Shuru
Apke Nagar Ki App…
ALTAF,❤️🙏
More news from ಕರ್ನಾಟಕ and nearby areas
- Post by ALTAF,❤️🙏1
- ದಾವಣಗೆರೆ : ಡಿಕೆಶಿ ಸಿಎಂ ಆಗುವ ವಿಚಾರಕ್ಕೆ ಹಿನ್ನಡೆಯಾಗುತ್ತಿಲ್ಲ ಎಲ್ಲಾ ಒಳ್ಳೇಯದಾಗುತ್ತೆ ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್ ತೀರ್ಮಾನ ಮಾಡಿದರೆ ಇಂದೇ ಡಿಕೆಶಿ ಸಿಎಂ ಆಗಯತ್ತಾರೆ. ಸೂರ್ಯ ಪಥ ಬದಲಾವಣೆಯಾದಾಗ ನಮ್ಮ ಮಾತುಗಳು ಕೂಡ ಬದಲಾವಣೆಯಾಗುತ್ತವೆ. ಹೈಕಮಾಂಡ್ ತಲೆಯಲ್ಲಿ ಏನ್ ಇದ್ಯೋ ಗೊತ್ತಿಲ್ಲ ಅವರನ್ನೇ ಕೇಳಬೇಕು. ಸಿಎಂ ಬದಲಾವಣೆ ವಿಚಾರವಾಗಿ ನಾವು ಎಲ್ಲರಿಗೂ ಉತ್ತರ ಕೊಡಬೇಕು. ಎಲ್ಲಾ ಕಡೆ ಹೋದಾಗ ಜನರು ಕೂಡ ಕೇಳುತ್ತಾರೆ. ಒಪ್ಪಂದ ಆಗಿದ್ಯೋ ಇಲ್ವೋ ಅನ್ನೋದು ಹೈಕಮಾಂಡ್ ಸ್ಪಷ್ಟಪಡಿಸಲಿ. ಈ ಎಲ್ಲಾ ಗೊಂದಲಕ್ಕೆ ತೆರೆ ಎಳೆಯುವ ಕೆಲಸ ಹೈಕಮಾಂಡ್ ಮಾಡಬೇಕಿದೆ. ಸಿಎಂ ಸ್ಥಾನ ಸಿದ್ದರಾಮಯ್ಯನವರು ಅಂತ ಅಲ್ಲ ಪಕ್ಷದಲ್ಲಿ ಯಾರಿಗೇ ಕೊಟ್ಟರು ನಾವು ಬದ್ದ ಎಂದರು. ಮನಃಪೂರ್ವಕವಾಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ.ಶಾಸಕ ಬಾಲಕೃಷ್ಣ ರವರು ಹೇಳಿದ್ದು ಸರಿ ಇದೆ.ಕೂಡಲೇ ನಿರ್ಧಾರ ತೆಗೆದುಕೊಳ್ಳದಿದ್ದರೆ ಅಧಿಕಾರಕ್ಕೆ ಬರೋದು ಕಷ್ಟ ಆಗುತ್ತದೆ ಎನ್ನುವ ಹೇಳಿಕೆಗೆ ಸತ್ಯ ಇದೆ 2028 ಕ್ಕೆ ಕಾಂಗ್ರೇಸ್ ಮತ್ತೆ ಅಧಿಕಾರಕ್ಕೆ ಬರಲು ಉತ್ತಮವಾದ ವಾತಾವರಣ ಇದೆ. ಗ್ಯಾರೆಂಟಿ ಯೋಜನೆಗಳಿಂದ ಮತ್ತೆ ಈಗ ಘೋಷಣೆ ಮಾಡಿದ ಗ್ಯಾರೆಂಟಿಗಳು ಜಾರಿಗೆ ಬಂದರೆ ವಿರೋಧ ಪಕ್ಷವೇ ಇರೋದಿಲ್ಲ. ಅ ರೀತಿ ಜನರ ಬೆಂಬಲ ಸಿಗುತ್ತದೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ.ಆದರೆ ನಮ್ಮಲ್ಲಿರುವ ಕುರ್ಚಿ ಕಿತ್ತಾಟದ ಎನ್ನುವ ಅರೋಪವಿದೆ.*ಕಳೆದ ಬಿಜೆಪಿ ಸರ್ಕಾರದಲ್ಲಿ ಖುರ್ಚಿ ಕಿತ್ತಾಟದಿಂದ ಜನರು ಕಾಂಗ್ರೆಸ್ ಕಡೆ ಒಲವು ತೋರಿಸಿದ್ದರು.ಈಗ ನಾವು ಕೂಡ ಅದೇ ದಾರಿಯಲ್ಲಿ ಹೋದರೆ ಅದರ ಎಫೆಕ್ಟ್ ನಮಗೂ ಕೂಡ ತಟ್ಟಬಹುದು ಎನ್ನುವ ರೀತಿ ಬಾಲಕೃಷ್ಣ ಹೇಳಿರಬಹುದು ಎಂದು ವಿವರಿಸಿದರು. ಡಿಕೆಶಿ ಬಣದಿಂದ ಡಿನ್ನರ್ ಪಾರ್ಟಿ ವಿಚಾರ ಮಾತನಾಡಿ, ಇದರಲ್ಲಿ ಯಾವುದೇ ರಾಜಕೀಯ ಮಾಡೋದು ಬೇಡ.ಬಾಲಕೃಷ್ಣ ರವರ ಹುಟ್ಟು ಹಬ್ಬದ ಹಿನ್ನೆಲೆ ಊಟಕ್ಕೆ ಸೇರಿದ್ದೇವು.ಊಟಕ್ಕೆ ಕರೆದಿದ್ದರು ಊಟಕ್ಕೆ ಹೋಗಿದ್ದೇವು. 40 ಜನ ಶಾಸಕರು ಕೂಡ ಒಂದೇ ಕಡೆ ಸೇರಿದ್ದವು. ಈ ಡಿನ್ನರ್ ಪಾರ್ಟಿ ಮುಗಿದ ಮೇಲೆ ದೆಹಲಿಗೆ ಹೋಗುತ್ತಾರೆ ಎನ್ನುವ ಸುದ್ದಿ ಬಂದಿದೆ.ನಾವು ಯಾವುದೇ ಕಾರಣಕ್ಕೂ ದೆಹಲಿಗೆ ಹೋಗೋದಿಲ್ಲ. ಏನಾದರೂ ವೈಯಕ್ತಿಕ ಕೆಲಸಗಳು ಇದ್ದರೆ ದೆಹಲಿಗೆ ಹೋಗುತ್ತಾರೆ ಎಂದು ಶಾಸಕ ಶಿವಗಂಗಾ ಹೇಳಿದರು. ಸಚಿವ ಸ್ಥಾನ ನೀಡಿ ಎಂದು ಹೊಸ ಶಾಸಕರು ಪತ್ರ ಬರೆದಿದ್ದೇವು.ಅದರಲ್ಲಿ ನಾನು ಕೂಡ ಸಹಿ ಹಾಕಿದ್ದೇನೆ ಮಂಡ್ಯದಲ್ಲಿ ರವಿ ಗಣಿಗ ಇದಾರೆ ಅವರು ಅಕ್ಟಿವ್ ಪರ್ಸನ್ ಅವರಿಗಾದ್ರು ಕೊಡ್ಲಿ. ಮೊದಲ ಬಾರಿ ಗೆದ್ದ ಶಾಸಕರು ಇದ್ದೇವೆ ನಮಗೆ ಕೊಟ್ಟರೆ ಒಳ್ಳೇದು. ಹಳೇ ಬೇರು ಹೊಸ ಚಿಗುರು ಎನ್ನುವಂತೆ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯನವರು ಈ ವಿಚಾರದಲ್ಲಿ ಅವರ ಅಭಿಪ್ರಾಯ ಹೇಳಿದ್ದಾರೆ ಕೊಟ್ಟರೆ ಒಳ್ಳೇಯದು ಇಲ್ಲವಾದ್ರೆ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಶಿವಗಂಗಾ ಬಸವರಾಜ್ ಹೇಳಿದರು.1
- ಶಿವಮೊಗ್ಗ: ಭದ್ರಾವತಿ ನಗರದ ನ್ಯೂಟೌನ್ ಮೆಸ್ ರಸ್ತೆಯ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮ ದ 5 ನೇ ವಾರ್ಷಿಕೋತ್ಸವ ಮಾ.4 ರ ನಾಳೆ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷೆ ಡಾ:ಜ್ಯೋತಿ ಸೋಮಶೇಖರ್ ತಿಳಿಸಿದರು. ಅವರು ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕಳೆದ 5 ವರ್ಷಗಳಿಂದ ಟ್ರಸ್ಟ್ ವತಿಯಿಂದ ವೃದ್ಧಾಶ್ರಮ ಮತ್ತು ಅನಾಥಾಶ್ರಮ ಯಶಸ್ವಿಯಾಗಿ ನಡೆಸಿ ಕೊಂಡು ಬರಲಾಗುತ್ತಿದೆ ಎಂದರು. ಆಶ್ರಮದಲ್ಲಿ ವಯೋವೃದ್ಧರು ಹಾಗು ಅನಾಥರ ಬಗ್ಗೆ ಆಶ್ರಮದಲ್ಲಿ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ. ಟ್ರಸ್ಟ್ ಪದಾಧಿಕಾರಿಗಳು ಹಾಗು ಸೇವಾ ಮನೋಭಾವ ಹೊಂದಿ ರುವ ಕಾರ್ಯಕರ್ತರು ಯಾವುದೇ ಫಲಾಫೇಕ್ಷೆ ಇಲ್ಲದೆ ಕುಟುಂಬ ಸದಸ್ಯರಂತೆ ಒಗ್ಗಟ್ಟಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಟ್ರಸ್ಟ್ ಅಗತ್ಯ ವಿರುವ ಸೌಕರ್ಯಗಳನ್ನು ಹೊಂದಿದೆ. ಜನಪ್ರತಿನಿಧಿಗಳು, ದಾನಿಗಳು ಸೇರಿದಂತೆ ಸಮಾಜದ ಪ್ರತಿ ಯೊಬ್ಬರು ಹೆಚ್ಚಿನ ಸಹಕಾರ ನೀಡುವ ಮೂಲಕ ವೃದ್ದರು, ಅನಾಥರ ನೆರವಿಗೆ ಮುಂದಾಗ ಬೇಕೆಂದು ಮನವಿ ಮಾಡಿದರು. ಶಾಸಕ ಬಿ.ಕೆ ಸಂಗಮೇಶ್ವರ್ ವಾರ್ಷಿಕೋತ್ಸವ ಸಮಾರಂಭ ವನ್ನು ಉದ್ಘಾಟಿಸುವರು. ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿ ದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಟ್ರಸ್ಟ್ ಖಜಾಂಚಿ ಸೋಮಶೇಖರ್, ಪ್ರಮುಖರಾದ ಶಾರದ ಕುಮಾರಿ, ಶಕುಂತಲಾ ಪ್ರದೀಪ್, ಜಾಹ್ನವಿ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿದ್ದರು.1
- ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ದಿಡೀರನೇ ಆಗಮಿಸಿದ ಮಾಧಿಗ ಸಮುದಾಯದ ಮುಖಂಡರು ಕೈನಲ್ಲಿ ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರಗಳನ್ನ ಹಿಡಿದು ಒಳ ಮೀಸಲಾತಿ ಜಾರಿ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ1
- ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆಗೆ ತಟ್ಟಿದ ಕೇತಗ್ರಸ್ಥ ರಕ್ತ ಚಂದ್ರಗ್ರಹಣ.. ಚಿತ್ರದುರ್ಗ : ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೆಚ್ ಡಿ ಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವದ ಸಮಯವನ್ನು ಬದಲಾಯಿಸಲಾಗಿತ್ತು. ಸಮಯ ಬದಲಾದರೂ, ರಥೋತ್ಸವದ ವೇಳೆ ಗರುಡ ಪಕ್ಷಿ ಕಾಣಿಸಿಕೊಂಡಿದ್ದು, ಇದನ್ನು ಪವಾಡವೆಂದು ಭಾವಿಸಿದ ಸಾವಿರಾರು ಭಕ್ತರು ಸಂತಸ ವ್ಯಕ್ತಪಡಿಸಿದರು... ಇಂದು ಕೇತುಗ್ರಸ್ಥ ರಕ್ತ ಚಂದ್ರಗ್ರಹಣ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೇರಿದೇವಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು. ಸಮಯ ಬದಲಾಗಿದ್ದರಿಂದ ಪ್ರತಿ ವರ್ಷ ಕಾಣುವ ಗರುಡ ಕಾಣಿಸುತ್ತಾ ಅನ್ನೋ ಆತಂಕ ಭಕ್ತರಲ್ಲಿ ಎದುರಾಗಿತ್ತು. ಸಮಯ ಬದಲಾದ್ರೂ ಗರುಡ ಕಾಣಿಸಿಕೊಂಡಿದ್ದಕ್ಕೆ ಭಕ್ತರು ಸಂತಸಗೊಂಡಿದ್ದಾರೆ.. ಸಾಮಾನ್ಯವಾಗಿ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಮಧ್ಯಾಹ್ನ 3 ಗಂಟೆಗೆ ನಡೆಯುತ್ತಿತ್ತು. ಆದ್ರೆ ಇಂದು ಚಂದ್ರಗ್ರಹಣ ಮಧ್ಯಾಹ್ನ 3:20ಕ್ಕೆ ಆರಂಭವಾಗಿ ಸಂಜೆ 6:48ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣದ ಸಮಯವನ್ನು ಸೂತಕ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಶುಭ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡಲ್ಲ. ಆದ್ದರಿಂದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು...ಮಧ್ಯಾಹ್ನ 3 ಗಂಟೆ ಬದಲಾಗಿ 12 ಗಂಟೆಗೆಯೇ ರಥೋತ್ಸವ ಆರಂಭವಾಗಿತ್ತು. ವರ್ಷಕ್ಕೊಮ್ಮೆ ಹೋಳಿ ಹುಣ್ಣಿಮೆಯಂದು ನಡೆಯುವ ರಥೋತ್ಸವ ನೋಡಲು ಸಾವಿರಾರು ಭಕ್ತರು ಆಗಮಿಸಿದ್ದರು. ಆದ್ರೆ ಗರುಡ ಕಾಣಿಸುತ್ತಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಭಕ್ತರಲ್ಲಿ ಆತಂಕ ಮನೆ ಮಾಡಿತ್ತು. ರಥೋತ್ಸವ ನಡೆಯುವ ಸರಿಯಾದ ಸಂದರ್ಭಕ್ಕೆ ಗರುಡ ಕಾಣಿಸಿಕೊಂಡಿದೆ. ನೆರೆದಿದ್ದ ಭಕ್ತರು ಗರುಡ ದರ್ಶನವನ್ನು ಪವಾಡ ಎಂದು ಉಲ್ಲೇಖಿಸುತ್ತಾರೆ. ರಥೋತ್ಸವಕ್ಕೆ ಹೆಚ್ ಡಿ ಪುರದ ಸುತ್ತಲಿನ ಗ್ರಾಮದ ಜನರು, ಅಕ್ಕ-ಪಕ್ಕದ ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಚಂದ್ರಗ್ರಹಣ ಆರಂಭಕ್ಕೂ ಮುನ್ನವೇ ಅದ್ಧೂರಿಯಾಗಿ ರಥೋತ್ಸವ ನಡೆದಿದೆ..1
- ಮಂಗಳೂರು ಕರ್ನಾಟಕದ ಮಿನಿ ಬಾಂಬೆ1
- ಶಿಗ್ಗಾಂವಿ ತಾಲೂಕಿನ ಗುಡ್ಡದ ಚನ್ನಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಧರ್ಮ ಸಭೆ ಕಾರ್ಯಕ್ರಮದಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಪಾಲ್ಗೊಂಡು ದೈವದ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕೆಂಡದಮಠದ ಪರಮಪೂಜ್ಯ ಶ್ರೀ ಗುರುಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲ್ದಿ, ಕೆಎಂಎಫ್ ನಿರ್ದೇಶಕ ಶಂಕರ್ ಗೌಡ ಪಾಟೀಲ್ ಹಾಗೂ ಪ್ರಮುಖ ಮುಖಂಡರಾದ ಅಣ್ಣಪ್ಪ ಲಮಾಣಿ, ರಮೇಶ್ ದುಗ್ಗತ್ತಿ ಸೇರಿದಂತೆ ಗ್ರಾಮದ ಹಿರಿಯರು, ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.1
- ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.1