logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಾಂಗ್ರೆಸ್ ಮುಖಂಡ ಸೈಯದ್ ಹುಸೇನ್ ಸಾಹೇಬ್ ಅವರು ಮುಂಬರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಸ್ಲಿಂ ಸಮಾಜದ ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ತಸ್ವೀರ್ ಸೇರ್, ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಇವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಬುಧವಾರ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಆಗ್ರಹವನ್ನು ಮಂಡಿಸಿದರು. ತಸ್ವೀರ್ ಸೇರ್ ಅವರನ್ನು ಮೈಸೂರು ಜಿಲ್ಲೆಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಸರಳ, ಸಜ್ಜನಿಕೆಯ ರಾಜಕಾರಣಿಯೆಂದು ಸೈಯದ್ ಹುಸೇನ್ ಸಾಹೇಬ್ ಬಣ್ಣಿಸಿದ್ದಾರೆ. ಅಭಿವೃದ್ಧಿಯ ಹರಿಕಾರರು ಹಾಗೂ ಸರ್ವ ಜನಾಂಗದವರ ಹಿತ ಚಿಂತನೆ ಬಯಸುವ ಇವರು ಕಳೆದ ಅವಧಿಯಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿಯಾಗಿ ಕೆಲವು ಕಾಲ ಕಾರ್ಯ ನಿರ್ವಹಿಸಿದ್ದಾರೆ. ಆದ್ದರಿಂದ ಮುಂಬರುವ ದಿನಗಳಲ್ಲಿ ತಸ್ವೀರ್ ಸೇರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕೆಂದು ಅವರು ವಿಶೇಷವಾಗಿ ಒತ್ತಾಯಿಸಿದರು. ಅದೇ ರೀತಿ, ಉತ್ತರ ಕರ್ನಾಟಕ ಭಾಗದ ಹಿರಿಯ ಮುಖಂಡರಾದ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ವರ್ಷಗಳಿಂದ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಸಲೀಂ ಅಹ್ಮದ್ ಹಾಗೂ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯುವ ಮುಖಂಡ ರಿಜ್ವಾನ್ ಅರ್ಷದ್ ಇವರಿಗೂ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕೆಂದು ಸೈಯದ್ ಹುಸೇನ್ ಸಾಹೇಬ್ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಹುಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ ಅನುಕೂಲ ಒದಗಿಸುವುದೇ ಈ ಆಗ್ರಹದ ಮುಖ್ಯ ಉದ್ದೇಶವಾಗಿದೆ.

22 hrs ago
user_Shivakumar Sajjan
Shivakumar Sajjan
Local News Reporter ಮಾನ್ವಿ, ರಾಯಚೂರು, ಕರ್ನಾಟಕ•
22 hrs ago

ಕಾಂಗ್ರೆಸ್ ಮುಖಂಡ ಸೈಯದ್ ಹುಸೇನ್ ಸಾಹೇಬ್ ಅವರು ಮುಂಬರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಸ್ಲಿಂ ಸಮಾಜದ ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ತಸ್ವೀರ್ ಸೇರ್, ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಇವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಬುಧವಾರ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಆಗ್ರಹವನ್ನು ಮಂಡಿಸಿದರು. ತಸ್ವೀರ್ ಸೇರ್ ಅವರನ್ನು ಮೈಸೂರು ಜಿಲ್ಲೆಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಸರಳ, ಸಜ್ಜನಿಕೆಯ ರಾಜಕಾರಣಿಯೆಂದು ಸೈಯದ್ ಹುಸೇನ್ ಸಾಹೇಬ್ ಬಣ್ಣಿಸಿದ್ದಾರೆ. ಅಭಿವೃದ್ಧಿಯ ಹರಿಕಾರರು ಹಾಗೂ ಸರ್ವ ಜನಾಂಗದವರ ಹಿತ ಚಿಂತನೆ ಬಯಸುವ ಇವರು ಕಳೆದ ಅವಧಿಯಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿಯಾಗಿ ಕೆಲವು ಕಾಲ ಕಾರ್ಯ ನಿರ್ವಹಿಸಿದ್ದಾರೆ. ಆದ್ದರಿಂದ ಮುಂಬರುವ ದಿನಗಳಲ್ಲಿ ತಸ್ವೀರ್ ಸೇರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕೆಂದು ಅವರು ವಿಶೇಷವಾಗಿ ಒತ್ತಾಯಿಸಿದರು. ಅದೇ ರೀತಿ, ಉತ್ತರ ಕರ್ನಾಟಕ ಭಾಗದ ಹಿರಿಯ ಮುಖಂಡರಾದ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ವರ್ಷಗಳಿಂದ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಸಲೀಂ ಅಹ್ಮದ್ ಹಾಗೂ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯುವ ಮುಖಂಡ ರಿಜ್ವಾನ್ ಅರ್ಷದ್ ಇವರಿಗೂ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕೆಂದು ಸೈಯದ್ ಹುಸೇನ್ ಸಾಹೇಬ್ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಹುಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ ಅನುಕೂಲ ಒದಗಿಸುವುದೇ ಈ ಆಗ್ರಹದ ಮುಖ್ಯ ಉದ್ದೇಶವಾಗಿದೆ.

More news from ಕರ್ನಾಟಕ and nearby areas
  • ಕಾಂಗ್ರೆಸ್ ಮುಖಂಡ ಸೈಯದ್ ಹುಸೇನ್ ಸಾಹೇಬ್ ಅವರು ಮುಂಬರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಸ್ಲಿಂ ಸಮಾಜದ ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ತಸ್ವೀರ್ ಸೇರ್, ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಇವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಬುಧವಾರ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಆಗ್ರಹವನ್ನು ಮಂಡಿಸಿದರು. ತಸ್ವೀರ್ ಸೇರ್ ಅವರನ್ನು ಮೈಸೂರು ಜಿಲ್ಲೆಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಸರಳ, ಸಜ್ಜನಿಕೆಯ ರಾಜಕಾರಣಿಯೆಂದು ಸೈಯದ್ ಹುಸೇನ್ ಸಾಹೇಬ್ ಬಣ್ಣಿಸಿದ್ದಾರೆ. ಅಭಿವೃದ್ಧಿಯ ಹರಿಕಾರರು ಹಾಗೂ ಸರ್ವ ಜನಾಂಗದವರ ಹಿತ ಚಿಂತನೆ ಬಯಸುವ ಇವರು ಕಳೆದ ಅವಧಿಯಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿಯಾಗಿ ಕೆಲವು ಕಾಲ ಕಾರ್ಯ ನಿರ್ವಹಿಸಿದ್ದಾರೆ. ಆದ್ದರಿಂದ ಮುಂಬರುವ ದಿನಗಳಲ್ಲಿ ತಸ್ವೀರ್ ಸೇರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕೆಂದು ಅವರು ವಿಶೇಷವಾಗಿ ಒತ್ತಾಯಿಸಿದರು. ಅದೇ ರೀತಿ, ಉತ್ತರ ಕರ್ನಾಟಕ ಭಾಗದ ಹಿರಿಯ ಮುಖಂಡರಾದ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ವರ್ಷಗಳಿಂದ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಸಲೀಂ ಅಹ್ಮದ್ ಹಾಗೂ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯುವ ಮುಖಂಡ ರಿಜ್ವಾನ್ ಅರ್ಷದ್ ಇವರಿಗೂ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕೆಂದು ಸೈಯದ್ ಹುಸೇನ್ ಸಾಹೇಬ್ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಹುಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ ಅನುಕೂಲ ಒದಗಿಸುವುದೇ ಈ ಆಗ್ರಹದ ಮುಖ್ಯ ಉದ್ದೇಶವಾಗಿದೆ.
    1
    ಕಾಂಗ್ರೆಸ್ ಮುಖಂಡ ಸೈಯದ್ ಹುಸೇನ್ ಸಾಹೇಬ್ ಅವರು ಮುಂಬರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಸ್ಲಿಂ ಸಮಾಜದ ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ತಸ್ವೀರ್ ಸೇರ್, ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಇವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಬುಧವಾರ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಆಗ್ರಹವನ್ನು ಮಂಡಿಸಿದರು.

ತಸ್ವೀರ್ ಸೇರ್ ಅವರನ್ನು ಮೈಸೂರು ಜಿಲ್ಲೆಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಸರಳ, ಸಜ್ಜನಿಕೆಯ ರಾಜಕಾರಣಿಯೆಂದು ಸೈಯದ್ ಹುಸೇನ್ ಸಾಹೇಬ್ ಬಣ್ಣಿಸಿದ್ದಾರೆ. ಅಭಿವೃದ್ಧಿಯ ಹರಿಕಾರರು ಹಾಗೂ ಸರ್ವ ಜನಾಂಗದವರ ಹಿತ ಚಿಂತನೆ ಬಯಸುವ ಇವರು ಕಳೆದ ಅವಧಿಯಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿಯಾಗಿ ಕೆಲವು ಕಾಲ ಕಾರ್ಯ ನಿರ್ವಹಿಸಿದ್ದಾರೆ. ಆದ್ದರಿಂದ ಮುಂಬರುವ ದಿನಗಳಲ್ಲಿ ತಸ್ವೀರ್ ಸೇರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕೆಂದು ಅವರು ವಿಶೇಷವಾಗಿ ಒತ್ತಾಯಿಸಿದರು.

ಅದೇ ರೀತಿ, ಉತ್ತರ ಕರ್ನಾಟಕ ಭಾಗದ ಹಿರಿಯ ಮುಖಂಡರಾದ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ವರ್ಷಗಳಿಂದ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಸಲೀಂ ಅಹ್ಮದ್ ಹಾಗೂ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯುವ ಮುಖಂಡ ರಿಜ್ವಾನ್ ಅರ್ಷದ್ ಇವರಿಗೂ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕೆಂದು ಸೈಯದ್ ಹುಸೇನ್ ಸಾಹೇಬ್ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಹುಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ ಅನುಕೂಲ ಒದಗಿಸುವುದೇ ಈ ಆಗ್ರಹದ ಮುಖ್ಯ ಉದ್ದೇಶವಾಗಿದೆ.
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    22 hrs ago
  • ರಾಯಚೂರು ಜಿಲ್ಲಾಡಳಿತದಿಂದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಣೆ ಸಂಬಂಧ ಗುರುವಾರ ಬೆಳಿಗ್ಗೆ 11 ಗಂಟೆಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ನಾಡಿನ ಅಭಿವೃದ್ಧಿಗಾಗಿ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಕೆಂಪೇಗೌಡರ ಪರಿಶ್ರಮದಿಂದ ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಗಳಿಸಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಸರ್ಕಾರದ ನಿರ್ದೇಶನದಂತೆ ಕೆಂಪೇಗೌಡರ ಜೀವನ ಸಾಧನೆಗಳನ್ನು ಸ್ಮರಿಸುವ ಸಲುವಾಗಿ ಇದೇ ಜೂನ್ 27 ರಂದು ನಗರದ ಪಂಡಿತ ಜಂಬಲದಿನ್ನಿ ರಂಗಮಂದಿರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಪರ ಜಿಲ್ಲಾಧಿಕಾರಿಗಳು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಜೂನ್ 27 ರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರಿಗೆ ವಿತರಿಸಲು, ರಂಗಮಂದಿರದ ಆವರಣದಲ್ಲಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲು ಹಾಗೂ ನಗರದ ಮುಖ್ಯ ರಸ್ತೆಗಳು ಮತ್ತು ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ನಿರ್ದೇಶನ ನೀಡಲಾಯಿತು.
    1
    ರಾಯಚೂರು ಜಿಲ್ಲಾಡಳಿತದಿಂದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಣೆ ಸಂಬಂಧ ಗುರುವಾರ ಬೆಳಿಗ್ಗೆ 11 ಗಂಟೆಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ನಾಡಿನ ಅಭಿವೃದ್ಧಿಗಾಗಿ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಕೆಂಪೇಗೌಡರ ಪರಿಶ್ರಮದಿಂದ ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಗಳಿಸಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಸರ್ಕಾರದ ನಿರ್ದೇಶನದಂತೆ ಕೆಂಪೇಗೌಡರ ಜೀವನ ಸಾಧನೆಗಳನ್ನು ಸ್ಮರಿಸುವ ಸಲುವಾಗಿ ಇದೇ ಜೂನ್ 27 ರಂದು ನಗರದ ಪಂಡಿತ ಜಂಬಲದಿನ್ನಿ ರಂಗಮಂದಿರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಪರ ಜಿಲ್ಲಾಧಿಕಾರಿಗಳು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಜೂನ್ 27 ರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರಿಗೆ ವಿತರಿಸಲು, ರಂಗಮಂದಿರದ ಆವರಣದಲ್ಲಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲು ಹಾಗೂ ನಗರದ ಮುಖ್ಯ ರಸ್ತೆಗಳು ಮತ್ತು ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ನಿರ್ದೇಶನ ನೀಡಲಾಯಿತು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    11 hrs ago
  • ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣ ಸಮೀಪದ ಏವೂರು ಗ್ರಾಮದಲ್ಲಿ ಇಂದು ಮೊಹರಂ ಸಾತ್ ತಾರಿಕ್ ಶ್ರೀ ಇಮಾಮ ಸೈಯದ್ ಕಾಸಿಂ ಸವಾರಿ ಆಯೋಜಿಸಲಾಗಿತ್ತು. ಈ ಸವಾರಿಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ಯುವಕರು, ಗ್ರಾಮಸ್ಥರು ಹಾಗೂ ಊರಿನ ಎಲ್ಲಾ ಗಣ್ಯರು ಸಕ್ರಿಯವಾಗಿ ಭಾಗವಹಿಸಿದ್ದರು.
    1
    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣ ಸಮೀಪದ ಏವೂರು ಗ್ರಾಮದಲ್ಲಿ ಇಂದು ಮೊಹರಂ ಸಾತ್ ತಾರಿಕ್ ಶ್ರೀ ಇಮಾಮ ಸೈಯದ್ ಕಾಸಿಂ ಸವಾರಿ ಆಯೋಜಿಸಲಾಗಿತ್ತು. ಈ ಸವಾರಿಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ಯುವಕರು, ಗ್ರಾಮಸ್ಥರು ಹಾಗೂ ಊರಿನ ಎಲ್ಲಾ ಗಣ್ಯರು ಸಕ್ರಿಯವಾಗಿ ಭಾಗವಹಿಸಿದ್ದರು.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    18 hrs ago
  • ದಿನಾಂಕ 25.6.26 ರಂದು, ಹುಣಸಗಿಯಲ್ಲಿ ಕರ್ನಾಟಕ ರಾಜ್ಯ ವಿಕಲಚೇತನರ ಆರ್ ಪಿಡಿ ಟಾಸ್ಕ್ ಪೋರ್ಸ್ ಮತ್ತು ವಿಕಲಚೇತನರ ಸಂಘ ಸವಸ್ಥೆಗಳ ವಕ್ಕೂಟ ತಾಲೂಕು ಸಮಿತಿ ಹುಣಸಗಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕಳೆದ ಎರಡು ಮೂರು ತಿಂಗಳಿಂದ ವಿಕಲಚೇತನರ ವೇತನವನ್ನು ಸ್ಥಗಿತಗೊಳಿಸಿರುವ ವಿಷಯ ಕುರಿತು ತಾಲೂಕು ದಂಡಾಧಿಕಾರಿಗಳ ಮೂಲಕ ಈ ಮನವಿ ಸಲ್ಲಿಸಲಾಗಿತ್ತು. ಈ ಮನವಿಗೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಎಂ. ಬಸವರಾಜ್ ಅವರು, ಇದು ರಾಜ್ಯ ಮಟ್ಟದ ಸಮಸ್ಯೆಯಾಗಿದ್ದು, ಇದನ್ನು ಶೀಘ್ರವಾಗಿ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
    4
    ದಿನಾಂಕ 25.6.26 ರಂದು, ಹುಣಸಗಿಯಲ್ಲಿ ಕರ್ನಾಟಕ ರಾಜ್ಯ ವಿಕಲಚೇತನರ ಆರ್ ಪಿಡಿ ಟಾಸ್ಕ್ ಪೋರ್ಸ್ ಮತ್ತು ವಿಕಲಚೇತನರ ಸಂಘ ಸವಸ್ಥೆಗಳ ವಕ್ಕೂಟ ತಾಲೂಕು ಸಮಿತಿ ಹುಣಸಗಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕಳೆದ ಎರಡು ಮೂರು ತಿಂಗಳಿಂದ ವಿಕಲಚೇತನರ ವೇತನವನ್ನು ಸ್ಥಗಿತಗೊಳಿಸಿರುವ ವಿಷಯ ಕುರಿತು ತಾಲೂಕು ದಂಡಾಧಿಕಾರಿಗಳ ಮೂಲಕ ಈ ಮನವಿ ಸಲ್ಲಿಸಲಾಗಿತ್ತು.

ಈ ಮನವಿಗೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಎಂ. ಬಸವರಾಜ್ ಅವರು, ಇದು ರಾಜ್ಯ ಮಟ್ಟದ ಸಮಸ್ಯೆಯಾಗಿದ್ದು, ಇದನ್ನು ಶೀಘ್ರವಾಗಿ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
    user_ಮಲ್ಲಿಕಾರ್ಜುನ ಚಲವಾದಿ ರಾಜನಕೋಳೂರು
    ಮಲ್ಲಿಕಾರ್ಜುನ ಚಲವಾದಿ ರಾಜನಕೋಳೂರು
    Electrician ಹುಣಸಗಿ, ಯಾದಗಿರಿ, ಕರ್ನಾಟಕ•
    17 hrs ago
  • ರೈತರ ಹಿತರಕ್ಷಣೆಯೇ ಪರಮೋಚ್ಚ ಧ್ಯೇಯವೆಂದು ನಂಬಿರುವ ರಾಜ್ಯ ಸರ್ಕಾರ, "ನೇಗಿಲ ಕುಲದೊಳಗಡಗಿದೆ ಕರ್ಮ, ನೇಗಿಲ ಮೇಲೆಯೇ ನಿಂತಿದೆ ಧರ್ಮ” ಎಂಬ ತತ್ವದೊಂದಿಗೆ ತುಂಗಭದ್ರಾ ಅಣೆಕಟ್ಟಿನ ಗೇಟ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಿತ್ತು. ಯಾವುದೇ ವಿಳಂಬವಿಲ್ಲದೆ ಜಲಾಶಯಕ್ಕೆ ನೂತನ ಗೇಟ್‌ಗಳನ್ನು ಅಳವಡಿಸುವ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಅವುಗಳನ್ನು ಇಂದು ಲೋಕಾರ್ಪಣೆಗೊಳಿಸಲಾಯಿತು. ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ (ಟಿ.ಬಿ. ಡ್ಯಾಂ) ಗೇಟ್ ಸಂಖ್ಯೆ 18ರ ಬಳಿ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಜಂಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 33 ನೂತನ ಸ್ಪಿಲ್‌ವೇ ಗೇಟ್‌ಗಳನ್ನು ಲೋಕಾರ್ಪಣೆ ಮಾಡಲಾಯಿತು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಜಲಶಕ್ತಿ ಸಚಿವ ಶ್ರೀ ಸಿ.ಆರ್. ಪಾಟೀಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಮುಖ್ಯಮಂತ್ರಿ ಶ್ರೀ ಎ. ರೇವಂತ್ ರೆಡ್ಡಿ ಘನ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ಸಚಿವರಾದ ಶ್ರೀ ಹೆಚ್.ಕೆ. ಪಾಟೀಲ್, ಶ್ರೀ ಎನ್.ಎಸ್. ಬೋಸರಾಜು ಹಾಗೂ ಶ್ರೀ ಶಿವರಾಜ್ ತಂಗಡಗಿ ಅವರು ಭಾಗವಹಿಸಿದ್ದರು. ಇದರ ಜೊತೆಗೆ, ಕೊಪ್ಪಳ ಲೋಕಸಭಾ ಸದಸ್ಯ ರಾಜಶೇಖರ್ ಇಟ್ನಾಳ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಣೆಕಟ್ಟಿನ ಸುರಕ್ಷತೆ, ನೀರಾವರಿ ವ್ಯವಸ್ಥೆ ಮತ್ತು ರೈತರ ಹಿತಾಸಕ್ತಿಗೆ ಸರ್ಕಾರ ಬದ್ಧವಾಗಿದೆ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
    3
    ರೈತರ ಹಿತರಕ್ಷಣೆಯೇ ಪರಮೋಚ್ಚ ಧ್ಯೇಯವೆಂದು ನಂಬಿರುವ ರಾಜ್ಯ ಸರ್ಕಾರ, "ನೇಗಿಲ ಕುಲದೊಳಗಡಗಿದೆ ಕರ್ಮ, ನೇಗಿಲ ಮೇಲೆಯೇ ನಿಂತಿದೆ ಧರ್ಮ” ಎಂಬ ತತ್ವದೊಂದಿಗೆ ತುಂಗಭದ್ರಾ ಅಣೆಕಟ್ಟಿನ ಗೇಟ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಿತ್ತು. ಯಾವುದೇ ವಿಳಂಬವಿಲ್ಲದೆ ಜಲಾಶಯಕ್ಕೆ ನೂತನ ಗೇಟ್‌ಗಳನ್ನು ಅಳವಡಿಸುವ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಅವುಗಳನ್ನು ಇಂದು ಲೋಕಾರ್ಪಣೆಗೊಳಿಸಲಾಯಿತು.

ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ (ಟಿ.ಬಿ. ಡ್ಯಾಂ) ಗೇಟ್ ಸಂಖ್ಯೆ 18ರ ಬಳಿ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಜಂಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 33 ನೂತನ ಸ್ಪಿಲ್‌ವೇ ಗೇಟ್‌ಗಳನ್ನು ಲೋಕಾರ್ಪಣೆ ಮಾಡಲಾಯಿತು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಜಲಶಕ್ತಿ ಸಚಿವ ಶ್ರೀ ಸಿ.ಆರ್. ಪಾಟೀಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಮುಖ್ಯಮಂತ್ರಿ ಶ್ರೀ ಎ. ರೇವಂತ್ ರೆಡ್ಡಿ ಘನ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಾಜ್ಯ ಸಚಿವರಾದ ಶ್ರೀ ಹೆಚ್.ಕೆ. ಪಾಟೀಲ್, ಶ್ರೀ ಎನ್.ಎಸ್. ಬೋಸರಾಜು ಹಾಗೂ ಶ್ರೀ ಶಿವರಾಜ್ ತಂಗಡಗಿ ಅವರು ಭಾಗವಹಿಸಿದ್ದರು. ಇದರ ಜೊತೆಗೆ, ಕೊಪ್ಪಳ ಲೋಕಸಭಾ ಸದಸ್ಯ ರಾಜಶೇಖರ್ ಇಟ್ನಾಳ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಣೆಕಟ್ಟಿನ ಸುರಕ್ಷತೆ, ನೀರಾವರಿ ವ್ಯವಸ್ಥೆ ಮತ್ತು ರೈತರ ಹಿತಾಸಕ್ತಿಗೆ ಸರ್ಕಾರ ಬದ್ಧವಾಗಿದೆ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
    user_Nizamuddin
    Nizamuddin
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ, ಸಮರ್ಪಕವಾಗಿ ಮಳೆ ಬಾರದ ಪರಿಣಾಮ ರೈತನೊಬ್ಬ ತಾನು ಬೆಳೆದಿದ್ದ ಹತ್ತಿ ಬೆಳೆಯನ್ನು ಟ್ರಾಕ್ಟರ್ ಮೂಲಕ ನಾಶಪಡಿಸಿದ್ದಾರೆ. ಮರಿಲಿಂಗಪ್ಪ ಎಂಬ ರೈತ ಸಾಲ ಮಾಡಿ ಬಿತ್ತಿದ್ದ ಈ ಬೆಳೆಗಳು ನೀರಿಲ್ಲದೆ ಸಂಪೂರ್ಣ ಒಣಗಿಹೋಗಿದ್ದು, ಕಪ್ಪು ಭೂಮಿ ಬಿರುಕು ಬಿಟ್ಟಿರುವುದು ರೈತನ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಬೆಳೆ ಉಳಿಯುವ ಎಲ್ಲಾ ಭರವಸೆ ಕಳೆದುಕೊಂಡ ಆ ರೈತ, ತಾನೇ ತನ್ನ ಬೆಳೆದ ಬೆಳೆಯನ್ನು ನಾಶಪಡಿಸಿ ನೋವು ವ್ಯಕ್ತಪಡಿಸಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ, ರೈತರು ತಕ್ಷಣವೇ ರಾಜ್ಯ ಸರ್ಕಾರ ಬರಗಾಲ ಘೋಷಿಸಿ ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ, ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಯಂತಹ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
    1
    ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ, ಸಮರ್ಪಕವಾಗಿ ಮಳೆ ಬಾರದ ಪರಿಣಾಮ ರೈತನೊಬ್ಬ ತಾನು ಬೆಳೆದಿದ್ದ ಹತ್ತಿ ಬೆಳೆಯನ್ನು ಟ್ರಾಕ್ಟರ್ ಮೂಲಕ ನಾಶಪಡಿಸಿದ್ದಾರೆ. ಮರಿಲಿಂಗಪ್ಪ ಎಂಬ ರೈತ ಸಾಲ ಮಾಡಿ ಬಿತ್ತಿದ್ದ ಈ ಬೆಳೆಗಳು ನೀರಿಲ್ಲದೆ ಸಂಪೂರ್ಣ ಒಣಗಿಹೋಗಿದ್ದು, ಕಪ್ಪು ಭೂಮಿ ಬಿರುಕು ಬಿಟ್ಟಿರುವುದು ರೈತನ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಬೆಳೆ ಉಳಿಯುವ ಎಲ್ಲಾ ಭರವಸೆ ಕಳೆದುಕೊಂಡ ಆ ರೈತ, ತಾನೇ ತನ್ನ ಬೆಳೆದ ಬೆಳೆಯನ್ನು ನಾಶಪಡಿಸಿ ನೋವು ವ್ಯಕ್ತಪಡಿಸಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ, ರೈತರು ತಕ್ಷಣವೇ ರಾಜ್ಯ ಸರ್ಕಾರ ಬರಗಾಲ ಘೋಷಿಸಿ ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ, ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಯಂತಹ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
    user_ಪೃಥ್ವಿ ಮಾಧ್ಯಮ
    ಪೃಥ್ವಿ ಮಾಧ್ಯಮ
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • ಯಾದಗಿರಿ ನಗರವು ತನ್ನ ಐತಿಹಾಸಿಕ ಮಹತ್ವಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಕಟ್ಟಡಗಳು ಮತ್ತು ಭೀಮಾ ನದಿಯ ಮೇಲಿನ ಶತಮಾನದ ಸೇತುವೆಯು ನಗರದ ಹಿರಿಮೆಯನ್ನು ಹೆಚ್ಚಿಸಿವೆ. ಈ ಬ್ರಿಟಿಷ್ ಕಾಲದ ಸೇತುವೆಯು ಸುಮಾರು 100 ವರ್ಷಗಳ ಇತಿಹಾಸವನ್ನು ಹೊಂದಿದ್ದು, ಇತ್ತೀಚೆಗೆ ಶಿಥಿಲಾವಸ್ಥೆಗೆ ತಲುಪಿತ್ತು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಸೇತುವೆಯ ರಕ್ಷಣೆಗಾಗಿ ಮತ್ತು ಅದರ ಮೇಲೆ ಬೆಳೆದ ಗಿಡಗಂಟಿಗಳನ್ನು ತೆರವುಗೊಳಿಸಲು ಹಲವು ಬಾರಿ ಹೋರಾಟ ನಡೆಸಿದ್ದರೂ, ಅಧಿಕಾರಿಗಳು ಕೇವಲ ಕಾಟಾಚಾರಕ್ಕೆ ಮೇಲ್ಭಾಗದ ಗಿಡಗಳನ್ನು ಕತ್ತರಿಸಿ ಸಾರ್ವಜನಿಕರನ್ನು ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಉಮೇಶ ಕೆ. ಮುದ್ನಾಳ್ ಅವರು ಒತ್ತಾಯಿಸಿದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ತಕ್ಷಣ ಸ್ಪಂದಿಸಿದ್ದಾರೆ. ಸರ್ಕಾರದ ಮೂಲಕ ಸೇತುವೆ ನವೀಕರಣಕ್ಕೆ 3 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದಾರೆ. ಈ ಕಾಮಗಾರಿಯು ಈಗ ಭರದಿಂದ ಸಾಗಿದ್ದು, ಮಧ್ಯಪ್ರದೇಶದ ಸುಮಾರು 25 ಕಾರ್ಮಿಕರು ನಿರಂತರವಾಗಿ ನವೀಕರಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ನವೀಕರಣದ ಜೊತೆಗೆ, ಸೇತುವೆಯ ಎರಡು ಬದಿಗಳಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಬೇರು ಸಮೇತ ರಾಸಾಯನಿಕ ಬಳಸಿ ತೆಗೆದುಹಾಕಲಾಗುತ್ತಿದೆ, ಇದರಿಂದ ಮುಂದಿನ ದಿನಗಳಲ್ಲಿ ಮತ್ತೆ ಗಿಡಗಂಟಿಗಳು ಬೆಳೆಯದಂತೆ ನೋಡಿಕೊಳ್ಳಲಾಗುವುದು ಎಂದು ಮುದ್ನಾಳ್ ತಿಳಿಸಿದ್ದಾರೆ. ನಮ್ಮ ಮನವಿಗೆ ಸ್ಪಂದಿಸಿದ ಶಾಸಕರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ. ಈ ನವೀಕರಣ ಕಾಮಗಾರಿಯಿಂದಾಗಿ ಜಿಲ್ಲೆಯ ಜನತೆ ಮತ್ತು ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ. ಅಲ್ಲದೆ, ಮುದ್ನಾಳ್ ಅವರು ಭೀಮಾ ಸೇತುವೆಯ ಎರಡು ಬದಿಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಮನವಿ ಮಾಡಿದ್ದಾರೆ. ಇದು ಯಾದಗಿರಿ ನಗರಕ್ಕೆ ರಾತ್ರಿ ಸಂಚರಿಸುವ ವಾಹನ ಸವಾರರಿಗೆ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
    2
    ಯಾದಗಿರಿ ನಗರವು ತನ್ನ ಐತಿಹಾಸಿಕ ಮಹತ್ವಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಕಟ್ಟಡಗಳು ಮತ್ತು ಭೀಮಾ ನದಿಯ ಮೇಲಿನ ಶತಮಾನದ ಸೇತುವೆಯು ನಗರದ ಹಿರಿಮೆಯನ್ನು ಹೆಚ್ಚಿಸಿವೆ. ಈ ಬ್ರಿಟಿಷ್ ಕಾಲದ ಸೇತುವೆಯು ಸುಮಾರು 100 ವರ್ಷಗಳ ಇತಿಹಾಸವನ್ನು ಹೊಂದಿದ್ದು, ಇತ್ತೀಚೆಗೆ ಶಿಥಿಲಾವಸ್ಥೆಗೆ ತಲುಪಿತ್ತು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಸೇತುವೆಯ ರಕ್ಷಣೆಗಾಗಿ ಮತ್ತು ಅದರ ಮೇಲೆ ಬೆಳೆದ ಗಿಡಗಂಟಿಗಳನ್ನು ತೆರವುಗೊಳಿಸಲು ಹಲವು ಬಾರಿ ಹೋರಾಟ ನಡೆಸಿದ್ದರೂ, ಅಧಿಕಾರಿಗಳು ಕೇವಲ ಕಾಟಾಚಾರಕ್ಕೆ ಮೇಲ್ಭಾಗದ ಗಿಡಗಳನ್ನು ಕತ್ತರಿಸಿ ಸಾರ್ವಜನಿಕರನ್ನು ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಉಮೇಶ ಕೆ. ಮುದ್ನಾಳ್ ಅವರು ಒತ್ತಾಯಿಸಿದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ತಕ್ಷಣ ಸ್ಪಂದಿಸಿದ್ದಾರೆ. ಸರ್ಕಾರದ ಮೂಲಕ ಸೇತುವೆ ನವೀಕರಣಕ್ಕೆ 3 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದಾರೆ. ಈ ಕಾಮಗಾರಿಯು ಈಗ ಭರದಿಂದ ಸಾಗಿದ್ದು, ಮಧ್ಯಪ್ರದೇಶದ ಸುಮಾರು 25 ಕಾರ್ಮಿಕರು ನಿರಂತರವಾಗಿ ನವೀಕರಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ನವೀಕರಣದ ಜೊತೆಗೆ, ಸೇತುವೆಯ ಎರಡು ಬದಿಗಳಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಬೇರು ಸಮೇತ ರಾಸಾಯನಿಕ ಬಳಸಿ ತೆಗೆದುಹಾಕಲಾಗುತ್ತಿದೆ, ಇದರಿಂದ ಮುಂದಿನ ದಿನಗಳಲ್ಲಿ ಮತ್ತೆ ಗಿಡಗಂಟಿಗಳು ಬೆಳೆಯದಂತೆ ನೋಡಿಕೊಳ್ಳಲಾಗುವುದು ಎಂದು ಮುದ್ನಾಳ್ ತಿಳಿಸಿದ್ದಾರೆ. ನಮ್ಮ ಮನವಿಗೆ ಸ್ಪಂದಿಸಿದ ಶಾಸಕರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಈ ನವೀಕರಣ ಕಾಮಗಾರಿಯಿಂದಾಗಿ ಜಿಲ್ಲೆಯ ಜನತೆ ಮತ್ತು ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ. ಅಲ್ಲದೆ, ಮುದ್ನಾಳ್ ಅವರು ಭೀಮಾ ಸೇತುವೆಯ ಎರಡು ಬದಿಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಮನವಿ ಮಾಡಿದ್ದಾರೆ. ಇದು ಯಾದಗಿರಿ ನಗರಕ್ಕೆ ರಾತ್ರಿ ಸಂಚರಿಸುವ ವಾಹನ ಸವಾರರಿಗೆ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
    user_DR. S.S. NANAK
    DR. S.S. NANAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    13 hrs ago
  • ರಾಯಚೂರು ಬಳಿಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪ್ರತಿ ತಿಂಗಳಂತೆ ಹುಂಡಿ ಎಣಿಕೆ ಕಾರ್ಯ ನಡೆಸಲಾಯಿತು. ಜೂನ್ ತಿಂಗಳ 21 ದಿನಗಳ ಅವಧಿಗೆ ಸಂಬಂಧಿಸಿದಂತೆ ಮುಕ್ತಾಯಗೊಂಡ ಈ ಎಣಿಕೆಯಲ್ಲಿ, ಒಟ್ಟು 3 ಕೋಟಿ 72 ಲಕ್ಷ 40 ಸಾವಿರದ 530 ರೂಪಾಯಿ ನಗದು ಸಂಗ್ರಹವಾಗಿದೆ. ನಗದು ಜೊತೆಗೆ, 67 ಗ್ರಾಂ ಬಂಗಾರ ಮತ್ತು 511 ಗ್ರಾಂ ಬೆಳ್ಳಿ ಸಹ ಹುಂಡಿಯಲ್ಲಿ ಕಾಣಿಕೆಯಾಗಿ ಬಂದಿದೆ. ಮಠದ ವ್ಯವಸ್ಥಾಪಕರಾದ ಶ್ರೀನಿವಾಸ್ ರಾವ್ ಅವರು ಗುರುವಾರ ಸಂಜೆ 4 ಗಂಟೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ.
    1
    ರಾಯಚೂರು ಬಳಿಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪ್ರತಿ ತಿಂಗಳಂತೆ ಹುಂಡಿ ಎಣಿಕೆ ಕಾರ್ಯ ನಡೆಸಲಾಯಿತು. ಜೂನ್ ತಿಂಗಳ 21 ದಿನಗಳ ಅವಧಿಗೆ ಸಂಬಂಧಿಸಿದಂತೆ ಮುಕ್ತಾಯಗೊಂಡ ಈ ಎಣಿಕೆಯಲ್ಲಿ, ಒಟ್ಟು 3 ಕೋಟಿ 72 ಲಕ್ಷ 40 ಸಾವಿರದ 530 ರೂಪಾಯಿ ನಗದು ಸಂಗ್ರಹವಾಗಿದೆ. ನಗದು ಜೊತೆಗೆ, 67 ಗ್ರಾಂ ಬಂಗಾರ ಮತ್ತು 511 ಗ್ರಾಂ ಬೆಳ್ಳಿ ಸಹ ಹುಂಡಿಯಲ್ಲಿ ಕಾಣಿಕೆಯಾಗಿ ಬಂದಿದೆ. ಮಠದ ವ್ಯವಸ್ಥಾಪಕರಾದ ಶ್ರೀನಿವಾಸ್ ರಾವ್ ಅವರು ಗುರುವಾರ ಸಂಜೆ 4 ಗಂಟೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.