆ ಮತ್ತೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದ ಅವರು, ಸಂಘವು ತನ್ನ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದು ಇಂತಹ ಹೇಳಿಕೆಗಳಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು. ಯಾರು ಏನೇ ಹೇಳಿದರೂ ಪ್ರತಿಯೊಂದಕ್ಕೂ ಉತ್ತರಿಸುವ ಅಗತ್ಯವಿಲ್ಲ ಮತ್ತು ಸಂಘದ ಸಿದ್ಧಾಂತ ಹಾಗೂ ಕಾರ್ಯಚಟುವಟಿಕೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದರು.1
- ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಕ್ರಾಸ್ ಸಮೀಪ ನಡೆದ ಜಗಳದಲ್ಲಿ 35 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಾಹಿತಿ ಪ್ರಕಾರ, ಬಾಬುರಾವ್ ಮಹಾದೇವ ಜಮಾದಾರ ಅವರೊಂದಿಗೆ ಬಂದಿದ್ದ ಸೋಲಾಪುರ ಮೂಲದ ಅಪ್ಪಾಸಾಬ ಮಕಾಶಿ ಹಾಗೂ ಹಲಸಂಗಿ ಗ್ರಾಮದ ವಿಕಾಸ್ ಮೀನಾಕ್ಷಿ ತಳವಾರ ಅವರ ನಡುವೆ ಮೊದಲು ಮಾತಿನ ಚಕಮಕಿ ನಡೆದಿದೆ. ಈ ಮಾತಿನ ಚಕಮಕಿಯು ಬಳಿಕ ಜಗಳಕ್ಕೆ ತಿರುಗಿದ್ದು, ಜಗಳದ ವೇಳೆ ನಡೆದ ಹಲ್ಲೆಯಿಂದಾಗಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಘಟನೆಯಿಂದಾಗಿ ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಂತಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ತನಿಖೆಯ ನಂತರವಷ್ಟೇ ಘಟನೆಗೆ ನಿಖರವಾದ ಕಾರಣ ಏನೆಂಬುದು ತಿಳಿಯಬೇಕಿದೆ.1