ಮುಂದಿನ ತಿಂಗಳಿನಿಂದ ‘ಇಂದಿರಾ ಕಿಟ್’ ವಿತರಣೆಗೆ ಸಿದ್ಧತೆ ಅನ್ನಭಾಗ್ಯ ಅಕ್ಕಿಯ ಜೊತೆಗೆ ಕಿಟ್ ವಿತರಣೆ | ₹6 ಸಾವಿರ ಕೋಟಿ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿ ಬೆಂಗಳೂರು : ರಾಜ್ಯ ಸರ್ಕಾರ ಮುಂದಿನ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಅಕ್ಕಿಯೊಂದಿಗೆ ‘ಇಂದಿರಾ ಕಿಟ್’ ವಿತರಣೆ ಆರಂಭಿಸಲು ಸಿದ್ಧತೆ ನಡೆಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ K. H. Muniyappa ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದಿರಾ ಕಿಟ್ ವಿತರಣೆಗೆ ಸಂಬಂಧಿಸಿದಂತೆ ಸುಮಾರು ₹6 ಸಾವಿರ ಕೋಟಿ ಮೊತ್ತದ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಈ ವಾರದಲ್ಲೇ ಅರ್ಹ ಬಿಡ್ದಾರರಿಗೆ ಟೆಂಡರ್ ನೀಡುವ ಸಾಧ್ಯತೆ ಇದೆ” ಎಂದು ಹೇಳಿದರು. ರಾಜ್ಯದ ಬಡ ಹಾಗೂ ಅರ್ಹ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಅಕ್ಕಿಯ ಜೊತೆಗೆ ಅಗತ್ಯ ದಿನಸಿ ವಸ್ತುಗಳನ್ನು ಒಳಗೊಂಡ ಕಿಟ್ ವಿತರಿಸುವ ಉದ್ದೇಶ ಸರ್ಕಾರದದ್ದಾಗಿದೆ ಎಂದು ತಿಳಿಸಿದರು. ಈ ವೇಳೆ ಅಂತರರಾಷ್ಟ್ರೀಯ ತೈಲ ಹಾಗೂ ಅನಿಲ ಸಮಸ್ಯೆಗಳ ಕುರಿತೂ ಪ್ರತಿಕ್ರಿಯಿಸಿದ ಸಚಿವರು, “ಕೇಂದ್ರ ಸರ್ಕಾರ ಮಿತ್ರ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಉಳಿಸಿಕೊಂಡಿದ್ದರೆ ಇಂಧನ ಸಮಸ್ಯೆ ಇಷ್ಟು ಗಂಭೀರವಾಗುತ್ತಿರಲಿಲ್ಲ” ಎಂದು ಟೀಕಿಸಿದರು. “ಹೋಟೆಲ್ ಮಾಲೀಕರು ಲಕ್ಷಾಂತರ ರೂಪಾಯಿ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿವಿಧ ರಾಜ್ಯಗಳಿಂದ ಬಂದು ಇಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರೂ ಸಮಸ್ಯೆ ಎದುರಿಸುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.
ಮುಂದಿನ ತಿಂಗಳಿನಿಂದ ‘ಇಂದಿರಾ ಕಿಟ್’ ವಿತರಣೆಗೆ ಸಿದ್ಧತೆ ಅನ್ನಭಾಗ್ಯ ಅಕ್ಕಿಯ ಜೊತೆಗೆ ಕಿಟ್ ವಿತರಣೆ | ₹6 ಸಾವಿರ ಕೋಟಿ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿ ಬೆಂಗಳೂರು : ರಾಜ್ಯ ಸರ್ಕಾರ ಮುಂದಿನ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಅಕ್ಕಿಯೊಂದಿಗೆ ‘ಇಂದಿರಾ ಕಿಟ್’ ವಿತರಣೆ ಆರಂಭಿಸಲು ಸಿದ್ಧತೆ ನಡೆಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ K. H. Muniyappa ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದಿರಾ ಕಿಟ್ ವಿತರಣೆಗೆ ಸಂಬಂಧಿಸಿದಂತೆ ಸುಮಾರು ₹6 ಸಾವಿರ ಕೋಟಿ ಮೊತ್ತದ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಈ ವಾರದಲ್ಲೇ ಅರ್ಹ ಬಿಡ್ದಾರರಿಗೆ ಟೆಂಡರ್ ನೀಡುವ ಸಾಧ್ಯತೆ ಇದೆ” ಎಂದು ಹೇಳಿದರು. ರಾಜ್ಯದ ಬಡ ಹಾಗೂ ಅರ್ಹ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಅಕ್ಕಿಯ ಜೊತೆಗೆ ಅಗತ್ಯ ದಿನಸಿ ವಸ್ತುಗಳನ್ನು ಒಳಗೊಂಡ ಕಿಟ್ ವಿತರಿಸುವ ಉದ್ದೇಶ ಸರ್ಕಾರದದ್ದಾಗಿದೆ ಎಂದು ತಿಳಿಸಿದರು. ಈ ವೇಳೆ ಅಂತರರಾಷ್ಟ್ರೀಯ ತೈಲ ಹಾಗೂ ಅನಿಲ ಸಮಸ್ಯೆಗಳ ಕುರಿತೂ ಪ್ರತಿಕ್ರಿಯಿಸಿದ ಸಚಿವರು, “ಕೇಂದ್ರ ಸರ್ಕಾರ ಮಿತ್ರ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಉಳಿಸಿಕೊಂಡಿದ್ದರೆ ಇಂಧನ ಸಮಸ್ಯೆ ಇಷ್ಟು ಗಂಭೀರವಾಗುತ್ತಿರಲಿಲ್ಲ” ಎಂದು ಟೀಕಿಸಿದರು. “ಹೋಟೆಲ್ ಮಾಲೀಕರು ಲಕ್ಷಾಂತರ ರೂಪಾಯಿ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿವಿಧ ರಾಜ್ಯಗಳಿಂದ ಬಂದು ಇಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರೂ ಸಮಸ್ಯೆ ಎದುರಿಸುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.
- ಮುಂಚೆ ಇರುವ ಸಿದ್ದರಾಮಯ್ಯ ಅವರು ಈಗಿಲ್ಲ, ಅಧಿಕಾರಕ್ಕಾಗಿ ಏನೆಲ್ಲಾ ಸರ್ಕಸ್1
- ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ. ಕುಷ್ಟಗಿ:- ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕುಷ್ಟಗಿ ಪಟ್ಟಣದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ, ದ್ವೀತಿಯ ಮತ್ತು ಅತಿ ಹೆಚ್ಚು ಅಂಕಪಡೆದ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ವಿಧ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಕುಷ್ಟಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೆಂಕಪ್ಪ ವಾಲಿಕಾರ ತಿಳಿಸಿದರು. ಇಲ್ಲಿನ ಹಳೆ ಪ್ರವಾಸಿ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು 2025- 2026ನೇ ಸಾಲಿನ ಈ ವರ್ಷದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಮುದೇನೂರು ಗ್ರಾಮದಲ್ಲಿ ಹಮ್ಮಿಕೊಳ್ಳಬೇಕಾಗಿತ್ತು. ಕಾರಣಾಂತರಗಳಿಂದ ಮುದೇನೂರು ಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಆಗುವುದಿಲ್ಲ ಆದರೆ ಮುಂದಿನ ತಿಂಗಳಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳಿಂದ ಮತ್ತು ಎಲ್ಲಾ ಸದಸ್ಯರಿಂದ ಒಪ್ಪಿಗೆ ಪಡೆಯಲಾಗಿದೆ. ಮುಂದಿನ ದಿನಮಾನದಲ್ಲಿ ಯಾವ ಕಡೆ ಸಮ್ಮೇಳನ ನೆಡೆಸಿದರೆ ಸೂಕ್ತ ಆಗುತ್ತದೆ ಎಂಬ ತೀರ್ಮಾನ ತೆಗೆದುಕೊಂಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವದು ಎಂದರು. ಅದರಂತೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಸ್.ಎಸ್ಎಲ್.ಸಿ. ಮತ್ತು ಯುಪಿಸಿ ಮಕ್ಕಳಿಗೆ ವಿಶೇಷ ಸನ್ಮಾನ ಸಮಾರಂಭ ಏರ್ಪಡಿಸಿಲಾಗುತ್ತಿದೆ ಆದ್ದರಿಂದ ತಾಲೂಕಿನ ಪ್ರಥಮ, ದ್ವೀತಿಯ ಸ್ಥಾನದಲ್ಲಿ ಹಾಗೂ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನಿಸಲಾಗುವದು ಈ ಒಂದು ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಸಲಹೆ ಸಹಕಾರ ಬಹಳ ಅಗತ್ಯವಾಗಿದ್ದು ಈ ಒಂದು ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣೇಗೌಡ ಪಾಟೀಲ ಮಾತನಾಡಿ ಯಾವುದೇ ಕಾರ್ಯಕ್ರಮ ಮಾಡಬೇಕಾದರೆ ಮೊದಲು ಸೂಕ್ತ ತೀರ್ಮಾನ ತೆಗೆದುಕೊಂಡು ಸಭೆ ಸಮಾರಂಭ ಏರ್ಪಡಿಸಬೇಕಾಗುತ್ತದೆ ಈ ವರ್ಷದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುಷ್ಟಗಿ ತಾಲೂಕಿನಲ್ಲಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಆದರೆ ಪ್ರತಿಯೊಬ್ಬರ ಸಲಹೆ ಸಹಕಾರ ಅಗತ್ಯವಾಗಿದೆ ಸೂಕ್ತ ನಿರ್ಧಾರದೊಂದಿಗೆ ಜಿಲ್ಲಾ ಸಮ್ಮೇಳನ ನಡೆಸಲಾಗುವದು ಎಂಬ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶರಣಪ್ಪ ವಡಗೇರಿ, ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹನಮೇಶ ಗುಮಗೇರಾ, ರವೀಂದ್ರ ಬಾಕಳೆ, ಉಮೇಶ ಹಿರೇಮಠ, ಸಾಹಿತಿಗಳಾದ ಅಮರೇಗೌಡ ಪಾಟೀಲ ಜಾಲಿಹಾಳ, ದೇವರಾಜ ವಿಶ್ವ ಕರ್ಮ, ದೊಡ್ಡಪ್ಪ ಕೈಲವಾಡಗಿ, ಹ.ಯ.ಈಟಿಯವರ್, ಆರ್.ಕೆ.ಸುಬೇದಾರ, ವಿದ್ಯಾ ಕಂಪಾಪೂರಮಠ, ಎಸ್.ಜೆ.ಕಡೆಮನಿ, ಶ್ರೀನಿವಾಸ ಕಟ್ಲಿ, ನಿಂಗಪ್ಪ ಸಜ್ಜನ್, ಚನ್ನಪ್ಪ ಬಾವಿಮನಿ, ಸಂತೋಷ ತೋಟದ್, ಹನಮೇಶ ಶಾಖಾಪೂರ, ಕ.ಕಾ.ಪ.ಸ.ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಜ್ಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತ ಲಲಿತಮ್ಮ ಹಿರೇಮಠ ಇವರಿಗೆ ಸನ್ಮಾನಿಸಿ ಗೌರವಿಸಿದರು.2
- ಹೆಗಲಿಗೆ ಮಹಾಂತ ಜೋಳಿಗೆ ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದ ಶ್ರೀಗಳು ಇಳಕಲ್: ಮಹಾಂತ ಜೋಳಿಗೆಯ ಶಿವಶಿಲ್ಪಿ ಡಾ.ಮಹಾಂತ ಶ್ರೀಗಳ ೮ನೇ ಪುಣ್ಯಸ್ಮರಣೆ ನಿಮಿತ್ತ ತಾಲೂಕಿನ ಚಿಕ್ಕ ಕೊಡಗಲಿ ಗ್ರಾಮದಲ್ಲಿ ಗುರುಮಹಾಂತ ಶ್ರೀಗಳು ಹೆಗಲಿಗೆ ಮಹಾಂತ ಜೋಳಿಗೆ ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದರು. ಶರಣ ಸಿದ್ಧಾಂತ ವಿದ್ಯಾಪೀಠದಡಿ ಭಾನುವಾರ ಗ್ರಾಮದಲ್ಲಿ ಮಹಾಂತ ಜೋಳಿಗೆಯೊಂದಿಗೆ ಶ್ರೀಗಳು ಸಂಚಾರ ನಡೆಸಿದರು. ಮನೆ, ಮನೆಗೆ ತೆರಳಿ ಭಕ್ತರಿಗೆ ದುಶ್ಚಟಗಳನ್ನು ತ್ಯಜಿಸಲು ಸಲಹೆ ನೀಡಿದರು. ಅಲ್ಲದೇ ಕೆಲ ಯುವಕರು ಸ್ವ ಇಚ್ಛೆಯಿಂದ ದುಶ್ಚಟ ಬಿಡುವುದಾಗಿ ಹೇಳಿ ಮಹಾಂತ ಜೋಳಿಗೆ ಮೇಲೆ ಪ್ರಮಾಣ ಮಾಡಿದರು. "ಚಿಕ್ಕ ಕೊಡಗಲಿ ಗ್ರಾಮ ಭಕ್ತಿಯ ಬೀಡು. ಯುವಕರು ಸೇರಿದಂತೆ ಎಲ್ಲರೂ ದುಶ್ಚಟಗಳನ್ನು ತ್ಯಜಿಸಿ ಅರೋಗ್ಯಯುತ ಬದುಕು ಸಾಗಿಸಬೇಕು,'' ಎಂದು ಗುರುಮಹಾಂತ ಶ್ರೀಗಳು ಸಲಹೆ ನೀಡಿದರು. ಈ ವೇಳೆ ಗ್ರಾಮದ ಅಯರು ಮತ್ತು ಭಕ್ತರು ಇದ್ದರು.1
- ರೈಲ್ವೆ ಕಾಮಗಾರಿಯ ಕಂದಕದಲ್ಲಿ ಮುಳುಗಿ 17 ವರ್ಷದ ಬಾಲಕ ಸಾವು: ಗ್ರಾಮಸ್ಥರಲ್ಲಿ ಆತಂಕ ಕುಷ್ಟಗಿ: ತಾಲೂಕಿನ ವಿವಿಧೆಡೆ ರೈಲ್ವೆ ಇಲಾಖೆಯ ಕಾಮಗಾರಿಗಾಗಿ ಮಣ್ಣು (ಮರಂ) ತೆಗೆಯಲು ನಿರ್ಮಿಸಲಾಗಿರುವ ಆಳವಾದ ಕಂದಕಗಳು ಇದೀಗ ಸಾವಿನ ಬಲೆಗಳಾಗಿ ಪರಿಣಮಿಸುತ್ತಿರುವ ಆತಂಕಕಾರಿ ಘಟನೆಗಳು ಬೆಳಕಿಗೆ ಬರುತ್ತಿವೆ. ವಣಗೇರಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿದ್ದ ನೀರು ತುಂಬಿದ ಕಂದಕದಲ್ಲಿ ಈಜಲು ತೆರಳಿದ್ದ ಕೆ.ಬೋದೂರು ಗ್ರಾಮದ 17 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ವಣಗೇರಿ ಗ್ರಾಮದ ಸರ್ವೇ ನಂ. 24/1/3ರ ಜಮೀನಿನಲ್ಲಿ ರೈಲ್ವೆ ಕಾಮಗಾರಿಗಾಗಿ ಸುಮಾರು 6 ಎಕರೆ ಪ್ರದೇಶದಲ್ಲಿ ಮಣ್ಣು ತೆಗೆಯಲಾಗಿತ್ತು. ಇದರಿಂದ ಸುಮಾರು 45ರಿಂದ 50 ಅಡಿ ಆಳದ ಬೃಹತ್ ಕಂದಕ ನಿರ್ಮಾಣವಾಗಿದ್ದು, ಮಳೆ ಹಾಗೂ ಬಸಿ ನೀರು ತುಂಬಿ ಸಂಪೂರ್ಣ ಜಲಾವೃತಗೊಂಡಿತ್ತು. ಕೆ.ಬೋದೂರು ಗ್ರಾಮದ ಹನುಮಂತಪ್ಪ ತಂದೆ ಬಸವರಾಜ ಗೊರೆಬಾಳ (17) ಹಾಗೂ ಇನ್ನೊಬ್ಬ ಬಾಲಕ ಈಜಲು ಕಂದಕದ ಬಳಿ ತೆರಳಿದ್ದ ವೇಳೆ, ಆಳದ ಅರಿವಿಲ್ಲದೆ ನೀರಿನ ಸೆಳೆತಕ್ಕೆ ಸಿಲುಕಿ ಹನುಮಂತಪ್ಪ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ ಅಶೋಕ ಶಿಗ್ಗಾಂವಿ, ಅಗ್ನಿಶಾಮಕ ಠಾಣಾಧಿಕಾರಿ ಮಾಳಿಂಗರಾಯ ಹಾಗೂ ಸಿಬ್ಬಂದಿ, ಕುಷ್ಟಗಿ ಪಿಎಸ್ಐ ಹನಮಂತಪ್ಪ ತಳವಾರ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆ ಆರಂಭಿಸಿತು. ನಿನ್ನೆ ಆರಂಭವಾದ ನಿರಂತರ ಕಾರ್ಯಾಚರಣೆಯ ಬಳಿಕ ಇಂದು ಬೆಳಿಗ್ಗೆ ಸುಮಾರು 9.30ಕ್ಕೆ ಬಾಲಕನ ಮೃತದೇಹ ಪತ್ತೆಯಾಯಿತು. ವಣಗೇರಿ ಮಾತ್ರವಲ್ಲದೆ ತಾಲೂಕಿನ ಟೆಂಗುಂಟಿ, ಕೆ.ಹೊಸೂರು, ಕಂದಕೂರು ಹಾಗೂ ಜಿ.ಗಂಗನಾಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ರೈಲ್ವೆ ಯೋಜನೆಗಾಗಿ ಮಣ್ಣು ಮತ್ತು ಮರಳು ತೆಗೆಯಲಾಗಿದ್ದು, ಆಳವಾದ ಕಂದಕಗಳು ನಿರ್ಮಾಣಗೊಂಡಿವೆ. ಕೆಲವೆಡೆ ನೀರು ತುಂಬಿಕೊಂಡಿದ್ದು, ಇನ್ನೂ ಕೆಲವು ಸ್ಥಳಗಳಲ್ಲಿ ಅಪಾಯಕಾರಿಯಾಗಿ ತೆರೆದ ಸ್ಥಿತಿಯಲ್ಲಿವೆ. ಇದರಿಂದ ಗ್ರಾಮಸ್ಥರು ಹಾಗೂ ಜಾನುವಾರುಗಳಿಗೆ ಪ್ರಾಣಾಪಾಯ ಎದುರಾಗುವ ಭೀತಿ ಹೆಚ್ಚಾಗಿದೆ. ಸುರಕ್ಷತಾ ಕ್ರಮಗಳಿಲ್ಲದೆ ಕಂದಕಗಳನ್ನು ಬಿಟ್ಟಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀನಿನ ಮಾಲೀಕರು ಹಾಗೂ ರೈಲ್ವೆ ಕಾಮಗಾರಿ ನಿರ್ವಹಣೆಯ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ಹಾಗೂ ರೈಲ್ವೆ ಇಲಾಖೆ ತಕ್ಷಣ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದಲ್ಲದೆ, ಅಪಾಯಕಾರಿ ಕಂದಕಗಳ ಸುತ್ತ ತಂತಿ ಬೇಲಿ ಅಳವಡಿಸುವುದು, ಎಚ್ಚರಿಕೆ ಫಲಕಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.4
- ಕುಷ್ಟಗಿ ತಹಸೀಲ್ ಕಚೇರಿಯಲ್ಲಿ ತಾಲೂಕಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, 14ನೇ ಶತಮಾನದ ಈ ಭಕ್ತೆಯು ತಮ್ಮ ತ್ಯಾಗ, ಭಕ್ತಿ ಹಾಗೂ ಧಾರ್ಮಿಕ ನಿಷ್ಠೆಯಿಂದ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಸ್ಮರಿಸಿದರು. ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದರು.1
- ಬಳ್ಳಾರಿ: ಸಚಿವ ಡಿ. ಸುಧಾಕರ್ ನಿಧನ: "ಎಲ್ಲವೂ ವಿಧಿಯಾಟ'' ಎಂದು ಭಾವುಕರಾದ ಸಚಿವ ಜಮೀರ್ ಅಹಮದ್! ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಚಳ್ಳಕೆರೆಯಲ್ಲಿ ಸೋಮವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ಯಾರು ಯಾವಾಗ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದು ತಿಳಿಯುವುದಿಲ್ಲ, ಎಲ್ಲವೂ ವಿಧಿಯಾಟ' ಎಂದು ಅವರು ಭಾವುಕರಾಗಿ ನುಡಿದರು. ಕೇವಲ ಮಂಡಿ ನೋವಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ ನಂತರ ಶ್ವಾಸಕೋಶದ ಸಮಸ್ಯ ೆ ಕಾಣಿಸಿಕೊಂಡಿತ್ತು. ಸದಾ ಹಸನ್ಮುಖಿಯಾಗಿದ್ದ ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಜಮೀರ್ ಸ್ಮರಿಸಿದರು. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.1
- ಹುನಗುಂದ ಸಮೀಪದ ಟೋಲ್ ಬಳಿ ಧಗ ಧಗ ಹೊತ್ತಿ ಉರಿದ ಭತ್ತ ಹೊತ್ತ ಲಾರಿ ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಗ್ರಾಮದ ಮಧ್ಯದ ಟೋಲ್ ನಾಕಾ ಬಳಿ ಭತ್ತ ಹೊತ್ತ ಬರುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ಮೇ ೧೦ ರಾತ್ರಿ ಸಮಯದಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ಲಾರಿ ಭತ್ತವನ್ನು ಹೊತ್ತುಕೊಂಡ ಹುನಗುಂದ ಮಾರ್ಗವಾಗಿ ತೆರಳಬೇಕಾಗಿದ್ದ ಲಾರಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಲಾರಿ ಬಾಲಕಪ್ರಾಣಾಪಾಯದಿಂದ ಪಾರಾಗಿದ್ದಾನೆ. ರಾತ್ರಿ ಹತ್ತಿದ ಬೆಂಕಿ ಮುಂಜಾನೆಯವರೆಗೂ ಉರಿಯುತ್ತಿದ್ದರೂ,ಅಗ್ನಿಶಾಮಕ ದಳದ ಸಿಬ್ಬಂದಿಯಾಗಲಿ ಅಥವಾ ಟೋಲ್ ನಾಕಾ ಸಿಬ್ಬಂದಿಯಾಗಲಿ ಬೆಂಕಿಯನ್ನು ನಂದಿಸುವ ಪ್ರಯತ್ನವನ್ನು ಮಾಡಿಲ್ಲ ಎಂದು ತಿಳಿದು ಬಂದಿದೆ. ಈ ಘಟನೆ ಕುರಿತು ಹುನಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- ಈಜಲು ಹೋಗಿ ನೀರಲ್ಲಿ ಮುಳುಗಿ ಕೆ.ಬೋದೂರು ಗ್ರಾಮದ ಬಾಲಕ ಸಾವು ಕುಷ್ಟಗಿ:- ತಾಲೂಕಿನ ವಣಗೇರಿ ಸೀಮಾದಲ್ಲಿ ಸರ್ವೇ ನಂಬರ-25/1ಹಿಸ್ಸಾ 2 ಬಿ ಸೇತುಕುಮಾರ ತಂದೆ ಬಿ ಜಯರಾಮಿ ರಡ್ಡಿ ಬಿನ್ ಜಯರಾಮಿ ರಡ್ಡಿ ಎಂಬುವವರಿಗೆ ಸೇರಿದ 7 ಎಕರೆ 25 ಗುಂಟೆ ಹೊಲದಲ್ಲಿ ಇರುವ ಮರಮ್ ತೆಗೆದ ಬೃಹತ್ ಆಕಾರದ ಗುಂಡಿಯ ನಿಂತ ನೀರಿನಲ್ಲಿ ಈಜಲು ಹೋದಾಗ ಮೇಲಿಂದ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರವಿವಾರ ನೆಡೆದಿದೆ. ಮೃತಪಟ್ಟ ಬಾಲಕ ಕುಷ್ಟಗಿ ತಾಲೂಕಿನ ಕೆ.ಬೋದೂರು ಗ್ರಾಮದ ನಿವಾಸಿ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ ವಯಸ್ಸು (17) ಎಂದು ತಿಳಿಸಲಾಗಿದೆ. ಮೃತ ಬಾಲಕನು ತನ್ನ ಸ್ನೇಹಿತರೊಂದಿಗೆ ತನ್ನ ಗ್ರಾಮಕ್ಕೆ ಬಹಳ ಹತ್ತಿರಕ್ಕೆ ಇರುವುದರಿಂದ ಈಜಲು ತೆರಳಿದ್ದಾರೆ. ಈ ಮರಮ್ ತೆಗೆದ ಹೊಲದಲ್ಲಿ ಜೆಸಿಬಿ ಮತ್ತು ಹಿಟಾಚಿ ಮೂಲಕ ಮಣ್ಣನ್ನು ಗದಗವಾಡಿ ರೈಲ್ವೆ ಕಾಮಗಾರಿಗೆ ಬಳಸಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಮರಮ್ ತೆಗೆದಿದ್ದರಿಂದ ಸುಮಾರು 40 ರಿಂದ 50 ಫೀಟ್ ಆಳಕ್ಕೆ ಅಗಲಾಗಿದೆ. ಬಹಳ ಆಳಕ್ಕೆ ಆಗಿದೆದ್ದರಿಂದ ಅಂತರ್ಜಲ ಹೆಚ್ಚಾಗಿ ನೀರು ಸಾಕಷ್ಟ ಪ್ರಮಾಣದಲ್ಲಿ ಸಂಗ್ರಹವಾಗಿದೆ ಬೇಸಿಗೆ ಕಾಲ ಆಗಿರೋದ್ರಿಂದ ಅತಿಯಾದ ಬಿಸಿಲು ಇರುವ ಕಾರಣ ಬಾಲಕ ಮತ್ತು ಬಾಲಕನ ಸ್ನೇಹಿತರು ಈಜಲು ಹೋಗಿದ್ದಾರೆ. ಈಸಲು ಹೋದ ಸಮಯದಲ್ಲಿ ಹನುಮಂತಪ್ಪನ ಸ್ನೇಹಿತರು ಈಜಿ ದಡ ಸೇರಿದರೆ ಬಾಲಕ ಹನಮಂತಪ್ಪನು ಮಾತ್ರ ಮಣ್ಣಿನೊಳಗೆ ಸಿಲುಕಿ ನೀರಿನಲ್ಲಿ ಹೆಸರುಗಟ್ಟಿ ಮೃತಪಟ್ಟಿದ್ದಾನೆ. ಈ ಘಟನೆ ನಿನ್ನೆ ರವಿವಾರ ಬೆಳಿಗ್ಗೆ 12 ಗಂಟೆಗೆ ನೆಡೆದಿದ್ದು ತಕ್ಷಣಾ ಮೃತಪಟ್ಟ ಬಾಲಕನ ಸ್ನೇಹಿತರು ಕೆ.ಬೋದುರು ಗ್ರಾಮದಲ್ಲಿ ತಿಳಿಸಿದ್ದಾರೆ. ತಕ್ಷಣಾ ಕುಷ್ಟಗಿ ಪೋಲಿಸ್ ಠಾಣೆಯ ಪಿ.ಎಸ್.ಐ ಹನಮಂತಪ್ಪ ತಳವಾರ್ ಹಾಗೂ ಅಗ್ನಿಶಾಮಕ ದಳದವರು ಸೇರಿ ಶೋಧ ಕಾರ್ಯ ನಡೆಸಿದ್ದಾರೆ. ಆದರೆ ರವಿವಾರ ಬೆಳಿಗ್ಗೆಯಿಂದ ತಡ ರಾತ್ರಿ ಆಗೋವರೆಗೂ ಶೋಧ ನಡೆಸಿದರು ಸಹ ಮೃತಪಟ್ಟ ಬಾಲಕನ ಶವ ಪತ್ತೆ ಆಗಲಿಲ್ಲ. ನಂತರ ಸೋಮವಾರ ಬೆಳಗ್ಗೆ ಮೃತಪಟ್ಟ ಬಾಲಕ ಶಾವ ಪತ್ತೆಯಾಗಿದೆ ಎಂದು ಪೊಲೀಸರ ಖಚಿತ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಿಎಸ್ಐ ಹನಮಂತಪ್ಪ ತಳವಾರ, ಎ.ಎಸ್.ಐ ತಾಯಪ್ಪ ಮತ್ತು ಅಗ್ನಿ ಶಾಮಕದಳ ಸಿಬ್ಬಂದಿಗಳು ಕಾರ್ಯಶೋದವನ್ನು ನಡೆಸಿ ಮೃತಪಟ್ಟ ಬಾಲಕನ ಶವವನ್ನು ಪತ್ತೆ ಹಚ್ಚಿ ಹೊರ ತೆಗೆಯಲು ತ ಯಶಸ್ವಿಯಾದರು. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.2
- ಆರು ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ಪ್ರಮುಖ ರಾಜಕಾರಣಿಯೊಬ್ಬರು ಮತ್ತೆ ಕಾಂಗ್ರೆಸ್ಗೆ ಸೇರಲು ನಿರ್ಧರಿಸಿದ್ದಾರೆ. ಅವರ ಈ ರಾಜಕೀಯ ಬದಲಾವಣೆಗೆ ಕಾರಣಗಳೇನು ಎಂಬುದರ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿದೆ.1